• Samvada
  • Videos
  • Categories
  • Events
  • About Us
  • Contact Us
Monday, June 5, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others

ತೀವ್ರ ಶೀತದಲ್ಲಿಯೂ ಬೆಚ್ಚಗಿರುವ ಟೆಂಟ್ ನಿರ್ಮಿಸಿ ಸೇನೆಗೆ ನೆರವಾದ ಸೋನಮ್ ವಾಂಗ್‌ಚುಕ್

Vishwa Samvada Kendra by Vishwa Samvada Kendra
March 8, 2021
in Others
250
0
ತೀವ್ರ ಶೀತದಲ್ಲಿಯೂ ಬೆಚ್ಚಗಿರುವ ಟೆಂಟ್ ನಿರ್ಮಿಸಿ ಸೇನೆಗೆ ನೆರವಾದ ಸೋನಮ್ ವಾಂಗ್‌ಚುಕ್
491
SHARES
1.4k
VIEWS
Share on FacebookShare on Twitter

ಲಡಾಕ್: ಅತೀ ತೀವ್ರ ಶೀತದ ಪ್ರದೇಶದಲ್ಲಿ ಬೆಚ್ಚಗಿರಲು ಬಳಸಬಹುದಾದ ಸೌರಶಕ್ತ ಆಧಾರಿತ ಟೆಂಟ್‌ನ್ನು ಲಢಾಕಿನ ಸಂಶೋಧಕ ಮತ್ತು ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಆವಿಷ್ಕರಿಸಿದ್ದಾರೆ.

ಸಿಯಾಚಿನ್, ಗಲ್ವಾನ್ ಹಾಗೂ ಲಡಾಖ್‌ನ ಅತೀ ಶೀತ ಗಡಿಗಳಲ್ಲಿಸೇವೆ ಸಲ್ಲಿಸುತ್ತಿರುವ ಭಾರತೀಯ ಸೈನಿಕರಿಗೆ ಈ ಟೆಂಟ್ ಗಳು ನೆರವಾಗುತ್ತವೆ. ಈ ಟೆಂಟ್ ನ ಆವಿಷ್ಕರ್ತ ತಮ್ಮ ಆವಿಷ್ಕಾರಗಳಿಂದಲೇ ದೇಶ-ವಿದೇಶಗಳಲ್ಲಿ ಭಾರೀ ಖ್ಯಾತಿಗಳಿಸಿರುವ ಮ್ಯಾಗ್ಸೆಸ್ ಪ್ರಶಸ್ತಿ ಪುರಸ್ಕೃತ ಸೋನಮ್ ವಾಂಗ್‌ಚುಕ್. ನಟ ಅಮಿರ್ ಖಾನ್ 3 ಈಡಿಯಟ್ಸ್ ಚಿತ್ರದಲ್ಲಿ ನಟಿಸಿರುವ ಪುನ್ಸುಕ್ ವಾಂಗ್ಡು ಪಾತ್ರದ ಪ್ರೇರಕ ವ್ಯಕ್ತಿ ಇವರೇ.

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ಹೊರಗಡೆ ವಾತಾವರಣದಲ್ಲಿ -೧೪ ಡಿಗ್ರಿ ಸೆಂಟಿಗ್ರೇಡ್ ಇರುವ ಮಧ್ಯರಾತ್ರಿಯ ವೇಳೆಯಲ್ಲಿಯೂ ಟೆಂಟ್ ಒಳಗೆ +೧೫ಡಿಗ್ರಿ ಸೆಂಟಿಗ್ರೇಡ್ ತಾಪಮಾನ ನೆಲೆಸುವಂತೆ ಈ ಟೆಂಟ್ ನಿರ್ಮಾಣ ಮಾಡಿದ್ದಾರೆ. ಎಲ್ಲಿ ಬೇಕೆಂದ ಕಡೆ ಎತ್ತಿ ಕೊಂಡೊಯ್ದು ಸುಲಭವಾಗಿ ನಿರ್ಮಿಸಬಲ್ಲ ಈ ಟೆಂಟ್‌ಗಳು ಸಿಯಾಚಿನ್ ಮೊದಲಾದ ಕಠಿಣ ಪ್ರದೇಶಗಳಲ್ಲಿ ರಕ್ಷಣಾ ಸೇವೆಯಲ್ಲಿ ನಿಯುಕ್ತರಾಗುವ ಸೈನಿಕರಿಗೆ ಒಂದು ವರದಾನವಾಗಬಲ್ಲದು. ಇದು ಒಟ್ಟು ನಾಲ್ಕು ಪದರಗಳನ್ನು ಹೊಂದಿದೆ. ಇಷ್ಟೇ ಅಲ್ಲದೇ ಈ ಟೆಂಟ್‌ಗಳ ತಾಪಮಾನವನ್ನು ಸೈನಿಕರು ತಮ್ಮ ಅಗತ್ಯಗಳಿಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾಗಿದೆ.

ಮಿಲಿಟರಿ ಟೆಂಟ್‌ಗಳಲ್ಲಿ ಶಾಖವನ್ನು ಉತ್ಪಾದಿಸಲು ಬಳಸುವ ಇಂಧನದ ಬಳಕೆಯನ್ನು ಸಂಪೂರ್ಣವಾಗಿ ತಗ್ಗಿಸುವುದಲ್ಲದೇ ಪರಿಸರ ರಕ್ಷಣೆಗೆ ಈ ಸೋಲಾರ್ ಹೀಟ್ ಟೆಂಟ್‌ಗಳು ಸಹಕಾರಿ ಎಂದು ಸೋನಮ್ ವಾಂಗ್ಚುಕ್ ತಿಳಿಸಿದ್ದಾರೆ.

ಬೆಳಗಿನ ಸಮಯ ಸೂರ್ಯನಿಂದ ದೊರೆಯುವ ಶಾಖವನ್ನು ಶೇಖರಿಸಿಟ್ಟುಕೊಳ್ಳುವ ಈ ಸೋಲಾರ್ ಹೀಟ್ ಟೆಂಟ್‌ಗಳು ರಾತ್ರಿ ಸಮಯದಲ್ಲಿ ಸೈನಿಕರ ಮಲಗುವ ಕೋಣೆಯನ್ನು ಬೆಚ್ಚಗಾಗಿಸುತ್ತದೆ. ಒಂದು ಟೆಂಟ್‌ನಲ್ಲಿ ಸುಮಾರು 10 ಸೇನಾ ಯೋಧರು ಇರಬಹುದಾಗಿದ್ದು, ಸೇನೆಯ ಅಗತ್ಯಗಳಿಗೆ ತಕ್ಕಂತೆ ಈ ಸೋಲಾರ್ ಹೀಟ್ ಟೆಂಟ್‌ಗಳನ್ನು ನಿರ್ಮಿಸಲಾಗಿದೆ ಎಂದಿದ್ದಾರೆ.

ಈ ಸೋಲಾರ್ ಹೀಟ್ ಟೆಂಟ್‌ಗಳು ಇಂಧನದ ಬಳಕೆ ಇಲ್ಲವಾಗುರುವುದರಿಂದ ಪರಿಸರ ಸ್ನೇಹಿಯೂ ಆಗಿವೆ. ಅಲ್ಲದೇ ಕಡಿಮೆ ವೆಚ್ಚದಲ್ಲಿ ದೀರ್ಘಕಾಲ ಸೇವೆ ಒದಗಿಸಲಿದೆ ಎಂಬುದು ವಾಂಗ್ಚುಕ್ ಅವರ ಭರವಸೆ.

ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಯೋಧರ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯ ಬಳಿಕ, ವಾಂಗ್ಚುಕ್ ಈ ಸೋಲಾರ್ ಹೀಟ್ ಟೆಂಟ್‌ಗಳನ್ನು ನಿರ್ಮಾಣ ಮಾಡುವ ಘೋಷಣೆ ಮಾಡಿದ್ದರು. ಅದರಂತೆ ಇದೀಗ ಈ ಪರಿಸರ ಸ್ನೇಹಿ ಸೋಲಾರ್ ಹೀಟ್ ಟೆಂಟ್‌ಗಳು ಸಿದ್ಧವಾಗಿವೆ.

ಆವಿಷ್ಕಾರಗಳ ಹರಿಕಾರ:

ಸೋನಮ್ ಏಷ್ಯಾದ ನೋಬೆಲ್ ಎಂದೇ ಬಿಂಬಿತವಾಗಿರುವ ಮ್ಯಾಗ್ಸೆಸೆ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಲಡಾಕಿ ಯುವಕರ ಜೀವನ ಅವಕಾಶಗಳನ್ನು ಸುಧಾರಿಸಿ, ಎಲ್ಲ ಕ್ಷೇತ್ರಗಳಲ್ಲಿ ಸ್ಥಳೀಯ ಸಮುದಾಯವನ್ನು ರಚನಾತ್ಮಕವಾಗಿ ತೊಡಗಿಸಿ, ಅಲ್ಲಿನ ಸಂಸ್ಕೃತಿ ಮತ್ತು ಆರ್ಥಿಕ ಪ್ರಗತಿಗೆ ಶ್ರಮಿಸಿದ್ದಾರೆ. ಅಲ್ಲದೆ, ಗ್ರಾಮೀಣ ಮಟ್ಟದಲ್ಲಿ ಹಲವಾರು ಬದಲಾವಣೆ ತರುವ ಪ್ರಯತ್ನ ಮಾಡಿದ್ದ ವಾಂಗ್ಚುಕ್ ಜಾಗತಿಕ ಮಟ್ಟದಲ್ಲಿ ಹಲವರಿಗೆ ಮಾದರಿಯಾಗಿದ್ದಾರೆ. ಉತ್ತರ ಭಾರತದ ಲಡಾಕ್ ನಲ್ಲಿ ವ್ಯವಸ್ಥಿತ, ಸಹಕಾರ ಮತ್ತು ಸಮುದಾಯದ ಕಲಿಕೆಗೆ ಸಾಕಷ್ಟು ಶ್ರಮಿಸಿದ್ದಾರೆ. ಜೊತೆಗೆ ಭಾರತ ಸರ್ಕಾರ ಚೀನೀ ಆಪ್ ಗಳನ್ನು ನಿಷೇಧಿಸುವ ಬಹಳ ದಿನಗಳ ಹಿಂದೆಯೇ ‘ಬಾಯ್ಕಾಟ್‌ ಚೀನಾ’ ಆಂದೋಲನ ಆರಂಭಿಸಿ, ಚೀನಾ ಸರಕುಗಳನ್ನು ತಿರಸ್ಕರಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದರು. ಚೀನೀ ಸರಕಾರವು ಕೆಲವು ಆ್ಯಪ್ ಗಳ ಮೂಲಕ ವಿವಿಧ ರಾಷ್ಟ್ರಗಳ ಜನರ ವೈಯಕ್ತಿಕ ವಿಷಯಗಳನ್ನು ಸಂಗ್ರಹಿಸಲು ಬಳಸುತ್ತಿದೆ. ಹೀಗಾಗಿ ಈ ಆಪ್‌ಗಳನ್ನು ನಿಷೇಧಿಸುವುದೇ ಒಳ್ಳೆಯದು ಎಂದಿದ್ದಾರೆ. ಲಢಾಕಿನ ಜಲಕ್ಷಾಮವನ್ನು ಪರಿಹರಿಸುವ ಮಂಜುಗಡ್ಡೆ ಸ್ತೂಪ, ಸೌರಶಕ್ತಿ ಚಾಲಿತ ಗುಡಿಸಲು ಮೊದಲಾದ ಹಲವು ಹತ್ತು ಜನೋಪಯೋಗಿ ಆವಿಷ್ಕಾರಗಳ ಹರಿಕಾರ, ಈ ಸೋನಮ್ ವಾಂಗಚುಕ್.

  • email
  • facebook
  • twitter
  • google+
  • WhatsApp

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
Nation remembers Social reformer, Second Chief of RSS Guruji Golwalkar on his 108th Jayanti

The importance of not asking for anything

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022
ಡಾ|| ಭೀಮರಾವ್ ಅಂಬೇಡ್ಕರ್: ಜೀವನ, ಸಾಧನೆ

ಡಾ|| ಭೀಮರಾವ್ ಅಂಬೇಡ್ಕರ್: ಜೀವನ, ಸಾಧನೆ

April 14, 2021
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015

ಒಂದು ಪಠ್ಯ – ಹಲವು ಪಾಠ

May 27, 2022
Shri Guruji Golwalkar – Biography By H. V. Sheshadri

Shri Guruji Golwalkar – Biography By H. V. Sheshadri

April 18, 2011

EDITOR'S PICK

Magsaysay Awardee Dr Harish Hande interacts with TAPAS students at Rashtrotthana

ರಾಷ್ಟ್ರೋತ್ಥಾನ ಪರಿಷತ್ತಿನಲ್ಲಿ ತಪಸ್ ವಿದ್ಯಾರ್ಥಿಗಳೊಂದಿಗೆ ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತ ಡಾ. ಹರೀಶ ಹಂದೆ ಸಂವಾದ

December 2, 2013
Day 1 ABPS, National RSS meet at Nagpur : Shakhas increasing year on year

Need to protect and promote Bharatiya languages : Resolution at ABPS, Nagpur

March 10, 2018
ಆರೆಸ್ಸೆಸ್ ನ ಪರಮಪೂಜನೀಯ ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್ ಅವರ ವಿಜಯದಶಮಿ ಉತ್ಸವ ೨೦೨೦ ರ ಹಿಂದಿ ಭಾಷಣದ ಕನ್ನಡಾನುವಾದ

#RSSVijayadashami Utsav 2020 photo album from Nagpur

October 25, 2020
‘RSS works to Unite Hindu Society’: Sarasanghachalak Bhagwat at ‘Rashtra Raksha Sangam’, Kanpur

‘RSS works to Unite Hindu Society’: Sarasanghachalak Bhagwat at ‘Rashtra Raksha Sangam’, Kanpur

February 16, 2015

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In