• Samvada
  • Videos
  • Categories
  • Events
  • About Us
  • Contact Us
Monday, February 6, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Articles

ಭಾರತದ ಹೆಮ್ಮೆಯ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ

Vishwa Samvada Kendra by Vishwa Samvada Kendra
April 3, 2021
in Articles
250
0
ಭಾರತದ ಹೆಮ್ಮೆಯ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ
491
SHARES
1.4k
VIEWS
Share on FacebookShare on Twitter

1971ರ ಡಿಸೆಂಬರ್ ವೇಳೆಯಲ್ಲಿ ಸೇನೆಯ  ಮುಖ್ಯಸ್ಥ ಮಾಣಿಕ್ ಷಾ ಅವರಿಗೆ ಪ್ರಧಾನಿ ಇಂದಿರಾ ಗಾಂಧಿಯಿಂದ ಬುಲಾವ್. ಅವರು ಬಂದೊಡನೆ ಆಕೆ ಕೇಳಿದ ಮೊದಲ ಪ್ರಶ್ನೆ: ‘ಈಗ ಯುದ್ಧ ಮಾಡಲು ಸೈನ್ಯ ಸಿದ್ಧವೇ?’ ಗುಂಡಿನಂತೆ ಬಂದ ಉತ್ತರ: “I am always ready, sweetie.” ಅವರು ಇಂದಿರಾ ಅವರನ್ನು ಮೇಡಂ ಎಂದು ಕರೆಯಲು ಒಪ್ಪುತ್ತಿರಲಿಲ್ಲ. ಹೀಗೆ ನೇರ ನಡೆಯ ಮುಕ್ತ ಮಾತಿನ ವ್ಯಕ್ತಿ ಮಾಣಿಕ್ ಷಾ ಆಗಿದ್ದರು.

ಈ ಸಂಭಾಷಣೆಗೆ ಒಂದು ಕಿರು ಹಿನ್ನೆಲೆ ಇದೆ. ಪಾಕಿಸ್ತಾನದಿಂದ ಬೇರ್ಪಟ್ಟು ಸ್ವತಂತ್ರ ದೇಶವಾಗಬೇಕು ಎಂದು ಪೂರ್ವ ಪಾಕಿಸ್ತಾನ ಪಶ್ಚಿಮ ಪಾಕಿಸ್ತಾನದ ವಿರುದ್ಧ ಒಂಬತ್ತು ತಿಂಗಳು ಯುದ್ಧ ಮಾಡಿತು. ಇದು ಇತಿಹಾಸದ ಪುಟಗಳಲ್ಲಿ ‘ಮುಕ್ತಿಯುದ್ಧ’ ಎಂದು ದಾಖಲಾಗಿದೆ.

READ ALSO

ಮಾತಿನ ಕಠಿಣ ಕ್ರಮ, ಇನ್ನೆಷ್ಟು ದಿನ?

ದೇಶದ ಸುರಕ್ಷತೆಗಾಗಿ ಅಗ್ನಿಪಥ!

1971ರ ಮಾರ್ಚ್‌ನಲ್ಲಿ ಷೇಕ್ ಮುಜಿಬುರ್ ರೆಹಮಾನ್  ನೇತೃತ್ವದಲ್ಲಿ ಹೋರಾಟ ಆರಂಭವಾಗಿ ಒಂಬತ್ತು ತಿಂಗಳು ನಡೆಯಿತು. ಬಂಗಾಳದ ನಾಗರಿಕರು, ವಿದ್ಯಾರ್ಥಿಗಳು, ಸೈನಿಕರು ಸೇರಿ ನಡೆಸಿದ ಈ ಹೋರಾಟವನ್ನು ಪಾಕಿಸ್ತಾನದ ಸೈನ್ಯ ದಮನ ಮಾಡಲು ಕ್ರೂರವಾಗಿ ವರ್ತಿಸಿತು. ಅಸಂಖ್ಯ ಮಹಿಳೆಯರ ಮೇಲೆ ಪಾಕಿಸ್ತಾನದ ಸೇನೆ ಮತ್ತು ಕೋಮುವಾದಿ ಸಂಘಟನೆಗಳಿಗೆ ಸೇರಿದವರು ಅತ್ಯಾಚಾರ ಎಸಗಿದರು.

ಮುಕ್ತಿ ಬಯಸಿದ ನಾಗರಿಕರಿಗೆ ಭಾರತ, ಆರ್ಥಿಕ, ರಾಜತಾಂತ್ರಿಕ, ಸೈನಿಕ ಬೆಂಬಲ ನೀಡಿತು. ಮನೆ ಮಠ ಕಳೆದುಕೊಂಡ ಲಕ್ಷಾಂತರ ನಿರಾಶ್ರಿತರು ಭಾರತಕ್ಕೆ ಹರಿದು ಬಂದರು. ಆಗ ಭಾರತ ಸರ್ಕಾರಕ್ಕೆ ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸುವುದು ಅನಿವಾರ್ಯವಾಯಿತು. ಇದು ಮಾಣಿಕ್‌ ಷಾ ಎದುರಿಗಿದ್ದ ಸವಾಲು, ವಸ್ತುಸ್ಥಿತಿ.

1971ರ ಏಪ್ರಿಲ್‌ನಲ್ಲಿ ಪೂರ್ವ ಪಾಕಿಸ್ತಾನದಿಂದ ಲಕ್ಷಾಂತರ ನಿರಾಶ್ರಿತರು ಗಡಿ ದಾಟಿ ಭಾರತಕ್ಕೆ ಬಂದಿದ್ದರು. ಪ್ರಧಾನಿ ಇಂದಿರಾ ಆಗಲೇ ಪಾಕಿಸ್ತಾನದ ಮೇಲೆ ಯುದ್ಧ ಹೂಡಲು ಕಾತುರರಾಗಿದ್ದರು. ಆಗ ಸಂಪುಟ ಸಭೆ ನಡೆದಾಗ ಇಂದಿರಾ ಇದೇ ಮಾತನ್ನು ಮುಂದಿಟ್ಟರು.

ಆಗ ಏಪ್ರಿಲ್ ತಿಂಗಳ ಅಂತ್ಯ. ಯುದ್ಧದ ಪ್ರಸ್ತಾವವನ್ನು  ಯಾವುದೇ ಮುಲಾಜಿಲ್ಲದೇ ವಿರೋಧಿಸಿದವರು ಮಾಣಿಕ್‌ ಷಾ.

ಪ್ರವಾಹ ಭೀತಿ: ಮಳೆಗಾಲದಲ್ಲಿ ಯುದ್ಧ ಬೇಡ. ಪೂರ್ವ ಪಾಕಿಸ್ತಾನದಲ್ಲಿ ಪ್ರವಾಹ ಹೆಚ್ಚಿರುತ್ತದೆ ಎಂದು ಕಾರಣ ವಿವರಿಸಿದವರು ಮಾಣಿಕ್‌ ಷಾ.

ಅಲ್ಲದೆ ಸೈನ್ಯದ ಎರಡು ಕಾಲಾಳು ಪಡೆಗಳು ಬೇರೆ ಕಡೆ ಕಾರ್ಯ ನಿರತವಾಗಿದ್ದವು. ಸೈನ್ಯದ 189 ಟ್ಯಾಂಕ್‌ಗಳ ಪೈಕಿ 11 ಮಾತ್ರ ಯುದ್ಧಕ್ಕೆ ಸಿದ್ಧವಿದ್ದವು. ಮಾಣಿಕ್ ಈ ವಾಸ್ತವಗಳನ್ನು ಪ್ರಧಾನಿಗೆ ವಿವರಿಸಿ, ‘ಹಾಗೆಂದು ಯುದ್ಧ ಬೇಡವೆಂದು ಹೇಳುವುದಿಲ್ಲ, ಕಾದು ಈ ವರ್ಷದ ಕೊನೆಗೆ ಯುದ್ಧ ಮಾಡಲು ಪ್ರಧಾನಿ ಆದೇಶ ನೀಡಿದರೆ ಭಾರತಕ್ಕೆ ಗೆಲುವು ಖಂಡಿತ’ ಎಂದು ಭರವಸೆ ನೀಡಿದರು.

ಇನ್ನು ಯುದ್ಧ ಶುರುವಾಗಲು ಆರೆಂಟು ತಿಂಗಳಿರುವಾಗಲೇ ಭವಿಷ್ಯದ ಫಲಿತಾಂಶ ಭಾರತದ ಪರವಿರುತ್ತದೆ ಎಂದು ನುಡಿದು, ಅಂತೆಯೇ ಅದನ್ನು ಸಾಧಿಸಿ ತೋರಿಸಿದ ವೀರ ನಾಯಕ ಮಾಣಿಕ್ ಷಾ.

ಮಾಣಿಕ್ ಷಾ ಅವರ ಸೇನೆ ನಡೆಸಿದ ಮಿಂಚಿನ ದಾಳಿಗೆ ಢಾಕಾ ವಶವಾಗಿ, ಪಾಕಿಸ್ತಾನದ 93,000 ಸೈನಿಕರು ಯುದ್ಧ ಕೈದಿಗಳಾಗಿ ವಶವಾದರು. ಅಮೆರಿಕ ಮತ್ತು ವಿಶ್ವಸಂಸ್ಥೆಯ ತೀವ್ರ ಮಧ್ಯಪ್ರವೇಶದಿಂದಷ್ಟೆ ಭಾರತ ಕದನ ವಿರಾಮ ಘೋಷಿಸಿತು.

ನೂತನ ಬಾಂಗ್ಲಾ ದೇಶದ ರಾಜಧಾನಿ ಢಾಕಾಗೆ ಹೋಗಿ ಪಾಕ್ ಸೈನಿಕರ ಶರಣಾಗತಿಯನ್ನು ಸ್ವೀಕರಿಸಲು ಮಾಣಿಕ್ ಷಾಗೆ ಭಾರತ ಸರ್ಕಾರ ಸೂಚಿಸಿತು. ಆದರೆ ಈ ಗೌರವ ಪೂರ್ವ ವಲಯದ ಸೇನಾ ಮುಖ್ಯಸ್ಥರಿಗೆ ಸಲ್ಲಬೇಕು ಎಂದು ನಿರಾಕರಿಸಿದ ಪ್ರಾಮಾಣಿಕ ಮಾಣಿಕ ಷಾ.

ಭಾರತ –ಪಾಕ್‌ ಸಮರ ಮತ್ತು ಬಾಂಗ್ಲಾ ಉದಯ ಈ  ಮುಖ್ಯ ಘಟನೆಗಳ ಹಿಂದೆ ಮಾಣಿಕ್‌ ಷಾ ಅವರ ಪ್ರಚಂಡ ಚಾಣಕ್ಯ ತಲೆ ಕೆಲಸ ಮಾಡಿತ್ತು. ಈ ಯುದ್ಧವನ್ನು ಪ್ರಪಂಚದ ಅತಿ ಕ್ಷಿಪ್ರ ಸಮರ ಎಂದು ಪರಿಣತರು ಪರಿಗಣಿಸಿದ್ದಾರೆ. ಈ ಗೆಲುವಿನಿಂದ ಇಂದಿರಾ ಗಾಂಧಿ ವರ್ಚಸ್ಸು ಹೆಚ್ಚಿದ್ದು ಈಗ ಇತಿಹಾಸ.

ಸ್ವಾತಂತ್ರ್ಯ ಪೂರ್ವ ಭಾರತದ ಅಮೃತಸರದಲ್ಲಿ ಪಾರ್ಸಿ ಕುಟುಂಬದಲ್ಲಿ ಏಪ್ರಿಲ್‌ 3, 1914ರಲ್ಲಿ ಜನಿಸಿದವರು ಮಾಣಿಕ್. ಅವರ ತಂದೆ ಹೊರ್ಮುಸ್ಜಿ ಮಾಣಿಕ್‌ ಷಾ ವೃತ್ತಿಯಲ್ಲಿ ವೈದ್ಯರು. ತಾಯಿ ಹೀರಾಬಾಯಿ. ಗುಜರಾತಿನಿಂದ ಪಂಜಾಬಿಗೆ ವಲಸೆ ಬಂದ ಕುಟುಂಬ ಇದು. ಬಾಲ್ಯದಿಂದಲೂ ಯಾರಿಗೂ ಮಣಿಯದ ತನ್ನದೇ ಸರಿ ಎಂಬ ಧೋರಣೆ ಅವರಿಗಿತ್ತು. ನೈನಿತಾಲಿನ ಶೆರ್‌ವುಡ್‌ ಕಾಲೇಜಿನಲ್ಲಿ ಓದಿದ ಮೇಲೆ ವೈದ್ಯಕೀಯ ಓದಲೆಂದು ತನ್ನನ್ನು ಲಂಡನ್‌ಗೆ ಕಳುಹಿಸು ಎಂದು ತಂದೆಯನ್ನು ಮಾಣಿಕ್ ಕೇಳಿದರು. ತಂದೆ ಮಗನ ಕೋರಿಕೆಗೆ ಒಪ್ಪಲಿಲ್ಲ. ಸರಿ, ಈ ವೀರಪುತ್ರ ಮನೆಯಲ್ಲಿ ಯಾರಿಗೂ ಹೇಳದೆ ಸೇನೆ ಸೇರಲು ಇದ್ದಂಥ ಪರೀಕ್ಷೆಗೆ ಬರೆದು ಅದರಲ್ಲಿ ಪಾಸಾದರು. ತಂದೆ ಏನಾದರೂ ಕೂಡಲೇ ಒಪ್ಪಿದ್ದರೆ ದೇಶ ಒಬ್ಬ ಫೀಲ್ಡ್‌ ಮಾರ್ಷಲ್‌ನನ್ನು ಕಳೆದುಕೊಳ್ಳುತ್ತಿತ್ತು!  

1932ರಲ್ಲಿ ಮಾಣಿಕ್ ಷಾ ಸೇನೆ ಸೇರಿದರು. ಆಗ ಭಾರತದಲ್ಲಿದ್ದ ಸೇನೆ ‘ಬ್ರಿಟಿಷ್ ಇಂಡಿಯನ್‌ ಆರ್ಮಿ’ ಆಗಿತ್ತು. ಅದರಲ್ಲಿ ದುಡಿದು ಮುಂದೆ ಭಾರತ ಸ್ವತಂತ್ರವಾದಾಗ ದೊಡ್ಡ ಹುದ್ದೆಗಳನ್ನು ನಿಭಾಯಿಸಿದವರು ಹಲವರಿದ್ದಾರೆ. ಉದಾಹರಣೆಗೆ ಕನ್ನಡಿಗರೇ ಆದ ಜನರಲ್‌ ತಿಮ್ಮಯ್ಯ, ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ. ಈ ಪಾವನರ ಸಾಲಿಗೆ ಸೇರಿದವರು ಮಾಣಿಕ್‌ ಷಾ. ಎರಡು ವರ್ಷಗಳ ನಂತರ ವಿವಿಧ ಕಠಿಣ ಪರೀಕ್ಷೆಗಳಲ್ಲಿ ತೇರ್ಗಡೆಯಾದ ಮೇಲೆ ಮಾಣಿಕ್‌, ಲೆಫ್ಟಿನೆಂಟ್‌ ಎನಿಸಿಕೊಂಡರು.

ಬ್ರಿಟಿಷ್ ಆಡಳಿತ ಯುಗದಲ್ಲಿ ಅವರು ಬ್ರಿಟಿಷ್ ಬೆಟಾಲಿಯನ್‌ ಆದ ರಾಯಲ್‌ ಸ್ಕಾಟ್ಸ್‌ ಮತ್ತು ನಾಲ್ಕನೇ ಬೆಟಾಲಿಯನ್‌, 12ನೇ ಫ್ರಾಂಟಿಯರ್‌ ಫೋರ್ಸ್‌ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸಿದರು.

ಎರಡನೇ ಮಹಾಯುದ್ಧದಲ್ಲಿ ಬರ್ಮಾ ಯುದ್ಧದಲ್ಲಿ ಮಾಣಿಕ್‌ ಷಾ ಜಪಾನಿ ಸೈನ್ಯದ ಎದುರು ಹೋರಾಡಿ ಪಗೋಡಾ ಬೆಟ್ಟವನ್ನು ವಶಪಡಿಸಿಕೊಂಡ ಮೇಲೆ ಅವರ ಮೇಲೆ ಜಪಾನಿ ಸೈನಿಕರು ಗುಂಡಿನ ಮಳೆಗರೆದರು. ಅವರ ಎದೆ, ಹೊಟ್ಟೆ, ಯಕೃತ್ತಿಗೆ ಎಲ್‌ಎಂಜಿ ಗುಂಡುಗಳು ತಾಗಿದ್ದವು. ಅವರು ಬದುಕುವುದಿಲ್ಲ, ಆದರೆ ಅವರ ಸೇವೆ ಮರೆತು ಹೋಗಬಾರದು ಎಂದು ಮೇಜರ್‌ ಜನರಲ್‌ ಡಿ.ಟಿ. ಕೋವನ್‌ ತಮ್ಮ ಸ್ವಂತದ ‘ಮಿಲಿಟರಿ ರಿಬ್ಬನ್‌’ ಅನ್ನು ಮಾಣಿಕ್‌ ಅವರ ತೋಳಿಗೆ ಬಿಗಿದು ಗೌರವ ಸೂಚಿಸಿದ್ದರು. ಒಬ್ಬ ಯೋಧನ ಪಾಲಿಗೆ ಇದು ದೊಡ್ಡ ಗೌರವ.

ಸ್ವಾತಂತ್ರ್ಯದ ನಂತರದ ಭಾರತ –ಪಾಕ್ ಸಮರ, ನಿರಾಶ್ರಿತರಿಗೆ ಆಸರೆ ನೀಡುವುದು ಮೊದಲಾದ ಸವಾಲಿನ ಸಂದರ್ಭಗಳಲ್ಲಿ ಅವರು ಗುರುತರ ಕೆಲಸ ಮಾಡಿದರು. ನಾಗಾಲ್ಯಾಂಡ್‌ನಲ್ಲಿ ಅಕ್ರಮ ಒಳನುಸುಳುಕೋರರನ್ನು ಇವರು ಎದುರಿಸಿದ ಸಂದರ್ಭದಲ್ಲಿ ಭಾರತ ಸರ್ಕಾರ ಅವರಿಗೆ 1968ರಲ್ಲಿ ಪದ್ಮ ಭೂಷಣ ನೀಡಿ ಗೌರವಿಸಿತು. ಅವರಿಗೆ ಪದ್ಮ ವಿಭೂಷಣ ಕೂಡ ಬಯಸದೆ ಬಂತು. ಅವರು ಜೀವನದಲ್ಲಿ ಪಡೆದ ದೊಡ್ಡ ಗೌರವ 1973ರಲ್ಲಿ ಫೀಲ್ಡ್ ಮಾರ್ಷಲ್‌ ಗೌರವ.

ಅಪರೂಪದ ಯೋಧ ಮಾಣಿಕ್‌ ಜೀವನ ಕೂಡ ವಿವಾದಾತೀತವಾಗಿರಲಿಲ್ಲ. ಅವರು ಭಾರತದ ಸೈನಿಕ ರಹಸ್ಯಗಳನ್ನು ಪಾಕಿಸ್ತಾನಕ್ಕೆ ಹಣಕ್ಕೆ ಮಾರಿದ್ದರು ಎಂದು ಪಾಕಿಸ್ತಾನದ ಫೀಲ್ಡ್ ಮಾರ್ಷಲ್‌ ಆಗಿದ್ದ ಅಯೂಬ್‌ ಖಾನ್ ಅವರ ಮಗ ಗೊಹರ್‌ ಅಯೂಬ್ ಆರೋಪ ಮಾಡಿದ್ದರು, ಆದರೆ ಭಾರತದ ರಕ್ಷಣಾ ಇಲಾಖೆ ಅದನ್ನು ನಿರಾಕರಿಸಿದ್ದು ಸರಿಯಾಗೇ ಇತ್ತು. ಅವರು ತಮ್ಮನ್ನು ಮಾರಿಕೊಂಡಿದ್ದು ಧ್ಯೇಯ ಮತ್ತು ಧೀಮಂತಿಕೆಗೆ ಮಾತ್ರ.

ಬೇಸರದ ಸಂಗತಿ ಎಂದರೆ ಸ್ವಾತಂತ್ರ್ಯಾ ನಂತರದ ಎಲ್ಲ ಪ್ರಮುಖ ಸಮರಗಳ ಮುಂಚೂಣಿಯಲ್ಲಿದ್ದು 94 ವರ್ಷ ಬದುಕಿ ಮೃತರಾದ ಮಾಣಿಕ್‌ ಅವರ ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ, ಪ್ರಧಾನಿ, ಗೃಹಮಂತ್ರಿ ಯಾರೂ ಭಾಗವಹಿಸಲಿಲ್ಲ. ಸಾಂವಿಧಾನಿಕ ಹುದ್ದೆಯಲ್ಲಿದ್ದು ಭ್ರಷ್ಟರೆಂಬ ಆಪಾದನೆಗೆ ಒಳಗಾದ ರಾಜಕಾರಣಿಗಳು ನಿಧನರಾದಾಗ ಕೂಡ ಕೆಳಕ್ಕಿಳಿಯುವ ರಾಷ್ಟ್ರಧ್ವಜ ಅಂದು ಮಾತ್ರ ಅರ್ಧ ಮಟ್ಟದಲ್ಲಿ ಹಾರಾಡಲಿಲ್ಲ. ಮೇರಾ ಭಾರತ್ ಮಹಾನ್! ಸಾಮಾನ್ಯ ಜನರ ಮನಸ್ಸಿನಲ್ಲಿ ಇಂದಿಗೂ ಅವರ ಬಗ್ಗೆ ಗೌರವವಿದೆ. ಹೆಮ್ಮೆಯಿದೆ.

ಕೃಪೆ: ಪ್ರಜಾವಾಣಿ

  • email
  • facebook
  • twitter
  • google+
  • WhatsApp

Related Posts

Articles

ಮಾತಿನ ಕಠಿಣ ಕ್ರಮ, ಇನ್ನೆಷ್ಟು ದಿನ?

July 28, 2022
Articles

ದೇಶದ ಸುರಕ್ಷತೆಗಾಗಿ ಅಗ್ನಿಪಥ!

June 18, 2022
Articles

ಪಠ್ಯಪುಸ್ತಕಗಳು ಕಲಿಕೆಯ ಕೈದೀವಿಗೆಯಾಗಲಿ

Articles

ಒಂದು ಪಠ್ಯ – ಹಲವು ಪಾಠ

May 27, 2022
Articles

ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅನ್ಯಮತೀಯರ ಆರ್ಥಿಕ ಬಹಿಷ್ಕಾರ : ಒಂದು ಚರ್ಚೆ

March 25, 2022
Articles

ಡಿವಿಜಿಯವರ ವ್ಯಾಸಂಗ ಗೋಷ್ಠಿ

March 17, 2022
Next Post
Developing Capable Society through Art is Our Goal: Sarsanghachalak Shri Mohan Bhagwat

Developing Capable Society through Art is Our Goal: Sarsanghachalak Shri Mohan Bhagwat

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

‘Going Beyond Panchsheel’: article by RSS functionary Ram Madhav on Indo-China relations

‘Going Beyond Panchsheel’: article by RSS functionary Ram Madhav on Indo-China relations

June 29, 2014
ದೇವಾಲಯಗಳನ್ನು ಬಾಹ್ಯ ಲೆಕ್ಕಪರಿಶೋಧನೆ ನಡೆಸುವಂತೆ ಕೋರಿ ಜಗ್ಗಿ ವಾಸುದೇವ್ ಹೈಕೋರ್ಟ್ ಗೆ ಅರ್ಜಿ

ದೇವಾಲಯಗಳನ್ನು ಬಾಹ್ಯ ಲೆಕ್ಕಪರಿಶೋಧನೆ ನಡೆಸುವಂತೆ ಕೋರಿ ಜಗ್ಗಿ ವಾಸುದೇವ್ ಹೈಕೋರ್ಟ್ ಗೆ ಅರ್ಜಿ

May 1, 2021
ಭಾಷೆಯ ಬಗ್ಗೆ ಗುರೂಜಿ ಸಂದರ್ಶನ

ಭಾಷೆಯ ಬಗ್ಗೆ ಗುರೂಜಿ ಸಂದರ್ಶನ

September 19, 2019
NARENDRA MODI

Narendra Modi goes Green: a book on Climate change launched

December 21, 2010

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In