• Samvada
Wednesday, May 25, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Articles

ಮಂಗಳಮಯವಾಗಲಿ ಚಂದ್ರಯಾನ

Arun by Arun
September 7, 2010
in Articles, News Digest
250
0
491
SHARES
1.4k
VIEWS
Share on FacebookShare on Twitter

READ ALSO

ಒಂದು ಪಠ್ಯ – ಹಲವು ಪಾಠ

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

ಚಂದ್ರಯಾನ -೧ ಎಂಬ ಉಪಗ್ರಹ ಚಂದ್ರನನ್ನು ಸುತ್ತಿ ಚಂದ್ರನ ಬಗೆಗಿನ ಮಾಹಿತಿಯನ್ನು ನಮಗೆ ಕಳುಹಿಸಲು ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ನೆಗೆದಿದೆ. ಜೊತೆಗೆ ಭಾರತದ ಮತ್ತು ಇಸ್ರೋ ಬಾಹ್ಯಾಕಾಶ ಸಂಸ್ಥೆಯ ಬಗೆಗಿನ ಗೌರವವನ್ನು ಅಷ್ಟೇ ಎತ್ತರಕ್ಕೆ ಕೊಂಡೊಯ್ದಿದೆ. ವಿಶ್ವದ ಬಾಹ್ಯಾಕಾಶ ಚರಿತ್ರೆಯಲ್ಲೇ ಇದೊಂದು ಮೈಲಿಗಲ್ಲಾಗಲಿದೆ.

ಒಂದೆಡೆ ಸಾಧನೆಯ ಸಂಭ್ರಮ ಕಂಡರೆ ಇನ್ನು ಕೆಲವರಿಗೆ ಆರೋಪ ಮಾಡುವ ಖಯಾಲಿ. ’ಸುಖಾಸುಮ್ಮನೆ ಸಾರ್ವಜನಿಕ ಹಣದ ೩೮೦ ಕೋಟಿ ರೂ.ಗಳನ್ನು ಈ ಯೋಜನೆಗಾಗಿ ಖರ್ಚು ಮಾಡಿ ಚಂದ್ರನನ್ನು ಸುತ್ತಲು ಉಪಗ್ರಹ ಉಡಾಯಿಸಲಾಯಿತು. ಉಪಗ್ರಹಕ್ಕೆ ವಿಮೆ ಮಾಡಿಸಿರಲಿಲ್ಲ, ಅಲ್ಲಿ ಹೀಲಿಯಂ ಇಂಧನ ಸಿಗುವುದಾದರೂ ಅದನ್ನು ಭೂಮಿಗೆ ತರುವುದು ಸಾಧ್ಯವಿಲ್ಲ’ ಎಂಬಂತಹ ಅಪಸ್ವರಗಳೂ ಕೆಲವೆಡೆ ಕೇಳಿಬಂತು. ಚಂದ್ರಯಾನ ಕೇವಲ ಷೋಕಿಗಾಗಿ ಅಂದುಕೊಂಡವರೂ ಇದ್ದಾರೆ.

ಆದರೆ ಚಂದ್ರಯಾನದ ಮೂಲಕ ಪಡೆಯುವ ಮಾಹಿತಿ ಅಗಾಧವಾದುದು ಎಂಬುದನ್ನು ಅಂತಹವರು ಅರ್ಥ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಚಂದ್ರನ ಕುರಿತಾದ ಸಂಶೋಧನೆಯ ದಿಕ್ಕನ್ನೇ ಈ ಯಾನ ಬದಲಿಸಲಿದೆ. ಅಲ್ಲಿಂದ ಇಂಧನ ತರುವುದು ಈಗ ಸಾಧ್ಯವಾಗದಿರಬಹುದು. ಈಗ ದೂರದರ್ಶನ, ಮೊಬೈಲುಗಳಲ್ಲಾದ ಕ್ರಾಂತಿಗಳಿಗೆ ಅಂದು ಕಳುಹಿಸಿದ ಉಪಗ್ರಹಗಳು ಕಾರಣವಾಗಲಿವೆ ಎಂದು ಆ ಕಾಲದಲ್ಲಿ ಉಪಗ್ರಹಗಳ ಅಗತ್ಯವಿಲ್ಲವೆಂದು ಜರಿಯುತ್ತಿದ್ದವರಿಗೆ ತಿಳಿದಿರಲಿಲ್ಲ. ಹಾಗೆ ನೋಡಿದರೆ ನಮ್ಮ ದೇಶ ವಿವಿಧ ಕ್ಷೇತ್ರಗಳಲ್ಲಿ ಮಾಡುವ ವೆಚ್ಚಕ್ಕೆ ಹೋಲಿಸಿದರೆ ೩೮೦ ಕೋಟಿ ಏನೇನೂ ಅಲ್ಲ. ಅಷ್ಟು ಕಡಿಮೆ ಖರ್ಚಿನಲ್ಲಿ ಚಂದ್ರನನ್ನು ತಲಪಿದ ಮೊದಲ ದೇಶವೇ ಭಾರತ. ಅದಕ್ಕಿಂತಲೂ ಹೆಚ್ಚು ಹಣವನ್ನು ಭ್ರಷ್ಟಾಚಾರದ ಮೂಲಕವೇ ನುಂಗಿ ಹಾಕುವ ರಾಜಕಾರಿಣಿಗಳೂ ನಮ್ಮಲ್ಲಿದ್ದಾರೆ.

ಈ ಉಡಾವಣೆಗೆ ವಿಮೆ ಏಕೆ ಮಾಡಲಿಲ್ಲವೆಂಬುದನ್ನು ಇಸ್ರೋದ ವಕ್ತಾರರೇ ಹೇಳಿದ್ದಾರೆ. ವಿಮೆ ಮಾಡಿಸಿದ್ದರೆ ಭಾರತ ಸರ್ಕಾರದ ಅಂಗ ಸಂಸ್ಥೆಗಳೇ ಅದರ ಹೊಣೆಯನ್ನು ವಹಿಸಿಕೊಳ್ಳಬೇಕಿತ್ತು ಮತ್ತು ಈ ಯೋಜನೆ ವಿಫಲವಾದಲ್ಲಿ, ವಿಮೆಯ ಹಣವನ್ನು ಭಾರತ ಸರ್ಕಾರವೇ ಕೊಡಬೇಕಾಗುತ್ತಿತ್ತು, ಹೀಗಾಗಿ ವಿಮೆ ಮಾಡಿಸುವುದರಿಂದ ಏನೂ ಪ್ರಯೋಜನವಿರುತ್ತಿರಲಿಲ್ಲ ಎಂದು.

ಭೂಮಿಯಿಂದ ಸುಮಾರು ೩೮೪,೪೦೩ ಕಿಲೋಮೀಟರ್‌ಗಳಷ್ಟು ದೂರದಲ್ಲಿರುವ ಅದರ ಏಕೈಕ ನೈಸರ್ಗಿಕ ಉಪಗ್ರಹವಾದ ಚಂದ್ರನ ಬಗ್ಗೆ ಮನುಷ್ಯನಿಗೆ ಬಹಳ ಕಾಲದಿಂದಲೂ ಇರುವ ಕುತೂಹಲ, ಆಕರ್ಷಣೆ ಸಹಜವಾದದ್ದೆ. ಇದನ್ನು

ನಾವು ಸಾಹಿತ್ಯದಲ್ಲೂ ವೈಜ್ಞಾನಿಕ ಚಿಂತನೆಗಳಲ್ಲೂ ವಿಪುಲವಾಗಿ ಕಾಣುತ್ತೇವೆ. ಆಧುನಿಕ ಖಗೋಳ ವಿಜ್ಞಾನದಲ್ಲಿ ವಿವಿಧ ದೇಶಗಳು ನಡೆಸಿದ ಸಂಶೋಧನೆಗಳ ಫಲವಾಗಿ ಇಂದು ಅನೇಕ ಗ್ರಹಗಳ ತನಕ ನಮ್ಮ ಅರಿವು ವಿಸ್ತರಿಸಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಯಾವುದೇ ದೇಶ ಮುಂದುವರಿದಿರುವುದರ ದ್ಯೋತಕ ಇಂತಹ ಸಾಧನೆಗಳೇ. ಬಾಹ್ಯಾಕಾಶದ ಸಾಧಗಳು ಪರಿಣಾಮ ಬೀರುವ ಕ್ಷೇತ್ರಗಳ ವ್ಯಾಪ್ತಿ ಬಹಳ ದೊಡ್ಡದಿದೆ. ಇಸ್ರೋದ ಟಲಿ ಮೆಡಿಸಿನ್‌ ವ್ಯವಸ್ಥೆಯು ದೂರದೂರದ ಕುಗ್ರಾಮಗಳನ್ನು ಉತ್ತಮ ಆಸ್ಪತ್ರೆಗಳಿಗೆ ನೇರ ಸಂಪರ್ಕಿಸುವಲ್ಲಿ ಸಹಕರಿಸುತ್ತಿದೆ. ಬೆಂಗಳೂರಿನ ನಾರಾಯಣ ಹೃದಯಾಲಯ ಹಾಗೂ ಮಣಿಪಾಲ ಆಸ್ಪತ್ರೆ,ಮತ್ತು ಕೊಚ್ಚಿಯ ಅಮೃತ ವೈದ್ಯಕೀಯ ಸಂಸ್ಥೆ ಈ ವ್ಯವಸ್ಥೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿವೆ. ಗುಜರಾತದ ಭುಜ್ ಭೂಕಂಪದ, ಇತ್ತೀಚಿನ ಕುಂಭಮೇಳದ ಸಂದರ್ಭಗಳಲ್ಲಿ ಇದರ ಪ್ರಯೋಜನ ಪಡೆಯಲಾಗಿದೆ. ಇದಕ್ಕಾಗಿ ಇಸ್ರೋ ತನ್ನ ವಾರ್ಷಿಕ ಬಜೆಟ್ಟಿನ ಹೊರತಾಗಿ ಹಣ ಹೂಡಿದೆ. ಇದು ಸಾಧ್ಯವಾದದ್ದು ಹೇಗೆ? ಇಂದು ನಮ್ಮದೇ ಕೃತಕ ಉಪಗ್ರಹಗಳು ಭೂಮಿಯ ಸುತ್ತ ತಿರುಗುತ್ತಿರುವುದರಿಂದಲೇ ಅಲ್ಲವೆ?

ಮುಂಚಿನ ದಿನಗಳಲ್ಲಿ ಯಾವುದಾದರೂ ದೇಶ ತನ್ನದೊಂದು ಉಪಗ್ರಹವನ್ನು ಅಂತರಿಕ್ಷಕ್ಕೆ ಹಾರಿಬಿಡಲು ಯೋಚಿಸಿದರೆ, ಅದಕ್ಕಿದ್ದ ಆಯ್ಕೆ ಕೇವಲ ಅಮೆರಿಕ, ಐರೋಪ್ಯ ಅಂತರಿಕ್ಷ ಸಂಸ್ಥೆ, ರಷ್ಯಾ, ಅಥವಾ ಜಪಾನ್. ಈ ದೇಶಗಳ

ಸಾಲಿಗೆ ಭಾರತವೂ ಸೇರಿ, ಅತ್ಯಂತ ಕಡಿಮೆ ವೆಚ್ಚದಲ್ಲಿ ಸಮರ್ಥವಾಗಿ ಈ ಕೆಲಸವನ್ನು ಮಾಡಿಕೊಡುವುದು ಸಾಧ್ಯವಾಗಿದ್ದರೆ ಅದು ಇಲ್ಲಿಯವೆರಗಿನ ಇಸ್ರೋದ ಪರಿಶ್ರಮದ ಫಲ.

’ಚಂದ್ರಯಾನ’ದಲ್ಲಿ ಈ ಉಪಗ್ರಹ ಭೂಮಿಯನ್ನು ಕ್ರಮೇಣ ಉದ್ದವಾಗುವ ಎರಡು ಕಕ್ಷೆಗಳಲ್ಲಿ ಪ್ರದಕ್ಷಿಣೆ ಮಾಡಿ ನಂತರ ಚಂದ್ರನಿಗೆ ಹತ್ತಿರವಾಗುತ್ತದೆ. ಈ ಯಾನದಲ್ಲಿ ಉಪಗ್ರಹವನ್ನು ನಿಖರವಾದ ಪಥದಲ್ಲಿ ಹೋಗುವಂತೆ ನಿರ್ದೇಶಿಸುವುದು ಕಠಿಣ. ಇಂತಹ ಹತೋಟಿಯನ್ನು ’ರಿಮೋಟ್’ ಆಗಿದ್ದು ಮಾಡುವುದೂ ಒಂದು ಸಾಧನೆಯೇ. ಅದಕ್ಕಾಗಿಯೇ ಇಸ್ರೋ ಅಧ್ಯಕ್ಷ ಮಾಧವನ್ ನಾಯರ್ ಹೇಳುತ್ತಾರೆ ’ನಮಗರಿವಿಲ್ಲದ ಸಮುದ್ರಕ್ಕೆ ನಾವು ಜಿಗಿದಿದ್ದೇವೆ. ಅಲ್ಲಿನ ಒಂದೊಂದು ಸಂಗತಿಯೂ ಹೊಸದು. ಆ ಮೂಲಕ ನಾವು ಹೊಸ ಪಾಠವನ್ನು ಕಲಿಯುವರಿದ್ದೇವೆ.’ ಈ ಮಟ್ಟಿನ ಸಾಧನೆಗೈದಿರುವುದಕ್ಕೆ ಸಮಾಧಾನವಿರಲಿ.

  • email
  • facebook
  • twitter
  • google+
  • WhatsApp
Tags: ಅದರ ಖರ್ಚುಇಸ್ರೋಚಂದ್ರಯಾನಚಂದ್ರಯಾನದ ಲಾಭ

Related Posts

Articles

ಒಂದು ಪಠ್ಯ – ಹಲವು ಪಾಠ

May 24, 2022
News Digest

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

May 22, 2022
News Digest

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

May 20, 2022
News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
News Digest

Sanskrit most requested language on Google Translate

May 13, 2022
Next Post
BMS Leader Allampalli Venkatram’ji no more

BMS Leader Allampalli Venkatram'ji no more

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಒಂದು ಪಠ್ಯ – ಹಲವು ಪಾಠ

May 24, 2022

EDITOR'S PICK

Reminiscences of Emergency: THE 16 DAYS IN THE INTERROGATION ROOM

Reminiscences of Emergency: THE 16 DAYS IN THE INTERROGATION ROOM

June 28, 2013

NEWS IN BRIEF – NOV 7, 2011

November 10, 2011
Bhagini Nivedita’s 100th Birth anniversary celebrated at Mangalore

Bhagini Nivedita’s 100th Birth anniversary celebrated at Mangalore

December 7, 2011

Kaveri River Dispute : A Discussion on Dec 12

August 25, 2019

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಒಂದು ಪಠ್ಯ – ಹಲವು ಪಾಠ
  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In