• Samvada
Monday, August 15, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ಮಾದರಿ ಶಿಕ್ಷಕಿ : ಮಕ್ಕಳನ್ನು ಸರ್ಕಾರೀ ಶಾಲೆಗಳತ್ತ ಕರೆತರಲು ವಿನೂತನ ಪ್ರಯತ್ನ ಮಾಡಿದ ರೇಖಾ ಪ್ರಭಾಕರ್

Vishwa Samvada Kendra by Vishwa Samvada Kendra
March 27, 2021
in Others
250
0
ಮಾದರಿ ಶಿಕ್ಷಕಿ : ಮಕ್ಕಳನ್ನು ಸರ್ಕಾರೀ ಶಾಲೆಗಳತ್ತ ಕರೆತರಲು ವಿನೂತನ ಪ್ರಯತ್ನ ಮಾಡಿದ ರೇಖಾ ಪ್ರಭಾಕರ್
491
SHARES
1.4k
VIEWS
Share on FacebookShare on Twitter

ಶಿವಮೊಗ್ಗ: ಸರ್ಕಾರೀ ಶಾಲೆಗಳ ಬಗೆಗೆ ಜನಸಾಮಾನ್ಯರ ಅಸಡ್ಡೆ, ಹಾಗೂ ಇನ್ನಿತರ ಕಾರಣಗಳಿಗಾಗಿ  ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿರುವುದು ಇಂದು ಎಲ್ಲೆಡೆ ಕಂಡುಬರುವ ದೃಶ್ಯ. ಶಿಕ್ಷಕಿಯೊಬ್ಬರ ಪ್ರಯತ್ನದಿಂದ ವ್ಯವಸ್ಥೆಯ ಸುಧಾರಣೆ, ಬದಲಾವಣೆ ಕಷ್ಟವಲ್ಲ ಎಂಬುದಕ್ಕೆ  ರೇಖಾ ಪ್ರಭಾಕರ್‌ ಉದಾಹರಣೆಯಾಗಿದ್ದಾರೆ.

ರೇಖಾ ಪ್ರಭಾಕರ್ ಮೂಲತಃ ಕುಂದಾಪುರ ತಾಲೂಕಿನ ಶಂಕರನಾರಾಯಣದವರು. ಪ್ರಸ್ತುತ ಹೊಸನಗರ ತಾಲೂಕಿನ ನೂಲಿಗ್ಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ.

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ಐದಾರು ವರ್ಷಗಳ ಹಿಂದೆ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಇಳಿಮುಖವಾಗತೊಡಗಿತ್ತು. ಇದನ್ನು ಗಮನಿಸಿದ ಶಿಕ್ಷಕಿ ರೇಖಾ ಮಕ್ಕಳನ್ನು ಶಾಲೆಗೆ ಆಕರ್ಷಿಸುವ ನಿಟ್ಟಿನಲ್ಲಿ ಯೋಜನೆಯೊಂದನ್ನು ಸಿದ್ಧಪಡಿಸಿಕೊಂಡರು. ಶಾಲೆಗೆ ದಾಖಲಾಗುವ ಪ್ರತಿ ಮಗುವಿನ ಹೆಸರಿಗೆ ತಾವೇ ವೈಯಕ್ತಿಕವಾಗಿ 1000 ರೂ.ಗಳನ್ನು ಬ್ಯಾಂಕ್‌ ಠೇವಣಿ ಇಡುವುದಾಗಿ ಘೋಷಿಸಿದರು. ಆರ್ಥಿಕವಾಗಿ ಕೆಳಮಟ್ಟದಲ್ಲಿರುವ ಕುಟುಂಬಗಳಿಗೆ ಇದು ಸಣ್ಣ ಮೊತ್ತವಲ್ಲ. ಇದರಿಂದ ಶಾಲೆಯಲ್ಲಿ ದಾಖಲಾತಿ ಪ್ರಮಾಣ ಹೆಚ್ಚಾಯಿತು. ಅಷ್ಟಕ್ಕೇ ಸುಮ್ಮನಾಗದೇ ಶಿಕ್ಷಕಿ ಪ್ರತಿ ವರ್ಷ ದಾಖಲಾಗುವ ಮಗುವಿನ ಹೆಸರಿನಲ್ಲಿಯೂ ಠೇವಣಿ ಇಡುವುದಾಗಿ ಘೋಷಿಸಿ, ಯೋಜನೆ ಮುಂದುವರಿಸಿದರು. 1ನೇ ತರಗತಿಗೆ ದಾಖಲಾದಾಗ ಮಗುವಿನ ಹೆಸರಿನಲ್ಲಿ 1 ಸಾವಿರ ರೂ. ನಿಖರ ಠೇವಣಿ ಇಟ್ಟು, ಆ ವಿದ್ಯಾರ್ಥಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗುವ ವೇಳೆಗೆ ಮಗುವಿಗೆ ಬಡ್ಡಿಯ ಸಮೇತ ಹಣ ದೊರಕಬೇಕು ಎನ್ನುವಂತೆ ವ್ಯವಸ್ಥೆ ಮಾಡಿದ್ದಾರೆ. . ಇದಕ್ಕಾಗಿ ಅವರು ಬಳಸಿರುವುದು ತಮ್ಮ ಸ್ವಂತ ಹಣವನ್ನು.

ವಿದ್ಯಾರ್ಥಿಗಳನ್ನು ಆಕರ್ಷಿಸಲು ಯಶಸ್ವಿಯಾದ ಯೋಜನೆಯ ಫಲವಾಗಿ ಇಂದು ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಮಾತ್ರವಲ್ಲ, ಶಾಲೆಯ ಸಹಪಠ್ಯ ಚಟುವಟಿಕೆಗಳಲ್ಲೂಉತ್ತಮ ಗುಣಮಟ್ಟ ಕಾಯ್ದುಕೊಳ್ಳಲಾಗಿದೆ. ಪ್ರಸಕ್ತ ವರ್ಷ 15 ವಿದ್ಯಾರ್ಥಿಗಳು ಶಾಲೆಗೆ ದಾಖಲಾಗಿ ಕಲಿಯುತ್ತಿದ್ದಾರೆ. ರೇಖಾ ಅವರು 2015ರಿಂದ ಈವರೆಗೆ ಒಟ್ಟು 50 ವಿದ್ಯಾರ್ಥಿಗಳ ಹೆಸರಿನಲ್ಲಿ ತಲಾ 1 ಸಾವಿರ ರೂ. ಠೇವಣಿ ಇಟ್ಟಿರುವುದು ಗಮನಾರ್ಹವಾಗಿದೆ. ಪ್ರಸ್ತುತ  ಶಾಲೆಯಲ್ಲಿ1ರಿಂದ 7ನೇ ತರಗತಿಯ ವರೆಗೆ ಪ್ರಸಕ್ತ ವರ್ಷ 69 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ರೇಖಾ ಅವರು, ಬಾಲ್ಯದಲ್ಲಿ ಕಷ್ಟ ಪಟ್ಟು ಓದಿದ್ದೇನೆ. ಶಿಕ್ಷಣ ಪಡೆಯಲು ನನಗೆ ಹಲವು ಸಂಘ ಸಂಸ್ಥೆಗಳು, ಶಿಕ್ಷಕರು ಸಹಾಯ ಮಾಡಿದ್ದಾರೆ. ಅವರ ಸಹಾಯದಿಂದ ನಾನು ಈ ಮಟ್ಟಕ್ಕೆ ಏರಿದ್ದೇನೆ. ಸರ್ಕಾರಿ ಹುದ್ದೆ ಗಳಿಸಿದ್ದೇನೆ. ನನಗೆ ಸಹಕಾರ ನೀಡಿರುವ ಈ ಸಮಾಜಕ್ಕಾಗಿ ನಾನು ಏನಾದರೂ ಕೊಡುಗೆ ನೀಡಬೇಕು ಎನ್ನುವ ಆಕಾಂಕ್ಷೆಯಿಂದ ಈ ಕಾರ್ಯ ಕೈಗೊಂಡಿದ್ದೇನೆ. ನಾವೂ ನಮ್ಮ ಕೈಲಾದಷ್ಟು ಮಕ್ಕಳ ಶಿಕ್ಷಣಕ್ಕೆ ನೆರವಾಗಬೇಕೆಂಬ ಅಪೇಕ್ಷೆ ಇಟ್ಟುಕೊಂಡು ಈ ಕೆಲಸ ಮಾಡುತ್ತಿದ್ದೇವೆ ಎನ್ನುತ್ತಾರೆ.

ರೇಖಾ ಅವರ ಪತಿ ಪ್ರಭಾಕರ್ ಅವರು ಅರಣ್ಣ ಇಲಾಖೆಯ ನೌಕರರು. ಪತ್ನಿಯ ಈ ಕಾರ್ಯಕ್ಕೆ ಅವರು ಸಂಪೂರ್ಣ ಬೆಂಬಲ ನೀಡುತ್ತಿದ್ದಾರೆ.

  • email
  • facebook
  • twitter
  • google+
  • WhatsApp
Tags: ಮಾದರಿ ಶಿಕ್ಷಕಿಶಿಕ್ಷಕಿ

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
ಗ್ಲೋಬಲ್ ಆಗುವುದು ಎಂದರೆ ಪಶ್ಚಿಮದ ಅನುಕರಣೆಯಲ್ಲ: ಮದನ್ ಗೋಪಾಲ್

ಗ್ಲೋಬಲ್ ಆಗುವುದು ಎಂದರೆ ಪಶ್ಚಿಮದ ಅನುಕರಣೆಯಲ್ಲ: ಮದನ್ ಗೋಪಾಲ್

Leave a Reply

Your email address will not be published. Required fields are marked *

POPULAR NEWS

ಒಂದು ಪಠ್ಯ – ಹಲವು ಪಾಠ

May 27, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಪತ್ರಕರ್ತರ ಮೇಲೆ ಹಲ್ಲೆ – ನೈತಿಕ ಅಧಃಪತನಕ್ಕೆ ಸಾಕ್ಷಿ

June 21, 2022

EDITOR'S PICK

ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕದ ಪ್ರಾಂತ ಸಂಯೋಜಕರಾದ ಡಾ ಶ್ರೀನಿವಾಸ ರಾವ್ ನಿಧನ

ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕದ ಪ್ರಾಂತ ಸಂಯೋಜಕರಾದ ಡಾ ಶ್ರೀನಿವಾಸ ರಾವ್ ನಿಧನ

July 15, 2019
RSS Swayamsevaks cleaned premises of Gokarna Bus Stand, Karnataka

RSS Swayamsevaks cleaned premises of Gokarna Bus Stand, Karnataka

January 1, 2015
RSS distributed 65 tonnes of Cattle Fodder for farmers at Drought hit districts of North Karnataka

RSS distributed 65 tonnes of Cattle Fodder for farmers at Drought hit districts of North Karnataka

May 6, 2016
ನೇರನೋಟ: ಕಟ್ಟರ್ ವಿರೋಧಿಗಳೂ ಸಂಘವನ್ನು ಮೆಚ್ಚುವುದು ಯಾತಕ್ಕೆ?

ನೇರನೋಟ: ಕಟ್ಟರ್ ವಿರೋಧಿಗಳೂ ಸಂಘವನ್ನು ಮೆಚ್ಚುವುದು ಯಾತಕ್ಕೆ?

July 29, 2013

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • ಅಮೃತ ಮಹೋತ್ಸವದ ಸಂಭ್ರಮ – ಆತ್ಮಾವಲೋಕನಕ್ಕೆ ಸುಸಮಯ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In