• Samvada
  • Videos
  • Categories
  • Events
  • About Us
  • Contact Us
Sunday, January 29, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others

ಯುವ ಮತ್ತು ಉದಯೋನ್ಮುಖ ಬರಹಗಾರರನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರದಿಂದ ವಿಶೇಷ ಕಾರ್ಯಕ್ರಮ

Vishwa Samvada Kendra by Vishwa Samvada Kendra
June 15, 2021
in Others
251
0
ಯುವ ಮತ್ತು ಉದಯೋನ್ಮುಖ ಬರಹಗಾರರನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರದಿಂದ ವಿಶೇಷ ಕಾರ್ಯಕ್ರಮ
492
SHARES
1.4k
VIEWS
Share on FacebookShare on Twitter

ಭಾರತದ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ಆಚರಣೆಯ ಸಂದರ್ಭದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಯೋಧರಿಗೆ ಯುವ ಬರಹಗಾರರಿಂದ ಗೌರವ ನಮನ ಸಲ್ಲಿಸುವ ಹಾಗೂ ಯುವ ಲೇಖಕರಿಗೆ ಮಾರ್ಗದರ್ಶನ ನೀಡುವ ಸಲುವಾಗಿ ಕೇಂದ್ರ ಸರ್ಕಾರವು ಯುವ-ಪ್ರಧಾನಮಂತ್ರಿಗಳ ಕಾರ್ಯಕ್ರಮ’ವನ್ನು ಆಯೋಜಿಸಿದೆ.

ದೇಶದಲ್ಲಿ ಓದುವುದು, ಬರೆಯುವುದು ಮತ್ತು ಪುಸ್ತಕ ಸಂಸ್ಕೃತಿಯನ್ನು ಉತ್ತೇಜಿಸುವುದು ಹಾಗೂ ಭಾರತದ ಬರಹಗಳನ್ನು ಜಾಗತಿಕವಾಗಿ ಜನಪ್ರಿಯಗೊಳಿಸುವ ಉದ್ದೇಶದಿಂದ ಯುವ ಮತ್ತು ಉದಯೋನ್ಮುಖ ಲೇಖಕರಿಗೆ (3೦ ವರ್ಷದೊಳಗಿನವರು) ತರಬೇತಿ ಮತ್ತು ಮಾರ್ಗದರ್ಶನ ನೀಡುವ ಕಾರ್ಯಕ್ರಮ ಇದಾಗಿದೆ.

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ಭಾರತದ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಯುವ ಬರಹಗಾರರ ಬರವಣಿಗೆಗಳನ್ನು ಉತ್ತೇಜಿಸಬೇಕೆಂಬ ಪ್ರಧಾನಮಂತ್ರಿಗಳ ಕನಸನ್ನು ನನಸು ಮಾಡಲು ಈ ಯುವ (YUVA – Young, Upcoming and Versatile Authors) ಕಾರ್ಯಕ್ರಮವನ್ನು ರೂಪಿಸಲಾಗಿದೆ. ೨೦೨೧ರ ಜನವರಿ ೩೧ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಭಾರತಕ್ಕೆ ಸ್ವಾತಂತ್ರ್ಯದ ೭೫ನೇ ವರ್ಷ ಆಚರಣೆ ವೇಳೆ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಅದಕ್ಕೆ ಸಂಬಂಧಿಸಿದ ಘಟನೆಗಳು ಹಾಗೂ ಆಯಾ ಪ್ರದೇಶಗಳಲ್ಲಿನ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿನ ಶೌರ್ಯ ಪ್ರದರ್ಶನಗಾಥೆಗಳ ಕುರಿತು ಯವ ಜನಾಂಗ ತಮ್ಮ ಬರವಣಿಗೆಯ ಮೂಲಕ ಭಾರತದ ಸ್ವಾತಂತ್ರ್ಯ ಹೋರಾಟದ ನಾಯಕರಿಗೆ ತಮ್ಮ ಅತ್ಯುತ್ತಮ ಕೊಡುಗೆಯನ್ನು ಸಲ್ಲಿಸಬೇಕು ಎಂದು ಕರೆ ನೀಡಿದರು.

ಯುವ ಕಾರ್ಯಕ್ರಮದ ಪ್ರಮುಖಾಂಶಗಳು

2021ರ ಜೂನ್ 1 ರಿಂದ 31ರ ವರೆಗೆ ಅಖಿಲ ಭಾರತ ಸ್ಪರ್ಧೆಗಳನ್ನು https://www.mygov.in/  ವೆಬ್ ಸೈಟ್ ಮೂಲಕ ನಡೆಸಿ ಒಟ್ಟು 75 ಲೇಖಕರನ್ನು ಆಯ್ಕೆ ಮಾಡಲಾಗುವುದು.

………………………………………………………………………………………………….

ವಿಜೇತರನ್ನು ೨೦೨೧ರ ಆಗಸ್ಟ್ ೧೫ರಂದು ಘೋಷಿಸಲಾಗುವುದು.

………………………………………………………………………………………………….

ಯುವ ಲೇಖಕರಿಗೆ ಖ್ಯಾತ ಲೇಖಕರು/ ಮಾರ್ಗದರ್ಶಕರಿಂದ ತರಬೇತಿ ಕೊಡಿಸಲಾಗುವುದು.

………………………………………………………………………………………………….

ಮಾರ್ಗದರ್ಶಕ ಯೋಜನೆಯಡಿ ೨೦೨೧ರ ಡಿಸೆಂಬರ್ ೧೫ರ ವೇಳೆಗೆ ಹಸ್ತಪ್ರತಿಗಳು ಪ್ರಕಟಣೆಗೆ ಸಿದ್ಧವಾಗಲಿವೆ.

………………………………………………………………………………………………….

ಪ್ರಕಟಣೆಗೊಂಡ ಕೃತಿಗಳನ್ನು ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ (ಜನವರಿ 12, 2022) ಬಿಡುಗಡೆ ಮಾಡಲಾಗುವುದು.

………………………………………………………………………………………………….

ಮಾರ್ಗದರ್ಶಕ ಯೋಜನೆಯಡಿ ಪ್ರತಿ ಲೇಖಕರಿಗೆ ಆರು ತಿಂಗಳ ಅವಧಿಗೆ ಪ್ರತಿ ತಿಂಗಳು 50,000 ರೂ. ಒಟ್ಟು ವಿದ್ಯಾರ್ಥಿವೇತನವನ್ನು ನೀಡಲಾಗುವುದು.

“ಇದು ಭವಿಷ್ಯದ ಹಾದಿಯನ್ನು ನಿರ್ಧರಿಸುವಂತಹ ಚಿಂತನೆಯುಳ್ಳ ನಾಯಕರ ವರ್ಗವನ್ನು ಸೃಷ್ಟಿಸುವ ಸಿದ್ಧತೆಯೂ ಆಗಿದೆ” ಎಂದು ಪ್ರಧಾನಮಂತ್ರಿ ಹೇಳಿದ್ದರು.

ಯುವ, ಭಾರತ @75 ಯೋಜನೆ (ಸ್ವಾತಂತ್ರ್ಯದ ಅಮೃತ ಮಹೋತ್ಸವ)ಯ ಭಾಗವಾಗಿದ್ದು, ಅಸಾಮಾನ್ಯ ನಾಯಕರು, ಸ್ವಾತಂತ್ರ್ಯ ಹೋರಾಟ ಗಾರರು ಗುರುತಿಸಲಾಗದಂತಹ ಮತ್ತು ಮರೆತು ಹೋಗಿರುವಂತಹ ಸ್ಥಳಗಳು ಮತ್ತು ರಾಷ್ಟ್ರೀಯ ಚಳವಳಿಗಳಲ್ಲಿ ಅವುಗಳ ಪಾತ್ರ ಮತ್ತು ಇತರೆ ವಿಷಯಗಳನ್ನು ಮುನ್ನೆಲೆಗೆ ತರಲು ವಿನೂತನ ಹಾಗೂ ಕ್ರಿಯಾಶೀಲ ಯುವ ತಲೆಮಾರಿನ ಲೇಖಕರ ದೃಷ್ಟಿಕೋನಗಳನ್ನು ಹಂಚಿಕೊಳ್ಳುವ ಉದ್ದೇಶವಿದೆ. ಅಲ್ಲದೆ ಈ ಯೋಜನೆ ಭಾರತೀಯ ಪರಂಪರೆ ಸಂಸ್ಕೃತಿ ಮತ್ತು ಜ್ಞಾನ ವ್ಯವಸ್ಥೆಯ ಉತ್ತೇಜನಕ್ಕೆ ವೈವಿಧ್ಯಮಯ ವಿಷಯಗಳ ಕುರಿತು ಬರಹಗಾರರು ನಾನಾ ಆಯಾಮಗಳನ್ನು ಅಭಿವ್ಯಕ್ತಗೊಳಿಸಲು ನೆರವಾಗಲಿದೆ.

ಶಿಕ್ಷಣ ಸಚಿವಾಲಯದಡಿ ಬರುವ ಭಾರತದ ನ್ಯಾಷನಲ್ ಬುಕ್ ಟ್ರಸ್ಟ್ ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಸ್ಥೆಯಾಗಿದ್ದು, ಮೊದಲೇ ನಿಗದಿಪಡಿಸಿರುವ ಹಂತಗಳಲ್ಲಿ ಮಾರ್ಗದರ್ಶನ ನೀಡುವ ಈ ಯೋಜನೆಯನ್ನು ಹಂತ ಹಂತವಾರು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ಸಿದ್ಧಪಡಿಸಿರುವ ಪುಸ್ತಕಗಳನ್ನು ಭಾರತದ ನ್ಯಾಷನಲ್ ಬುಕ್ ಟ್ರಸ್ಟ್ ಪ್ರಕಟಿಸಲಿದೆ ಮತ್ತು ಅವುಗಳನ್ನು ಇತರೆ ಭಾರತೀಯ ಭಾಷೆಗಳಿಗೂ ಅನುವಾದಿಸುವ ಮೂಲಕ ‘ಏಕ ಭಾರತ್ ಶ್ರೇಷ್ಠ ಭಾರತ್” ಉತ್ತೇಜನಕ್ಕೆ ಸಂಸ್ಕೃತಿ ಮತ್ತು ಸಾಹಿತ್ಯ ವಿನಿಮಯವನ್ನು ಖಾತ್ರಿ ಪಡಿಸಲಾಗುವುದು.

ಆಯ್ದ ಯುವ ಲೇಖಕರಿಗೆ ಜಗತ್ತಿನ ಅತ್ಯುತ್ತಮ ಲೇಖಕರೊಡನೆ ಸಂವಾದ ನಡೆಸಲು ಮತ್ತು ಸಾಹಿತ್ಯ ಉತ್ಸವ ಮತ್ತಿತರವುಗಳಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗುವುದು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦ರಲ್ಲಿ ಯುವ ಮನಸ್ಸುಗಳ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ ಮತ್ತು ಭವಿಷ್ಯದ ಜಗತ್ತಿನಲ್ಲಿ ನಾಯಕತ್ವವನ್ನು ವಹಿಸುವಂತಹ ಯುವ ಓದುಗರು / ಕಲಿಕಾರ್ಥಿಗಳನ್ನು ಸಿದ್ಧಪಡಿಸುವಂತಹ ಪೂರಕ ವ್ಯವಸ್ಥೆಯನ್ನು ಸೃಷ್ಟಿಸಲಿದೆ. ಈ ನಿಟ್ಟಿನಲ್ಲಿ ಯುವ, ಸೃಜನಾತ್ಮಕ ಜಗತ್ತಿನಲ್ಲಿ ಭವಿಷ್ಯದ ನಾಯಕರನ್ನು ರೂಪಿಸಲು ದೀರ್ಘಾವಧಿಯಲ್ಲಿ ಭದ್ರ ಬುನಾದಿ ಯನ್ನು ಹಾಕಲಿದೆ.

  • email
  • facebook
  • twitter
  • google+
  • WhatsApp

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
ವಿಶ್ವ ಜಾಗೃತಿ ದಿವಸ್ : ಸ್ವದೇಶಿ ಜಾಗರಣ ಮಂಚ್ ‘ಪೇಟೆ೦ಟ್ ಮುಕ್ತ ವಾಕ್ಸಿನ್’ ಅಭಿಯಾನ

ವಿಶ್ವ ಜಾಗೃತಿ ದಿವಸ್ : ಸ್ವದೇಶಿ ಜಾಗರಣ ಮಂಚ್ 'ಪೇಟೆ೦ಟ್ ಮುಕ್ತ ವಾಕ್ಸಿನ್' ಅಭಿಯಾನ

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

CFD submits to CM BSY the fact finding report of the recent D J Halli Riots

CFD submits to CM BSY the fact finding report of the recent D J Halli Riots

September 4, 2020
Narada Jayanti Mysuru 2018

Narada Jayanti Mysuru 2018

June 18, 2018
ನಂದಾದೀಪವಿದು, ಎಂದಿಗೂ ನಂದದ ಜ್ಯೋತಿಯಿದು..

ನಂದಾದೀಪವಿದು, ಎಂದಿಗೂ ನಂದದ ಜ್ಯೋತಿಯಿದು..

March 25, 2021
ಅಯೋಧ್ಯೆಯ ನೂತನ ರಸ್ತೆಗಳಿಗೆ ಕೊಠಾರಿ ಸಹೋದರರ ಹೆಸರನ್ನು ನಾಮಕರಣ ಮಾಡಿದ ಯುಪಿ ಸರ್ಕಾರ

ಅಯೋಧ್ಯೆಯ ನೂತನ ರಸ್ತೆಗಳಿಗೆ ಕೊಠಾರಿ ಸಹೋದರರ ಹೆಸರನ್ನು ನಾಮಕರಣ ಮಾಡಿದ ಯುಪಿ ಸರ್ಕಾರ

April 8, 2021

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In