• Samvada
Wednesday, May 25, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ಮಾರ್ಚ್ 11,12,13ರಂದು ಪುತ್ತೂರಿನಲ್ಲಿ ಅಖಿಲ ಭಾರತೀಯ ಪ್ರತಿನಿಧಿ ಸಭಾ

Vishwa Samvada Kendra by Vishwa Samvada Kendra
March 3, 2011
in Others
250
0
ಮಾರ್ಚ್ 11,12,13ರಂದು ಪುತ್ತೂರಿನಲ್ಲಿ  ಅಖಿಲ ಭಾರತೀಯ ಪ್ರತಿನಿಧಿ ಸಭಾ

ABPS-2011-

491
SHARES
1.4k
VIEWS
Share on FacebookShare on Twitter

ರಾಷ್ಟ್ರೀಯ ಸ್ವಯಂಸೇವಕ ಸಂಘ,  ಕರ್ನಾಟಕ

ಕೇಶವಕೃಪ, #74, ರಂಗರಾವ್ ರಸ್ತೆ, ಬೆಂಗಳೂರು – 560004

ಪತ್ರಿಕಾ ಹೇಳಿಕೆ

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ಅಖಿಲ ಭಾರತೀಯ ಪ್ರತಿನಿಧಿ ಸಭಾ – ರಾಷ್ಟ್ರೀಯ ಸ್ವಯಂಸೇವಕ ಸಂಘದ ನೀತಿ-ನಿರ್ಧಾರಗಳನ್ನು ನಿರೂಪಿಸುವ ಮಹತ್ವದ ಸಭೆ. ಈ ವರ್ಷದ ಅಖಿಲ ಭಾರತೀಯ ಪ್ರತಿನಿಧಿ ಸಭೆ ಇದೇ ಮಾರ್ಚ್ 11, 12, 13 ರಂದು ಕರ್ನಾಟಕದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆಯಲಿದೆ.

ABPS-2011-

ದೇಶಾದ್ಯಂತ ಹರಡಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆಗಳ ಮೂಲಕ ಆಯ್ಕೆಯಾದ ಪ್ರತಿನಿಧಿಗಳು, ಸಂಘದ ರಾಜ್ಯಮಟ್ಟದ ಹೊಣೆಗಾರಿಕೆಯ ಪದಾಧಿಕಾರಿಗಳು ಜೊತೆಗೆ ಸಂಘ ಪರಿವಾರದ 40ಕ್ಕೂ ಮಿಕ್ಕ ಸಂಘಟನೆಗಳ ರಾಷ್ಟ್ರೀಯ ಸ್ತರದ ಕಾರ್ಯಕರ್ತರು ಈ 3 ದಿನದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕರಾವಳಿಯ ಮಂಗಳೂರಿನಿಂದ ದಕ್ಷಿಣಕ್ಕೆ  ಸುಮಾರು 50ಕಿ.ಮೀ. ದೂರದಲ್ಲಿರುವ ಪುತ್ತೂರಿನ ಹಸಿರ ಸಿರಿಯ ನಡುವಿನ ವಿವೇಕಾನಂದ ಶಿಕ್ಷಣ ಸಂಸ್ಥೆಯ ಪರಿಸರದಲ್ಲಿ ಈ ಸಭೆ ನಡೆಯಲಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಶ್ರೀ ಮೋಹನ್ ಭಾಗವತ್ ಹಾಗೂ  ಸರಕಾರ್ಯವಾಹರಾದ ಶ್ರೀ ಸುರೇಶ್‌ಜೋಷಿರವರ ನೇತೃತ್ವದಲ್ಲಿ ಸಭೆ ಜರುಗಲಿದೆ.

ರೈತಾಪಿ ಜನರ ನಡುವೆ ಕೆಲಸ ಮಾಡುತ್ತಿರುವ ಭಾರತೀಯ ಕಿಸಾನ್ ಸಂಘ, ಗುಡ್ಡಗಾಡಿನ ಜನರ ನಡುವೆ ಸೇವಾಕಾರ್ಯದ ಹಂದರ ನಿರ್ಮಿಸಿರುವ ವನವಾಸಿ ಕಲ್ಯಾಣಾಶ್ರಮ, ಕಾಲೇಜು ವಿದ್ಯಾರ್ಥಿಗಳ ನಡುವೆ ಕ್ರಿಯಾಶೀಲವಾಗಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಕಾರ್ಮಿಕ ರಂಗದಲ್ಲಿ ಮುಂಚೂಣಿಯಲ್ಲಿರುವ ಭಾರತೀಯ ಮಜ್ದೂರ್ ಸಂಘ, ಸಾಧು, ಸಂತ, ಮಠಾಧೀಶರ ನಡುವಿನ ಧಾರ್ಮಿಕ ಸಂಘಟನೆ ವಿಶ್ವ ಹಿಂದು ಪರಿಷತ್, ರಾಜಕೀಯ ರಂಗದಲ್ಲಿ ಸಕ್ರಿಯವಾಗಿರುವ ಭಾರತೀಯ ಜನತಾ ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ಸಮಾಜ ಜೀವನದ ಅನ್ಯಾನ್ಯ ರಂಗಗಳಲ್ಲಿ ಕಾರ್ಯಶೀಲವಾಗಿರುವ ವಿದ್ಯಾಭಾರತಿ, ವಿಜ್ಞಾನಭಾರತಿ, ಕ್ರೀಡಾಭಾರತಿ, ಸೇವಾಭಾರತಿ, ಸಂಸ್ಕೃತಭಾರತಿ, ಸಂಸ್ಕಾರಭಾರತಿ, ಲಘುಉದ್ಯೋಗ ಭಾರತಿ ಅಲ್ಲದೆ ಸ್ತ್ರೀ ಶಕ್ತಿ ಜಾಗರಣದಲ್ಲಿ ತೊಡಗಿರುವ ರಾಷ್ಟ್ರಸೇವಿಕಾ ಸಮಿತಿ ಮಹಿಳಾ ಸಮನ್ವಯ, ಜನ ಜಾಗೃತಿಯ ರಂಗದಲ್ಲಿ ಸಕ್ರಿಯವಾಗಿರುವ ಸ್ವದೇಶಿ ಜಾಗರಣ ಮುಂಚ್, ದೀನದಯಾಳ್ ಸಂಶೋಧನಾ ಸಂಸ್ಥೆ, ಭಾರತ ವಿಕಾಸ ಪರಿಷತ್, ಶೈಕ್ಷಣಿಕ ಮಹಾಸಂಘ, ಧರ್ಮಜಾಗರಣದ ಪ್ರಮುಖರು ಭಾಗವಹಿಸಲಿದ್ದಾರೆ.

ದೃಷ್ಟಿಹೀನರ ನಡುವೆ ಕ್ರಿಯಾಶೀಲರಾಗಿರುವ ಸಕ್ಷಮ, ಭಾರತದ ಗಡಿ ಪ್ರದೇಶದ ಜನರಲ್ಲಿ ಆತ್ಮವಿಶ್ವಾಸ ಮೂಡಿಸುತ್ತಿರುವ ಸೀಮಾ ಸುರಕ್ಷಾ ಪರಿಷತ್, ನಿವೃತ್ತ ಸೈನಿಕರ ಸಮಾಜಮುಖಿ ವೇದಿಕೆ ಪೂರ್ವಸೈನಿಕ ಪರಿಷತ್‌ನಂತಹ ವಿಶಿಷ್ಟ ಸಂಘಟನೆಗಳ ಪ್ರಮುಖರು ಸಹ ಪ್ರತಿನಿಧಿಸಭಾದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಎಲ್ಲ ಸಂಘಟನೆಗಳ ಕಾರ್ಯಕಲಾಪದ ವರದಿ, ವಿಶ್ಲೇಷಣೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಜ್ಯವಾರು ಕಾರ್ಯಚಟುವಟಿಕೆಗಳ ಅವಲೋಕನ ನಡೆಯಲಿದೆ. ಜೊತೆಗೆ ದೇಶದ ಆಗುಹೋಗುಗಳನ್ನು ಪ್ರಭಾವಿಸುವ ಪ್ರಮುಖ ವಿಷಯಗಳ ಕುರಿತು ಸಭೆ ಎಲ್ಲ ಮಗ್ಗಲುಗಳಲ್ಲಿ ಚರ್ಚಿಸಿ ನಿರ್ಣಯ ಅಂಗೀಕರಿಸಲಿದೆ.

ಸಮಾಜ ಜೀವನದ ಎಲ್ಲ ರಂಗಗಳಲ್ಲಿ ಕಾರ್ಯನಿರತರಾಗಿರುವ 1200 ಕ್ಕೂ ಹೆಚ್ಚು ಪ್ರತಿನಿಧಿಗಳು ದೇಶದ ಮೂಲೆ, ಮೂಲೆಗಳಿಂದ ಈ ಸಭೆಗೆ ಆಗಮಿಸುತ್ತಿದ್ದಾರೆ. 50 ಸಾವಿರ ಜನಸಂಖ್ಯೆಯ ಪುಟ್ಟ ತಾಲ್ಲೂಕು ಕೇಂದ್ರವಾಗಿರುವ ಪುತ್ತೂರಿನಲ್ಲಿ ಈ ಮಹತ್ವದ ಸಭೆ ನಡೆಯುತ್ತಿರುವುದು ವಿಶೇಷವೆನಿಸದೆ. ಪುತ್ತೂರಿನ ನಾಗರಿಕರು, ಆಸುಪಾಸಿನ ಗ್ರಾಮಸ್ಥರೆಲ್ಲರ ಸಹಕಾರದೊಂದಿಗೆ ಕಳದೆರಡು ತಿಂಗಳಿಂದ ಈ ಸಭೆಯ ವ್ಯವಸ್ಥೆಗಳನ್ನು ಸಜ್ಜುಗೊಳಿಸುವ ಕೆಲಸ ನಡೆದಿದೆ.

ಪತ್ರಕರ್ತರಿಗೆ ಆಹ್ವಾನ

ಪ್ರತಿನಿಧಿ ಸಭಾದ ಹಿನ್ನೆಲೆಯಲ್ಲಿ ಮಾರ್ಚ್ 6ರಂದು ಭಾನುವಾರ ಸಂಜೆ 5.೦೦ಕ್ಕೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ವಿವೇಕಾನಂದ ಪ್ರೌಢಶಾಲೆಯ ಮೈದಾನದಲ್ಲಿ ಸ್ವಯಂಸೇವಕರ ಬೃಹತ್ ಸಾಂಘಿಕ್ ನಡೆಯಲಿದೆ. 15ಸಾವಿರಕ್ಕೂ ಹೆಚ್ಚು ಸ್ವಯಂಸೇವಕರು ಸಂಘದ ಗಣವೇಷದಲ್ಲಿ ಪಾಲ್ಗೊಳ್ಳಲಿದ್ದು ಸರಸಂಘಚಾಲಕರಾದ ಶ್ರೀಮೋಹನ್ ಭಾಗವತ್ ಮುಖ್ಯಭಾಷಣ ಮಾಡಲಿದ್ದಾರೆ.

ಮಾರ್ಚ್ 11, 12, 13 ರ ಈ ಸಭೆಯ ಕಾರ್ಯಕಲಾಪದ ವಿವರವನ್ನು ೩ ದಿನವೂ ಸಂಘದ ರಾಷ್ಟ್ರೀಯ ಪ್ರಮುಖರು ಪತ್ರಕರ್ತರಿಗೆ ಪ್ರತ್ಯೇಕ ಗೋಷ್ಠಿಯಲ್ಲಿ ವಿವರಿಸಲಿದ್ದಾರೆ. ಇದಕ್ಕಾಗಿಯೇ ಪುತ್ತೂರಿನ ವಿವೇಕಾನಂದ ಕಾಲೇಜಿನ ಪರಿಸರದಲ್ಲಿ ಮಾಧ್ಯಮ ಕೇಂದ್ರ (MEDIA CENTRE) ವನ್ನು ಸಜ್ಜುಗೊಳಿಸಲಾಗುತ್ತಿದೆ.

ಕಾರ್ಯಕ್ರಮಕ್ಕೆ ನಿಮ್ಮ ಸಹಕಾರವಿರಲಿ.

ವಂದನೆಗಳು

ಡಾ| ಪ್ರಭಾಕರ ಭಟ್

ಪ್ರಾಂತ ಕಾರ್ಯವಾಹ

ಸಂಪರ್ಕ ದೂರವಾಣಿ: 9480582027(ವಾದಿರಾಜ್), 9880621824(ರಾಜೇಶ್ ಪದ್ಮಾರ್)

  • email
  • facebook
  • twitter
  • google+
  • WhatsApp

Related Posts

Articles

ಒಂದು ಪಠ್ಯ – ಹಲವು ಪಾಠ

May 25, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
ABPS of RSS to be held on March 11 to 13 at Puttur-Karnataka.

ABPS of RSS to be held on March 11 to 13 at Puttur-Karnataka.

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಒಂದು ಪಠ್ಯ – ಹಲವು ಪಾಠ

May 25, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

EDITOR'S PICK

Senior Kannada Writer Dr Chandrashekhara Kambara gets Jnanpith Award, 8th for Kannada Language.

Senior Kannada Writer Dr Chandrashekhara Kambara gets Jnanpith Award, 8th for Kannada Language.

September 19, 2011
ಚನ್ನೇನಹಳ್ಳಿ: ಸಂಘ ಶಿಕ್ಷಾವರ್ಗ ಸಮಾರೋಪ ಸಮಾರಂಭ

ಚನ್ನೇನಹಳ್ಳಿ: ಸಂಘ ಶಿಕ್ಷಾವರ್ಗ ಸಮಾರೋಪ ಸಮಾರಂಭ

May 27, 2013
RSS 3-day national meet ABPS concludes at Nagaur, no changes in the National Team

RSS 3-day national meet ABPS concludes at Nagaur, no changes in the National Team

March 13, 2016
Special College Vidyarthi Sangh Shiksha Varg concludes at Tipatur

Special College Vidyarthi Sangh Shiksha Varg concludes at Tipatur

June 9, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಪಠ್ಯಪುಸ್ತಕಗಳು ಕಲಿಕೆಯ ಕೈದೀವಿಗೆಯಾಗಲಿ
  • ಒಂದು ಪಠ್ಯ – ಹಲವು ಪಾಠ
  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In