• Samvada
  • Videos
  • Categories
  • Events
  • About Us
  • Contact Us
Wednesday, February 1, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home News Digest

ಬೆಂಗಳೂರು: ಸಾಹಿತಿ ಎಸ್.ಎಲ್. ಭೈರಪ್ಪರಿಂದ ‘ಮಹಾನ್ ಇತಿಹಾಸಕಾರರು’ ಸೇರಿದಂತೆ 4 ಗ್ರಂಥಗಳ ಲೋಕಾರ್ಪಣೆ

Vishwa Samvada Kendra by Vishwa Samvada Kendra
December 8, 2013
in News Digest
250
1
ಬೆಂಗಳೂರು: ಸಾಹಿತಿ ಎಸ್.ಎಲ್. ಭೈರಪ್ಪರಿಂದ ‘ಮಹಾನ್ ಇತಿಹಾಸಕಾರರು’ ಸೇರಿದಂತೆ 4 ಗ್ರಂಥಗಳ ಲೋಕಾರ್ಪಣೆ
491
SHARES
1.4k
VIEWS
Share on FacebookShare on Twitter

ಬೆಂಗಳೂರು: “ವಾಯ್ಸ್ ಆಫ್ ಇಂಡಿಯಾದಂತಹ ಅಧ್ಯಯನ ಶೀಲ ಗ್ರಂಥಗಳು ಎಲ್ಲ ಭಾಷೆಯಲ್ಲೂ ಬರಬೇಕು “ಎಂದು ಸರಸ್ವತಿ ಸಂಮಾನ್ ಪುರಸ್ಕೃತ ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ಹೇಳಿದ್ದಾರೆ.

IMG_1057

READ ALSO

RSS Sarkaryawah Shri Dattareya Hosabale hoisted the National Flag at Chennai

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

 ಅವರು ರಾಷ್ಟ್ರೋತ್ಥಾನ ಸಾಹಿತ್ಯ ಹಾಗೂ ಸಾಹಿತಯ ಸಿಂಧು ಪ್ರಕಾಶನಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಡಿಸೆಂಬರ್ ೮ರಂದು ಜಯನಗರದ ಆರ್,ವಿ.ಟೀಚರ‍್ಸ್ ಕಾಲೇಜಿನಲ್ಲಿ ನಡೆದ ಅರುಣ್ ಶೌರಿ ಅವರ EMINENT HISTORIANS ಸೇರಿದಂತೆ ನಾಲ್ಕು  ಪುಸ್ತಕಗಳ ಲೋಕಾರ್ಪಣ ಕಾರ್ಯಕ್ರಮದಲ್ಲಿ ಅದ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

‘ನಮ್ಮ ಇತಿಹಾಸವನ್ನು ಮೊದಲಿಗೆ ಬರೆದ ಬ್ರಿಟಿಷ್ ಇತಿಹಾಸಕಾರರಿಗೆ ಎಲ್ಲದರಲ್ಲೂ ನಾವು ಭಾರತೀಯರಿಗಿಂತ ಕಡಿಮೆಯಿಲ್ಲ ಎಂಬುದನ್ನು ತೋರಿಸುವುದು ಅವರ ಅಂತಿಮ ಉದ್ದೇಶವಾಗಿತ್ತು. ಭಾರತದ ಜ್ಞಾನಪುನರುಜ್ಜೀವನದಿಂದ ನಮ್ಮಲ್ಲಿ ಸ್ವಲ್ಪಮಟ್ಟಿಗೆ ಆತ್ಮವಿಶ್ವಾಸ ಬಂದು ನಮ್ಮ ಪರಂಪರೆ ಅವರಿಗೆ ಸಮಾನ ಎಂಬ ಆತ್ಮವಿಶ್ವಾಸ ಬಂದರೂ ಕೂಡ ಬೌದ್ಧ ಮತು ಹಿಂದೂ ಧರ್ಮಗಳು ಕ್ರೈಸ್ತಮತಕ್ಕೆ ಸಮಾನವಾದರೂ ಪರಿಪೂರ್ಣವಾದದ್ದು ಕ್ರೈಸ್ತಮತ ಮಾತ್ರ ಎಂಬ ಬ್ರಿಟಿಷ್ ಪಾದ್ರಿ ಗ್ಯಲವೆ ಸಿದ್ಧಾಂvವೇ ಮುಂದುವರಿಯಿತು. ಡಾ. ಎಸ್. ರಾಧಾಕೃಷ್ಣನ್, ಆನಂದ ಕುಮಾರಸ್ವಾಮಿಯಂತಹ ವಿದ್ವಾಂಸರು ಕೂಡ ಎಲ್ಲ ಧರ್ಮಗಳ ಸಂದೇಶ ಒಂದೇ ಎಂಬ ಧಾಟಿಯಲ್ಲೇ ಮಾತನಾಡಿದರು. ಅದನ್ನು ಅಲ್ಲಗಳೆದು ಹಿಂದೂ ಧರ್ಮ ಏನು? ಅನ್ಯಮತಗಳೇನು ಎಂಬುದನ್ನು ದೇಶದಲ್ಲಿ ಸ್ಪಷ್ಟವಾಗಿ ತೋರಿಸಿದವರು ರಾಮ್‌ಸ್ವರೂಪ್ ಮತ್ತು ಸೀತಾರಾಮ್ ಗೋಯಲ್ ‘ ಎಂದು ಡಾ. ಭೈರಪ್ಪ ವಿವರಿಸಿದರು.

IMG_1058

ಪ್ರವಾದಿ ಅಲ್ಲದಿದ್ದರೆ ಅದು ಮತ(ರಿಲಿಜಿಯನ್)ವೇ ಅಲ್ಲ. ಒಬ್ಬನೇ ದೇವರು; ಅವನು ತನ್ನ ಬೋಧನೆಯನ್ನು ನನ್ನ ಮೂಲಕ ಪ್ರಕಟಿಸಿದ್ದಾನೆ; ಇದನ್ನು ನಂಬಿದರೆ ಸ್ವರ್ಗ; ನಂಬದಿದ್ದರೆ ನರಕ – ಎಂದು ಪ್ರವಾದಿ ಮತಗಳು ಹೇಳುತ್ತವೆ. ಆದರೆ ಹಿಂದು ಧರ್ಮಕ್ಕೆ ಪ್ರವಾದಿ ಇಲ್ಲ. ಋಷಿಗಳು ಮಾತ್ರ ಇದ್ದಾರೆ. ವೇದಗಳಲ್ಲಿ ಋಷಿಗಳ ತತ್ತ್ವಶಾಸ್ತ್ರೀಯ ಮಿಂಚು(ಬೆಳಕು)ಗಳು ಕಾಣುತ್ತವೆ. ಅವುಗಳ ಸಾರ ಉಪನಿಷತ್‌ಗಳಲ್ಲಿ ಇದ್ದರೂ ಕೂಡ ಅವುಗಳ ಗೂಡಾರ್ಥ ಸಾಮಾನ್ಯರಿಗೆ ತಿಳಿಯದು. ಉಪನಿಷತ್‌ಗಳ ಸಾರವನ್ನು ಹೇಳುವ ಬ್ರಹ್ಮಸೂತ್ರಗಳು ಕೂಡ ಕ್ಲಿಷ್ಟವಾಗಿವೆ. ಆದರೆ ಋಷಿಗಳಾದ ವ್ಯಾಸ-ವಾಲ್ಮೀಕಿಗಳು ರಚಿಸಿದ ರಾಮಾಯಣ ಮಹಾಭಾರತಗಳು ವೇದಸಂಸ್ಕೃತಿಯನ್ನು ಸ್ಪಷ್ಟವಾಗಿ ಚಿತ್ರಿಸಿವೆ ಎಂದವರು ತಿಳಿಸಿದರು. ಕುರಾನ್‌ನಲ್ಲಿ ೨೩ ಕಡೆ ನನ್ನ ಮತವನ್ನು ಒಪ್ಪದವರನ್ನು ಕೊಲ್ಲಿ ಎಂದು ಹೇಳಿದೆ. ಹಾಗೆ ಕೊಂದರೆ ಸರ್ಗ ಸಿಗುತ್ತದೆ. ಅಲ್ಲಿ ಚಿನ್ನದ ಅರಮನೆ, ತಂಪುಹವೆ, ಸುಂದರಿಯರಾದ ೭೨ ಮಂದಿ ಕನ್ಯೆಯರು ನಿಮ್ಮವರಾಗುತ್ತಾರೆ ಎಂದು ಕುರಾನ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದ ಭೈರಪ್ಪನವರು, ಈ ಕಾರಣದಿಂದಲೇ ಮುಸಲ್ಮಾನ್ ಯುವಕರು ಭಯೋತ್ಪಾದಕ ರಾಗುತ್ತಿದ್ದಾರೆ ಎಂದರು. ಯೇಸು ತಾನು ದೇವರ ಮಗ ಎಂದು ಹೇಳಿಕೊಂಡು ತನ್ನ ಮಾತನ್ನು ಪಾಲಿಸುವಂತೆ ಆದೇಶಿಸಿದ್ದಾರೆ. ಈ ಪ್ರವಾದಿ ಮತಗಳಲ್ಲಿ ತನ್ನ ಮಾತನ್ನು ವಿಧಿಸುವ ಅಹಂಕಾರವಿದ್ದರೆ ಹಿಂದೂಧರ್ಮ ಅಂತಹ ಒಂದು ರಿಲಿಜಿಯನ್ ಅಲ್ಲ; ಅದು ಧರ್ಮ ಎಂದು ವಿವರಿಸಿದರು.

ಭಾರತದ ಇತಿಹಾಸವನ್ನು ತಿರುಚಿದ ಬಗ್ಗೆ ತಿಳಿಸುತ್ತಾ, ಬ್ರಿಟಿಷರು ಆರಂಭಿಸಿದ ಕೆಲಸ ಸ್ವತಃ ಇತಿಹಾಸಕಾರರು ಎನಿಸಿಕೊಂಡ ಮೊದಲ ಪ್ರಧಾನಿ ಅವರ ಕಾಲದಲ್ಲಿ ಮುಂದುವರಿಯಿತು. ಅವರ ಮಗಳು ಪ್ರಧಾನಿಯಾದಾಗ ಕಮ್ಯುನಿಷ್ಠರು ಕಾಂಗ್ರೆಸ್ ಸರಕಾರವನ್ನು ಬೆಂಬಲಿಸಿ ಶಿಕ್ಷಣದಂತಹ ಪ್ರಮುಖ ಖಾತೆಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಅವರ ಇಷ್ಟದಮತೆ ದೆಹಲಿಯ ಜೆಎನ್‌ಯು (ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ) ಸ್ಥಾಪನೆಗೊಂಡಿತು. ಐಸಿಎಚ್‌ಆರ್(ಭಾರತೀಯ ಇತಿಹಾಸ ಸಂಶೋಧನ ಮಂಡಳಿ) ಮುಂತಾದ ಸಂಸ್ಥೆಗಳಲ್ಲಿ ಅವರ ಜನರೇ ತುಂಬಿದರು. ಬೇರೆ ರೀತಿಯ ಚಿಂತನೆ ಇದ್ದವರಿಗೆ ಆ ಸಂಸ್ಥೆಗಳು ಉದ್ಯೋಗ ನೀಡಲಿಲ್ಲ; ಅವರ ಪುಸ್ತಕಗಳನ್ನು ಪ್ರಕಟಿಸಲಿಲ್ಲ. ಇತಿಹಾಸ, ಸಮಾಜಶಾಸ್ತ್ರವಲ್ಲದೆ ಸಾಹಿತ್ಯ, ಅರ್ಥಶಾಸ್ತ್ರ ಕ್ಷೇತ್ರಗಳಿಗೂ ಇದು ವಿಸ್ತರಿಸಿತು. ಅಂತಹ ಸನ್ನವೇಶದಲ್ಲಿ ರಾಮ್ ಸ್ವರೂಪ್ ಮತ್ತು ಸೀತಾರಾಮ್ ಗೋಯಲ್ ಮೂಲಗ್ರಂಥಗಳ ಅಧ್ಯಯನ ನಡೆಸಿ ಯಾವ ಮತಗಳೇನು? ಅವುಗಳ ಸ್ವರೂಪ-ದೋಷಗಳೇನು? ಹಿಂದೂಧರ್ಮ ಏನು ಎಂಬ ಬಗ್ಗೆ ಸ್ಪಷ್ಟ ಕಲ್ಪನೆ ನೀಡಿದರು. ಪ್ರಕಾಶಕರು ಸಿಗುವುದು ಕಷ್ಟವಾದಾಗ ತಾವೇ ಸಂಸ್ಥೆ (ವಾಯ್ಸ್ ಆಫ್ ಇಂಡಿಯಾ) ಸ್ಥಾಪಿಸಿ ಪುಸ್ತಕ ಪ್ರಕಟಿಸಿದರು ಎಂದು ಶ್ಲಾಘಿಸಿದ ಭೈರಪ್ಪ, ಅವರ ಬರಹಗಳಿಂದ ತಮ್ಮ ಈ ಕುರಿತ ಚಿಂತನೆಗಳು ಸ್ಪಷ್ಟವಾದವು. ’ಆವರಣ’ ಕಾದಂಬರಿಯಲ್ಲಿ ಅವುಗಳಿಗೆ ಸಂಬಂಧಿಸಿದ ದಾಖಲೆಗಲನ್ನು  ರೆಫರೆನ್ಸ್ ರೂಪದಲ್ಲಿ ಪುಸ್ತಕದಲ್ಲಿಯೇ ನೀಡಲಾಗಿದೆ. ವಾಯ್ಸ್ ಆಫ್ ಇಂಡಿಯಾದಂತಹ ಅಧ್ಯಯನ ಶೀಲ ಗ್ರಂಥಗಳು ಎಲ್ಲ ಭಾಷೆಯಲ್ಲೂ ಬರಬೇಕು ಎಂದು ಆಶಿಸಿದರು.

1475967_10201047654738595_735060633_n

ಪುಸ್ತಕಗಳನ್ನು ಕುರಿತು ಮಾತನಾಡಿದ ಖ್ಯಾತ ಚಿಂತಕ, ವಿಮರ್ಶಕ ಅಜಕ್ಕಳ ಗಿರೀಶ್ ಭಟ್ ಅವರು, ಇಂದು ಎಲ್ಲವನ್ನೂ ಕೋಮುವಾದಿ ಅಥವಾ ಜಾತ್ಯಾತೀತ(ಸೆಕ್ಯುಲರ್) ಮುಂತಾಗಿ ವಿಭಜಿಸುವ ಸರಳೀಕರಣ ಜಾಸ್ತಿಯಾಗಿದೆ. ಅದಕ್ಕೆ ಹೆದರುವ ವಿದ್ಯಾವಂತರು ಮಧ್ಯಮವರ್ಗದವರು ಎರಡರಿಂದಲೂ ದೂರಿರಲು ಬಯಸಿ ಮೌನವಾಗಿರುತ್ತಾರೆ. ಉದಾಹರಣೆಗೆ  ಟಿಪ್ಪು  ವಿವಿ ಬೇಡ ಎಂದರೆ ಕೋಮುವಾದಿ ಆಗುತ್ತೇವೆ. ವಿವಿ ಆಗಲೀ ಎಂದರೆ ಸೆಕ್ಯುಲರ್ ಆಗುತ್ತೇವೆ ಎಂಬ ಮಾನಸೀಕತೆ ಇಂದು ಹಬ್ಬಿದೆ ಎಂದು ವಿವರಿಸಿದರು.

ಅರುಣ್ ಶೌರಿ ಅವರ ’ದಿ ಎಮಿನೆಂಟ್ ಹಿಸ್ಟೋರಿಯನ್’ ಕೃತಿ ಐಸಿಎಚ್‌ಆರ್ , ಐಸಿಎಸ್‌ಎಸ್‌ಆರ್, ಎನ್‌ಸಿಇಆರ್‌ಟಿ (ಶಿಕ್ಷಣ ಸಂಶೋಧನೆ, ತರಬೇತಿಯ ರಾಷ್ಟ್ರೀಯ ಮಂಡಳಿ) ಸಂಸ್ಥೆಗಳಲ್ಲಿ ಸೇರಿಕೊಂಡವರು, ಅವರು ನಡೆಸುವ ಆರ್ಥಿಕ ಭ್ರಷ್ಟಾಚಾರ ಹಾಗೂ ಬೌದ್ಧಿಕ ಅಪ್ರಾಮಾಣಿಕತೆಗಳನ್ನು ಬಯಲಿಗೆಳೆದಿದ್ದಾರೆ; ನಾವಿಂದು ದಿಕ್ಕುತಪ್ಪಿರುವುದರ ಕಾರಣ ತಿಳಿಸಿದ್ದಾರೆ ಎಂದ ಅಜಕ್ಕಳ ಗಿರೀಶ ಭಟ್, ಹಂಪಿ ವಿವಿಯಲ್ಲಿ ಕೂಡಾ ಅವ್ಯವಹಾರವಾಗಿ ಒಬ್ಬರ ಅಮಾನತು ಕೂಡಾ ಆಗಿರುವುದನ್ನು ಉಲ್ಲೇಖಿಸಿದರು.

1476374_10201047651258508_1970134844_n

ಕಾರ್ಯಕ್ರಮದಲ್ಲಿ ರಾಷ್ಟ್ರೋತ್ಥಾನ ಸಾಹಿತ್ಯದ ಪ್ರಧಾನ ಸಂಪಾದಕ ಡಾ. ಎಸ್.ಆರ್. ರಾಮಸ್ವಾವಿ, ರಾಷ್ಟ್ರೋತ್ಥಾನ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ, ಅನುವಾದಕರೂ ವಾಯ್ಸ್ ಆಫ್ ಇಂಡಿಯಾ ಸರಣಿಯ ಸಂಪಾದಕರೂ ಆದ ಮಂಜುನಾಥ್ ಅಜ್ಜಂಪುರ, ಲೇಖಕ ಟಿ.ಎ.ಪಿ. ಶೆಣೈ ಹಾಗೂ ಶ್ರೀನಿವಾಸ ಸುಬ್ರಹ್ಮಣ್ಯಂ ಉಪಸ್ಥಿತರಿದ್ದರು.

  • email
  • facebook
  • twitter
  • google+
  • WhatsApp

Related Posts

RSS Sarkaryawah Shri Dattareya Hosabale hoisted the National Flag at Chennai
News Digest

RSS Sarkaryawah Shri Dattareya Hosabale hoisted the National Flag at Chennai

August 15, 2022
News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
News Digest

ಹಿರಿಯ ಸ್ವಯಂಸೇವಕ ಡಾ.ರಾಮಮನೋಹರ ರಾವ್ ವಿಧಿವಶ – ನಾ.ತಿಪ್ಪೇಸ್ವಾಮಿ ಸಂತಾಪ

July 25, 2022
Next Post
‘Bhakti Sangeet’ aiming Cow Conservation held at Bangalore

'Bhakti Sangeet' aiming Cow Conservation held at Bangalore

Comments 1

  1. vasudevarao says:
    9 years ago

    ರಾಮ ಸ್ವರೂಪ್ ಮತ್ತು ಸೀತಾರಾಮ ಗೋಯಲ್ ಅವರಿಗಿಂತ ಬಹಳಷ್ಟು ವರ್ಷಗಳ ಹಿಂದೆ ಕ್ರಿಶ್ಚಿಯನ್ ಮತ್ತು ಇಸ್ಲಾಂ ಮತಗಳನ್ನು ಸತ್ಯ, ತರ್ಕ ಮತ್ತು ವೇದಗಳ ಹಿನ್ನೆಲೆಯಲ್ಲಿ ವಿಮರ್ಶೆ ಮಾಡಿದ ಮೊದಲ ವೈಕ್ತಿ ಸ್ವಾಮಿ ದಯಾನಂದ ಸರಸ್ವತಿಯವರು. ಹಿಂದೂ ಮತಗಳಲ್ಲಿ ಇರಬಹುದಾದ ದೋಷಗಳನ್ನು ಅವರು ಪ್ರಸ್ತಾವನೆ ಮಾಡದೆ ಇರಲಿಲ್ಲ. ಆದರೆ ಇಂದಿನ ಸೆಕ್ಯುಲರ್ ಬುದ್ಧಿಜೀವಿಗಳಂತೆ ಕೇವಲ ಹಿಂದೂಧರ್ಮದಲ್ಲಿ ಇರುವ ದೋಷಗಳನ್ನು ಮಾತ್ರ ದಯಾನಂದರು ತೋರಿಸಲಿಲ್ಲ. ಬಹುಶಃ ಜಗತ್ತಿನಲ್ಲಿಯೇ ಪ್ರಪಥಮವಾಗಿ ಇಸ್ಲಾಂ ಮತ್ತು ಇಸಾಯಿಮತಗಳ ನಿಜ ರೂಪವನ್ನು ಅವರು ತಮ್ಮ ಅಮೋಘ ಕ್ರಾಂತಿಕಾರಿ ಗ್ರಂಥ ” ಸತ್ಯಾರ್ಥ ಪ್ರಕಾಶ” ದಲ್ಲಿ ತೋರಿಸಿದರು. ಸತ್ಯಾರ್ಥ ಪ್ರಕಾಶ ಸೋತ ಹಿಂದೂ ಜನಾಂಗಕ್ಕೆ ಒಂದು ಸಂಜೀವನಿಯಾಯಿತು. ಇದುವರೆಗೆ ಇಸ್ಲಾಂ ಮತ್ತು ಕ್ರಿಶ್ಚಿಯನ್ನ ಮತೀಯರು ಹಿಂದೂ ಧರ್ಮದ ಮೇಲೆ ಆಕ್ರಮಣ ಮಾಡಿದಾಗ ಹಿಂದೂಗಳು ಆಕ್ರಮಿತಗೊಂಡ ಆಮೆಯು ತನ್ನ ಅಂಗಗಳನ್ನು ಮುದುಡಿಕೊಂಡು ಕೂಡಿದಂತೆ ಇದ್ದರು. ಪ್ರತ್ಯಾಕ್ರಮಣ ಮಾಡುವ ಕ್ಷಮತೆಯಾಗಲೀ, ಅಥವಾ ಸಾಹಸ, ಪೌರುಷ ವಾಗಲಿ ಇರಲಿಲ್ಲ. ಸತ್ಯಾರ್ಥ ಪ್ರಕಾಶ ಹಿಂದೂಗಳಿಗೆ ಸ್ವಾಭಿಮಾನ, ನ್ಯಾಯಯುತ ರೀತಿಯಲ್ಲಿ ಪ್ರತ್ಯಾಕ್ರಮಣ ಮಾಡಲು ಅವಕಾಶ ಒದಗಿಸಿತು. ಆದ್ದರಿಂದಲೇ ವೀರ ಸಾವರ್ಕರ್ ಅದನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಇಂದಿಗೂ ಹಿಂದೂಗಳಿಗೆ ಅಗತ್ಯವಿರುವ ಪೌರುಷ ಪರಾಕ್ರಮಗಳನ್ನು ತುಂಬುವ ಕ್ರಿಶ್ಚಿಯನ್ ಮತ್ತು ಇಸ್ಲಾಂ ಮತದ ಹುಳುಕುಗಳನ್ನು ಜಗತ್ತಿಗೆ ತೋರಿಸುತ್ತಿರುವ ಏಕೈಕ ಗ್ರಂಥ ಇದು. ರಾಮಸ್ವರೂಪ್ ಮತ್ತು ಸೀತಾರಾಮ ಗೋಯಲ್ ರವರಿಗೆ ಇಂತಹ ಸಾಹಸ ಮಾಡಿದ ಕಾರಣ ವೆಂದರೆ ಅವರು ಆರ್ಯಸಮಾಜದಲ್ಲಿ ಪಡೆದ ಶಿಕ್ಷಣ ಮತ್ತು ಸ್ವಾಮಿ ದಯಾನಂದರ ಭೋದನೆಗಳಿಗೆ ತಮ್ಮನ್ನು ತಾವು ಅರ್ಪಿಸಿಕೊಂಡ ಕಾರಣ. ಕೆಲವು ವಿಷಯಗಳಲ್ಲಿ ಅವರು ಇನ್ನೂ ಮುಂದೆ ಹೋಗಿದ್ದಾರೆ. ಅದು ಅವರ ಸೃಜನಶೀಲತೆಗೆ ದ್ಯೋತಕ, ಮತಗಳ ವಿವೇಚನೆ, ಅವುಗಳಲ್ಲಿರುವ ದೋಷಗಳು ಮತ್ತು ವೈದಿಕ ಧರ್ಮದ ಶ್ರೇಷ್ಠತೆಯನ್ನು ತಿಳಿಯ ಬಯಸುವವರು ಸ್ವಾಮಿ ದಯಾನಂದರ ಸತ್ಯಾರ್ಥ ಪ್ರಕಾಶವನ್ನು ಅವಶ್ಯವಾಗಿ ಓದಲೇ ಬೇಕು.

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

NEWS IN BRIEF – JULY 07, 2012

July 8, 2012
RSS Karnataka’s Clarification on VR Bhat’s Facebook Controversy, says ‘No Links with him’

RSS Karnataka’s Clarification on VR Bhat’s Facebook Controversy, says ‘No Links with him’

July 28, 2014
RSS endorses UN’s Orange the World Campaign, Datta Hosabale says “Eliminating violence against women should be everyone’s Dharma”

RSS endorses UN’s Orange the World Campaign, Datta Hosabale says “Eliminating violence against women should be everyone’s Dharma”

November 26, 2015

50 years of Hindu empowerment: wrties Dr Togadia on VHP’s 5Oth Anniversary Year

August 28, 2013

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In