• Samvada
Wednesday, May 25, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Articles

“ನಿಮ್ಮ ನೆಚ್ಚಿನ ಭಾವಗೀತೆ ಹಾಗೂ ಜಾನಪದ ಗೀತೆಗಳು” ಎಂಬ ಪ್ರಶ್ನೆಯ ಸುತ್ತ ನಮ್ಮ ವಿಶ್ಲೇಷಣೆ #ರಾಜ್ಯೋತ್ಸವ_ವಿಶೇಷ #ಕನ್ನಡದನೆನಪು #ಕನ್ನಡಕ್ಕಾಗಿ_ಲಿಂಕ್_ಒತ್ತಿ

Vishwa Samvada Kendra by Vishwa Samvada Kendra
February 18, 2021
in Articles, News Digest
250
0
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಮೀಕ್ಷೆ : ಒಂದು ವಿಶ್ಲೇಷಣೆ  #ರಾಜ್ಯೋತ್ಸವ_ವಿಶೇಷ #ಕನ್ನಡದನೆನಪು #ಕನ್ನಡಕ್ಕಾಗಿ_ಲಿಂಕ್_ಒತ್ತಿ
491
SHARES
1.4k
VIEWS
Share on FacebookShare on Twitter

ವಿಶ್ವ ಸಂವಾದ ಕೇಂದ್ರ, ಕರ್ನಾಟಕ ನವೆಂಬರ್ ನಲ್ಲಿ ನಡೆಸಿದ ಸಮೀಕ್ಷೆಯನ್ನು ಕುರಿತು ಹಲವು ಪ್ರಶ್ನೆಗಳಲ್ಲಿ, “ನಿಮ್ಮ ನೆಚ್ಚಿನ ಭಾವಗೀತೆ ಹಾಗೂ ಜಾನಪದ ಗೀತೆಗಳು” ಎಂಬ ಪ್ರಶ್ನೆಯ ಸುತ್ತ ನಮ್ಮ ವಿಶ್ಲೇಷಣೆ (ಪ್ರವೀಣ್ ಪಟವರ್ಧನ್, ವಿ ಎಸ್ ಕೆ ಸಂಯೋಜಕ, ಐ ಟಿ ಉದ್ಯೋಗಿ ಅವರಿಂದ.)

READ ALSO

ಪಠ್ಯಪುಸ್ತಕಗಳು ಕಲಿಕೆಯ ಕೈದೀವಿಗೆಯಾಗಲಿ

ಒಂದು ಪಠ್ಯ – ಹಲವು ಪಾಠ

ಕನ್ನಡದ ಭಾವಗೀತೆಗಳಲ್ಲಿ, ಜಾನಪದ ಗೀತೆಗಳಲ್ಲಿ ನಿಮಗೆ ಇಷ್ಟವಾಗುವ ಹಾಗೂ ಕನ್ನಡತನವನ್ನು ಹೆಚ್ಚಿಸುವ ಗೀತೆ ಯಾವುವು ಎಂಬವು ಪ್ರಶ್ನೆಗಳಾಗಿದ್ದವು. ನಮಗೆಲ್ಲರಿಗೂ ತಿಳಿದಂತೆ ಶಾಸ್ತ್ರೀಯ ಸಂಗೀತ, ಸಿನಿಮಾ ಸಂಗೀತದ ಪ್ರಾಕಾರದಂತೆ ಭಾವಗೀತೆಯ ಪ್ರಾಕಾರ ನಮ್ಮಲ್ಲಿವೆ. ಅವುಗಳನ್ನು ಇಷ್ಟ ಪಡುವ, ಅವುಗಳನ್ನೇ ಹೆಚ್ಚಾಗಿ ಕೇಳುವ ವರ್ಗ ನಮ್ಮಲ್ಲಿದೆ. ಬೇರೆಯ ಭಾಷೆಗಳಲ್ಲಿ ಬಹುಶಃ ಇಷ್ಟು ಮಟ್ಟದ ಅಭಿಮಾನವಿಲ್ಲದ ಆದರೆ ನಮ್ಮಲ್ಲಿ ಅವುಗಳನ್ನು ಅತಿಯಾಗಿ ಪ್ರೀತಿಸುವ ಭಾವ ಜೀವಿಗಳನ್ನು ಗಮನಿಸಿರುತ್ತೇವೆ. ಸಂಗೀತ ಸ್ಪರ್ಧೆಯೊಂದು ನಡೆದರೆ ಶಾಸ್ತ್ರೀಯ ಸಂಗೀತ ಗಾಯನದ ಜೊತೆಗೆ ಭಾವಗೀತೆಯ, ಜಾನಪದ ಗೀತೆಯ ಗಾಯನವೂ ಇದ್ದೇ ಇರುತ್ತದೆ. ಎಫ್ ಎಂ ಗಳಲ್ಲಿ ಸಿನಿಮಾ ಹಾಡುಗಳನ್ನು ಪ್ರಸಾರ ಮಾಡುವುದರ ಜೊತೆ ಭಾವಗೀತೆಗಳನ್ನು ಪ್ರಸಾರ ಮಾಡುತ್ತಾರೆ ಎಂಬುದು ನಮಗೆಲ್ಲರಿಗೂ ತಿಳಿದಿರುತ್ತದೆ. ಹೀಗೆ ಹೇಳುವಾಗ ಜಾನಪದ ಹಾಡುಗಳನ್ನು ಮರೆಯುವಂತಿಲ್ಲ. ಬಾಯಿಂದ ಬಾಯಿಗೆ ಹರಿದು ಬಂದ ಈ ಜಾನಪದ ಗೀತೆಗಳಲ್ಲಿ ದೇವರ ಆರಾಧನೆ, ಪ್ರಕೃತಿಯ ಆರಾಧನೆ, ಹೆಣ್ಣು ಮಗಳೊಬ್ಬಳ ಬಯಕೆ, ಭಾರತೀಯ ಸಂಸ್ಕೃತಿಯನ್ನು ಎತ್ತಿಹಿಡಿಯುವ, ಜೀವನದ ಪಾಠ ಕಲಿಸುವ ಸಾಲುಗಳೇ ಹೆಚ್ಚು. ಭಾರತೀಯತೆಯ ತತ್ತ್ವವನ್ನು ಸಾರುವ, ಶ್ರೇಷ್ಠ ನೀತಿಯನ್ನು ಎತ್ತಿಹಿಡಿಯುವ ಈ ಜಾನಪದ ಸಾಹಿತ್ಯದಿಂದ ಕಲಿಯಲಿಕ್ಕೆ, ಜೀವನದಲ್ಲಿ ಅಳವಡಿಸಲಿಕ್ಕೆ ಸಾಕಷ್ಟು ಅವಕಾಶಗಳಿವೆ.

ನಮ್ಮ ಪಟ್ಟಿಯಲ್ಲಿ ಇದ್ದ ೧೦ ಭಾವಗೀತೆಗಳು ಒಂದಕ್ಕಿಂತಲೂ ಮತ್ತೊಂದು ಮಿಗಿಲಾದ ಹಾಡುಗಳೇ. ಈ ಹಾಡುಗಳಿಗೆ ರಾಗ ಸಂಯೋಜನೆ ಮಾಡಿ, ಗಾಯನದ ಮೂಲಕ ಪ್ರಸ್ತುತ ಪಡಿಸಿ, ಪ್ರಸಿದ್ಧಿಗೊಂಡ ಹಾಡುಗಳು ಭಾವಗೀತೆಗಳೋ ಜಾನಪದವೋ ಎನ್ನುವಷ್ಟು ಪ್ರಸಿದ್ಧಿ ಹೊಂದಿವೆ. ಕವಿಗಳು ರಚಿಸಿರುವ ಹಾಡುಗಳಿಗೆ ಮೈಸೂರು ಅನಂತಸ್ವಾಮಿ, ಸಿ ಅಶ್ವತ್ಥ, ಸೇರಿದಂತೆ ಹಲವು ಅತ್ಯುನ್ನತ ರಾಜ ಸಂಯೋಜಕರು ನಿಜಾರ್ಥದಲ್ಲಿ ಭಾವ ತುಂಬಿದ್ದಾರೆ. ಹೀಗೆ ಇರುವ ಹಾಡುಗಳು ಸಾವಿರಾರು ದಾಟಬಹುದು. ಹಿಂದೊಮ್ಮೆ ಸಿ ಅಶ್ವತ್ಥ ಅವರು ಸಾವಿರಾರು ಕಾಲೇಜು ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಕುವೆಂಪು ಅವರ ಭಾವಗೀತೆಗಳ ಸಂಗೀತ ಕಚೇರಿಯನ್ನು ಪ್ರಸ್ತುತ ಪಡಿಸಿದ್ದರು. ಭಾವಗೀತೆಗಳನ್ನು ಒಳಗೊಂಡ ಕಾರ್ಯಕ್ರಮಗಳಿಗೆ ಜನರು ಸಿನಿಮಾ ಹಾಡುಗಳನ್ನು ಕೇಳಲು ಮುಗಿಬೀಳುವುದಕ್ಕಿಂತಲೂ ಹೆಚ್ಚು ಸೇರುತ್ತಿದ್ದ ಕಾಲವೊಂದಿತ್ತು.

ಆಯ್ಕೆಗಳಲ್ಲಿ ಹೆಚ್ಚು ಮತ ಪಡೆದ ಭಾವಗೀತೆ – “ಜೋಗದ ಸಿರಿ ಬೆಳಕಿನಲ್ಲಿ…” ಕವಿ ನಿಸಾರ್ ಅಹಮದ್ ಅವರ ಲೇಖನಿಯಿಂದ ಹೊರಹೊಮ್ಮಿರುವ ಈ ಗೀತೆ ಕರ್ನಾಟಕದ ನಾಡಗೀತೆಯಷ್ಟೇ ಪ್ರಸಿದ್ಧ. ಜೋಗದ ವೈಭವವನ್ನು ಸಾರುವ ಈ ಕವಿತೆಯನ್ನು ನಿತ್ಯೋತ್ಸವ ಎಂದು ಕವಿಗಳು ಕರೆದಿದ್ದಾರೆ. ಜೋಗದ ವೈಭವವೇ, ಪರಿಸರ ಆರಾಧನೆಯನ್ನೇ ನಿತ್ಯ ಉತ್ಸವ ಎಂದು ಬರೆಯುವ ಕವಿಗಳು ಮುಸ್ಲಿಮರಾದರೂ ಅವರನ್ನು ‘ಕನ್ನಡಿಗರು, ಶ್ರೇಷ್ಠ ಕವಿಗಳಲ್ಲಿ ಒಬ್ಬರು’ ಎಂದಷ್ಟೇ ಹೆಮ್ಮೆಯಿಂದ ನೋಡಿದ ಜನರು ನಾವು.
ಎರಡನೆಯ ಸ್ಥಾನದಲ್ಲಿದ್ದ ಗೀತೆ ಕೆ ಎಸ್ ನರಸಿಂಹಸ್ವಾಮಿಯವರು ಬರೆದಿರುವ ದೀಪವು ನಿನ್ನದೇ, ಗಾಳಿಯು ನಿನ್ನದೇ. ಜೀವನದಲ್ಲಿ ಸರ್ವಶಕ್ತನಾದ ಭಗವಂತನಿಗಿರುವ ಶಕ್ತಿಯಲ್ಲಿ ನಂಬಿಕೆಯಿಡುತ್ತಾ, ಜೀವನ ಹಳಿ ತಪ್ಪದಿರಲಿ ಎಂಬ ಸಾರ ಈ ಕವನದ್ದು. ಇನ್ನು ಅಷ್ಟೇ ಶ್ರೇಷ್ಠವೆನಿಸುವ “ಯಾವ ಮೋಹನ ಮುರಳಿ ಕರೆಯಿತು…” ಕವಿ ಎಂ ಗೋಪಾಲಕೃಷ್ಣ ಅಡಿಗರ ಕವನದಲ್ಲಿ ಜೀವನದಲ್ಲಿ ಇರುವ ಸುಖಗಳನ್ನು ಬಿಟ್ಟು ಮತ್ತೆಲ್ಲಿಯದೋ ಸುಖಕ್ಕಾಗಿ ಹಂಬಲಿಸುವುದನ್ನು ಕುರಿತು ಗೀತೆ ರಚನೆಯಾಗಿದೆ. ಅಧ್ಯಾತ್ಮದ ಸಾರವನ್ನು ಸಾರುವ ಈ ಕವನದಲ್ಲಿ ಬರುವ ಸಾಲುಗಳಲ್ಲಿ “ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ” ನಿಜಾರ್ಥದಲ್ಲಿ ಮನುಷ್ಯನ ಸಹಜ ವರ್ತನೆಯನ್ನು ಬಿಂಬಿಸಿದ್ದಾರೆ.

ನಮ್ಮ ಪಟ್ಟಿಯಲ್ಲಿ ಇದ್ದ ಆಯ್ಕೆಗಳೆಲ್ಲವೂ ಹಳೆಯ ಭಾವಗೀತೆಗಳೇ. ಇಂದು ಭಾವಗೀತೆಗಳು, ಕವನಗಳು ರಚಿತವಾಗುತ್ತಿವೆಯಾದರೂ, ಅವುಗಳು ಜನರನ್ನು ಸೆಳೆಯುತ್ತಿರುವುದು ಕಡಿಮೆಯೇ ಎಂದನಿಸದಿರದು. ಇಂದಿನ ಕಾಲ ಘಟ್ಟಕ್ಕೆ ಹಳೆಯ ಹಾಡುಗಳ ಜೊತೆಗೆ ಇಂದಿನ ಕಾಲಕ್ಕೆ ಸರಿಹೊಂದುವ ಅರ್ಥಪೂರ್ಣ ಅಧ್ಯಾತ್ಮ, ಭಾವನೆಗಳ ಮಿಶ್ರಿಸಿದ ಕವನಗಳು, ಅದಕ್ಕೆ ಸರಿಯಾದ ರಾಗ ಸಂಯೋಜನೆ, ಗಾಯನ ರೂಪದಲ್ಲಿ ಮೂಡಿಬಂದರೆ ಈ ಗೀತೆಗಳು ಹೊಸ ತಲೆಮಾರಿಗೆ ಒಳ್ಳೆಯ ಸಂದೇಶ ಕೊಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಇನ್ನಷ್ಟು ಭಾವಗೀತೆಗಳನ್ನು ಕೇಳುವಂತಾಗಲಿ, ಹೆಚ್ಚು ಕವಿಗಳು, ರಾಗ ಸಂಯೋಜಕರು, ಗಾಯಕರು ಪರಿಚಯವಾಗುವುದರಿಂದ ಕನ್ನಡಕ್ಕೆ, ಹಾಗೂ ಕರ್ನಾಟಕಕ್ಕೇ, ಹಾಗೂ ಸಾಹಿತ್ಯ-ಸಂಗೀತ ಲೋಕಕ್ಕೆ ಉತ್ತಮ ಕೊಡುಗೆಯಾದೀತು.

ಇನ್ನು ಜಾನಪದ ಹಾಡುಗಳಾದ ಚೆಲ್ಲಿದರು ಮಲ್ಲಿಗೆಯಾ, ಮಾಯದಂಥ ಮಳೆ ಬಂತಣ್ಣಾ, ಭಾಗ್ಯದ ಬಳೆಗಾರ ಕ್ರಮವಾಗಿ ಜನರ ಮತಗಳನ್ನು ಹೆಚ್ಚಾಗಿ ಪಡೆದ ಮೂರು ಗೀತೆಗಳು.

ಪ್ರವೀಣ್ ಪಟವರ್ಧನ್, ವಿ ಎಸ್ ಕೆ ಸಂಯೋಜಕ, ಐ ಟಿ ಉದ್ಯೋಗಿ
  • email
  • facebook
  • twitter
  • google+
  • WhatsApp
Tags: #ಕನ್ನಡಕ್ಕಾಗಿ_ಲಿಂಕ್_ಒತ್ತಿ#ಕನ್ನಡದನೆನಪು#ರಾಜ್ಯೋತ್ಸವ_ವಿಶೇಷPraveen Patavardhan

Related Posts

Articles

ಪಠ್ಯಪುಸ್ತಕಗಳು ಕಲಿಕೆಯ ಕೈದೀವಿಗೆಯಾಗಲಿ

Articles

ಒಂದು ಪಠ್ಯ – ಹಲವು ಪಾಠ

May 25, 2022
News Digest

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

May 22, 2022
News Digest

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

May 20, 2022
News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
Next Post
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಒಂದು ಸಮೀಕ್ಷೆ : #ರಾಜ್ಯೋತ್ಸವ_ವಿಶೇಷ #ಕನ್ನಡದನೆನಪು  #ಕನ್ನಡಕ್ಕಾಗಿ_ಲಿಂಕ್_ಒತ್ತಿ

"ಕರ್ನಾಟಕದ ನಿಮ್ಮ ನೆಚ್ಚಿನ ಪ್ರವಾಸಿ ತಾಣ ಯಾವುದು" ಎಂಬ ಪ್ರಶ್ನೆಯ ಸುತ್ತ ನಮ್ಮ ವಿಶ್ಲೇಷಣೆ #ರಾಜ್ಯೋತ್ಸವ_ವಿಶೇಷ #ಕನ್ನಡದನೆನಪು #ಕನ್ನಡಕ್ಕಾಗಿ_ಲಿಂಕ್_ಒತ್ತಿ

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಒಂದು ಪಠ್ಯ – ಹಲವು ಪಾಠ

May 25, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

EDITOR'S PICK

Massive Protest held at Bangalore demanding quickest police action on Jehadi Goondaism against Hindu Leaders

Massive Protest held at Bangalore demanding quickest police action on Jehadi Goondaism against Hindu Leaders

September 16, 2014
Datta Jayanti on Dec 6, Bajarangadal launches ‘Datta Mala Abhiyan’ ಡಿಸೆಂಬರ್ 6ರ ದತ್ತ ಜಯಂತಿಯ ಅಂಗವಾಗಿ ದತ್ತಮಾಲಾಧರಣೆ

Datta Jayanti on Dec 6, Bajarangadal launches ‘Datta Mala Abhiyan’ ಡಿಸೆಂಬರ್ 6ರ ದತ್ತ ಜಯಂತಿಯ ಅಂಗವಾಗಿ ದತ್ತಮಾಲಾಧರಣೆ

November 27, 2014

ರಾಣಿ ಚೆನ್ನಭೈರಾದೇವಿ ಬಹುಪಾರಕ್!!

January 29, 2022
Bharatiya Kisan Sangh protests in New Delhi

Bharatiya Kisan Sangh protests in New Delhi

August 25, 2019

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಪಠ್ಯಪುಸ್ತಕಗಳು ಕಲಿಕೆಯ ಕೈದೀವಿಗೆಯಾಗಲಿ
  • ಒಂದು ಪಠ್ಯ – ಹಲವು ಪಾಠ
  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In