• Samvada
Friday, May 20, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home News Digest

ಡಾ. ಜನಾರ್ದನ ಹೆಗಡೆಗೆ ಡಿ.ಲಿಟ್ ಪದವಿ

Vishwa Samvada Kendra by Vishwa Samvada Kendra
December 6, 2021
in News Digest, Others
250
0
ಡಾ. ಜನಾರ್ದನ ಹೆಗಡೆಗೆ ಡಿ.ಲಿಟ್ ಪದವಿ
491
SHARES
1.4k
VIEWS
Share on FacebookShare on Twitter

Inbox

ಮಹಾರಾಷ್ಟ್ರ ರಾಜ್ಯದ ನಾಗಪುರದಲ್ಲಿರುವ ಕವಿಕುಲಗುರು ಕಾಲಿದಾಸ ಸಂಸ್ಕೃತ ವಿಶ್ವವಿದ್ಯಾಲಯವು ಡಾ. ಜನಾರ್ದನ ಹೆಗಡೆ ಅವರಿಗೆ ಡಿ.ಲಿಟ್ ಪದವಿಯನ್ನು ನೀಡಿ ಗೌರವಿಸಿದೆ. ವ್ಯಾಕರಣ ವಿಷಯದಲ್ಲಿ ಇವರು ಮಂಡಿಸಿದ “ಶುದ್ಧಿತತ್ವಬೋಧಿನೀ” (ಸಿದ್ಧಾಂತಕೌಮುದ್ಯಾಃ ತತ್ವಬೋಧಿನೀವ್ಯಾಖ್ಯಾಯಾಂ ಸ್ಥಿತಾನಾಂ ಪ್ರಯೋಗಾಣಾಂ ಸಮರ್ಥನಪ್ರಕಾರಾಣಾಂ ಸಂಗ್ರಹಃ) ಎಂಬ ಪ್ರೌಢಪ್ರಬಂಧಕ್ಕೆ ವಿಶ್ವವಿದ್ಯಾಲಯವು ಈ ಪದವಿಯನ್ನು ನೀಡಿ ಗೌರವಿಸಿದೆ.  

READ ALSO

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

भारतस्य प्रतिष्ठे द्वे संस्कृतं संस्कृतिश्च

ವಿದ್ವಾನ್ ಜನಾರ್ದನ ಹೆಗಡೆ ಅವರು “ಸಂಭಾಷಣ ಸಂದೇಶಃ” ಎಂಬ ಸಂಸ್ಕೃತ ಮಾಸಪತ್ರಿಕೆಯ ಸಂಸ್ಥಾಪಕ ಸಂಪಾದಕರು. ವಿದ್ವಾನ್ ಜನಾರ್ದನ ಹೆಗಡೆಯವರು ಸಂಸ್ಕೃತಭಾಷೆಯನ್ನು ಜನಭಾಷೆಯಾಗುವಲ್ಲಿ ಅನವರತವೂ ಶ್ರಮಿಸುತ್ತಿರುವ “ಸಂಸ್ಕೃತ ಭಾರತಿ” ಸಂಸ್ಥೆಯ ಹಿರಿಯ ಸಂಸ್ಥಾಪಕರಲ್ಲೊಬ್ಬರು.

ಡಾ. ಜನಾರ್ದನ ಹೆಗಡೆ

ಇವರು ಸಂಸ್ಕೃತ ಭಾಷಾಭ್ಯಾಸ ಹಾಗೂ ವ್ಯಾಕರಣ ಕಲಿಕೆಗೆ ಸಂಬಂಧಿಸಿದಂತೆ ಸುಮಾರು 15ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಸಾಮಾನ್ಯ ವ್ಯಾಕರಣಾಭ್ಯಾಸಕ್ಕೆ ಬೇಕಾದ ‘ಅಭ್ಯಾಸದರ್ಶಿನಿ’, ‘ಶುದ್ಧಿಕೌಮುದಿ’ಯಿಂದ ಆರಂಭಿಸಿ ಪ್ರೌಢ ಗ್ರಂಥಗಳಾದ ‘ಭಾಷಾಪಾಕಃ’, ‘ಧಾತುರೂಪನಂದಿನೀ’, ‘ಕೃದಂತರೂಪನಂದಿನೀ’ ಮುಂತಾದವು ಇವರ ಇತ್ತೀಚಿನ ಕೃತಿಗಳು.

ಸಮಕಾಲೀನ ಸಂಸ್ಕೃತ ಸಾಹಿತ್ಯಸೃಷ್ಟಿಯಲ್ಲಿಯೂ ಇವರದು ಗಣನೀಯ ಸೇವೆ. ಸಂಸ್ಕೃತ ಚಂದಮಾಮಾವನ್ನು ಸುಮಾರು 25 ವರ್ಷ ನಡೆಸಿದ ಹೆಗ್ಗಳಿಕೆ ಇವರದು. ಕತೆ ಕಾದಂಬರಿ ಮುಂತಾದ ಸಾಹಿತ್ಯಪ್ರಕಾರಗಳಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಬಾಲಕಥಾಸಾಹಿತ್ಯಪ್ರಕಾರದಲ್ಲಿ ಇವರು ರಚಿಸಿದ “ಬಾಲಕಥಾಸಪ್ತತಿಃ” ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ “ಬಾಲ ಸಾಹಿತ್ಯ ಪುರಸ್ಕಾರ” (2015) ಸಂದಿದೆ. ಕನ್ನಡದ ಪ್ರಖ್ಯಾತ ಕಾದಂಬರಿಕಾರರಾದ ಶ್ರೀ ಎಸ್.ಎಲ್.ಭೈರಪ್ಪನವರ ‘ಧರ್ಮಶ್ರೀ’ ಕಾದಂಬರಿಯ ಸಂಸ್ಕೃತಾನುವಾದಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ “ಅನುವಾದ ಪುರಸ್ಕಾರ” (2005) ಲಭಿಸಿದೆ. ಇದಿಷ್ಟೇ ಅಲ್ಲದೇ, ದೃಷ್ಟಿದಾನ, ವಂಶವೃಕ್ಷ, ಕನಕ ಮುಸುಕು, ಸಿಂಹಾವಲೋಕನ, ಇವರು ಅನುವಾದಿಸಿರುವ ಕಾದಂಬರಿಗಳಲ್ಲಿ ಪ್ರಮುಖವಾದವು. ಕರ್ನಾಟಕ ಸರ್ಕಾರದ ಕುವೆಂಪು ಭಾಷಾ ಭಾರತಿ ಪ್ರಧಿಕಾರದ “ಗೌರವ ಪುರಸ್ಕಾರ” (2011-12), ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ “ಪ್ರೊ. ಎಂ. ಹಿರಿಯಣ್ಣ ಸಂಸ್ಕೃತ ಗ್ರಂಥ ಪುರಸ್ಕಾರ” (2011), ತಿರುಪತಿಯ ರಾಷ್ಟ್ರಿಯ ಸಂಸ್ಕೃತ ವಿದ್ಯಾಪೀಠ (ಮಾನಿತ ವಿಶ್ವವಿದ್ಯಾಲಯ)ದಿಂದ “ಸಂಸ್ಕೃತ ಸೇವಾವತಂಸ” ಬಿರುದು (2000), ಗುಜರಾತಿನ ಶ್ರೀ ಸೋಮನಾಥ ಸಂಸ್ಕೃತ ವಿಶ್ವವಿದ್ಯಾಲಯದಿಂದ “ಗೌರವ ಡಿ.ಲಿಟ್” ಉಪಾಧಿ (2014) ಮುಂತಾದವು ಅವರ ಪ್ರತಿಭೆ ಹಾಗೂ ಪಾಂಡಿತ್ಯಕ್ಕೆ ಹಿಡಿದ ಕೈಗನ್ನಡಿಯಂತಿವೆ.

ಸಂಸ್ಕೃತಶಿಕ್ಷಕರ ಪ್ರಶಿಕ್ಷಣ ಕ್ಷೇತ್ರದಲ್ಲಿಯೂ ಇವರ ಸೇವೆ ಅಪಾರ. ಸುಮಾರು 30 ವರ್ಷಗಳಿಂದಲೂ ಭಾರತದ ವಿವಿಧ ರಾಜ್ಯಗಳಲ್ಲಿ ಹಾಗೂ ಇತ್ತೀಚಿನ ಕೆಲವು ವರ್ಷಗಳಲ್ಲಿ ಅಮೆರಿಕಾ ಮುಂತಾದ ಹೊರದೇಶದಲ್ಲಿ ನಡೆದ ಶಿಕ್ಷಕ ಪ್ರಶಿಕ್ಷಣ ವರ್ಗಗಳಲ್ಲಿ ಸತತವಾಗಿ ಸಂಸ್ಕೃತ ಪ್ರಶಿಕ್ಷಣವನ್ನು ನೀಡುತ್ತಾ ಬಂದಿದ್ದಾರೆ. ವಿವಿಧ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಹಾಗೂ ವಿಶ್ವವಿದ್ಯಾಲಯಗಳ ಅಕಾಡೆಮಿಕ್ ಕೌನ್ಸಿಲ್ ಮುಂತಾದ ಅನೇಕ ಸಮಿತಿಗಳ ಸದಸ್ಯರೂ ಆಗಿರುವ ಇವರು ಪ್ರಸ್ತುತ, “ಸಂಭಾಷಣ ಸಂದೇಶ:” ಎಂಬ ಸಂಸ್ಕೃತ ಮಾಸಪತ್ರಿಕೆಯ ಸಂಪಾದಕರಾಗಿದ್ದಾರೆ.

  • email
  • facebook
  • twitter
  • google+
  • WhatsApp

Related Posts

News Digest

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

May 20, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
News Digest

Sanskrit most requested language on Google Translate

May 13, 2022
News Digest

Kerala Fire cop arrested in connection with murder of RSS activist shrinivasan

May 11, 2022
Next Post
ಭಾರತ ಕಂಡ ಶ್ರೇಷ್ಠ ಕ್ರಾಂತಿಕಾರಿ ಭಾಯಿ ಪರಮಾನಂದರು

ಭಾರತ ಕಂಡ ಶ್ರೇಷ್ಠ ಕ್ರಾಂತಿಕಾರಿ ಭಾಯಿ ಪರಮಾನಂದರು

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

ತಾಯ್ನಾಡಿನ ರಕ್ಷಣೆಗಾಗಿ ಬದುಕಿದ ಸೈನಿಕರಿಗೆ ಸಾವಿಲ್ಲ…

ತಾಯ್ನಾಡಿನ ರಕ್ಷಣೆಗಾಗಿ ಬದುಕಿದ ಸೈನಿಕರಿಗೆ ಸಾವಿಲ್ಲ…

December 20, 2021
ಡಿಸೆಂಬರ್ : ಕರ್ನಾಟಕದ ತಾಲ್ಲೂಕು-ಜಿಲ್ಲಾಕೇಂದ್ರಗಳಲ್ಲಿ ಬೃಹತ್ ಹಿಂದೂ ಸಮಾಜೋತ್ಸವ

ಡಿಸೆಂಬರ್ : ಕರ್ನಾಟಕದ ತಾಲ್ಲೂಕು-ಜಿಲ್ಲಾಕೇಂದ್ರಗಳಲ್ಲಿ ಬೃಹತ್ ಹಿಂದೂ ಸಮಾಜೋತ್ಸವ

December 5, 2010
ಭಾಷೆಯ ಬಗ್ಗೆ ಗುರೂಜಿ ಸಂದರ್ಶನ

ಭಾಷೆಯ ಬಗ್ಗೆ ಗುರೂಜಿ ಸಂದರ್ಶನ

September 19, 2019
Moodabidire: RSS Protest report  ಮಸೂದೆಯಿಂದ  ಬಹುಸಂಖ್ಯಾತರ ವಿರುದ್ಧ ದೌರ್ಜನ್ಯ: ಸುವೃತ್ ಕುಮಾರ್

Moodabidire: RSS Protest report ಮಸೂದೆಯಿಂದ ಬಹುಸಂಖ್ಯಾತರ ವಿರುದ್ಧ ದೌರ್ಜನ್ಯ: ಸುವೃತ್ ಕುಮಾರ್

November 16, 2011

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಸಂತ ಪದವಿಯ ತನಕದ ೩೫೦ ವರ್ಷಗಳ ವ್ಯವಸ್ಥಿತ ಷಡ್ಯಂತ್ರ – ಒಂದು ಮತಾಂತರದ ಕಥೆ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In