• Samvada
Sunday, May 22, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Articles

ನಿಮ್ಮ ನೆಚ್ಚಿನ ಕಿರುತೆರೆಯ ಕಾರ್ಯಕ್ರಮ ಯಾವುದು? ಪ್ರಶ್ನೆಯ ಸುತ್ತ ವಿಶ್ಲೇಷಣೆ. #ರಾಜ್ಯೋತ್ಸವ_ವಿಶೇಷ #ಕನ್ನಡದನೆನಪು #ಕನ್ನಡಕ್ಕಾಗಿ_ಲಿಂಕ್_ಒತ್ತಿ

Vishwa Samvada Kendra by Vishwa Samvada Kendra
February 18, 2021
in Articles, News Digest
250
0
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಮೀಕ್ಷೆ : ಒಂದು ವಿಶ್ಲೇಷಣೆ  #ರಾಜ್ಯೋತ್ಸವ_ವಿಶೇಷ #ಕನ್ನಡದನೆನಪು #ಕನ್ನಡಕ್ಕಾಗಿ_ಲಿಂಕ್_ಒತ್ತಿ
491
SHARES
1.4k
VIEWS
Share on FacebookShare on Twitter

ವಿಶ್ವ ಸಂವಾದ ಕೇಂದ್ರ, ಕರ್ನಾಟಕ ನವೆಂಬರ್ ನಲ್ಲಿ ನಡೆಸಿದ ಸಮೀಕ್ಷೆಯನ್ನು ಕುರಿತು ಹಲವು ಪ್ರಶ್ನೆಗಳಲ್ಲಿ, “ನಿಮ್ಮ ನೆಚ್ಚಿನ ಕಿರುತೆರೆಯ ಕಾರ್ಯಕ್ರಮ ಯಾವುದು?” ಎಂಬ ಪ್ರಶ್ನೆಯ ಸುತ್ತ ನಮ್ಮ ವಿಶ್ಲೇಷಣೆ (ಪ್ರವೀಣ್ ಪಟವರ್ಧನ್, ವಿ ಎಸ್ ಕೆ ಸಂಯೋಜಕ, ಐ ಟಿ ಉದ್ಯೋಗಿ ಅವರಿಂದ).

ಸಿನಿಮಾ ಎಲ್ಲರಿಗೂ ಎಟುಕದ ಸ್ಥಿತಿಯಲ್ಲಿದ್ದ ಸಮಯದಲ್ಲಿ ಕಿರುತೆರೆ ಜನರನ್ನು ಆಕರ್ಷಿಸತೊಡಗಿತು. ದೂರದರ್ಶನವೆಂಬ ಒಂದೇ ವಾಹಿನಿಯಿದ್ದಾಗಿನಿಂದ ಇಲ್ಲಿಯವರೆಗೆ ಹಲವಾರು ಕಾರ್ಯಕ್ರಮಗಳು ಪ್ರಕಟವಾಗಿವೆ. ಧಾರವಾಹಿ ರೂಪಾರಲ್ಲಿ ೧೩ ವಾರಗಳಿಗೆಂದೇ ಸಮಯಾವಕಾಶ ಕೊಡುತ್ತಿದ್ದ ಮುಂಚಿನ ದಿನಗಳನ್ನು ಈಗ ತುಲನೆ ಮಾಡಬೇಕಾಗಿರುವುದು ನಿತ್ಯ ಬರುವ ಧಾರಾವಾಹಿ ಕಂತುಗಳಿಗೆ. ಸಿನಿಮಾ ಶೈಲಿಯಲ್ಲೇ ಮೂಡಿಬರುವ ಹಲವು ಧಾರಾವಾಹಿಗಳಿವೆ. ಕೆಲವನ್ನು ಜನರು ಬಹಳವಾಗಿ ಇಷ್ಟಪಟ್ಟಿದ್ದಾರೆ. ಮತ್ತೆ ಕೆಲವನ್ನು ಖಂಡಿಸಿದ್ದಾರೆ. ಸಂಗೀತಕ್ಕೆ ಸಂಬಂಧಿಸಿದಂತೆ, ಹಾಡುಗಾರಿಕೆಗೆ ಸಂಬಂಧಿಸಿದಂತೆ ಹಲವು ವೈವಿಧ್ಯಪೂರ್ಣ ಕಾರ್ಯಕ್ರಮಗಳನ್ನು ಜನರು ವೀಕ್ಷಿಸಿ ಇಷ್ಟಪಟ್ಟಿದ್ದಾರೆ. ರಸಪ್ರಶ್ನೆ, ಜ್ಞಾನಾರ್ಜನೆಗೆ ಸಂಬಂಧಿಸಿದ ಕಾರ್ಯಕ್ರಮಗಳು ಕಿರುತೆರೆಯಲ್ಲಿ ಮೂಡಿಬಂದಿವೆ.

READ ALSO

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

ನಮ್ಮ ಪಟ್ಟಿಯಲ್ಲಿದ್ದ ೧೦ ಕಾರ್ಯಕ್ರಮಗಳಲ್ಲಿ ಹೆಚ್ಚು ಅಂಕ ಪಡೆದ ಮೊದಲ ೩ ಕಾರ್ಯಕ್ರಮಗಳು ಬೇರೆ ಬೇರೆಯ ಪ್ರಕಾರದ್ದು ಎಂಬುದೇ ವಿಶೇಷ. ಅತಿ ಹೆಚ್ಚು ಅಂಕ ಪಡೆದ ಎದೆ ತುಂಬಿ ಹಾಡುವೆನು ಸಂಗೀತಕ್ಕೆ ಸಂಬಂಧಿಸಿದ್ದಾದರೆ, ನಾ ಸೋಮೇಶ್ವರರು ನಡೆಸಿಕೊಡುವ ‘ಥಟ್ ಅಂತ ಹೇಳಿ’ ಜ್ಞಾನ, ಓದು, ಪುಸ್ತಕ, ಇವುಗಳಿಗೆ ಸಂಬಂಧಿಸಿದ್ದು. ನಂತರ ಸ್ಥಾನದಲ್ಲಿ – ದೂರದರ್ಶನದಲ್ಲಿ ಹಿಂದೆ ಪ್ರಸಾರವಾಗುತ್ತಿದ್ದ ಟಿ ಏನ್ ಸೀತಾರಾಮ್ ಅವರ ಮಾಯಾಮೃಗ ಧಾರವಾಹಿ.

ಸಂಗೀತಕ್ಕೆ ಹೆಚ್ಚು ಮತ ದೊರೆತಿದೆ ಎಂದು ಒಂದು ತರಹದಲ್ಲಿ ವಿಶ್ಲೇಷಿಸಿದರೆ, ಇಂದಿನ ದಿನಕ್ಕೆ ಗಮನಿಸಬೇಕಾದ್ದು ಈ ಕಾರ್ಯಕ್ರಮದಿಂದ ಬಹಳಷ್ಟಿವೆ. ರಿಯಾಲಿಟಿ ಷೋ ಅಂದರೆ ಅದೊಂದು ಟಿಆರ್ಪಿ ವಸ್ತು ಎಂಬಂತೆ ಆಗಿರುವ ಹಾಗೂ ಪ್ರಕಟವಾಗುವ ಇಂದಿನ ಸಂಗೀತದ ಕಾರ್ಯಕ್ರಮಗಳ ಮುಂದೆ ಎಸ್ ಪಿ ಬಾಲಸುಬ್ರಹ್ಮಣ್ಯಂ ನಡೆಸಿಕೊಡುತ್ತಿದ್ದ ಎದೆ ತುಂಬಿ ಹಾಡುವೆನು ಕಾರ್ಯಕ್ರಮದಲ್ಲಿ ಅತಿಯಾದ ರಂಜನೆ, ಅತಿಯಾದ ಆಡಂಬರ ಕಾಣಸಿಗುತ್ತಿರಲಿಲ್ಲ. ಸಂಗೀತಕ್ಕೆ ಆದ್ಯತೆ, ಎಲ್ಲರನ್ನು ಪ್ರೋತ್ಸಾಹಿಸುವ ಕೆಲಸ ಈ ಕಾರ್ಯಕ್ರಮದಿಂದ ನಡೆಯುತ್ತಿತ್ತು. ಸ್ಪರ್ಧೆಯಿಂದ ದೂರ ಉಳಿಯಬೇಕಾದವರನ್ನು ಅಳುವಂತೆ ಮಾಡಿ ಟಿಆರ್ಪಿ ಹೆಚ್ಚಿಸಿಕೊಳ್ಳುವ ಕೆಲಸಕ್ಕೆ ಈ ಕಾರ್ಯಕ್ರಮ ಎಂದೂ ಕೈ ಹಾಕಲಿಲ್ಲ. ಈ ಕಾರ್ಯಕ್ರಮದಿಂದ ಹಲವಾರು ಪ್ರತಿಭೆಗಳಿಗೆ ಸಿನಿಮಾಗಳಲ್ಲಿ ಹಾಡಲು ಅವಕಾಶ ಲಭಿಸಿದೆ.

ಇನ್ನು ಥಟ್ ಅಂತ ಹೇಳಿ ಎಂಬ ರಸಪ್ರಶ್ನೆಯ ಬಗ್ಗೆ, ನಿರೂಪಣೆಯಲ್ಲಿ ಏಕತಾನತೆ ಹೊಂದಿದೆಯೆಂದು ಅಭಿಪ್ರಾಯಪಡುತ್ತಾರಾದರೂ, ಜ್ಞಾನಾರ್ಜನೆಗೆ, ನಿರೂಪಕರಾದ ಡಾ. ನಾ ಸೋಮೇಶ್ವರ ನಡೆಸಿಕೊಡುವ ಕಾರ್ಯಕ್ರಮದಲ್ಲಿ ಮೂಡಿ ಬರುವ ಹಲವಾರು ಪುಸ್ತಕಗಳು, ಅವುಗಳ ಪರಿಚಯ ಹಲವು ಜನರನ್ನು ಆಕರ್ಷಿಸಿದೆ. ೩೦೦೦ಕ್ಕೂ ಹೆಚ್ಚು ಸಂಚಿಕೆಗಳು ಪ್ರಕಟವಾಗಿವೆ ಹಾಗೂ ದೂರದರ್ಶನದ ಕೆಲವೇ ಕೆಲವು ಕಾರ್ಯಕ್ರಮಗಳಲ್ಲಿ ಆಸ್ಥೆಯಿಂದ ನೋಡುವ ಕಾರ್ಯಕ್ರಮ ಇದಾಗಿದೆ ಎಂದರೆ ತಪ್ಪಾಗಲಾರದು.

ಇನ್ನು ದೂರದರ್ಶನದಲ್ಲಿ ಪ್ರಕಟವಾದ ಮೊಟ್ಟ ಮೊದಲ ದೈನಂದಿನ ಧಾರಾವಾಹಿ “ಮಾಯಾಮೃಗ” ನಾಲ್ಕು ಸಾಮಾನ್ಯ ಮನೆಗಳ ಕಥೆಗಳನ್ನು ತೆಗೆದುಕೊಂಡು ನಿರ್ದೇಶಕ ಟಿ ಏನ್ ಸೀತಾರಾಮ್ ಈ ವಿಶೇಷ ಪ್ರಯತ್ನಕ್ಕೆ ಕೈ ಹಾಕಿದರು. ಮೊದಲೆಲ್ಲ ಈ ಪ್ರಯತ್ನ ಫಲಕಾರಿಯಾಗುವುದೋ ಇಲ್ಲವೋ ಎಂಬ ಅನುಮಾನವಿತ್ತಾದರೂ, ಮುಂದಿನ ದಿನಗಳಲ್ಲಿ ದೈನಂದಿನ ಧಾರಾವಾಹಿಗೆ ಮುನ್ನುಡಿ ಬರೆದದ್ದು ಮಾಯಾಮೃಗ. ಇಂದಿನ ಧಾರಾವಾಹಿಗಳಲ್ಲಿ ಬರುವ ಇಬ್ಬರ ನಡುವಿನ ಕಲಹ, ಅತ್ತೆ ಸೊಸೆ ಜಗಳ, ಗಂಡ ಹೆಂಡತಿ ವೈಮನಸ್ಸು ಇವಾವುದನ್ನೂ ತೋರಿಸದೆ ಸಾತ್ವಿಕ ರೀತಿಯ ಧಾರಾವಾಹಿಯನ್ನು ಅಂದು ನಿರ್ದೇಶಿಸಿದ್ದರು. ಇದರಲ್ಲಿ ಬರುವ ನ್ಯಾಯಾಲಯದ ಸೀನುಗಳು ನಿಜವೇನೋ ಎಂಬಂತೆ ಚಿತ್ರಿಸಿದ್ದ ಸೀತಾರಾಮ್ ಅವರಿಗೊಂದು ವಿಶೇಷ ಅಭಿಮಾನಿ ವರ್ಗ ಹುಟ್ಟಿಕೊಂಡಿತು.

(ಪ್ರವೀಣ್ ಪಟವರ್ಧನ್, ವಿ ಎಸ್ ಕೆ ಸಂಯೋಜಕ, ಐ ಟಿ ಉದ್ಯೋಗಿ)
  • email
  • facebook
  • twitter
  • google+
  • WhatsApp
Tags: #ಕನ್ನಡಕ್ಕಾಗಿ_ಲಿಂಕ್_ಒತ್ತಿ#ಕನ್ನಡದನೆನಪು#ರಾಜ್ಯೋತ್ಸವ_ವಿಶೇಷPraveen Patavardhan

Related Posts

News Digest

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

May 20, 2022
News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
News Digest

Sanskrit most requested language on Google Translate

May 13, 2022
News Digest

Kerala Fire cop arrested in connection with murder of RSS activist shrinivasan

May 11, 2022
News Digest

ಶ್ರದ್ಧೆ, ಸಮರ್ಪಣಾ ಭಾವದಿಂದ ಸಾಧನೆ ಮಾಡಿದರೆ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ – ಮಂಗೇಶ್ ಭೇಂಡೆ

May 9, 2022
Next Post
ಆರೆಸ್ಸೆಸ್ ನ ಹಿರಿಯ ಪ್ರಚಾರಕ ಶ್ರೀ ‌ಶಿವಶಂಕರ್ ನಿಧನ  #ಶ್ರದ್ಧಾಂಜಲಿ #ಓಂ_ಶಾಂತಿ

ಆರೆಸ್ಸೆಸ್ ನ ಹಿರಿಯ ಪ್ರಚಾರಕ ಶ್ರೀ ‌ಶಿವಶಂಕರ್ ನಿಧನ #ಶ್ರದ್ಧಾಂಜಲಿ #ಓಂ_ಶಾಂತಿ

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

Osama Bin Laden killed: US, Obama confirms

Osama Bin Laden killed: US, Obama confirms

May 2, 2011
Narmada KumbhMela from 10th Feb,2011: ನರ್ಮದೆಯ ದಡದಲ್ಲಿ ಸಾಮರಸ್ಯದ ಕುಂಭಮೇಳ

Narmada KumbhMela from 10th Feb,2011: ನರ್ಮದೆಯ ದಡದಲ್ಲಿ ಸಾಮರಸ್ಯದ ಕುಂಭಮೇಳ

January 27, 2011
Al-Qaeda’s new chief, and its war within: An analysis

Al-Qaeda’s new chief, and its war within: An analysis

June 16, 2011
RSS reacts; press release strongly condemns Media for Fake News on RSS Chief Mohan Bhagwat

RSS reacts; press release strongly condemns Media for Fake News on RSS Chief Mohan Bhagwat

March 4, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In