• Samvada
Tuesday, May 24, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ನಿವೃತ್ತ ನ್ಯಾಯಮೂರ್ತಿ ಎಂ ರಾಮಾ ಜೋಯಿಸ್ ನಿಧನ: ಆರೆಸ್ಸೆಸ್ ನ ದತ್ತಾತ್ರೇಯ ಹೊಸಬಾಳೆ, ವಿ ನಾಗರಾಜ, ಸಂತಾಪ

Vishwa Samvada Kendra by Vishwa Samvada Kendra
February 16, 2021
in Others
250
0
ನಿವೃತ್ತ ನ್ಯಾಯಮೂರ್ತಿ ಎಂ ರಾಮಾ ಜೋಯಿಸ್ ನಿಧನ: ಆರೆಸ್ಸೆಸ್ ನ  ದತ್ತಾತ್ರೇಯ ಹೊಸಬಾಳೆ, ವಿ ನಾಗರಾಜ, ಸಂತಾಪ
491
SHARES
1.4k
VIEWS
Share on FacebookShare on Twitter

ಜಾರ್ಖಂಡ, ಬಿಹಾರ ರಾಜ್ಯಗಳ ಪೂರ್ವ ರಾಜ್ಯಪಾಲರಾಗಿದ್ದ, ಕರ್ನಾಟಕದ ಶಿವಮೊಗ್ಗ ಜಿಲ್ಲೆಯವರಾದ ಎಂ ರಾಮಾ ಜೋಯಿಸ್ ಇಂದು ನಿಧನರಾಗಿದ್ದಾರೆ. ಪಂಜಾಬ್ ಮತ್ತು ಹರ್ಯಾಣ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ನಿವೃತ್ತರಾಗಿದ್ದ ರಾಮಾಜೋಯಿಸರು ರಾಜ್ಯ ಸಭಾ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದವರು. ಅವರಿಗೆ ೯೦ ವರ್ಷ ವಯಸ್ಸಾಗಿತ್ತು.

ನ್ಯಾ. ರಾಮಾ ಜೋಯಿಸ್

೧೯೩೧ ರಲ್ಲಿ ಜನಿಸಿದ ಎಂ (ಮಂಡಗದ್ದೆ) ರಾಮಾ ಜೋಯಿಸ್ ಅವರು ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ತಮ್ಮ ಓದು ಮುಗಿಸಿ, ಬಿಎ ಬಿಎಲ್ ಪದವಿಗಳಿಸಿದರು. ರಾಮಾ ಜೋಯಿಸರು ವಿದ್ಯಾರ್ಥಿ ದೆಸೆಯಲ್ಲೇ ಆರೆಸ್ಸೆಸ್ ನ ಸ್ವಯಂಸೇವಕರಾದರು. ಬಡತನದ ಕಾರಣದಿಂದಾಗಿ ಹೆಚ್ಚು ಓದಲು ಆಗದಿದ್ದ ಸಂದರ್ಭದಲ್ಲಿ, ಶಾಲಾ ಶಿಕ್ಷಕರಾಗಿ ವೃತ್ತಿ ಆರಂಭಿಸಬೇಕೆಂದು ಗುರಿಹೊಂದಿದ್ದ ರಾಮಾಜೋಯಿಸರು ಆರೆಸ್ಸೆಸ್ ನ ಯಾದವ ರಾವ್ ಜೋಶಿಯವರ ಸಂಪರ್ಕಕ್ಕೆ ಬಂದನಂತರದಲ್ಲಿ, ಅವರ ಪ್ರೇರಣೆಯಿಂದಾಗಿ ಕಾನೂನು ಪದವಿ ಪಡೆದರು. ಆ ಸಮಯದಲ್ಲಿ ವಿಕ್ರಮ ವಾರ ಪತ್ರಿಕೆಯ ಸಹ ಸಂಪಾದಕರಾಗಿ ಕಾರ್ಯ ನಿರ್ವಹಿಸಿ ಸಂಜೆಯ ಲಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದರು. ೧೯೭೫ರಲ್ಲಿ ಅಂದಿನ ಪ್ರಧಾನಿ, ಶ್ರೀಮತಿ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಹೇರಿದ್ದ ಸಂದರ್ಭದಲ್ಲಿ ರಾಮಾ ಜೋಯಿಸ್ ಅವರು ಬಂಧನದಲ್ಲಿದ್ದ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅದ್ವಾಣಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ನ್ಯಾಯಾಲಯದಲ್ಲಿ ವಾದ ಮಾಡಿದ್ದರಿಂದ, ಅವರನ್ನು ಬೆಂಗಳೂರಿನ ಕಾರಾಗೃಹದಲ್ಲಿ ಬಂಧಿಸಿಡಲಾಗಿತ್ತು. ನ್ಯಾಯ, ಧರ್ಮ, ಇತಿಹಾಸದ ವಿಷಯವಾಗಿ ಹಲವಾರು ಪುಸ್ತಕಗಳನ್ನು ಇವರು ಬರೆದಿದ್ದಾರೆ.

ಶಿವಮೊಗ್ಗದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಂದಿನ ಕಾರ್ಯಕರ್ತರಾಗಿದ್ದಂತಹ ಶ್ರೀ ಕ. ನಾಗರಾಜರಾವ್ ಮತ್ತು ಶ್ರೀ ರಾಮಾಜೋಯಿಸ್ ರವರು, ಕ.ನಾಗರಾಜ ಹೆಸರಿನ ಉತ್ತರಾರ್ಧವನ್ನು ಮತ್ತು ರಾಮಾಜೋಯಿಸ್ ಹೆಸರಿನ ಪೂರ್ವಾರ್ಧವನ್ನು ಸೇರಿಸಿ “ರಾಜಾರಾಮ್ ಬುಕ್ ಹೌಸ್” ಪ್ರಾರಂಭ ಮಾಡಿದರು. ಹೀಗೆ ಶಿವಮೊಗ್ಗದ ಮೊದಲ ಪುಸ್ತಕದ ಅಂಗಡಿಯಾಗಿ ಪ್ರಾರಂಭವಾದದ್ದು, ಕಳೆದ 65 ವರ್ಷಗಳಿಂದ ಶಿವಮೊಗ್ಗದ ಸಾಹಿತ್ಯಾಸಕ್ತರ, ಓದುಗರ ನೆಚ್ಚಿನ ಮೆಚ್ಚಿನ ಆಕರವಾಗಿ ಇಂದಿಗೂ ತನ್ನ ಸೇವೆಯನ್ನು ಸಲ್ಲಿಸುತ್ತಲೇ ಇದೆ. ಹೆಚ್ಚು ಓದಿ

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

ನ್ಯಾ. ರಾಮಾ ಜೋಯಿಸರ ನಿಧನಕ್ಕೆ ಆರೆಸ್ಸೆಸ್ ಸಹಸರಕಾರ್ಯವಾಹರಾದ ಶ್ರೀ ದತ್ತಾತ್ರೇಯ ಹೊಸಬಾಳೆಯವರು ತೀವ್ರ ಸಂತಾಪ ಸೂಚಿಸಿದ್ದಾರೆ. “ಒಬ್ಬ ಧೀಮಂತ ನ್ಯಾಯಾಧೀಶರೂ ರಾಷ್ಟ್ರೀಯತೆಯ ಪ್ರಖರ ಆರಾಧಕರೂ ಸಾಮಾಜಿಕ ಸಂವೇದನಾಶೀಲರೂ ಹಿಂದುತ್ವದರ್ಶನದ ವ್ಯಾಖ್ಯಾನಕಾರರೂ ಆಗಿದ್ದ ಡಾ। ಎಂ. ರಾಮಾಜೋಯಿಸರು ಅತ್ಯಂತ ಸರಳ ಜೀವನಕ್ಕೆ ದ್ಯೋತಕವಾಗಿದ್ದವರು. ಹಲವು ವಿಚಾರಪೂರ್ಣ ಗ್ರಂಥಗಳ ಲೇಖಕರಾಗಿಯೂ ಅವರು ರಾಷ್ಟ್ರಸೇವೆಗೈದ ಆದರ್ಶ ಸ್ವಯಂಸೇವಕರು.
ಅವರ ನಿಧನ ತುಂಬಲಾರದ ತೆರವನ್ನುಂಟುಮಾಡಿದೆ. ಸಾರ್ಥಕ ಬಾಳಿನ ಈ ತಪಸ್ವಿಗೆ ಚಿರವಿದಾಯ ಹೇಳುತ್ತಾ ಅವರು ನನಗೆ ನೀಡಿದ ಪ್ರೇರಣೆ-ಮಾರ್ಗದರ್ಶನಗಳಿಗಾಗಿ ನಾನು ಋಣಿ ಎಂದು ಅವರ ಸ್ಮೃತಿಗೆ ಶಿರಬಾಗುತ್ತೇನೆ. ರಾಮಾಜೋಯಿಸರಿಗೆ ಭಾವಪೂರ್ಣ ಶ್ರದ್ಧಾಂಜಲಿಗಳು. ದಿವಂಗತ ಆತ್ಮವನ್ನು ಪರಮಾತ್ಮ ತನ್ನಲ್ಲಿ ಲೀನಗೊಳಿಸಲಿ” ಎಂದು ತಮ್ಮ ಸಂದೇಶದಲ್ಲಿ ಶ್ರೀ ದತ್ತಾತ್ರೇಯ ಹೊಸಬಾಳೆಯವರು ತಿಳಿಸಿದ್ದಾರೆ.

ಸಹಸರಕಾರ್ಯವಾಹರಾದ ಶ್ರೀ ದತ್ತಾತ್ರೇಯ ಹೊಸಬಾಳೆ

ಮಾನ್ಯ ರಾಮಾಜೊಯಿಸರು ನಮ್ಮ ರಾಷ್ಟ್ರ ಕಂಡ ಅಪರೂಪದ ನ್ಯಾಯಮೂರ್ತಿಗಳು. ತಪಸ್ವಿಯಂತೆ ಸಾರ್ಥಕ ಬದುಕನ್ನು ನಡೆಸಿದವರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶ್ರದ್ಧಾವಂತ ಸ್ವಯಂಸೇವಕರು. ಅವರಿಗೆ ಸಂಘದ ಶ್ರದ್ಧಾಪೂರ್ವಕ ನಮನಗಳು. ಎಂದು ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳನ್ನೊಳಗೊಂಡ ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರದ ಮಾನ್ಯ ಸಂಘಚಾಲಕರಾದ ಶ್ರೀ ವಿ ನಾಗರಾಜ ತಮ್ಮ ಶ್ರದ್ಧಾಂಜಲಿಯನ್ನು ಅರ್ಪಿಸಿದ್ದಾರೆ.

ದಕ್ಷಿಣ ಮಧ್ಯ ಕ್ಷೇತ್ರದ ಮಾನ್ಯ ಸಂಘಚಾಲಕರಾದ ಶ್ರೀ ವಿ ನಾಗರಾಜ

ಇಂದು ಚಾಮರಾಜಪೇಟೆ ರುದ್ರಭೂಮಿಯಲ್ಲಿ ಸಂಜೆ 4:30 ಕ್ಕೆ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

  • email
  • facebook
  • twitter
  • google+
  • WhatsApp
Tags: Former Chief JusticeRamaJois

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
Godse’s visit to RSS event? Vadiraj in his article throws more light on lies peddled

ಬೆಂಗಳೂರು ವಿವಿಯಲ್ಲಿ ಎಚ್ ಎಸ್ ದೊರೆಸ್ವಾಮಿ ಅಧ್ಯಯನ ಪೀಠ?ಸ್ವಾತಂತ್ರ್ಯ ಹೋರಾಟಕ್ಕೆ, ಗಾಂಧೀವಾದಕ್ಕೆ ಮಾಡುವ ಅವಮಾನವಾಗುವುದು : ಮಂಜುನಾಥ ಅಜ್ಜಂಪುರ

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

Gou Gram Yatra enters Karnataka

Gou Gram Yatra enters Karnataka

February 20, 2010
VHP passes 5 major resolutions, says ‘No Masjid will be allowed in Temple City of Ayodhya’

VHP passes 5 major resolutions, says ‘No Masjid will be allowed in Temple City of Ayodhya’

January 6, 2013

ಸೇವಾ ಭಾರತಿ ಟ್ರಸ್ಟ್ ಸೇವೆಗೆ ಶ್ಲಾಘನೆ

May 26, 2011
Photo Gallery-2 Hindu Shakti Sangama-2012

Photo Gallery-2 Hindu Shakti Sangama-2012

January 27, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In