• Samvada
Friday, May 20, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home BOOK REVIEW

ಜಗತ್ತು ಗೆದ್ದವನಿಂದ ಸಾವಿಗೆ ‌ತೊಡೆ ತಟ್ಟಿದವರ ವರೆಗಿನ ಜೀವಂತ ಬದುಕುಗಳು ‘ಗಂಧದ ಮಾಲೆ’ಯಲ್ಲಿದೆ.

Vishwa Samvada Kendra by Vishwa Samvada Kendra
December 29, 2020
in BOOK REVIEW, News Digest
250
0
ಜಗತ್ತು ಗೆದ್ದವನಿಂದ ಸಾವಿಗೆ ‌ತೊಡೆ ತಟ್ಟಿದವರ ವರೆಗಿನ  ಜೀವಂತ ಬದುಕುಗಳು ‘ಗಂಧದ ಮಾಲೆ’ಯಲ್ಲಿದೆ.
491
SHARES
1.4k
VIEWS
Share on FacebookShare on Twitter
ಲೇಖಕರು: ರೋಹಿತ್ ಚಕ್ರತೀರ್ಥ
ಪ್ರಕಾಶಕರು: ಅಯೋಧ್ಯೆ ಪ್ರಕಾಶನ
ಪುಸ್ತಕಗಳಿಗಾಗಿ ಸಂಪರ್ಕಿಸಿ: 9620916996
ಪುಸ್ತಕ ಪರಿಚಯ : ಸಚಿನ್ ಪಾರ್ಶ್ವನಾಥ್

ಈ ಪುಸ್ತಕದ ಕರ್ತೃ ರೋಹಿತ್ ಚಕ್ರತೀರ್ಥ. ರಾಶಿ ರಾಶಿ ಮಾಹಿತಿಗಳ ಆಸ್ಥೆಯಿಂದ ಆರಿಸಿ ತಂದು ತಂದು ಚಂದದ ಮಾಲೆ ಕಟ್ಟುವುದು ರೋಹಿತರಿಗೆ ಸಿದ್ಧಿಸಿದ ವಿದ್ಯೆ. ಅವರ ಅಂಕಣಗಳ ಗುಚ್ಛವೇ ಈ ಗಂಧದ ಮಾಲೆ. ಬದುಕಿನಲ್ಲಿ ಎಷ್ಟೇ ವೈರುಧ್ಯವಿರಲಿ, ವ್ಯಸ್ತತೆಯಿರಲಿ ಎಲ್ಲವನ್ನೂ ಬದಿಗೆ ಸರಿಸಿ ಒಮ್ಮೆ ಅವರ ಯಾವುದಾದರೊಂದು ಪುಸ್ತಕ ತೆರೆಯಿರಿ. ತುಟಿಯ ಮೇಲೆ ಒಂದು ಪುಟ್ಟ ನಗು, ಕಣ್ಣುಗಳಲ್ಲಿ ನಿಲ್ಲದೇ ಓಡುವ ಕಾತುರ ಎಲ್ಲಿಯಾದರೂ ನಿಂತಿತು ಎಂದರೆ ಕೇಳಿ. ಮಿಗಿಲಾಗಿ ಈ ಸಾಲುಗಳು ನನ್ನ ವಿಮರ್ಶೆಯಲ್ಲ, ನನ್ನ ಅನುಭವ.

ಶ್ರೀ ರೋಹಿತ್ ಚಕ್ರತೀರ್ಥ ಅವರು ದಿನಪತ್ರಿಕೆಗೆ‌ ಬರೆಯುತ್ತಿದ್ದ ವ್ಯಕ್ತಿಚಿತ್ರಗಳ ಸಂಗ್ರಹ ಈ ಗಂಧದ ಮಾಲೆ. ಇನ್ನಷ್ಟು ಬೇಕೆನಿಸುವ ರುಚಿ ಹುಟ್ಟಿಸುವ ಹಲವು ವಿಶಿಷ್ಟತೆಗಳ ಸಂಗ್ರಹ. ನಿಮ್ಮ ಮೇಜಿನ ಮೇಲಿನ ಕಾಫಿ ಹಾಗೇ‌ ಇರುತ್ತದೆ, ಆದರೆ ಪುಸ್ತಕದೊಳಗಿನ ನಿಮ್ಮ ತಲೆಯನ್ನು ಹೊರ ಜಗತ್ತಿಗೆ ಬಿಡದಷ್ಟು ಕುತೂಹಲ ಕಟ್ಟುವ ಪುಸ್ತಕ. ಓದಲು ಕುಳಿತಿರೆಂದರೆ ಪದಗಳ ಪರ್ಯಟನೆಗೆ ಕುಳಿತಂತೆ. ಅಮೆರಿಕೆಯ ಈಸಿ ಎಡ್ಡಿಯಿಂದ ಹಿಡಿದು ವಿರಾಟ್ ಕೊಹ್ಲಿ, ಕಲ್ಪನಾ ಚಾವ್ಲಾ ಹೀಗೆ ಹಲವರು ತಮ್ಮ ಬಗ್ಗೆ ಹೇಳುತ್ತಾರೆ. ಬದುಕು ಕಟ್ಟಿಕೊಂಡವನ ಕತೆಯಿಂದ ಹಿಡಿದು ನಾಡು ಕಟ್ಟಿದವ, ದೇಶ ಕಟ್ಟಿದವ, ಜಗತ್ತು ಗೆದ್ದವ ಕೊನೆಗೆ ಸಾವಿಗೂ ‌ತೊಡೆ ತಟ್ಟಿದವರ ಜೀವಂತ ಬದುಕುಗಳಿದೆ. ಎಲ್ಲಿಯ ತನಕ ಎಂದರೆ ಅಕ್ಷರಮತ್ತನಾದ ಓದುಗನ ಪಾತ್ರಗಳು ಬಂದು ತೋಳುಗಳಿಗೆ ಭುಜ ಕೊಟ್ಟು ದೂರ ಒಯ್ದಂತೆ.

READ ALSO

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

ಗಂಧದ ಮಾಲೆ ಹೊತ್ತಿಗೆಯ ಒಂದೆರಡು ತುಣುಕುಗಳ ಹಂಚಿಕೊಳ್ಳುವೆ. ಪುಟ್ಟ ಕಂದಮ್ಮಗಳ ಚಂದದ ಕಿರು ಪದ್ಯಗಳ ಹೆಕ್ಕಿ ತಂದು ಗಂಧದ ಮಾಲೆಗೆ ಘಮ್ಮೆನ್ನುವ ಗುಲಾಬಿ ಬಣ್ಣದ ಹೂಗಳ ಪೊಣಿಸಿದ್ದಾರೆ.

ಈ ಒಂದು ಮನೆಯನ್ನು

ನಾವು ಬಿಡುತ್ತಿದ್ದೇವೆ

ಆ ಮನೆಗೆ ಬೇರೆಯವರು

ಬರುತ್ತಾರೆ

ಇದು ಅಕಾಲಿಕ ಮರಣ ಹೊಂದಿದ ಹತ್ತರ ಹರೆಯದ ಪೂರ್ಣನ ಕವಿತೆ ಎಂದರೆ ನೀವು ನಂಬಲೇಬೇಕು. ಇನ್ನೊಂದು ಘಟನೆ. ತನ್ನ ನಾಯಿಯ ಕಳೆದುಕೊಂಡ ಪುಟ್ಟ ಬಾಲಕನ ಕುರಿತು.

ಕ್ಯಾನ್ಸರ್ ಪೀಡಿತ ಕೊನೆಯ ಹಂತದಲ್ಲಿದ್ದ ಸಾಕು ನಾಯಿ ಬೇಲ್ಕರ್‌ಗೆ ದಯಾಮರಣದ ಚುಚ್ಚುಮದ್ದು ಕೊಟ್ಟ ಡಾಕ್ಟರ್ ಮೈಕ್ ಶಿಷ್ಟಾಚಾರ ಪಾಲಿಸಿ, ರಾನ್ ಕುಟುಂಬದೊಂದಿಗೆ ಕೆಲವು ನಿಮಿಷಗಳನ್ನು ಕಳೆದರು. ಬೆಕ್ಕು ನಾಯಿಗಳಿಗೆಲ್ಲ ಹೆಚ್ಚೆಂದರೆ 12 ವರ್ಷ ಬದುಕುತ್ತವೆ. ಪಾಪ ಅಷ್ಟು ಚಿಕ್ಕ ಆಯುಸ್ಸನ್ನು ದೇವರು ಯಾಕೆ ಕೊಟ್ಟನೋ ಏನೋ – ಎಂಬ ಮಾತು ಬಂತು. ಅದುವರೆಗೆ ಆ ಎಲ್ಲ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದ ರಾನ್ ಮಗ ಶೇನ್ ಥಟ್ಟನೆ “ಯಾಕೆ ಅನ್ನೋದು ನನಗೆ ಗೊತ್ತು ಡಾಕ್ಟರ್” ಎಂದ.

“ಹೌದ?”

“ಹೌದು” ಎನ್ನುತ್ತಾ ಎಲ್ಲರ ಮಧ್ಯೆ ಜಿಗಿದು ಡಾಕ್ಟರ್ ಮೈಕ್ ರನ್ನು ನೋಡುತ್ತ ಹೇಳಿದ “ನೋಡಿ ಡಾಕ್ಟರ್, ಈಗ ಮನುಷ್ಯ 100 ವರ್ಷ ಬದುಕ್ತಾ‌ನೆ. ಯಾಕೆ ಅಷ್ಟು ದೊಡ್ಡ ಲೈಫ್ ಕೊಟ್ಟಿದ್ದಾನೆ ದೇವರು ಹೇಳಿ. ಯಾಕೇ ಅಂದ್ರೆ ಮನುಷ್ಯ ಹುಟ್ಟಿದ ಮೇಲೆ ಬೇರೆಯವರ ಜೊತೆ ಹೊಂದಿಕೊಂಡು ಹೋಗೋದನ್ನು ಕಲೀಬೇಕು. ಎಲ್ಲರನ್ನೂ ಪ್ರೀತಿಯಿಂದ ನೋಡೋದನ್ನು ಕಲೀಬೇಕು. ಮನೆಯವರ ಜೊತೆ ಯಾವತ್ತೂ ಖುಷಿಯಾಗಿರೋದು ಹೇಗೆ ಅನ್ನೋದನ್ನು ಕಲೀಬೇಕು. ಪ್ರಾಮಾಣಿಕನಾಗಿರುವುದನ್ನು ಕಲೀಬೇಕು. ಇಷ್ಟೆಲ್ಲಾ ವಿಷಯ ಕಲಿತು ಅಳವಡಿಸಿಕೊಂಡು ಬದುಕಬೇಕು ಅಂದ್ರೆ ನೂರು ವರ್ಷ ಬೇಕು. ಆದ್ರೆ ನಾಯಿಗೆ ಅದೆಲ್ಲ ವಿಷಯ ಕಲೀಬೇಕಾದ ಅಗತ್ಯವೇ ಇರೋದಿಲ್ಲ. ಯಾಕೇಂದ್ರೆ ಹೊಂದಿಕೊಂಡು ಹೋಗೋದು, ಪ್ರೀತಿ ಮಾಡೋದು, ಪ್ರಾಮಾಣಿಕನಾಗಿರೋದು ಇವನ್ನೆಲ್ಲ ಅದು ಹುಟ್ತಾನೇ ಕಲ್ತೇ ಬಂದಿರೋದ್ರಿಂದ, ಇಲ್ಲಿ ಈ ಜಗತ್ತಲ್ಲಿ ಕೇವಲ ಬದುಕಿಹೋದ್ರೆ ಆಯ್ತು ನೋಡಿ! ಅದಕ್ಕೆ ದೇವರು ನಾಯಿಗೆ 12 ವರ್ಷ ಬದುಕೋದಕ್ಕೆ ಅಂತ ಮಾತ್ರ ಕೊಟ್ಟಿದ್ದಾನೆ.”

ಎಂತಹ ಘಟನೆ. ಇಂತಹ ನೂರಾರು ಘಟನೆಗಳ ಸಂಗ್ರಹ ರೋಹಿತ್‌ಚಕ್ರತೀರ್ಥ ಅವರ ಗಂಧದಮಾಲೆ. ಓದಲೇಬೇಕಾದ ಪುಸ್ತಕ.

ಯಾವುದೇ ವಿಷಯವನ್ನು ಈಚೆಯಿಂದ ಆಚೆಗೆ ಯಾರಾದರೂ ಮುಟ್ಟಿಸಿ ಬಿಡುತ್ತಾರೆ. ಆದರೆ ತನ್ನತನವನ್ನು ಬೆರೆಸುವುದು ಆ ವಿಷಯವನ್ನು ಅರ್ಥೈಸಿಕೊಂಡವರಿಗೆ ಮಾತ್ರ ಸಾಧ್ಯ. ಅನವರತ ಮಮತೆಯಿಂದ ಚಕ್ರತೀರ್ಥ ಅವರು ಪುಟ್ಟ ಪುಟ್ಟ ವೈಶಿಷ್ಟ್ಯತೆಗಳನ್ನು ಹೆಕ್ಕಿ ಪೋಣಿಸಿದ್ದಾರೆ. ಮೂಲ ವಸ್ತುವಿಗೆ ಧಕ್ಕೆ ಬಾರದಂತೆ ಆಪ್ತತೆಯ ಹೆಣೆಯುವ ಕೆಲಸ ಅವರಿಗೆ ಸಿದ್ಧಿಸಿದೆ. ಒಮ್ಮೆಯಾದರೂ ಗಂಧದ ಮಾಲೆ ಆಸ್ವಾದಿಸಿ ಬಿಡಿ.

ಪುಸ್ತಕ ಪರಿಚಯ : ಸಚಿನ್ ಪಾರ್ಶ್ವನಾಥ್
ಬ್ಯಾಂಕ್ ಉದ್ಯೋಗಿ ಮತ್ತು ಹವ್ಯಾಸಿ ಬರಹಗಾರ, ಸಾಗರ, ಶಿವಮೊಗ್ಗ
  • email
  • facebook
  • twitter
  • google+
  • WhatsApp

Related Posts

News Digest

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

May 20, 2022
News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
News Digest

Sanskrit most requested language on Google Translate

May 13, 2022
News Digest

Kerala Fire cop arrested in connection with murder of RSS activist shrinivasan

May 11, 2022
News Digest

ಶ್ರದ್ಧೆ, ಸಮರ್ಪಣಾ ಭಾವದಿಂದ ಸಾಧನೆ ಮಾಡಿದರೆ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ – ಮಂಗೇಶ್ ಭೇಂಡೆ

May 9, 2022
Next Post
ಕುವೆಂಪು ಅವರ 56 ಪುಸ್ತಕಗಳು ಇ–ಪುಸ್ತಕಗಳ ರೂಪದಲ್ಲಿ ಲಭ್ಯ

ಕುವೆಂಪು ಅವರ 56 ಪುಸ್ತಕಗಳು ಇ–ಪುಸ್ತಕಗಳ ರೂಪದಲ್ಲಿ ಲಭ್ಯ

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

Pungava-ENGLISH-special issue on Hindu Shakti Sangama-2012

Pungava-ENGLISH-special issue on Hindu Shakti Sangama-2012

March 14, 2012
Hindu Munnani demands to Hand over Hindu places of worship to trusts in Tamilnadu

Hindu Munnani demands to Hand over Hindu places of worship to trusts in Tamilnadu

June 9, 2015
Story: Son of a farmer develops deweeding equipment from waste #AtmanirbharBharat

Story: Son of a farmer develops deweeding equipment from waste #AtmanirbharBharat

July 18, 2020
Suresh Bhaiyyaji Joshi re-elected as SARAKARYAVAH of RSS till 2021

Statement issued by RSS Sarkaryavaha Shri Suresh ( Bhayya ji ) Joshi

April 2, 2018

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಸಂತ ಪದವಿಯ ತನಕದ ೩೫೦ ವರ್ಷಗಳ ವ್ಯವಸ್ಥಿತ ಷಡ್ಯಂತ್ರ – ಒಂದು ಮತಾಂತರದ ಕಥೆ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In