• Samvada
Monday, May 23, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

RSS Saharakaryavah Dattatreya Hosabale, Governor VR Vala attends inaugural of SAMUTKARSH at Hubballi

Vishwa Samvada Kendra by Vishwa Samvada Kendra
April 13, 2016
in Others
240
0
RSS Saharakaryavah Dattatreya Hosabale, Governor VR Vala attends inaugural of SAMUTKARSH at Hubballi
491
SHARES
1.4k
VIEWS
Share on FacebookShare on Twitter

Hubballi April 8: RSS Sahsarakaryavah Dattatreya Hosabale, Karnataka Governor Vajubhai R Vala along with other prominent functionaries attended the inaugural ceremony of SAMUTKARSH, a new project for training IAS, launched at Hubballi on April 07, Thursday.

image2

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

MPS_1759

ರಾಜ್ಯಪಾಲ ವಾಜುಭಾಯಿ ವಾಲಾ ಸಲಹೆ

ದೇಶದ ಅಭಿವೃದ್ಧಿಗೆ ಪ್ರಾಮಾಣಿಕ-ದಕ್ಷ ಅಧಿಕಾರಿಗಳು ಅವಶ್ಯ

ಹುಬ್ಬಳ್ಳಿ: ದೇಶವನ್ನು ಸಮರ್ಥವಾಗಿ ನಿರ್ಮಾಣ ಮಾಡಲು ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಗಳ ಅವಶ್ಯಕತೆಯಿದೆ ಎಂದು ರಾಜ್ಯಪಾಲ ವಾಜುಭಾಯಿ ವಾಲಾ ಹೇಳಿದರು.

ನಗರದ ಖಾಸಗಿ ಹೊಟೇಲ್‌ನಲ್ಲಿ ನಾಗರಿಕ ಸೇವೆಗಳಲ್ಲಿ ಉದ್ಯೋಗಾವಕಾಶ ಕುರಿತು ನಾಗರಿಕ ಸೇವಾ ಪರೀಕ್ಷೆ ಪ್ರಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವ ದೃಷ್ಟಿಯಿಂದ ಆರಂಭವಾದ ಸಮುತ್ಕರ್ಷ ಹೆಸರಿನ ಟ್ರಸ್ಟ್ ಉದ್ಘಾಟಿಸಿ ಅವರು ಮಾತನಾಡಿದರು.

ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಶಕ್ತಿ ಐಎಎಸ್ ಅಧಿಕಾರಿಗಳಿಂದ ಮಾತ್ರ ಸಾಧ್ಯ. ಯಾವುದೇ ಸರ್ಕಾರ ಉತ್ತಮ ಕಾರ್ಯ ನಿರ್ವಹಿಸಬೇಕಾದರೂ ಅವರ ಮಾರ್ಗದರ್ಶನ ಅವಶ್ಯ. ಹೀಗಾಗಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳನ್ನು ರೂಪಿಸುವ ಕೆಲಸವಾಗಬೇಕು. ಅಂತಹ ಸಾಕಷ್ಟು ಅಧಿಕಾರಿಗಳು ನಮ್ಮಲ್ಲಿದ್ದಾರೆ. ಅವರನ್ನು ಜಗೃತಗೊಳಿಸುವ ಕೆಲಸವಾಗಬೇಕು ಎಂದು ಸಲಹೆ ನೀಡಿದರು.

ದೇಶದಲ್ಲಿ ಪ್ರಾಮಾಣಿಕತೆ, ಏಕತೆ ಇಲ್ಲದಿರುವುದರಿಂದ ಹಲವರು ನಮ್ಮನ್ನು ಆಳಿದರು. ಮತ್ತೆ ಇದು ಮರುಕಳಿಸಬಾರದು ಎಂದರೆ ಏಕತೆ ಹಾಗೂ ಪ್ರಾಮಾಣಿಕತೆಯ ಅವಶ್ಯಕತೆಯಿದೆ. ಚರಿತ್ರೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.

ದೇಶದಲ್ಲಿ ಶೇ.೬೫ರಷ್ಟು ಯುವ ಸಮೂಹ ಇದ್ದು, ಯಾರಿಂದಲೂ ದೇಶದ ಶಕ್ತಿ ಕುಗ್ಗಿಸಲು ಸಾಧ್ಯವಿಲ್ಲ. ಅವರಲ್ಲಿ ಚಾರಿತ್ರ್ಯ, ರಾಷ್ಟ್ರೀಯ ಭಾವನೆ ಮೂಡಿಸಬೇಕಾಗಿದೆ. ಪೂರ್ವಜರ ಅನುಕರಣೆ ಅವಶ್ಯ. ಚಾಣಕ್ಯನ ರಾಜ್ಯ ನೀತಿ, ಆರ್ಥಿಕ, ವಾಣಿಜ್ಯ, ವ್ಯವಹಾರ ನೀತಿಗಳ ಮಾರ್ಗದರ್ಶನ ಅಗತ್ಯ. ಬ್ರಿಟಿಷರು ಹಾಕಿಕೊಟ್ಟ ಆಡಳಿತದ ನೀತಿಯನ್ನೇ ಮುಂದುವರೆಸಿಕೊಂಡು ಹೋಗುವ ಅಗತ್ಯತೆ ಇಲ್ಲ. ನಮ್ಮ ಅನುಕೂಲಕ್ಕೆ ತಕ್ಕಂತೆ ಆಡಳಿತ ಬದಲಾಯಿಸಿಕೊಳ್ಳಬೇಕು ಎಂದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮಾತನಾಡಿ, ದೇಶದಲ್ಲಿ ಬೋಲೋ ಭಾರತ ಮಾತಾಕೀ ಜೈ ಎಂದರೆ ದೇಶದ್ರೋಹ ಎಂಬಂತಾಗಿದೆ. ಇದು ಹೀಗೇ ಮುಂದುವರೆದರೆ ದೇಶಕ್ಕೆ ದೊಡ್ಡ ಗಂಡಾಂತರ ತಂದೊಡ್ಡುತ್ತದೆ. ಹೀಗಾಗಿ ಈಗಲೇ ಅದನ್ನು ಕಿತ್ತು ಹಾಕಲು ಮುಂದಾಗಬೇಕು. ಅಂದರೆ ಮಾತ್ರ ದೇಶದಲ್ಲಿ ಹಿಂದೂಗಳು ನೆಮ್ಮದಿ ಜೀವನ ನಡೆಸಲು ಸಾಧ್ಯ ಎಂದು ಹೇಳಿದರು.

ದಕ್ಷತೆ, ಪಾರದರ್ಶಕತೆ, ಪ್ರಾಮಾಣಿಕತೆ ಹಾಗೂ ರಾಷ್ಟ್ರಾಭಿಮಾನವುಳ್ಳವರು ಐಎಸ್‌ನಂತಹ ಉನ್ನತ ಹುದ್ದೆಯಲ್ಲಿರಬೇಕು. ದೇಶದ ಮಣ್ಣಿನ ಗುಣಧರ್ಮ ಅರಿತವರಿಗೆ ಆಡಳಿತ ಚುಕ್ಕಾಣಿ ದೊರೆಯುವಂತಾಗಬೇಕು ಎಂದರು.

ಸರ್ಕಾರದ ಕೆಲಸ ದೇವರ ಕೆಲಸ ಎಂದು ವಿಧಾನಸೌಧ ಸೇರಿದಂತೆ ಎಲ್ಲ ಸರ್ಕಾರಿ ಕಚೇರಿಗಳ ಮುಂದೆ ಬರೆಯಲಾಗುತ್ತದೆ. ಅದು ಹೃದಯದಲ್ಲಿಯೂ ಇರಬೇಕು. ಭಗವಂತನ ಆರಾಧನೆ ಮಾಡುವ ಸಂದರ್ಭದಲ್ಲಿ ಇರುವ ಮನಸ್ಸು ಸರ್ಕಾರದ ಕೆಲಸ ಮಾಡುವಾಗ ಇರಬೇಕು. ಆದರೆ ಇಂದಿನ ವ್ಯವಸ್ಥೆ ನೋಡಿದರೆ ಅಂತಹ ಮನಃಸ್ಥಿತಿ ಕಂಡು ಬರುತ್ತಿಲ್ಲ. ಎಲ್ಲೆಡೆ ಭ್ರಷ್ಟಾಚಾರ ತಾಂಡವಾಡುತ್ತಿದೆ. ವ್ಯವಸ್ಥೆ ಬದಲಾವಣೆಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು.

ಜಗತ್ತಿನಲ್ಲಿ ಭಾರತದ ವೈದ್ಯರು, ವಿಜನಿಗಳು ಹಾಗೂ ಎಂಜನಿಯರ್‌ಗಳಿಗೆ ತುಂಬಾ ಗೌರವ ಸೀಗುತ್ತಿದೆ. ಆದರೆ ಅಧಿಕಾರಿಗಳಿಗೆ ಸಿಗುತ್ತಿಲ್ಲ. ಅದು ಬದಲಾಗಬೇಕು. ಮುಂಬರುವ ದಿನಗಳಲ್ಲಿ ಅದಿಕಾರಿಗಳ ಮಹತ್ವ ತಿಳಿಯುತ್ತದೆ. ಐಎಎಸ್ ಎನ್ನುವುದು ಐಸಿಎಸ್‌ನ ಪಳೆಯುಳಿಕೆ ಆಗಿದೆ. ಬ್ರಿಟಿಷರು ತಮ್ಮ ಆಡಳಿತದ ಅನುಕೂಲಕ್ಕೆ ತಕ್ಕಂತೆ ತರಬೇತಿ ನೀಡುವ ಸಂಸ್ಥೆ ಐಸಿಸ್ ಆಗಿತ್ತು. ಹೀಗಾಗಿ ನಮ್ಮ ಆಡಳಿತಕ್ಕೆ ತಕ್ಕಂತೆ ಬದಲಾಗಬೇಕು ಎಂದರು.

ಈ ಸಂದರ್ಭದಲ್ಲಿ ದೆಹಲಿಯ ಸಂಕಲ್ಪ ಸಂಸ್ಥೆಯ ಸಂಸ್ಥಾಪಕ ಸಂತೋಷ ತನೇಜ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಸಹ ಸಂಘಚಾಲಕ ಅರವಿಂದರಾವ್ ದೇಶಪಾಂಡೆ, ಆರೆಸ್ಸೆಸ್‌ನ ಉತ್ತರ ಕರ್ನಾಟಕ ಪ್ರಾಂತ ಪ್ರಚಾರಕ ಶಂಕರಾನಂದಜೀ, ಬಿಜೆಪಿ ರಾಜಧ್ಯಕ್ಷ ಹಾಗೂ ಸಾಂಸದ ಪ್ರಹ್ಲಾದ ಜೋಶಿ, ಸಾಂಸದ ಸುರೇಶ ಅಂಗಡಿ, ಶಾಸಕ ಅರವಿಂದ ಬೆಲ್ಲದ, ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ಲಕ್ಷ್ಮಣ ಸವದಿ ಸೇರಿದಂತೆ ಇತರರು ಇದ್ದರು.

ಸಮುತ್ಕರ್ಷ ಟ್ರಸ್ಟ್‌ನ ಕಾರ್ಯದರ್ಶಿ ಜಿತೇಂದ್ರ ನಾಯಕ ಪ್ರಾಸ್ತಾವಿಕ ಮಾತನಾಡಿದರು. ಪ್ರೊ. ವಿನೋದ ದೇಶಪಾಂಡೆ ಸ್ವಾಗತಿಸಿದರು. ಕ.ವಿ.ವಿ ಸಿಂಡಿಕೇಟ್ ಸದಸ್ಯ ಹರ್ಷವರ್ಧನ ಶೀಲವಂತ ನಿರೂಪಿಸಿದರು. ಸಮುತ್ಕರ್ಷ ಟ್ರಸ್ಟ್‌ನ ಅಧ್ಯಕ್ಷ ಡಾ.ಕ್ರಾಂತಿಕಿರಣ ವಂದಿಸಿದರು.

  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
UTTHAANA’s special issue on Dr BR Ambedkar released ಉತ್ಥಾನ ಮಾಸಪತ್ರಿಕೆಯ ಡಾ| ಅಂಬೇಡ್ಕರ್ ಕುರಿತ ವಿಶೇಷಾಂಕ ಲೋಕಾರ್ಪಣೆ

UTTHAANA's special issue on Dr BR Ambedkar released ಉತ್ಥಾನ ಮಾಸಪತ್ರಿಕೆಯ ಡಾ| ಅಂಬೇಡ್ಕರ್ ಕುರಿತ ವಿಶೇಷಾಂಕ ಲೋಕಾರ್ಪಣೆ

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

 ನೇರನೋಟ: ಭಗವದ್ಗೀತೆ, ಹಿಂದುಸ್ಥಾನ ಎಂದಾಕ್ಷಣ ಕಂಗಾಲಾಗುವುದೇಕೆ?

 ನೇರನೋಟ: ಭಗವದ್ಗೀತೆ, ಹಿಂದುಸ್ಥಾನ ಎಂದಾಕ್ಷಣ ಕಂಗಾಲಾಗುವುದೇಕೆ?

September 22, 2014
ಎಲ್ಲ ವೈವಿಧ್ಯಗಳನ್ನು ಏಕತೆಯ ಸೂತ್ರದಲ್ಲಿ  ಪೋಣಿಸುವುದೇ ಹಿಂದುತ್ವ: ಮೋಹನ್‌ಜೀ ಭಾಗವತ್

ಎಲ್ಲ ವೈವಿಧ್ಯಗಳನ್ನು ಏಕತೆಯ ಸೂತ್ರದಲ್ಲಿ ಪೋಣಿಸುವುದೇ ಹಿಂದುತ್ವ: ಮೋಹನ್‌ಜೀ ಭಾಗವತ್

October 20, 2010
Who will be the next President of India?

Who will be the next President of India?

April 19, 2012
Day-73: Farmers greet Kedilaya, Organic welcome for Bharat Parikrama Yatra at Mudipu-Konaje

Day-73: Farmers greet Kedilaya, Organic welcome for Bharat Parikrama Yatra at Mudipu-Konaje

October 20, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In