• Samvada
  • Videos
  • Categories
  • Events
  • About Us
  • Contact Us
Thursday, March 23, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Articles

ಸ್ವದೇಶೀ ಚಿಂತನೆಯ ಹರಿಕಾರ ರಾಜೀವ್ ದೀಕ್ಷಿತ್

Vishwa Samvada Kendra by Vishwa Samvada Kendra
November 30, 2021
in Articles, Others
251
0
ಸ್ವದೇಶೀ ಚಿಂತನೆಯ ಹರಿಕಾರ ರಾಜೀವ್ ದೀಕ್ಷಿತ್
492
SHARES
1.4k
VIEWS
Share on FacebookShare on Twitter

ಹಲವು ದಶಕಗಳ ಹಿಂದೆ ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದ ಪ್ರಭಾವದಿಂದ ಭಾರತದ ಆರ್ಥಿಕ, ರಾಜತಾಂತ್ರಿಕ, ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲಿ ಸ್ವದೇಶೀ ಚಿಂತನೆಯ ಜಾಗೃತಿ ಮೂಡಿಸಿದವರು ರಾಜೀವ್ ದೀಕ್ಷಿತ್.

READ ALSO

ಮಾತಿನ ಕಠಿಣ ಕ್ರಮ, ಇನ್ನೆಷ್ಟು ದಿನ?

ದೇಶದ ಸುರಕ್ಷತೆಗಾಗಿ ಅಗ್ನಿಪಥ!

ಅದು ವಿದೇಶೀ ಬಹುರಾಷ್ಟ್ರೀಯ ಕಂಪನಿಗಳು ಭಾರತದಲ್ಲಿ ವ್ಯಾಪಾರ ವಹಿವಾಟುಗಳ ಮೂಲಕ ಮಾರುಕಟ್ಟೆಯಲ್ಲಿ ವಿಝ್ರಂಭಿಸುತ್ತಿದ್ದ ಸಮಯ. ಆಧುನಿಕ ಜೀವನ ಶೈಲಿ, ಪ್ರತಿಭಾ ಪಲಾಯನ, ಭಾರತದ ವಿದೇಶೀ ಸಾಲ, ರೂಪಾಯಿ ಅಪಮೌಲ್ಯ, ಕಾಳಧನ ಮತ್ತು ವಿದೇಶೀ ಬಹುರಾಷ್ಟ್ರೀಯ ಕಂಪನಿಗಳಿಂದಾಗುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಆರಂಭಿಸಿದರು.


ಪಾಶ್ಚ್ಯಾತ್ಯ ಸಂಸ್ಕೃತಿಯ ಪ್ರಭಾವದಿಂದ ಬದಲಾಗುತ್ತಿದ್ದ ಪರಿಣಾಮ ಮತ್ತು ಅಭಿವೃದ್ಧಿಗೆ ಮಾರಕವೆನಿಸಿದ್ದ ಪ್ರತಿಭಾ ಪಲಾಯನದಂತಹ ಹಲವಾರು ಸಮಸ್ಯೆಗಳ ಪರಿಹಾರಕ್ಕೆ ಮುಂದಾದರು.
ಉತ್ತರ ಪ್ರದೇಶದ ಆಲಿಘಢ ಸಮೀಪದ ಗ್ರಾಮವೊಂದರ ರೈತರ ಕುಟುಂಬದಲ್ಲಿ ಜನಿಸಿದ ರಾಜೀವ್ ಸ್ವಗ್ರಾಮದಲ್ಲಿ ಆರಂಭಿಕ ಶಿಕ್ಷಣ ಪಡೆದರು.


ಮುಂದೆ ಎಲೆಕ್ಟ್ರಾನಿಕ್ ಎಂಜಿನೀಯರಿಂಗ್ ಪದವಿಯೊಂದಿಗೆ ಸಂಶೋಧನೆಯಲ್ಲೂ ಉನ್ನತ ಶ್ರೇಣಿ ಪಡೆದರು.
ಭಾರತದ ಪ್ರತಿಷ್ಠಿತ ಸಿ.ಎಸ್.ಐ.ಆರ್. ಸಂಸ್ಥೆಯಲ್ಲಿ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸಿದ ಅವರಿಗೆ ಜಾಗತೀಕರಣ, ಖಾಸಗೀಕರಣ ಮತ್ತು ಉದಾರೀಕರಣದಿಂದ ಬದಲಾಗುತ್ತಿದ್ದ ದೇಶದ ಸ್ಥಿತಿ ಚಿಂತೆಗೀಡುಮಾಡಿತು.


ರಾಜೀವರು ವೃತ್ತಿಯನ್ನು ಕೈಬಿಟ್ಟು, ಗುರುಗಳಾದ ಶ್ರೀ ಧರ್ಮಪಾಲ್ ಮತ್ತು ಶತಾಯುಷಿ ಶ್ರೀ ಸುಧಾಕರ ಚತುರ್ವೇದಿಯವರ ಮಾರ್ಗದರ್ಶನದಲ್ಲಿ ರಾಷ್ಟ್ರದ ಪುರ್ನನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು.


ಹಲವಾರು ದೇಶಗಳಿಗೆ ಭೇಟಿಯಿತ್ತ ಅವರು ಇಂಗ್ಲೆಂಡಿನ ಬ್ರಿಟಿಷರ ಲೈಬ್ರರಿಯಲ್ಲಿದ್ದ ಭಾರತದ ಇತಿಹಾಸದ ದಾಖಲೆಗಳ ಸಂಶೋಧನೆ ಮಾಡಿದರು. ಸ್ವಾತಂತ್ರ ಪೂರ್ವ ಮತ್ತು ನಂತರದ ಭಾರತದ ಇತಿಹಾಸ, ಅರ್ಥವ್ಯವಸ್ಥೆ, ಶಿಕ್ಷಣ ವ್ಯವಸ್ಥೆಗಳನ್ನು ಕುರಿತು ಸಂಶೋಧನೆ ಮಾಡಿದರು.


ಸ್ವದೇಶೀ ಸಂಘಟನೆ “ಆಚಾದೀ ಬಚಾವೋ ಅಂದೋಲನ” ಸಂಸ್ಥೆಯ ಮುಖ್ಯ ಪ್ರಭಾರಿಗಳಾಗಿ ಜವಾಬ್ದಾರಿ ಹೊತ್ತರು.
ಸಾಲದ ಬಾಧೆಗೆ ತುತ್ತಾದ ರೈತರ ಆತ್ಮಹತ್ಯೆಗೆ ಪರಿಹಾರ ಕಂಡುಕೊಳ್ಳುತ್ತಾ ವಿಶ್ವ ವ್ಯಾಪಾರ ಒಕ್ಕೂಟದ ನಿಲುವಿನ ವಿರುದ್ಧ, ಗ್ಯಾಟ್ ಒಪ್ಪಂದದ ವಿರುದ್ಧ, ವಿದೇಶೀ ಕಂಪನಿಗಳ ವಿರುದ್ಧ ವೈಚಾರಿಕ ಸಮರ ಸಾರಿದರು.


ಬರಹ ಮತ್ತು ಪ್ರವಚನಗಳಿಂದ ಸ್ವದೇಶೀ ಚಿಂತನೆ ಮತ್ತು ಭಾರತೀಯತೆಯ ಜಾಗೃತಿ ಮೂಡಿಸಲಾರಂಭಿಸಿದರು.
ರಾಸಾಯನಿಕಯುಕ್ತ ಕೀಟನಾಶಕ, ಎಂಡೋಸಲ್ಫಾನ್, ಫಾಸ್ಟ್ ಫುಡ್, ಪೆಪ್ಸಿ-ಕೋಕ್‌ಗಳ ಷಡ್ಯಂತ್ರವನ್ನು ಬಯಲಿಗೆಳೆದರು.
ದೇಶದ ಉದ್ದಗಲಕ್ಕೂ ಸಂಚರಿಸಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ತಮ್ಮ ಉಪನ್ಯಾಸಗಳಿಂದ ಎಲ್ಲರನ್ನೂ ಎಚ್ಚರಿಸಿದರು.
ಗಾಂಧೀಜಿಯವರ ಖಾದೀ-ಗ್ರಾಮ ಸ್ವರಾಜ್ಯಯ ಚಿಂತನೆಗಳು ಎಂದಿಗೂ ಪ್ರಸ್ತುತವೆಂದರು.


ಸಾವಯವ ಕೃಷಿ, ಮತ್ತು ಗೋಸಂಪತ್ತಿನ ರಕ್ಷಣೆಯೊಂದಿಗೆ ಆರೋಗ್ಯಕ್ಕಾಗಿ ಯೋಗ, ಪ್ರಾಣಾಯಾಮ, ಆಯುರ್ವೇದ ಮತ್ತು ಹೋಮಿಯೋಪಥಿ ಚಿಕಿತ್ಸೆಯ ಸಂಶೋಧನೆ ಮಾಡಿದರು.
ಬ್ರಿಟಿಷರ ಕಾಲದಿಂದ ಇರುವ ಕಾನೂನುಗಳು, ತೆರಿಗೆ ಪದ್ಧತಿಯ ಬದಲಾವಣೆಗಳ ಕುರಿತು ಮಾಹಿತಿ, ಸಂಪತ್‌ಶಕ್ತಿಗಳ ವಿಕೇಂದ್ರೀಕರಣಕ್ಕೆ ಒತ್ತು ಕೊಟ್ಟರು.


ಪ್ರತಿಭಾ ಪಲಾಯನ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಗೋವುಗಳು ಪರಿವಾರದ ಸದಸ್ಯರಂತೆ, ಗೋರಕ್ಷಣೆ ನಮ್ಮ ಹೊಣೆಯೆಂದರು.


ನಮ್ಮ ಪುರಾಣ, ಇತಿಹಾಸ ಮತ್ತು ಪ್ರಾಚೀನ ಕಾಲದ ದೊರೆಗಳಿಂದ ಹಿಡಿದು ಭಾರತದಲ್ಲಿದ್ದ ಬಹಾದೂರ್ ಶಾ: ಝಫರ್ ಕಾಲದಲ್ಲಿ ಗೋಹತ್ಯೆ ಇರಲಿಲ್ಲವೆಂದು ಪ್ರತಿಪಾದಿಸಿದರು. ಆದರೆ ಸ್ವತಂತ್ರ ಭಾರತದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಗೋ ಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಆಗ್ರಹಿಸಿದರು.


ವಿದೇಶೀ ಬ್ಯಾಂಕುಗಳಲ್ಲಿರುವ ಕಪ್ಪು ಹಣ ವಾಪಸಾತಿಗಾಗಿ ಹಸ್ತಾಕ್ಷರ ಸಂಗ್ರಹ, ಭ್ರಷ್ಟಾಚಾರದ ವಿರುದ್ಧದ ಹೋರಾಟದ ಹಾದಿಯಲ್ಲಿ ಲೋಕ್‌ಪಾಲ್‌ನಂತಹ ವ್ಯವಸ್ಥೆ, ನಾಗರೀಕರ ಹಕ್ಕುಗಳ ಕುರಿತು “ರೈಟ್ ಟು ರಿಕಾಲ್”ನಂತಹ ಆಲೋಚನೆಗಳನ್ನಿಟ್ಟರು.
ದೇಶದಲ್ಲಿ ಯಾವುದೇ ಸಮಸ್ಯೆ ಎದುರಾದಾಗ ತಮ್ಮ ದಿಟ್ಟ ನಿಲುವುಗಳಿಂದ ಸಮಸ್ಯೆಯ ಮೂಲವನ್ನು ಎಳೆ ಎಳೆಯಾಗಿ ವಿಷ್ಲೇಶಿಸುವ ಚಾಕಚಕ್ಯತೆ ಅವರಲ್ಲಿತ್ತು.


ಉಪನ್ಯಾಸಗಳಿಂದ ಯುವಜನತೆಯ ಮನಸ್ಸನ್ನು ಆಕರ್ಷಿಸಿದ್ದ ಸ್ವದೇಶೀ ಐಕಾನ್ ರಾಜೀವ್ ದೀಕ್ಷಿತರು ಯುವಕರಿಗೆ ತಮ್ಮ ದೇಶವನ್ನು ನಾಡು-ನುಡಿಯನ್ನು ಪ್ರೀತಿಸಲು ಕಲಿಸಿದರು. ಅಪರಿಮಿತ ಮೇಧಾಶಕ್ತಿ, ಸರಳತೆ, ವಿಷಯ ಮಂಡನೆಯ ಗಾಂಭೀರ್ಯ, ಪ್ರವಾಸಗಳಲ್ಲಿ ಸ್ಥಳೀಯ ಭಾಷೆಯ ಬಳಕೆಯೊಂದಿಗೆ ಸರಳತೆ ಅವರ ಮೇರು ವ್ಯಕ್ತಿತ್ವದ ಕುರುಹುಗಳು.


ಬಾಬಾ ರಾಮದೇವರ “ಭಾರತ್ ಸ್ವಾಭಿಮಾನ್ ಟ್ರಸ್ಟ್”ನ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕಗೊಂಡು ಸತತವಾಗಿ ಭಾರತದೆಲ್ಲೆಡೆ ಸಂಚರಿಸಿ ತಮ್ಮ ಜ್ಞಾನದ ದರ್ಶನ ನೀಡಿದರು.
ನವೆಂಬರ್ ೩೦, ೨೦೧೦ರಂದು ಛತ್ತೀಸಗಢದ ಭಿಲಾಯ್ ಸಮೀಪದಲ್ಲಿ ಭಾರತ ಸ್ವಾಭಿಮಾನ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾಗ ವಿಧಿವಶರಾದರು.


ಭಾರತವನ್ನು ಭ್ರಷ್ಟಾಚಾರಮುಕ್ತ ಸ್ವಾವಲಂಬೀ, ಸಧೃಢ ಮತ್ತು ಸ್ವದೇಶೀ ದೇಶವನ್ನಾಗಿಸುವ ಕನಸು ಅವರದಾಗಿತ್ತು.
ರಾಜೀವ ದೀಕ್ಷಿತರ ಜನ್ಮದಿನ ನವೆಂಬರ್ ೩೦ “ಸ್ವದೇಶೀ ದಿನ” ಎಂದು ಆಚರಿಸಲಾಗುತ್ತದೆ.

  • email
  • facebook
  • twitter
  • google+
  • WhatsApp
Tags: RajivdixitSwadeshi

Related Posts

Articles

ಮಾತಿನ ಕಠಿಣ ಕ್ರಮ, ಇನ್ನೆಷ್ಟು ದಿನ?

July 28, 2022
Articles

ದೇಶದ ಸುರಕ್ಷತೆಗಾಗಿ ಅಗ್ನಿಪಥ!

June 18, 2022
Articles

ಪಠ್ಯಪುಸ್ತಕಗಳು ಕಲಿಕೆಯ ಕೈದೀವಿಗೆಯಾಗಲಿ

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
Next Post
ಡಾ. ಜನಾರ್ದನ ಹೆಗಡೆಗೆ ಡಿ.ಲಿಟ್ ಪದವಿ

ಡಾ. ಜನಾರ್ದನ ಹೆಗಡೆಗೆ ಡಿ.ಲಿಟ್ ಪದವಿ

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
Shri Guruji Golwalkar – Biography By H. V. Sheshadri

Shri Guruji Golwalkar – Biography By H. V. Sheshadri

April 18, 2011
Remembering RSS Founder Dr KB Hedgewar on his 123th Birthday on Yugadi

Remembering RSS Founder Dr KB Hedgewar on his 123th Birthday on Yugadi

December 9, 2013

EDITOR'S PICK

RSS Shakha Karyavah Vinod Kumar murdered in communist hot bed Kannur, RSS condoles

ಕಮ್ಯುನಿಸ್ಟರ ಭದ್ರ ನೆಲೆ ಕಣ್ಣೂರಿನಲ್ಲಿ RSS ಶಾಖಾ ಕಾರ್ಯವಾಹ ವಿನೋದ ಕುಮಾರ ಹತ್ಯೆ, ಆರೆಸ್ಸೆಸ್ ತೀವ್ರ ಸಂತಾಪ

December 2, 2013
ಸಾಮಾಜಿಕ ಸಮರಸತೆಗೆ ಶ್ರೀ ರಾಮ ಜನ್ಮಭೂಮಿಯ ಮಂದಿರ ಅನುಪಮ ಕೇಂದ್ರವಾಗಲಿದೆ: ಮಿಲಿಂದ್ ಪರಾಂಡೆ.

ಸಾಮಾಜಿಕ ಸಮರಸತೆಗೆ ಶ್ರೀ ರಾಮ ಜನ್ಮಭೂಮಿಯ ಮಂದಿರ ಅನುಪಮ ಕೇಂದ್ರವಾಗಲಿದೆ: ಮಿಲಿಂದ್ ಪರಾಂಡೆ.

August 3, 2020
Bangalore: Summary of BL Santhosh's Speech at Deendayal Upadhyaya Memorial Lecture

ರಾಜಕಾರಣದೊಳಗಿನ ದಾರ್ಶನಿಕ ವ್ಯಕ್ತಿತ್ವ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ

September 25, 2021
RSS 3rd Year Sangha Shiksh Varg Concludes at Nagpur; Nirmalanandanath Swamiji, Bhagwat addressed

RSS 3rd Year Sangha Shiksh Varg Concludes at Nagpur; Nirmalanandanath Swamiji, Bhagwat addressed

June 9, 2013

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In