• Samvada
Sunday, May 29, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Articles

‘ಜಮ್ಮು ಮತ್ತು ಕಾಶ್ಮೀರದ ವಿಲೀನ ಸಂಪೂರ್ಣ, ಅಂತಿಮ ಮತ್ತು ಅಪರಿವರ್ತನೀಯ’: ಸತ್ಯನಾರಾಯಣ ಶಾನಭಾಗ

Vishwa Samvada Kendra by Vishwa Samvada Kendra
October 29, 2016
in Articles
251
0
‘ಜಮ್ಮು ಮತ್ತು ಕಾಶ್ಮೀರದ ವಿಲೀನ ಸಂಪೂರ್ಣ, ಅಂತಿಮ ಮತ್ತು ಅಪರಿವರ್ತನೀಯ’: ಸತ್ಯನಾರಾಯಣ ಶಾನಭಾಗ

JAMMU AND KASHMIR KANNADA MAP

494
SHARES
1.4k
VIEWS
Share on FacebookShare on Twitter

ಜಮ್ಮು ಮತ್ತು ಕಾಶ್ಮೀರದ ವಿಲೀನ ಸಂಪೂರ್ಣ, ಅಂತಿಮ ಮತ್ತು ಅಪರಿವರ್ತನೀಯ
ಅಕ್ಟೋಬರ್ 26,  ಜಮ್ಮು ಕಾಶ್ಮೀರ ಭಾರತದಲ್ಲಿ ವಿಲೀನಗೊಂಡ ದಿವಸ, ತನ್ನಿಮಿತ್ತ ರಾಜ್ಯದ ವಿಲೀನವನ್ನು ವಿಶ್ಲೇಷಿಸುವ ಈ ಲೇಖನ.

JAMMU AND KASHMIR KANNADA MAP
JAMMU AND KASHMIR KANNADA MAP

1947ರ ಭಾರತದ ಸ್ವಾತಂತ್ರ್ಯ ಸಂದರ್ಭದಲ್ಲಿ ಬ್ರಿಟಿಷರ ನೇರ ಆಡಳಿತಕ್ಕೊಳಪಟ್ಟ ಬ್ರಿಟಿಷ್ ಇಂಡಿಯ ಮತ್ತು ಬ್ರಿಟಿಷರ ಸಾರ್ವಭೌಮತೆಯ ಅಡಿಗೆ ರಾಜರುಗಳ ಆಡಳಿತಕ್ಕೊಳಪಟ್ಟ ಪ್ರದೇಶ ಹೀಗೆ ಎರಡು ಭಾಗಗಳಾಗಿತ್ತು. ಭಾರತ ಸ್ವಾತಂತ್ರ್ಯ ಅಧಿನಿಯಮ ೧೯೪೭ರಂತೆ ಭಾರತ ಬ್ರಿಟಿಷರ ಆಡಳಿತದಿಂದ ಮುಕ್ತವಾದಮೇಲೆ ರಾಜರ ಆಡಳಿತವಿದ್ದ ಪ್ರದೇಶಗಳ ಮೇಲೆಯೂ ಬ್ರಿಟಿಷರ ಸಾರ್ವಭೌಮತೆ ಕೊನೆಗೊಂಡಿತು. ಹಾಗೆಯೇ ದೇಶದ ವಿಭಜನೆಯು ಬ್ರಿಟಿಷರ ಆಳ್ವಿಕೆಗೆ ಒಳಪಟ್ಟಿದ್ದ ಭೂಭಾಗಕ್ಕೆ ಮಾತ್ರ ಅನ್ವಯವಾಗಿತ್ತು. ರಾಜಾಡಳಿತ ಸಂಸ್ಥಾನಗಳು ಮತ್ತು ಬ್ರಿಟಿಷ್ ಅಧಿಪತ್ಯದ ಸಂಬಂಧ ಬ್ರಿಟಿಷ್ ಸಾರ್ವಭೌಮತೆಯ ಸೂತ್ರ ಮತ್ತು ಅನೇಕ ಒಪ್ಪಂದಗಳಿಂದ ನಿಯಂತ್ರಣಕ್ಕೊಳಪಟ್ಟಿದ್ದವು, ಆದ್ದರಿಂದ ಬ್ರಿಟಿಷ್ ಸಾರ್ವಭೌಮತೆ ಕೊನೆಯಾಗುವುದರೊಂದಿಗೆ ಈ ಒಪ್ಪಂದಗಳು ಕೊನೆಗೊಂಡವು. ಹೊಸ ಆಡಳಿತದೊಂದಿಗೆ ಈ ಒಪ್ಪಂದಗಳು ಮುಂದುವರಿಯುವಂತಿರಲಿಲ್ಲ. ಬ್ರಿಟಿಷ್ ಸಾರ್ವಭೌಮತೆ ಕೊನೆಯಾಗುವುದೆಂದರೆ ರಾಜಾಡಳಿತ ರಾಜ್ಯಗಳ ಮೇಲೆ ಬ್ರಿಟಿಷ್ ಅಧಿಪತ್ಯಕ್ಕೆ ಇದ್ದ ಅಧಿಕಾರಗಳೆಲ್ಲವೂ ಪುನಃ ರಾಜ್ಯಕ್ಕೆ ಮರಳಿ ಅವು ಸ್ವತಂತ್ರಗೊಂಡವು. ಜೊತೆಗೆ ಭಾರತ ಮತ್ತು ಪಾಕಿಸ್ತಾನ ಡೊಮಿನಿಯನ್‌ಗಳೆಂಬ ಎರಡು ಹೊಸ ವ್ಯವಸ್ಥೆಗಳೊಡನೆ ಮಾತುಕತೆ ನಡೆಸಲು ಅವು ಮುಕ್ತವಾಗಿದ್ದವು.

READ ALSO

ಪಠ್ಯಪುಸ್ತಕಗಳು ಕಲಿಕೆಯ ಕೈದೀವಿಗೆಯಾಗಲಿ

ಒಂದು ಪಠ್ಯ – ಹಲವು ಪಾಠ

ರಾಜಾಡಳಿತ ಪ್ರಾಂತಗಳು ಸ್ವತಂತ್ರವಾಗಿ ಉಳಿಯುವುದು ಎಂದರೆ ಸನಾತನ ಕಾಲದಿಂದ ಒಂದು ರಾಷ್ಟ್ರವಾಗಿದ್ದ ಭಾರದ ಏಕತೆ ಭಂಗವಾದಂತೆ. ಮತ್ತು ಎರಡು ಶತಮಾನಗಳ ಬ್ರಿಟಿಷ ಆಡಳಿತದ ಸಮಯದಲ್ಲಿ ವ್ಯಾಪಾರ, ವ್ಯವಹಾರ ಅಭಿವೃದ್ಧಿ, ಸಂಪರ್ಕ ಸಾಧನಗಳು, ರೈಲು, ಬಂದರು, ನೀರಾವರಿ ವ್ಯವಸ್ಥೆ ಮೊದಲಾದ ಹಲವು ವಿಷಯಗಳಲ್ಲಿ ಬ್ರಿಟಿಷ್ ಆಡಳಿತ ಮತ್ತು ರಾಜ್ಯಗಳ ನಡುವೆ ಅನೇಕ ಒಪ್ಪಂದಗಳ ಸಂಕೀರ್ಣ ವ್ಯವಸ್ಥೆ ರೂಪುಗೊಂಡಿತ್ತು. ಆದ್ದರಿಂದ ಐದುನೂರ ಐವತ್ತಕ್ಕ್ಕೂ ಹೆಚ್ಚು ಸಂಖ್ಯೆಯಲ್ಲಿದ್ದ ಸಣ್ಣಪುಟ್ಟ ರಾಜ್ಯಗಳು ಭಾರತ ಅಥವಾ ಪಾಕಿಸ್ತಾನ ಒಕ್ಕೂಟವನ್ನು ಸೇರದೆ ಸ್ವತಂತ್ರವಾಗಿ ಆಳ್ವಿಕೆ ನಡೆಸುವುದು ಅಸಾಧ್ಯವಾಗಿತ್ತು. ಆದ್ದರಿಂದ ಭೌಗೋಳಿಕ ನಿರಂತರತೆಯನ್ನು ಗಮನದಲ್ಲಿಟ್ಟುಕೊಂಡು ತಿದ್ದುಪಡಿಗೊಂಡ ಭಾರತ ಸರ್ಕಾರ ಅಧಿನಿಯಮ ೧೯೩೫ ಅನ್ವಯವಾಗುವಂತೆ ಭಾರತ ಅಥವಾ ಪಾಕಿಸ್ತಾನ ಒಕ್ಕೂಟವನ್ನು ಸೇರುವಂತೆ ಸಂಸ್ಥಾನಗಳಿಗೆ ಸಲಹೆ ನೀಡಲಾಯಿತು. ಭಾರತ ಸ್ವಾತಂತ್ರ ಅಧಿನಿಯಮ ೧೯೪೭ರಲ್ಲಿ ಯಾವುದೇ ಸಂಸ್ಥಾನವು ಸ್ವತಂತ್ರವಾಗಿರುವ ಆಯ್ಕೆ ಇರಲಿಲ್ಲ.
ಈ ಹಿನ್ನೆಲೆಯಲ್ಲಿ ರಾಜಾಡಳಿತ ಸಂಸ್ಥಾನಳೊಂದಿಗೆ ಭಾರತದ ರಾಜತಾಂತ್ರಿಕ ಸಂಭಂಧವನ್ನು ನಿರ್ಧರಿಸುವ ಸಲುವಾಗಿ ಅಂದಿನ ಗೃಹ ಮಂತ್ರಿ ಸರ್ದಾರ ಪಟೆಲ್ ಮತ್ತು ಕಾರ್ಯದರ್ಶಿ ವಿ ಪಿ ಮೆನನ್ ಎರಡು ಕರಾರು ಪತ್ರಗಳನ್ನು ತಯಾರಿಸಿದರು.

ಮೊದಲನೆಯದು ಬ್ರಿಟಿಷ್ ಸಾರ್ವಭೌಮತೆ ಮತ್ತು ಸಂಸ್ಥಾನಗಳ ನಡುವೆ ಇದ್ದ ಆಡಳಿತ ವ್ಯವಸ್ಥೆಗಳು ಹೊಸದಾಗಿ ಸ್ಥಾಪನೆಗೊಂಡ ಭಾರತ ಡೊಮಿನಿಂiನ್ನಿನೊಡನೆ ಮುಂದುವರಿಯುತ್ತವೆ ಎನ್ನುವ ಸ್ಥಾಯಿ ಒಪ್ಪಂದ. ಎರಡನೆಯದು ರಾಜನು ತನ್ನ ರಾಜ್ಯವನ್ನು ಭಾರತದೊಂದಿಗೆ ವಿಲೀನಗೊಳಿಸುವ ವಿಲಯನ ಒಪ್ಪಂದ. ಈ ವಿಲಯನ ಒಪ್ಪಂದದ ಅಡಿಯಲ್ಲೇ ಮೈಸೂರು, ಟ್ರಾವಾಂಕೂರ್, ಪಟಿಯಾಲ, ಗ್ವಾಲಿಯರ್ ಮೊದಲಾದ ದೊಡ್ಡ ಪ್ರಾಂತಗಳೂ ಸೇರಿದಂತೆ ಇತರ ಐದುನೂರ ಐವತ್ತಕ್ಕೂ ಹೆಚ್ಚು ಸಣ್ಣಪುಟ್ಟ ರಾಜ್ಯಗಳು ಭಾರತ ಒಕ್ಕೂಟದಲ್ಲಿ ಸೇರ್ಪಡೆಯಾದವು. ಇದೇ ವಿಲಯನ ಒಪ್ಪಂದಕ್ಕೆ ತಮ್ಮ ಸಾರ್ವಭೌಮ ಅಧಿಕಾರವನ್ನು ಬಳಸಿ ಸಹಿ ಹಾಕುವ ಮೂಲ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮಹಾರಾಜ ಹರಿಸಿಂಗ್ ತನ್ನ ರಾಜ್ಯವನ್ನು ಅಕ್ಟೋಬರ್ ೨೬ ೧೯೪೭ರಂದು ಭಾರತದಲ್ಲಿ ವಿಲೀನಗೊಳಿಸಿದರು.

ಜಮ್ಮು ಕಾಶ್ಮೀರ ನರೇಶ ಹಾಗೂ ಟಿಬೇಟ್ ಆದಿ ದೇಶಾಧಿಪತಿ ಎಂದು ಬಿರುದಿದ್ದ ಮಹಾರಾಜ ಹರಿಸಿಂಗ್ ಆಡಳಿತಕ್ಕೊಳಪಟ್ಟ ಕ್ಷೇತ್ರ ೧೯೪೭ರಲ್ಲಿ ಸುಮಾರು ೨ಲಕ್ಷ ೨೨ಸಾವಿರ ಚದರ ಕಿಮೀ. ಸುಮಾರು ಶೇ ೭೬ರಷ್ಟು ಮುಸಲ್ಮಾನ ಜನಸಂಖ್ಯೆಯಿದ್ದ ಈ ಪ್ರಾಂತ ಪಾಕಿಸ್ತಾನ, ಅಪಘಾನಿಸ್ತಾನ, ತಜಕಿಸ್ತಾನ, ಟಿಬೇಟ್, ಚೀನ ಈ ಐದು ದೇಶಗಳೊಡನೆ ತನ್ನ ಗಡಿಯನ್ನು ಹಂಚಿಕೊಂಡಿತ್ತು. ಅತ್ಯಂತ ಆಯಕಟ್ಟಿನ ಪ್ರದೇಶವಾಗಿದ್ದ ಈ ಪ್ರದೇಶವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪಾಕಿಸ್ತಾನ ಬಯಸಿತ್ತು ಹಾಗೂ ಮಹಾರಾಜ ಹರಿಸಿಂಗರನ್ನು ಬಗ್ಗಿಸುವ ಎಲ್ಲ ಪ್ರಯತ್ನಗಳನ್ನು ಮಹಮ್ಮದ್ ಅಲಿ ಜಿನ್ನಾ ಮಾಡಿದ್ದರು. ಎಲ್ಲ ಪ್ರಯತ್ನಗಳು ಫಲ ನೀಡದಿದ್ದಾಗ ಅಕ್ಟೋಬರ ೨೨ರಂದು ರಾಜ್ಯದ ಮೇಲೆ ಆಕ್ರಮಣ ಮಾಡಿದ ಪಾಕಿಸ್ತಾನ ಬಲಪೂರ್ವಕವಾಗಿ ರಾಜ್ಯವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಮುಂದಾಯಿತು. ಈ ಸಂದರ್ಭದಲ್ಲಿ ರಾಜ್ಯದ ರಕ್ಷಣೆಗಾಗಿ ಭಾರತೀಯ ಸೇನೆಯ ಸಹಾಯ ಬಯಸಿದ ಮಹಾರಾಜ ಹರಿಸಿಂಗ್ ವಿಲಯನ ಒಪ್ಪಂದಕ್ಕೆ ಸಹಿ ಹಾಕಿದರು. ಅಕ್ಟೋಬರ್ ೨೭ ೧೯೪೭ರಂದು ಭಾರತದ ಗವರ್ನರ್ ಜನರಲ್ ಮೌಂಟಬ್ಯಾಟನ್ ಅಂಕಿತದೊಂದಿಗೆ ಜಮ್ಮು ಕಾಶ್ಮೀರ ರಾಜ್ಯ ಭಾರತದಲ್ಲಿ ಸೇರ್ಪಡೆಯಾಯಿತು.

ಜಮ್ಮು ಕಾಶ್ಮೀರದ ಪ್ರತ್ಯೇಕತೆ ವಿಶೇಷ ಸ್ಥಾನಮಾನಗಳನ್ನು ಪ್ರತಿಪಾದಿಸುವವರು, ರಾಜ್ಯದ ವಿಲೀನವನ್ನೇ ಪ್ರಶ್ನಿಸುವವರು ಕೆಲವು ವಿಷಯಗಳನ್ನು ಗಮನಿಸಬೇಕು. ಉಳಿದ ರಾಜ್ಯಗಳ ವಿಲೀನದ ಮಾದರಿಯಲ್ಲೇ ಜಮ್ಮು ಕಾಶ್ಮೀರ ರಾಜ್ಯವೂ ಕೂಡ ಭಾರತ ಒಕ್ಕೂಟದಲ್ಲಿ ಸೇರ್ಪಡೆಯಾಯಿತು. ಮೈಸೂರು, ಟ್ರಾವಾಂಕೂರ, ಗ್ವಾಲಿಯರ್ ಮೊದಲಾದ ಸಂಸ್ಥಾನಗಳ ರಾಜರು ಅಂಕಿತ ಹಾಕಿದ ಯಾವುದೇ ಷರತ್ತಿಗೆ ಒಳಪಟ್ಟಿರದ ವಿಲಯನ ಒಪ್ಪಂದಕ್ಕೇ ಮಹಾರಾಜ ಹರಿಸಿಂಗ್ ಸಹಿ ಹಾಕಿದರು. ಈ ವಿಲೀನ ಒಪ್ಪಂದದ ಒಂದನೇ ವಿಧಿಯಲ್ಲ್ಲಿ ಭಾರತ ಅಧಿಪತ್ಯದ ಶಾಸಕಾಂಗ, ಒಕ್ಕೂಟದ ನ್ಯಾಯಾಂಗ ಮತ್ತು ಅಧಿಪತ್ಯದ ಉದ್ಧೇಶಗಳಿಗಾಗಿ ಸ್ಥಾಪಿತವಾಗುವ ಯಾವುದೇ ಅಧಿಕರಣಗಳಿರುವ ಭಾರತದ ಅಧಿಪತ್ಯಕ್ಕೆ ಸೇರಿಕೊಳ್ಳುವುದನ್ನು ಮತ್ತು ಸಂಭಂಧಿಸಿದ ಷರತ್ತುಗಳಿಗೆ ಅನುಗುಣವಾಗಿರಲು ಅಂಗೀಕರಿಸಿದ್ದೇನೆ. ೯ನೇ ವಿಧಿಯಲ್ಲಿ ಹೇಳಿರುವಂತೆ ಈ ಒಪ್ಪಂದವನ್ನು ರಾಜ್ಯದ ಪರವಾಗಿ ಜಾರಿಗೊಳಿಸುವುದಾಗಿ ಮತ್ತು ಈ ಒಪ್ಪಂದದಲ್ಲಿನ ಉಲ್ಲೇಖ ನನ್ನನ್ನು ಅಥವಾ ರಾಜ್ಯದ ಆಡಳಿತಗಾರರನ್ನು ಮತ್ತು ನಂತರದ ವಾರಸುದಾರರಿಗೂ ಅನ್ವಯವಾಗುದು ಎಂದು ಜಾಹೀರುಪಡಿಸುತೇನೆ. ಎಂದು ಹೇಳಿದೆ.

ತನ್ನ ರಾಜ್ಯವನ್ನು ಸೇರ್ಪಡೆಗೊಳಿಸುವಲ್ಲಿ ಹರಿಸಿಂಗ್ ವಿಳಂಬ ಮಾಡಿದರು, ಅವರು ಜಮ್ಮು ಕಾಶ್ಮೀರವನ್ನು ಸ್ವತಂತ್ರವಾಗಿರಿಸ ಬಯಸಿದ್ದರು ಎಂದು ಆರೋಪ ಮಾಡಲಾಗುತ್ತದೆ. ಆದರೆ ವಾಸ್ತವದಲ್ಲಿ ಭಾರತದ ಸ್ವಾತಂತ್ರವನ್ನು ಪ್ರಬಲವಾಗಿ ಪ್ರತಿಪಾದಿಸುವವರಲ್ಲಿ ಹರಿಸಿಂಗ್ ಮುಂಚೂಣಿಯಲ್ಲಿದ್ದರು. ೧೯೪೭ರ ಜುಲೈ ೧೮ರಂದು ಸರ್ದಾರ್ ಪಟೇಲರಿಗೆ ಬರೆದ ಪತ್ರದಲ್ಲಿ ಹರಿಸಿಂಗ್ ಭಾರತ ಒಕ್ಕೂಟವನ್ನು ಸೇರಲು ಉತ್ಸುಕರಾಗಿದ್ದರು ಎನ್ನುವ ಅಂಶ ಸ್ಪಷ್ಟವಾಗಿದೆ. ಆದರೆ ಪ್ರಥಮ ಪ್ರಧಾನಿ ನೆಹರು ಜಮ್ಮು ಕಾಶ್ಮೀರದ ಆಡಳಿತವನ್ನು ಶೇಖ್ ಅಬ್ದುಲ್ಲರಿಗೆ ಹಸ್ತಾಂತರಿಸಬೇಕೆಂಬ ಷರತ್ತು ಹಾಕಿದ್ದರು! ವಿಲೀನದ ನಂತರ ರಾಜ್ಯದ ಮಧ್ಯಂತರ ಆಡಳಿತ ಚುಕ್ಕಾಣಿಯನ್ನು ಶೇಖ್‌ಗೆ ಕೊಡಿಸುವಲ್ಲಿ ಯಶಸ್ವಿಯೂ ಆದರು. ನಂತರದ ಕಾಲಘಟ್ಟದಲ್ಲಿ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸಂಭಂಧಿಸಿದಂತೆ ನೆಹರು-ಶೇಖ್, ಇಂದಿರಾ-ಶೇಖ್, ರಾಜೀವ್-ಪಾರೂಕ್ ಮುಂತಾದ ಒಪ್ಪಂದಗಳು ನಡೆದವು. ಶೇಖ್ ಮತ್ತವರು ಕುಟುಂಬದ ಮೇಲೆ ನೆಹರು-ಗಾಂಧಿ ಪರಿವಾರಕ್ಕಿದ್ದ ವ್ಯಾಮೋಹ ಇನ್ನೂ ನಿಗೂಢವಾಗಿದೆ.

೧೯೫೧ರಲ್ಲಿ ರಾಜ್ಯದಲ್ಲಿ ಸಂವಿಧಾನ ಸಭೆ ರಚನೆಯಾಯಿತು. ಇದರ ಎಲ್ಲ ೭೫ ಸದಸ್ಯರೂ ಶೇಖ್ ನೇತೃತ್ವದ ನ್ಯಾಶನಲ್ ಕಾನ್ಫರೆನ್ಸ್‌ಗೆ ಸೇರಿದವರಾಗಿದ್ದರು. ಇದೇ ಶಾಸನ ಸಭೆಯು ೧೯೫೪ರ ಫೆಬ್ರುವರಿ ೬ರಂದು ಭಾರತದಲ್ಲಿ ಜಮ್ಮು ಕಾಶ್ಮೀರದ ವಿಲೀನವನ್ನು ಊರ್ಜಿಗೊಳಿಸಿತು. ಇದೇ ಶಾಸನ ಸಭೆಯು ರಾಜ್ಯದ ಸಂವಿಧಾನವನ್ನು ರಚಿಸಿತು. ಜಮ್ಮು ಕಾಶ್ಮೀರ ರಾಜ್ಯದ ಸಂವಿಧಾನದ ಪ್ರಿಯಾಂಬಲ್ ಮತ್ತು ಮೂರನೇ ವಿಧಿಯಲ್ಲಿ ಜಮ್ಮು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ ಎಂದು ಹೇಳಲಾಗಿದೆ. ಹಾಗೆಯೇ ವಿಧಿ ೪ರಲ್ಲಿ ರಾಜ್ಯದ ಭೌಗೋಳಿಕ ವಿಸ್ತಾರವು ೧೭ ಆಗಸ್ಟ ೧೯೪೭ರಂದು ಇರುವಂತೆ ರಾಜರ ಆಳ್ವಿಕೆಗೆ ಸೇರಿದ ಪ್ರದೇಶ ಎಂದು ಹೇಳಲಾಗಿದೆ. ಅಂದರೆ ಇದರಲ್ಲಿ ಜಮ್ಮು, ಕಾಶ್ಮೀರ, ಪಾಕ್ ಆಕ್ರಮಿತ ಪ್ರದೇಶ, ಗಿಲ್ಗಿಟ್-ಬಾಲ್ಟಿಸ್ತಾನ, ಚೀನಾ ಆಕ್ರಮಿಸಿಕೊಂಡಿರುವ ಭೂಭಾಗವೂ ಸೇರಿದ ಲಢಾಕ್ ಈ ಎಲ್ಲ ಭಾಗಗಳೂ ಸೇರುತ್ತವೆ. ೫ನೇ ವಿಧಿಯು ರಾಜ್ಯಕ್ಕೆ ಸಂಭಂಧಿಸಿ ವಿಷಯಗಳಲ್ಲಿ ಸಂಸತ್ತಿಗೆ ಕಾನೂನು ರೂಪಿಸುವ ಅಧಿಕಾರವನ್ನು ನೀಡುತ್ತದೆ. ೧೪೭ನೇ ವಿದಿಯು ೩ನೇ ಮತ್ತು ೫ನೇ ವಿಧಿಯ ತಿದ್ದುಪಡಿಯನ್ನು ನಿಷೇಧಿಸಿದೆ. ಇದರಿಂದ ರಾಜ್ಯದ ಸಂವಿಧಾನ ಸಭೆಯ ಇಚ್ಛೆಯಂತೆ ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಭಾರತದ ಸಾರ್ವಭೌಮತೆಯ ಅಂಗೀಕಾರ ಮತ್ತು ಇದನ್ನು ಅಪರಿವರ್ತನೀಯ ಎನ್ನುವ ಅಂಶ ಸ್ಪಷ್ಟವಾಗುತ್ತದೆ. ಭಾರತದ ಸಂಸತ್ತು ಅನೇಕ ಬಾರಿ ಜಮ್ಮು ಕಾಶ್ಮೀರದ ಮೇಲೆ ಭಾರತದ ಸಾರ್ವಭೌಮತೆಯನ್ನು ಎತ್ತಿ ಹಿಡಿದದ್ದಲ್ಲದೇ ೧೯೬೨ ಮತ್ತು ೧೯೯೪ರ ಠರಾವಿನಲ್ಲಿ ಸಂಪೂರ್ಣ ಜಮ್ಮು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ ಎನ್ನುವ ನಿರ್ಣಯವನ್ನು ಅಂಗೀಕರಿಸಿದೆ.

ಇವೆಲ್ಲವುಗಳ ಜೊತೆಗೆ ರಾಜ್ಯದ ವಿಲೀನವನ್ನು ಪ್ರಶ್ನಿಸಿ ಜನಮತಗಣನೆ ನಡೆಸಬೇಕೆಂದು ವಿಶ್ವಸಂಸ್ಥೆಯ ನಿರ್ಣಯವನ್ನು ಉಲ್ಲೇಖಿಸುವವರು ಒಂದರೆಡು ಅಂಶಗಳನ್ನು ಗಮನಿಸುವುದು ಒಳಿತು. ಪಾಕ್ ಆಕ್ರಮಣದ ನಂತರ ಯುದ್ಧವಿರಾಮದ ಮಧ್ಯಸ್ಥಿಕೆವಹಿಸಿದ ವಿಶ್ವಸಂಸ್ಥೆಯ ರಕ್ಷಣಾ ಪರಿಷತ್ತು ತನ್ನ ೪೭ನೇ ನಿರ್ಣಯದಲ್ಲಿ ರಾಜ್ಯದಲ್ಲಿ ಜನಮತಗಣನೆಯನ್ನು ನಡೆಸುವ ಮೊದಲು ಪಾಕಿಸ್ತಾನವು ತನ್ನ ಸೇನೆಯನ್ನು ಹಿಂತೆಗೆಯಬೇಕು ಮತ್ತು ಕಾನೂನು ಸುವ್ಯವಸ್ಥೆಗೆ ಬೇಕಾಗುವಷ್ಟು ಬಲವನ್ನು ಭಾರತ ನಿಯೋಜನೆಗೊಳಿಸಬೇಕು ಎಂದು ಹೇಳಿದೆ. ಆದರೆ ಆಜಾದ್ ಕಾಶ್ಮೀರ ಎಂದು ಕರೆಯುವ ಆಕ್ರಮಿತ ಪ್ರದೇಶದಿಂದ ಪಾಕ್ ಸೇನೆ ಇನ್ನೂ ಹೊರಹೋಗಿಲ್ಲ. ಪಾಕಿಸ್ತಾನ ಗಿಲ್ಗಿಟ್-ಬಾಲ್ಟಿಸ್ತಾನ ಪ್ರದೇಶವನ್ನು ತನ್ನ ಒಂದು ಪ್ರಾಂತವನ್ನಾಗಿ ಮಾಡಿಕೊಂಡಿದೆ. ಅಲ್ಲದೇ ಕಳೆದ ಆರೂವರೆ ದಶಕಗಳಲ್ಲಿ ರಾಜ್ಯದ ವ್ಯವಸ್ಥಿತವಾಗಿ ಜನಸಂಖ್ಯೆಯಲ್ಲಿ ಏರುಪೇರು ಮಾಡಲಾಗಿದೆ. ಹಾಗೆಯೇ ಇದುವರೆಗೆ ನಡೆದ ಚುನಾವಣೆಗಳಲ್ಲಿ ಪ್ರತ್ಯೇಕತಾವಾದಿಗಳ ಬಹಿಷ್ಕಾರದ ನಡುವೆಯೂ ಹೆಚ್ಚು ಪ್ರಮಾಣದ ಮತದಾನ ನಡೆಯುತ್ತಿದೆ. ೨೦೧೪ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ೭೬ ಪ್ರತಿಶತ ಮತದಾನವಾಗಿದ್ದು ಇದಕ್ಕೇ ಸಾಕ್ಷಿ. ಇವುಗಳನ್ನು ಗಮನಿಸಿದಾಗ ಜನಮತಗಣನೆಯ ಕೂಗಿನ ಹಿಂದಿನ ಪೊಳ್ಳುತನ ಅರಿವಾಗುತ್ತದೆ.
ಯಾವ ದೃಷ್ಟಿಯಿಂದ ನೋಡಿದರೂ ಭಾರತದಲ್ಲಿ ಜಮ್ಮು ಕಾಶ್ಮೀರ ರಾಜ್ಯದ ಸಂಪೂರ್ಣ ವಿಲೀನ ಪ್ರಶ್ನಾತೀತ ಮತ್ತು ಅಪರಿವರ್ತನೀಯ. ಈ ವಿಷಯವನ್ನಿಟ್ಟುಕೊಂಡು ತಮ್ಮ ರಾಜಕೀಯ ಲಾಭವನ್ನು ಸಾಧಿಸುವವರು ದೇಶದ ಏಕತೆಗೆ ಭಂಗ ತರುವುದಷ್ಟೇ ಅಲ್ಲ ಕಾಶ್ಮೀರ ಕಣಿವೆಯ ಕೇವಲ ಐದು ಜಿಲ್ಲೆಗಳಲ್ಲಿ ಮಾತ್ರ ಇನ್ನೂ ಜೀವಂತವಾಗಿರುವ ಪ್ರತ್ಯೇಕತೆಯನ್ನು ಪೋಷಿಸುತ್ತಿವೆ.

ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಹುಳ್ಯದ ರಾಜ್ಯವೆಂದು ನಡೆಯುವ ತುಷ್ಟೀಕರಣದ ರಾಜಕೀಯವಾಗಲೀ ಅಥವಾ ಮಾಹಿತಿಯ ಕೊರತೆಯಿಂದ ಮಿಥ್ಯಾವಾದಗಳನ್ನೇ ನಂಬಿರುವ ಪ್ರತಿಪಾದನೆಗಳಾಗಲೀ ಜಮ್ಮು ಕಾಶ್ಮೀರದ ಹಿತದೃಷ್ಟಿಯಿಂದ ಕೊನೆಗೊಳ್ಳಬೇಕು.
ಸತ್ಯನಾರಾಯಣ ಶಾನಭಾಗ
ಜಮ್ಮು ಕಾಶ್ಮೀರ ಅಧ್ಯಯನ ಕೇಂದ್ರ, ಬೆಂಗಳೂರು.

  • email
  • facebook
  • twitter
  • google+
  • WhatsApp

Related Posts

Articles

ಪಠ್ಯಪುಸ್ತಕಗಳು ಕಲಿಕೆಯ ಕೈದೀವಿಗೆಯಾಗಲಿ

Articles

ಒಂದು ಪಠ್ಯ – ಹಲವು ಪಾಠ

May 27, 2022
Articles

ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅನ್ಯಮತೀಯರ ಆರ್ಥಿಕ ಬಹಿಷ್ಕಾರ : ಒಂದು ಚರ್ಚೆ

March 25, 2022
Articles

ಡಿವಿಜಿಯವರ ವ್ಯಾಸಂಗ ಗೋಷ್ಠಿ

March 17, 2022
Articles

ಗ್ರಾಹಕರ ಹಿತ ರಕ್ಷಣೆಯ ಜಾಗೃತಿ – ಇಂದಿನ ಅಗತ್ಯ

March 15, 2022
Articles

ಗಾನ ಸಾಮ್ರಾಜ್ಞಿ : ಶ್ರೀಮತಿ ಗಂಗೂಬಾಯಿ ಹಾನಗಲ್

March 5, 2022
Next Post
Hindu Spiritual and Service Fair-2016 to be held from December 14 to 18 at Bengaluru

Hindu Spiritual and Service Fair-2016 to be held from December 14 to 18 at Bengaluru

Leave a Reply

Your email address will not be published. Required fields are marked *

POPULAR NEWS

ಒಂದು ಪಠ್ಯ – ಹಲವು ಪಾಠ

May 27, 2022

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

EDITOR'S PICK

Day-77: Bharat Parikrama Yatra reaches Tadambail near Suratkal

Day-77: Bharat Parikrama Yatra reaches Tadambail near Suratkal

October 24, 2012
Diamond Harbor becomes latest victim of continued Jihadi riots in Bengal, Bengalis of Bangalore stand united in protest

Diamond Harbor becomes latest victim of continued Jihadi riots in Bengal, Bengalis of Bangalore stand united in protest

May 20, 2019
Bharat Niti organises conclave on ‘DEMOCRACY, GOOD GOVERNANCE & SOCIAL MEDIA’ on March 26 at Bengaluru

Bharat Niti organises conclave on ‘DEMOCRACY, GOOD GOVERNANCE & SOCIAL MEDIA’ on March 26 at Bengaluru

March 16, 2017

Sangh Shiksha Varg- 2010 Karnatak Dakshin at Chennenahalli- April

October 2, 2010

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಹಿಂದೂರಾಷ್ಟ್ರದ ಸಮರ್ಥಕ – ಸಾವರ್ಕರ್ : ಶ್ರೀ ಗುರೂಜಿ
  • ವೇಶ್ಯಾವೃತ್ತಿ ಈಗ ಕಾನೂನು ಬದ್ಧ – ವೇಶ್ಯೆಯರನ್ನು ಗೌರವದಿಂದ ನಡೆಸಿಕೊಳ್ಳಿ : ಸುಪ್ರಿಂ ಕೋರ್ಟ್
  • ಅಧೋಗತಿಯತ್ತ ರೆಕ್ಕೆಯ ದ್ವಿಪಾದಿಗಳು
  • Alapuzha – One arrested for provocative sloganeering during PFI rally
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In