• Samvada
Tuesday, May 24, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Blog

ಗಡಿನಾಡ ಹೃದಯ ಬಡಿತದ ಮಿಡಿತವಾದ ಕವಿ ಶಾಂತರಸ

Vishwa Samvada Kendra by Vishwa Samvada Kendra
April 7, 2022
in Blog
251
0
494
SHARES
1.4k
VIEWS
Share on FacebookShare on Twitter

ಕನ್ನಡದ ಹಿರಿಯ ಕವಿ ಶಾಂತರಸರು. ಶಾಂತರಸ ಅವರು ರಾಯಚೂರು ಜಿಲ್ಲೆಯ ಹೆಂಬೆರಳು ಹಳ್ಳಿಯಲ್ಲಿ ಜನಿಸಿದರು. ಕನ್ನಡದ ಹೆಸರಾಂತ ಸಾಹಿತಿ,ಕನ್ನಡಪರ ಹೋರಾಟಗಾರರು.ಗಜ಼ಲ್ ಸಾಹಿತ್ಯ,ಕಥೆ,ಹೀಗೆ ಅನೇಕ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ನಡೆಸಿದವರು.ಅಲ್ಲದೆ ಪ್ರಕಟಣೆಯನ್ನು ಮಾಡಿದವರು.

ಇವರು 2006ರಲ್ಲಿ ಬೀದರದಲ್ಲಿ ಜರುಗಿದ 72ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಅವರ ಅಧ್ಯಕ್ಷೀಯ ನುಡಿಯ ಕೆಲವು ತುಣುಕುಗಳು ಇಂದಿಗೂ ಸ್ಮರಣಾರ್ಹ.

READ ALSO

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ

1.ಸಮ್ಮೇಳನ ಪಟ್ಟ ದಲಿತರಿಗೆ ಸಿಗಲಿ
ಎಪ್ಪತ್ತೊಂದು ಅಖಿಲ ಭಾರತ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಗಳು ಮೇಲು ಜಾತಿಯ ಪ್ರತಿಭೆಗಳಲ್ಲೆ ಹಂಚಿಹೋಗಿವೆ.  ಮುಂಬರುವ ಸಮ್ಮೇಳನದಲ್ಲಾದರೂ  ದಲಿತ ಪ್ರತಿಭೆಗಳನ್ನು ಗುರುತಿಸಿ ಕನ್ನಡ ನುಡಿ ತಾಯಿಯ ಚೊಚ್ಚಲ ಪಟ್ಟ ನೀಡಲಿ. ತನ್ಮೂಲಕ ನೆಲಪರಂಪರೆ ಉತ್ತರೋತ್ತರವಾಗಿ ಉತ್ತುಂಗಕ್ಕೇರಲಿ ಎಂದು ಆಶಿಸೋಣ.

2.ಪ್ರಾದೇಶಿಕ ಅಸಮಾನತೆ
ಅಖಂಡ ಕರ್ನಾಟಕದ ಶಿರೋಮಕುಟವೂ, ಹೈದ್ರಾಬಾದ್ ಕರ್ನಾಟಕ ಧರಿಸೀಮೆಯೂ ಎನಿಸಿಕೊಂಡಿರುವ ಈ ಬೀದರಿನಲ್ಲಿ ಈಗಾಗಲೇ ಅಖಿಲ ಭಾರತ ಮಟ್ಟದ ಎರಡು ಸಮ್ಮೇಳನಗಳು ಜರುಗಿಹೋಗಿವೆ. ಇದು ಮೂರನೇ ಸಮ್ಮೇಳನ. ಬದುಕಿನುದ್ದಕ್ಕೂ ಈ ಭಾಗವನ್ನು ಕುರಿತು ಧ್ವನಿ ಎತ್ತಿದ ನಾನು ಪ್ರಸ್ತುತ ಸಮ್ಮೇಳನಾಧ್ಯಕ್ಷನಾಗಿರುವ ವಿಶೇಷ ಅವಕಾಶವನ್ನು ಬಳಸಿಕೊಂಡು ಕೆಲವು ವಿಷಯಗಳನ್ನು ಪ್ರಸ್ತಾಪಿಸಬೇಕು. ಹೈದ್ರಾಬಾದ್ ಕರ್ನಾಟಕದ ಸ್ವಾತಂತ್ರ್ಯ ಚಳುವಳಿ, ಸ್ವಾತಂತ್ರ್ಯೋತ್ತರ ಇತಿಹಾಸ ಮತ್ತು ನನ್ನ ಬದುಕಿನ ಚರಿತ್ರೆ ಅಭಿನ್ನ. ನೈಜಾಂ ಇಲಾಖೆಯ ಹೃದಯಭಾಗವಾಗಿದ್ದ ಬೀದರ, ಗುಲಬರ್ಗಾ, ರಾಯಚೂರು, ಕೊಪ್ಪಳ ಈ ಜಿಲ್ಲೆಗಳು ಸ್ವಾತಂತ್ರ್ಯಪೂರ್ವಕಾಲದಿಂದಲೂ ಕನ್ನಡವನ್ನು ಉಳಿಸಿ ಬೆಳೆಸಲು ಅವಿರತ ಶ್ರಮಪಟ್ಟಿವೆ. ಭಾಲ್ಕಿಯ ಚೆನ್ನಬಸವ ಪಟ್ಟದ್ದೇವರು ಆಳರಸ ನಿಜಾಮರ ಒತ್ತಡದ ನಡುವೆಯೂ ಹೊರಗೆ ಉರ್ದು ಬೋರ್ಡು ಹಾಕಿ ಒಳಗೆ ಕನ್ನಡ ಶಾಲೆಗಳನ್ನು ನಡೆಸಿದ್ದಾರೆ.  ನನ್ನಂಥ ಬಡವಿದ್ಯಾಗಳಿಗಾಗಿ ಮುಷ್ಟಿ ಫಂಡ್ ಅಂದರೆ ಮನೆಮನೆಗೆ ಭಾರವಾಗದಂತೆ ಒಂದು ಹಿಡಿಹಿಟ್ಟು ಭಿಕ್ಷೆ ಎತ್ತಿ ವಸತಿ  ನಿಲಯಗಳನ್ನು  ನಡೆಸಿದ್ದಾರೆ. ಅಂದು ಭಾಲ್ಕಿ ಅಪ್ಪನವರು, ಪ್ರಭುರಾವ ಕಂಬಳಿವಾಲಾ ಇಂಥವರು ಆಳರಸರನ್ನು ಎದುರು ಹಾಕಿಕೊಂಡು ಕನ್ನಡ ಶಾಲೆಗಳನ್ನು ನಡೆಸಿರದಿದ್ದರೆ ನಾನು ಕನ್ನಡ ಕವಿಪಟ್ಟ ಹೊತ್ತು ಇವತ್ತು ಈ ವೇದಿಕೆ ಮೇಲೆ ನಿಲ್ಲುವ ಪ್ರಮೇಯವೇ ಬರುತ್ತಿರಲಿಲ್ಲ.

3.ಸ್ವಾಯತ್ತ ಸಂಸ್ಥೆಗಳು
ಸರಕಾರವು ರಾಜ್ಯದಲ್ಲಿರುವ ವಿವಿಧ ಅಕಾಡೆಮಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಪುಸ್ತಕ ಪ್ರಾಧಿಕಾರ, ಗ್ರಂಥಾಲಯ ಸಮಿತಿ ಮುಂತಾದ ಸ್ವಾಯುತ್ತ ಸಂಸ್ಥೆಗಳಿಗೆ ಹೆಚ್ಚಿನ ಹಣಕಾಸು ನೆರವು ನೀಡಿ ಅಷ್ಟೇ ಅಲ್ಲ ಅಕಾಡೆಮಿಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ವಿವಿಧ ಜಿಲ್ಲೆಗಳಲ್ಲಿ ವಿಕೇಂದ್ರೀಕರಣಗೊಂಡು ಕಾರ್ಯ ನಿರ್ವಹಿಸುವಂತಾಬೇಕು. ಈ ಸಂಸ್ಥೆಗಳಾದರೂ ರಾಜಧಾನಿ ಕೇಂದ್ರಿತ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಪ್ರತಿ ಹಳ್ಳಿ, ಪ್ರತಿ ವ್ಯಕ್ತಿಗೂ ಕಾರ್ಯಕ್ರಮಗಳನ್ನು ಮುಟ್ಟಿಸಬೇಕು. ಇಲ್ಲಿ ದಲಿತರು, ಮಹಿಳೆಯರು, ಅಲ್ಪಸಂಖ್ಯಾತರು, ಅಲಕ್ಷಿತರು ಹೆಚ್ಚೆಚ್ಚು ತೊಡಗುವಂತೆ ನಿಗಾ ವಹಿಸಬೇಕು. ಈ ಮೇಲಿನ ಎಲ್ಲ ಅಕಾಡೆಮಿಗಳು ಗಡಿಭಾಗಗಳಲ್ಲಿ ವಿಶೇಷ ಮುತುವರ್ಜಿ ವಹಿಸಿ ಕಾರ್ಯಕ್ರಮ ನಡೆಸುವ ಮೂಲಕ ಈ ಜನತೆಯಲ್ಲಿ ನಾಡು-ನುಡಿಯ ಪ್ರೇಮ ಗಟ್ಟಿಗೊಳಿಸುವಂತೆ ಮಾಡಬೇಕು. ಈ ತೆರನ ಸಾಂಸ್ಕೃತಿಕ ಅಸ್ಮಿತೆಯನ್ನು  ತಾಜಾಗೊಳಿಸುವ ಮೂಲಕವೇ ಅವರಲ್ಲಿ ಅವರಿಸಿಕೊಂಡಿರುವ ಅನಾಥ ಪ್ರಜ್ಞೆ, ಅಭದ್ರತೆಯನ್ನು ಹೋಗಲಾಡಿಸಬೇಕು.

4.ಸಮ್ಮೇಳನಗಳು ಸಾರ್ಥಕವೆನಿಸಬೇಕು
ಮಹನೀಯರೇ, ನಮ್ಮ ಮುಂದಿನ ಸಮಸ್ಯೆಗಳು, ಸವಾಲುಗಳು ಸಂಖ್ಯಾತೀತವಾಗುತ್ತಿವೆ.  ಮಾಡಬೇಕಾದ ಕೆಲಸಗಳು ಬೆಟ್ಟದಷ್ಟಿವೆ. ಕಳೆದ ಅರ್ಧ ಶತಮಾನದಿಂದಲೂ ಈ ನಾಡ ಮನೆಯ ಅಂಗಳದ ಮೂಲೆ ಮೊಡಕುಗಳಲ್ಲಿ ಕಸ ತುಂಬಿಟ್ಟಿದ್ದೇವೆ. ನಮ್ಮ ಮನಸ್ಸುಗಳಲ್ಲಿಯೂ ಸಹಸ್ರಮಾನದ ಮೌಢ್ಯವೆಂಬ ಧೂಳು ತುಂಬಿಬಿಟ್ಟಿದ್ದೇವೆ. ಇದನ್ನು ಹಸನುಗೊಳಿಸಲು ಸಾವಿರ, ಲಕ್ಷ, ಕೋಟಿ ಅಸಂಖ್ಯ ಕೈಗಳು ಮುಂದೆ ಬರಬೇಕು.  ದೇಶವನ್ನು ಆಳುತ್ತಿರುವ ಸರಕಾರ, ಪಕ್ಷಗಳು ನಿಜವಾದ ಜನಪರ ಕಾಳಜಿಯೊಂದಿಗೆ ಮುನ್ನುಗ್ಗಬೇಕು. ಧರ್ಮದ ಮುಖಂಡರು ಸ್ವಾರ್ಥ ಸಂಕುಚಿತತೆಯ ಪರದೆ ಹರಿದು ಅಸಲಿ ಮಾನವೀಯತೆಯ ಹಣತೆ ಹಚ್ಚಬೇಕು. ಅಂದಾಗಲೇ ಇಂಥ ನುಡಿ ಶಬ್ದಗಳಿಗೆ ಅರ್ಥ ಮತ್ತು ಗೌರವ ಬರುತ್ತದೆ. ಇಲ್ಲವಾದರೆ ಸಮ್ಮೇಳನಗಳು ಬರುತ್ತವೆ ಹೋಗುತ್ತವೆ. ಜನರ ಬದುಕು ಮಾತ್ರ ಅದೇ ದುಃಖ ದುಮ್ಮಾನಗಳಲ್ಲಿ ಕೊಳೆಯುತ್ತಿದ್ದರೆ ಇವು ಯಾರಿಗಾಗಿ ಮತ್ತು ಏತಕ್ಕಾಗಿ ಎಂಬ ಪ್ರಶ್ನೆಗಳು ಕಾಡುತ್ತಲೆ ಇರುತ್ತವೆ. ಈ ಪ್ರಶ್ನೆಗಳಿಗೆ ಉತ್ತರ ಹಂಚಿಕೊಳ್ಳುವ ಹಾದಿಯಲ್ಲಿ ನಾವೂ ನೀವೂ ಹಣತೆಯ ಒಂದೊಂದೇ ಹನಿ ಎಣ್ಣೆಯಾಗಿ ಒಂದಾಗಿ ಜಗವ ಬೆಳೆಸೋಣ.

  • email
  • facebook
  • twitter
  • google+
  • WhatsApp
Tags: gazalkannadaKannada Abhivruddhi PradhikaraKaviliteratureSenior Kannada Writershantarasa

Related Posts

Blog

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022
Blog

ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ

May 21, 2022
Blog

ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ

May 16, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Blog

ಸನಾತನ ಭಾರತದ ಶಿಕ್ಷಣ ವ್ಯವಸ್ಥೆ

April 26, 2022
Blog

ವಾಸ್ತವವಾದಿ ದೃಷ್ಟಿಕೋನದ ವಿದೇಶಾಂಗ ನೀತಿಯ ದೃಷ್ಟಾರ – ಬಾಬಾಸಾಹೇಬ್ ಅಂಬೇಡ್ಕರ್

April 14, 2022
Next Post

DRDO successfully flight-tests Solid Fuel Ducted Ramjet technology off Odisha coast

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

Sept 20-21: Seminar on 'Constitutional & Legal Status of Jammu and Kashmir' at Ghaziabad

Sept 20-21: Seminar on 'Constitutional & Legal Status of Jammu and Kashmir' at Ghaziabad

August 25, 2019

NEWS IN BRIEF – NOV 26, 2011

November 28, 2011

‘Suresh Ketkar was an epitome of simplicity’: RSS Sarakaryavah Bhaiyyaji Joshi 

July 28, 2016
Indian Professor receives World’s First International Award for work on Sustainability.

Indian Professor receives World’s First International Award for work on Sustainability.

February 19, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In