• Samvada
Tuesday, May 24, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ಮಂಗಳೂರು: ಆರೆಸ್ಸೆಸ್ ಪ್ರೇರಿತ ಕ್ರೀಡಾ ಸಂಸ್ಥೆ ‘ಕ್ರೀಡಾಭಾರತಿ’ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ

Vishwa Samvada Kendra by Vishwa Samvada Kendra
July 25, 2016
in Others
250
0
ಮಂಗಳೂರು: ಆರೆಸ್ಸೆಸ್ ಪ್ರೇರಿತ ಕ್ರೀಡಾ ಸಂಸ್ಥೆ  ‘ಕ್ರೀಡಾಭಾರತಿ’  ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ
491
SHARES
1.4k
VIEWS
Share on FacebookShare on Twitter

ಕ್ರೀಡಾಭಾರತಿ ಪ್ರತಿಭಾ ಪುರಸ್ಕಾರ | ಜೀಜಾಬಾಯಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ.ಬಿ.ಎಂ.ಹೆಗ್ಡೆ
ಬದುಕಿನ ಯಶಸ್ಸಿಗೆ ಆರೋಗ್ಯಕರ ಸ್ಪರ್ಧೆಯಿರಲಿ
ಮಂಗಳೂರು: ಬದುಕಿನಲ್ಲಿ ಯಶಸ್ಸು ಕಾಣಬೇಕಾದರೆ ನಮ್ಮೊಂದಿಗೆ ನಾವೇ ಸ್ಪರ್ಧೆಯೊಡ್ಡಿ ಮುನ್ನಡೆಯಬೇಕು. ಅನ್ಯರನ್ನು ದೂಷಿಸದ ಆರೋಗ್ಯಕರ ಸ್ಪರ್ಧೆ ನಮ್ಮದಾಗಬೇಕು. ಆಗ ಬದುಕು ಹಸನಾಗಲು ಸಾಧ್ಯ ಎಂದು ಮಣಿಪಾಲ ವಿವಿ ಮಾಜಿ ಕುಲಪತಿ ಡಾ.ಬಿ.ಎಂ.ಹೆಗ್ಡೆ ಹೇಳಿದರು.

sanghanikethana (3)

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

ಆರೆಸ್ಸೆಸ್ ಪ್ರೇರಿತ ಕ್ರೀಡಾ ಸಂಸ್ಥೆ  ಕ್ರೀಡಾಭಾರತಿ ಮಂಗಳೂರು ವಿಭಾಗ ಹಾಗೂ ದ.ಕ. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ಆಶ್ರಯದಲ್ಲಿ, ಶುಕ್ರವಾರ ನಗರದ ಸಂಘನಿಕೇತನದಲ್ಲಿ ಆಯೋಜಿಸಿದ್ದ ಕ್ರೀಡಾಭಾರತಿ ಪ್ರತಿಭಾ ಪುರಸ್ಕಾರ ಹಾಗೂ ಜೀಜಾಬಾಯಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.
ದೈಹಿಕ ಶಿಕ್ಷಣ ಎಂಬುದು ಕೂಡ ಮನೋ ವಿಕಾಸದ ಮಾನಸಿಕ ಶಿಕ್ಷಣವೇ ಆಗಿದೆ. ದೇಹವೆಂಬ ಮನಸ್ಸು ಆರೋಗ್ಯಕರವಾಗಿದ್ದರೆ ಲವಲವಿಕೆ ಹೆಚ್ಚುತ್ತದೆ. ಕಾಂಪಿಟಿಶನ್-ಸ್ಫರ್ಧೆ ಎಂಬ ಕಲ್ಪನೆಯನ್ನು ತಂದವರು ವಿದೇಶಿಯರು. ಭಾರತದಲ್ಲಿ ಅಂತಹ ಸಂಸ್ಕೃತಿ ಇರಲಿಲ್ಲ. ಎಲ್ಲರೂ ಸಮಾನವಾಗಿ ಜೊತೆಯಾಗಿ ಸಾಗಬೇಕು. ಜೊತೆಯಾಗಿಯೇ ಗೆಲುವು ಸಾಧಿಸಬೇಕು ಎಂಬ ಪರಿಕಲ್ಪನೆ ಈ ದೇಶದ್ದು ಎಂದರು.
ಒಲಿಂಪಿಕ್ಸ್‌ನಂತಹ ಕ್ರೀಡೆ ಆಯೋಜಿಸಿದರೆ ಅದೊಂದು ಹಣಗಳಿಕೆಯ ವಿಧಾನವೇ ಹೊರತು ಕ್ರೀಡೆಗೆ ಪ್ರೋತ್ಸಾಹ ಎಂಬುದನ್ನು ಒಪ್ಪಲು ಸಾಧ್ಯವಿಲ್ಲ. ಇಂದು ವಿಶ್ವದಲ್ಲಿ ಸುಮಾರು ೪೫ ಮಿಲಿಯದಷ್ಟು ಮಕ್ಕಳು ಒಂದು ಹೊತ್ತಿನ ಊಟವಿಲ್ಲದೆ ಬಳಲುತ್ತಿದ್ದಾರೆ. ಲೆಕ್ಕವಿಲ್ಲದ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಿದ್ದಾರೆ. ಆದರೆ ಮಂಗಳನಂತಹ ಗ್ರಹಕ್ಕೆ ತೆರಳಲು ೧ ಲಕ್ಷ ಕೋಟಿಯಷ್ಟು ಹಣವನ್ನು ನಾವು ವ್ಯಯಿಸುತ್ತೇವೆ. ಆ ಹಣ ಇಂತಹ ಮಕ್ಕಳ ಉಳಿವಿಗೆ ಬಳಕೆಯಾಗಿದ್ದರೆ ಅದಕ್ಕೊಂದು ಅರ್ಥವಿತ್ತು ಎಂದು ಬಿ.ಎಂ.ಹೆಗ್ಡೆ ವಿಷಾದಿಸಿದರು.
ಶಾಸಕ ಜೆ. ಆರ್.ಲೋಬೊ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕರಾವಳಿಯು ಹಲವಾರು ಪ್ರತಿಭೆಗಳಿಗೆ ಆಶ್ರಯದಾಣವಾಗಿದೆ. ಆದರೆ ಶೈಕ್ಷಣಿಕ ಗುಣಮಟ್ಟಕ್ಕೆ ಹೆಚ್ಚು ಒತ್ತು ಕೊಡುವ ಭರಾಟೆಯಲ್ಲಿ ಕ್ರೀಡೆಯನ್ನು ಮರೆಯಬಾರದು. ಮಕ್ಕಳಲ್ಲಿ ಹೆತ್ತವರು ಕ್ರೀಡಾ ಆಸಕ್ತಿಯನ್ನೂ ಬೆಳೆಸಿ ಪ್ರೋತ್ಸಾಹಿಸಬೇಕು ಎಂದರು.
ಕ್ರೀಡೆಯ ವಿವಿಧ ವಿಭಾಗಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಸಾಧಕರ ತಾಯಂದಿರಿಗೆ ಜೀಜಾಬಾಯಿ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ವಿಶೇಷ ಸಾಮರ್ಥ್ಯ ಮಕ್ಕಳಾದ ಧನಾನ್ ಜೆ. ಸಲ್ಡಾನಾ ಮತ್ತು ಮೊಯ್ದಿನ್ ತಸ್ಮನ್ ಮೊಹಮ್ಮದ್ ಅವರನ್ನು ಸನ್ಮಾನಿಸಲಾಯಿತು. ನಿವೃತ್ತ ದೈಹಿಕ ಶಿಕ್ಷಕರಾದ ಸೇವಂತಿ, ತುಕರಾಮ ಹೊಳ್ಳ, ಚಿದಾನಂದ ರೈ, ಸುಧೀರ್ ಹೆಗ್ಡೆ, ಚಂದ್ರಶೇಖರ್ ರೈ, ಆಗ್ನೆಸ್ ಗೋಮ್ಸ್, ರಾಘವ ವೈದ್ಯ, ಕೆ.ಹರಿಣಾಕ್ಷಿ, ರಮೇಶ್ ಕಾರಂತ್, ಜಯಶ್ರೀ, ಪೃಥ್ವಿರಾಜ್ ಜೈನ್, ಕರುಣಾಕ್ಷಿ ಅವರನ್ನು ಗೌರವಿಸಲಾಯಿತು.
ಖ್ಯಾತ ಕ್ರೀಡಾಪಟುವಾಗಿದ್ದು, ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿರುವ ಸಾಧಕರಾದ ಪ್ರೇಮನಾಥ ಉಳ್ಳಾಲ್, ಲಕ್ಷ್ಮಣ್ ರೈ, ಮಹೇಶ್, ದೀನಾಮಣಿ, ಸುಮನಾ ಶ್ರೀಕಾಂತ್, ಪ್ರತೀಪ್‌ಕುಮಾರ್, ಡಿ.ಎಂ.ಅಸ್ಲಂ ಇವರಿಗೆ ಕ್ರೀಡಾ ಭಾರತಿ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಲ್ಲದೆ ಕ್ರೀಡಾ ಭಾರತಿಯ ಸಾಧಕರಾದ ಗೀತಾಬಾಯಿ, ಜಯಪ್ಪ ಲಮಾಣಿ, ಪ್ರಣಾಳಿ ಶೆಟ್ಟಿ, ಆರತಿ ಶೆಟ್ಟಿ, ರಾಜ್ ಕುಮಾರ್ ಕೋಟ್ಯಾನ್ ಇವರನ್ನು ಗೌರವಿಸಲಾಯಿತು.
ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿಶೇಷ ಮಕ್ಕಳು, ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ವಿದ್ಯಾರ್ಥಿ ಸಾಧಕರಿಗೆ ಈ ಸಂದರ್ಭ ಗೌರವ ಸಲ್ಲಿಸಲಾಯಿತು.
ದ.ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾಭಾರತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಹೃದಯರೋಗ ತಜ್ಞ ಡಾ.ಮುಕುಂದ್, ಡಾ.ಸತೀಶ್ ಭಂಡಾರಿ, ಆರೆಸ್ಸೆಸ್‌ಪ್ರಾಂತ ಸಹ ಸಂಘಚಾಲಕ್ ಡಾ.ಪಿ.ವಾಮನ್ ಶೆಣೈ, ಡಿಡಿಪಿಐ ವಾಲ್ಟರ್ ಡಿಮೆಲ್ಲೋ, ಪಾಲಿಕೆ ವಿಪಕ್ಷ ನಾಯಕಿ ರೂಪಾ ಡಿ.ಬಂಗೇರ, ರಾಜ್ಯ ಅಲ್ಪಸಂಖ್ಯಾತ ನಿಗಮದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ, ಪ್ರಮುಖರಾದ ದಿವಾಕರ್, ಲೀಲಾಕ್ಷ ಕರ್ಕೇರ, ಕೇಶವ, ಅಲೋಶಿಯಸ್ ಡಿಸೋಜ, ಚಂದ್ರಶೇಖರ ಜಹಗೀರ್‌ದಾರ್, ದ.ಕ. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಚ್.ನಾಯಕ್, ಕ್ರೀಡಾಭಾರತಿ ಸಂಯೋಜಕ ಭೋಜರಾಜ ಕಲ್ಲಡ್ಕ ಮತ್ತಿತರರು ಉಪಸ್ಥಿತರಿದ್ದರು.
ಕ್ರೀಡಾ ಭಾರತಿ ಅಧ್ಯಕ್ಷ ಚಂದ್ರಶೇಖರ ರೈ ಸ್ವಾಗತಿಸಿದರು.
  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
Bhoomi Poojan Ceremony held for new BMS office of Karnataka Uttara region at Hubballi

Bhoomi Poojan Ceremony held for new BMS office of Karnataka Uttara region at Hubballi

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಮೀಕ್ಷೆ : ಒಂದು ವಿಶ್ಲೇಷಣೆ  #ರಾಜ್ಯೋತ್ಸವ_ವಿಶೇಷ #ಕನ್ನಡದನೆನಪು #ಕನ್ನಡಕ್ಕಾಗಿ_ಲಿಂಕ್_ಒತ್ತಿ

ನಿಮಗೆ ಇಷ್ಟವಾದ ಕನ್ನಡ ಸಾಹಿತ್ಯ ಯಾವುದು? ಪ್ರಶ್ನೆಯ ಸುತ್ತ ವಿಶ್ಲೇಷಣೆ. #ರಾಜ್ಯೋತ್ಸವ_ವಿಶೇಷ #ಕನ್ನಡದನೆನಪು #ಕನ್ನಡಕ್ಕಾಗಿ_ಲಿಂಕ್_ಒತ್ತಿ

December 2, 2020
ಕವಿಗಳಾದ ಡಾ. ಸಿದ್ದಲಿಂಗಯ್ಯ ನಿಧನ: ಆರೆಸ್ಸೆಸ್ ನ ವಿ ನಾಗರಾಜ ತೀವ್ರ ಸಂತಾಪ

ಕವಿಗಳಾದ ಡಾ. ಸಿದ್ದಲಿಂಗಯ್ಯ ನಿಧನ: ಆರೆಸ್ಸೆಸ್ ನ ವಿ ನಾಗರಾಜ ತೀವ್ರ ಸಂತಾಪ

June 11, 2021
Bharat Parikrama Yatra reaches Dabanwas Village in Haryana

Bharat Parikrama Yatra reaches Dabanwas Village in Haryana

August 25, 2019
ಹುಬ್ಬಳ್ಳಿ: 2012 ಜನವರಿ 27, 28, 29ರ ‘ಹಿಂದು ಶಕ್ತಿ ಸಂಗಮ’ ಶಿಬಿರಕ್ಕೆ ತೀವ್ರಗತಿಯ ಸಿದ್ಧತೆ

ಹುಬ್ಬಳ್ಳಿ: 2012 ಜನವರಿ 27, 28, 29ರ ‘ಹಿಂದು ಶಕ್ತಿ ಸಂಗಮ’ ಶಿಬಿರಕ್ಕೆ ತೀವ್ರಗತಿಯ ಸಿದ್ಧತೆ

December 29, 2011

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಒಂದು ಪಠ್ಯ – ಹಲವು ಪಾಠ
  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In