• Samvada
  • Videos
  • Categories
  • Events
  • About Us
  • Contact Us
Sunday, January 29, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home News Digest

ಹಿರಿಯ ಆರೆಸ್ಸೆಸ್ ಪ್ರಚಾರಕ ಶ್ರೀ ಮೈ.ಚ. ಜಯದೇವ್ ವಿಧಿವಶ

Vishwa Samvada Kendra by Vishwa Samvada Kendra
February 20, 2017
in News Digest
254
0
ಹಿರಿಯ ಆರೆಸ್ಸೆಸ್ ಪ್ರಚಾರಕ ಶ್ರೀ ಮೈ.ಚ. ಜಯದೇವ್ ವಿಧಿವಶ
499
SHARES
1.4k
VIEWS
Share on FacebookShare on Twitter

ಬೆಂಗಳೂರು ಫೆಬ್ರವರಿ 20 , 2017: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್)ದ ಹಿರಿಯ ಪ್ರಚಾರಕ ಶ್ರೀ ಮೈ.ಚ. ಜಯದೇವ್ (85) ಅವರು ಇಂದು  ಸೋಮವಾರ ಬೆಳಗ್ಗೆ  9.00ಗಂಟೆಗೆ ಬೆಂಗಳೂರಿನಲ್ಲಿ ವಿಧಿವಶರಾದರು. ವಯೋಸಹಜ ಅಲ್ಪಕಾಲೀನ ತೊಂದರೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರ ಪಾರ್ಥಿವ ಶರೀರವನ್ನು 12.00ಗಂಟೆಗೆ ಆರೆಸ್ಸೆಸ್ ಕೇಂದ್ರ ಕಚೇರಿ ಕೇಶವಕೃಪಾದಲ್ಲಿ ಅಂತಿಮದರ್ಶನಕ್ಕೆ ಇರಿಸಲಾಗುವುದು.

ಅಂತಿಮ ದರ್ಶನ 12.00 ರಿಂದ – ಕೇಶವಕೃಪಾ
ಶ್ರದ್ಧಾಂಜಲಿ ಸಭೆ – ಸಂಜೆ 5.00 ರಿಂದ ಕೇಶವಕೃಪಾ
ಫೆಬ್ರವರಿ 21  1.30 ಮೈಸೂರಿನ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ

READ ALSO

RSS Sarkaryawah Shri Dattareya Hosabale hoisted the National Flag at Chennai

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

ಶ್ರೀ ಮೈ.ಚ. ಜಯದೇವ್:

  • ಮೈಸೂರು ಚನ್ನಬಸಪ್ಪ ಜಯದೇವ (ಮೈ.ಚ. ಜಯದೇವ್) ಅವರು ಫೆಬ್ರುವರಿ 18, 1932ರಲ್ಲಿ ಮೈಸೂರಿನಲ್ಲಿ ಜನಿಸಿದರು.
  • ಮೈಸೂರಿನಲ್ಲಿ ಬಿ.ಎಸ್ಸಿ. ಪದವಿ ಪೂರೈಸಿದ ನಂತರ ಕಾನೂನು ವ್ಯಾಸಂಗ ಮಾಡಿದರು.
  • 1950ರ ದಶಕದಲ್ಲಿ ಆರೆಸ್ಸೆಸ್ ವಿಚಾರಧಾರೆಯತ್ತ ಆಕರ್ಷಿತರಾದ ಜಯದೇವ್‌ರು ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡರು. ತುಮಕೂರಿನಲ್ಲಿ ಅಲ್ಪಕಾಲ ಪ್ರಚಾರಕರಾಗಿಯೂ ಕಾರ್ಯನಿರ್ವಹಿಸಿದ್ದರು.
  • ಬೆಂಗಳೂರಿನ ಪ್ರತಿಷ್ಠಿತ HMT- Hindustan Garage Motors ನಲ್ಲಿಯೂ ಮ್ಯಾನೇಜರ್ ಆಗಿ ಕೆಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದರು.
  • 1960ರಲ್ಲಿ ಆರೆಸ್ಸೆಸ್ ಬೆಂಗಳೂರು ಮಹಾನಗರ ಕಾರ್ಯವಾಹ ಜವಾಬ್ದಾರಿ ಸ್ವೀಕರಿಸಿ, ಬೆಂಗಳೂರು ನಗರದಲ್ಲಿ ಸಂಘದ ಬೇರುಗಳನ್ನು ಗಟ್ಟಿಗೊಳಿಸಿದರು. 1974 ರ ತನಕ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಗಳೂರು ಮಹಾನಗರ ಕಾರ್ಯವಾಹರಾಗಿ ಅತೀ ದೀರ್ಘಕಾಲ ಮಾರ್ಗದರ್ಶನ ಮಾಡಿದವರು ಮೈ.ಚ. ಜಯದೇವ್‌.
  • 1965 ರಲ್ಲಿ ರಾಷ್ಟ್ರೋತ್ಥಾನ ಪರಿಷತ್‌ನ ಸ್ಥಾಪನೆಯಲ್ಲಿ ಮೈ ಚ ಜಯದೇವರದ್ದು ಮಹತ್ತರ ಪಾತ್ರ. ಇದೀಗ 50 ವರ್ಷ ಪೂರೈಸಿರುವ ರಾಷ್ಟ್ರೋತ್ಥಾನ ಪರಿಷತ್ ನ ಸಮಗ್ರ ವಿಕಾಸದ ಎಲ್ಲ ಹಂತಗಳಲ್ಲಿಯೂ ಪೋಷಿಸಿ- ಮಾರ್ಗದಶಿಸಿದವರು ಮೈ.ಚ. ಜಯದೇವ್. 1965ರಿಂದ 1995ರ ತನಕ ಮೂರು ದಶಕಗಳ ಕಾಲ ರಾಷ್ಟ್ರೋತ್ಥಾನ ಪರಿಷತ್‌ನ ಜನರಲ್ ಮ್ಯಾನೇಜರ್ ಆಗಿ ಶಿಕ್ಷಣ, ಆರೋಗ್ಯ, ಸಾಹಿತ್ಯ ಮತ್ತು ಸೇವೆಯ ಮೂಲಕ ರಾಜ್ಯಾದ್ಯಂತ ವ್ಯಾಪಿಸಿರುವುದರ ಹಿಂದೆ ಜಯದೇವ್ ಅವರ ಕೊಡುಗೆ ಅಪಾರ.
  • ’ರಾಷ್ಟ್ರೋತ್ಥಾನ ಸಾಹಿತ್ಯ’ದ ಮೂಲಕ ಸ್ವಾತಂತ್ರ್ಯಾನಂತರದಲ್ಲಿ ನೇಪಥ್ಯಕ್ಕೆ ಸರಿಯುತ್ತಿದ್ದ ರಾಷ್ಟ್ರೀಯ ವಿಚಾರಧಾರೆಗಳನ್ನು ಕನ್ನಡ ನಾಡಿನಲ್ಲಿ ಮೂಡಿಸುವ ರಾಷ್ಟ್ರೀಯ ದೃಷ್ಟಿಕೋನದ ಸಾಹಿತ್ಯರಚನೆಯ ಕಾರ್ಯವನ್ನು ಪ್ರಾರಂಭಿಸಿ, ಅದಕ್ಕಾಗಿ ನೂರಾರು ಯುವ ಲೇಖಕರನ್ನು ರೂಪಿಸಿದ ಕೀರ್ತಿ ಜಯದೇವ್ ಅವರದ್ದು.
  • ಮುದ್ರಣ ಸೌಲಭ್ಯಗಳೇ ದುಸ್ತರವಾಗಿದ್ದ ಕಾಲದಲ್ಲಿ ‘ಭಾರತ-ಭಾರತಿ ಪುಸ್ತಕ ಮಾಲಿಕೆ’ ಎಂಬ ನೂತನ ಯೋಜನೆಯ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಹೊಸಪ್ರಯೋಗ ನಡೆಸಿದರು. ಇದು ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ದಾಖಲೆಯನ್ನೇ ಬರೆಯಿತು.
  • ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಬೆಂಗಳೂರಿನ ಬಸವನಗುಡಿಯಲ್ಲಿ ಮೊದಲ ತಂಡದಲ್ಲಿ ಸತ್ಯಾಗ್ರಹ ಮಾಡಿ1975ರ ನವೆಂಬರ್‌ನಲ್ಲಿ ಬಂಧಿತರಾಗಿ ಬೆಂಗಳೂರಿನಲ್ಲಿ ಜೈಲುವಾಸ ಅನುಭವಿಸಿದರು. ನಂತರ 1977 ಮಾರ್ಚ್ 22ಕ್ಕೆ ಯಾದವರಾವ್ ಜೋಶಿ ಅವರೊಂದಿಗೆ ಬಿಡುಗಡೆಯಾದರು.
  • ಬೆಂಗಳೂರಿನಲ್ಲಿ ಅತೀ ಹೆಚ್ಚು ಕಾರ್ಯಕರ್ತರು, ಹಿತೈಷಿಗಳ ಮನೆಗಳೋಂದಿಗೆ ಸಂಪರ್ಕ ಹೊಂದಿದ್ದ ಮೈ.ಚ. ಜಯದೇವ್‌ರು ನಾಡಿನ ವಿವಿಧ ಕ್ಷೇತ್ರಗಳ ಗಣ್ಯರು, ಎಲ್ಲಾ ಪಕ್ಷದ ಮುಖಂಡರು, ಸಂತ-ಸ್ವಾಮೀಜಿಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದು, ಓರ್ವ ಕುಶಲ ಸಂಘಟಕರಾಗಿ ಜನಪ್ರಿಯರಾಗಿದ್ದರು. ಬಾಳಾಸಾಹೇಬ್ ದೇವರಸ್, ಕು ಸೀ ಸುದರ್ಶನ್, ದತ್ತೋಪಂತ್ ಟೆಂಗಡಿ, ಅಟಲ್ ಬಿಹಾರಿ ವಾಜಪೇಯೀ ಸಹಿತ ಅನೇಕ ರಾಷ್ಟ್ರೀಯ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು.
  • ಮಿಥಿಕ್ ಸೊಸೈಟಿ, ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆ, ಅನಾಥ ಶಿಶುನಿವಾಸ, ಅಬಲಾಶ್ರಮ – ಹೀಗೆ ಬೆಂಗಳೂರಿನ ಅನೇಕ ಸಾಮಾಜಿಕ ಸಂಸ್ಥೆಗೆ ಮಾರ್ಗದರ್ಶಕರಾಗಿ ನಿಂತವರು. ಈ ಎಲ್ಲ ಸಂಸ್ಥೆಗಳು ಸ್ವತಂತ್ರವಾಗಿ ಮೂಲೋದ್ದೇಶದಂತೆ ಕೆಲಸ ಮಾಡುವಂತೆ ಪ್ರೇರಣೆ ನೀಡಿದವರು. ಇವುಗಳ ಆರ್ಥಿಕ ಸ್ವಾವಲಂಬನೆ, ವ್ಯಕ್ತಿ ಜೋಡಣೆ ಮುಂತಾದ ಕೆಲಸಗಳನ್ನು ತೆರೆಯ ಹಿಂದೆ ನಿಂತು ಮಾಡಿದವರು ಮೈ.ಚ. ಜಯದೇವ್‌ರು.
  • ವನವಾಸಿಗಳ ಶಿಕ್ಷಣ, ಅರೋಗ್ಯ ಸೇರಿದಂತೆ ಅವರ ಸಮಗ್ರ ವಿಕಾಸಕ್ಕಾಗಿ ಶ್ರಮಿಸುತ್ತಿರುವ ಆರೆಸ್ಸೆಸ್ ಪ್ರೇರಿತ ಸಂಸ್ಥೆ “ವನವಾಸಿ ಕಲ್ಯಾಣ ಆಶ್ರಮ”ವು ಕರ್ನಾಟಕದಲ್ಲಿ ರೂಪುಗೊಂಡ ಪ್ರಾರಂಭದ ದಿನದಿಂದಲೂ ಅದರ ಸಂಘಟನಾತ್ಮಕ ಬೆಳವಣಿಗೆಯಲ್ಲಿ ಜಯದೇವರ ಕೊಡುಗೆ ಗಣನೀಯವಾದದ್ದು.
  • ಅವಿವಾಹಿತರಾಗಿಯೇ ಉಳಿದು 4 ದಶಕಗಳ ಕಾಲ ಸುದೀರ್ಘ ಸಾಮಾಜಿಕ ಜೀವನ ನಡೆಸಿದ ನಂತರ 1995ರಲ್ಲಿ ಸಂಘದ ಪ್ರಚಾರಕರಾಗಿ ನಿಯುಕ್ತರಾದರು. ಬಳಿಕ ‘ಕೇಶವಕೃಪಾ’ವನ್ನು ಕೇಂದ್ರವಾಗಿಸಿಕೊಂಡು ಸ್ವಯಂಸೇವಕರಿಗೆ ಮಾರ್ಗದರ್ಶನ ಮಾಡಿದರು.
  • 2002ರಿಂದ ಸಹ ಕ್ಷೇತ್ರೀಯ ಪ್ರಚಾರಕರಾಗಿ ನಿಯುಕ್ತಿ. 2004ರಲ್ಲಿ ಕ್ಷೇತ್ರೀಯ ಪ್ರಚಾರಕರಾಗಿ ಜವಾಬ್ದಾರಿ.
  • 2009ರಿಂದ ಅಖಿಲ ಭಾರತೀಯ ಕಾರ್ಯಕಾರಿಣಿಯ ಸದಸ್ಯರಾಗಿ ಜವಾಬ್ದಾರಿ.
  • 2012ರಲ್ಲಿ ಅಖಿಲ ಭಾರತೀಯ ಕಾರ್ಯಕಾರಿಣಿಯ ಆಮಂತ್ರಿತ ಸದಸ್ಯರಾಗಿ ನಿಯುಕ್ತಿ.
  • 2015ರ ಮಾರ್ಚ್ ನಂತರ ಹಿರಿಯ ಪ್ರಚಾರಕರಾಗಿ ಸಂಘಟನೆಗೆ ಮಾರ್ಗದರ್ಶನ ಮಾಡಿದರು.

ಸಂತಾಪ :
ಆರೆಸ್ಸೆಸ್ ಸರಸಂಘಚಾಲಕ ಮೋಹನ್ ಭಾಗವತ್, ಆರೆಸ್ಸೆಸ್ ಸರಕಾರ್ಯವಾಹ ಸುರೇಶ್ ಭಯ್ಯಾಜಿ ಜೋಷಿ, ಸಹಸರಕಾರ್ಯವಾಹ ಸುರೇಶ್ ಸೋನಿ, ದತ್ತಾತ್ರೇಯ ಹೊಸಬಾಳೆ, ಡಾ|| ಕೃಷ್ಣಗೋಪಾಲ್, ವಿ. ಭಾಗಯ್ಯ ಹಾಗೂ ಆರೆಸ್ಸೆಸ್ ಪ್ರಮುಖರಾದ ಕಜಂಫಾಡಿ ಸುಬ್ರಹ್ಮಣ್ಯ ಭಟ್, ಮಂಗೇಶ್ ಭೇಂಡೆ, ಮುಕುಂದ್ ಸಿ.ಆರ್, ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ್ ಮುಂತಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.

 

For total Photo collection please click the following link:

  • email
  • facebook
  • twitter
  • google+
  • WhatsApp
Tags: Mai Cha Jayadev

Related Posts

RSS Sarkaryawah Shri Dattareya Hosabale hoisted the National Flag at Chennai
News Digest

RSS Sarkaryawah Shri Dattareya Hosabale hoisted the National Flag at Chennai

August 15, 2022
News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
News Digest

ಹಿರಿಯ ಸ್ವಯಂಸೇವಕ ಡಾ.ರಾಮಮನೋಹರ ರಾವ್ ವಿಧಿವಶ – ನಾ.ತಿಪ್ಪೇಸ್ವಾಮಿ ಸಂತಾಪ

July 25, 2022
Next Post
Senior RSS Pracharak Sri MC Jayadev passed away in Bengaluru

Senior RSS Pracharak Sri MC Jayadev passed away in Bengaluru

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

ರಕ್ಷಣೆ ಮತ್ತು ಗೂಡಚರ್ಯೆ : ಸಾಧ್ಯತೆ-ಸವಾಲುಗಳು

April 14, 2015
Day 69: Bharat Parikrama Yatra reaches remote Village Dharmatthadka of Kasaragod

Day 69: Bharat Parikrama Yatra reaches remote Village Dharmatthadka of Kasaragod

October 16, 2012
Celebrating Vijayadashami, Spectacular RSS Path Sanchalan held at Jayanagar, Bangalore

Celebrating Vijayadashami, Spectacular RSS Path Sanchalan held at Jayanagar, Bangalore

November 9, 2014
SJM hold massive protest against FDI in Karnataka, Chennai

SJM hold massive protest against FDI in Karnataka, Chennai

October 3, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In