• Samvada
Sunday, May 22, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home News Digest

ಕಾಗದ ಕತ್ತರಿ ಕಲೆಯಲ್ಲಿ ಶ್ರೀ ಗಣಪ – ಮೈಸೂರು ಹುಸೇನಿಯ ಕೈಚಳಕ

Vishwa Samvada Kendra by Vishwa Samvada Kendra
August 25, 2019
in News Digest
250
0
ಕಾಗದ ಕತ್ತರಿ ಕಲೆಯಲ್ಲಿ ಶ್ರೀ ಗಣಪ – ಮೈಸೂರು ಹುಸೇನಿಯ ಕೈಚಳಕ
491
SHARES
1.4k
VIEWS
Share on FacebookShare on Twitter

ಪರಿಸರಸ್ನೇಹಿ ಕಾಗದ ಗಣಪ- ಕಲಾವಿದ ಹುಸೇನಿಯ ಕೈಚಳಕ
ಕಾಗದವು ನಮ್ಮ ಆಧುನಿಕ ಜೀವನದ ಒಂದು ಭಾಗ. ಇಂದು ಪ್ಲಾಸ್ಟಿಕ್ ಯುಗದಲ್ಲಿಯೂ ಕಾಗದ ತನ್ನದೆ ಸ್ಥಾನ ಹೊಂದಿದೆ. ನಾವು ಕಾಗದವಿಲ್ಲದ ಬದುಕನ್ನು ಊಹಿಸಲು ಸಾಧ್ಯವಾಗದು. ಪ್ರತಿದಿನ ದಿನಪತ್ರಿಕೆಯಿಂದ ಆರಂಭವಾಗಿ ಅದರ ಇರುವಿಕೆಯನ್ನು ವಿಸ್ತರಿಸುತ್ತಾ ಸಾಗಿ ಶಾಲೆಯ ಮಕ್ಕಳಿಂದ ಹಿಡಿದು ಚಲಾವಣೆಯಲ್ಲಿರುವ ನೋಟುಗಳವರೆಗೂ ಕಾಗದ ಬಹುಮುಖ್ಯ ಪಾತ್ರ ವಹಿಸುತ್ತದೆ. ಇಂತಹ ಕಾಗದವನ್ನು ಪರಿಸರಸ್ನೇಹಿ ಎಂದು ಕರೆಯಬಹುದು.
ಆಡುಮಾತಿಗಿಂತಲೂ ಬರೆದು ನೀಡಿದ ಪತ್ರಕ್ಕೆ ಹೆಚ್ಚು ಮಾನ್ಯತೆ. ಕಾಗದವನ್ನು ಬಳಸುವ ವ್ಯಕ್ತಿಯಿಂದ ವ್ಯಕ್ತಿಗೆ ಅವರ ಅಭಿವ್ಯಕ್ತಿ ಬದಲಾಗುತ್ತದೆ. ಕಾಗದವನ್ನು ಬಳಸುವುದು ಶತಶತಮಾನಗಳಿಂದ ನಿರಂತರವಾಗಿ ಸಾಗಿ ಬರುತ್ತಿದೆ. ನಮ್ಮ ದೇಶದ ಜನಪದ ಕಲೆಗಳಲ್ಲಿ ಕಾಗದ ಕತ್ತರಿ ಕಲೆ (ಸಾಂಝಿ) ಒಂದು. ಕಲಾವಿದ ತನ್ನ ಸ್ಮೃತಿಪಟಲದಲ್ಲಿರುವ ಚಿತ್ರವನ್ನು ಕಾಗದದ ಮೇಲೆ ಮೂಡಿಸಿ ನಂತರ ಕತ್ತರಿಯಿಂದ ಅಥವ ಹರಿತವಾದ ಚಾಕುವಿನಿಂದ ಕತ್ತರಿಸಿ ಕಲಾಕೃತಿಯನ್ನು ರಚಿಸುತ್ತಾನೆ. ಈ ಕಲೆಯು ತಲತಲಾಂತರದಿಂದ ನಡೆದು ಬಂದಿದೆ. ಇಂತಹ ಕಲೆಯನ್ನು ನಿರಂತರವಾಗಿ ಕರ್ನಾಟಕದಾದ್ಯಂತ ಶಿಬಿರ, ಕಾರ್ಯಾಗಾರ, ಪ್ರದರ್ಶನಗಳನ್ನು ಮೈಸೂರಿನ ಕಲಾವಿದ ಎಸ್. ಎಫ್. ಹುಸೇನಿಯವರು ನಡೆಸಿಕೊಂಡು ಬರುತ್ತಿದ್ದಾರೆ.

S.F.HUSENI,MYSOREHUSENI--KAGADA GANAPA.....   (18)
ಕಲಾವಿದ ಎಸ್. ಎಫ್. ಹುಸೇನಿಯವರು ರಚಿಸಿರುವ ಪರಿಸರಸ್ನೇಹಿ ಕಾಗದ ಗಣಪ. ಕಾಗದವನ್ನು ಕತ್ತರಿಸಿ ಕಲೆ ಅರಳಿಸುವ ಕಲಾವಿದ. ತಮ್ಮ ವಿಶಿಷ್ಟ ರೀತಿಯ ಕಲಾಕೃತಿಗಳಿಂದಲೇ ಗುರುತಿಸಿಕೊಂಡಿರುವ ಹುಸೇನಿಯವರು ರಚಿಸಿರುವ ಗಣೇಶನ ಕಲಾಕೃತಿಗಳು. ಇಲ್ಲಿನ ಗಣೇಶನ ವೈವಿಧ್ಯಮಯ ಹೊಂದಿರುವ ಚಿತ್ರಗಳನ್ನು ಸೂಕ್ಷ್ಮವಾಗಿ ಕಾಗದವನ್ನು ಕತ್ತರಿಯಿಂದ ಕತ್ತರಿಸಿದ್ದಾರೆ. ಈ ಚಿತ್ರಗಳು ನೋಡುಗರಿಗೆ ಆಶ್ಚರ್ಯ ಉಂಟುಮಾಡುತ್ತದೆ. ಪ್ರತಿಯೊಂದು ಕಲಾಕೃತಿಯು ಬಹು ಸರಳವೆನ್ನಿಸಿದರೂ ಅದರ ಕಲಾತ್ಮಕತೆಯಿಂದ ನಮ್ಮನ್ನೂ ಸಹ ಕಾಗದ ಕತ್ತರಿ ಕಲೆಯನ್ನು ಕಲಿಯಲು ಪ್ರೇರೇಪಿಸುತ್ತದೆ. ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಈ ಕಲೆಯು ಒತ್ತಡ ನಿವಾರಿಸಿ ಸೃಜನಶೀಲರಾಗಲು ಸಹಕಾರಿಯಾಗಿದೆ.
ಕಲಾವಿದ ಎಸ್.ಎಫ್. ಹುಸೇನಿ ಅವರು ಕಲಾವಲಯದಲ್ಲಿ “ಮೈಸೂರು ಹುಸೇನಿ” ಎಂದೇ ಚಿರಪರಿಚಿತರು. ತಂದೆ ಸಯ್ಯದ್ ಫೀರ್, ತಾಯಿ ಜೀನಾತ್‍ವುನ್ನಿಸಾ ಬೀ ರವರ ಮಗನಾಗಿ ಮಂಡ್ಯಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರಂ (ಬ್ಲಫ್) ನಲ್ಲಿ ಜನಿಸಿದ ಇವರು ಬಾಲ್ಯದ ದಿನಗಳಲ್ಲಿ ಚಿತ್ರಕಲೆಯ ಬಗ್ಗೆ ಆಸಕ್ತರಾಗಿ ಕಲೆಯಲ್ಲಿಯೇ ಜೀವನ ರೂಪಿಸುವಂತಾಯಿತು.
ಇವರು ಮೈಸೂರಿನ ವೈಜಯಂತಿ ಚಿತ್ರಕಲಾ ಶಾಲೆಯಲ್ಲಿ ಪೈನ್ ಆರ್ಟ್ ಡಿಪ್ಲೊಮ ಮತ್ತು ಆರ್ಟ್‍ಮಾಸ್ಟರ್ ಶಿಕ್ಷಣ ಪಡೆದು ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಚಿತ್ರಕಲೆಯಲ್ಲಿ ಬಿ.ಎಫ್.ಎ. ಪದವಿಯನ್ನು ಪಡೆದಿದ್ದಾರೆ.
ಹುಸೇನಿಯವರು ಸದಾ ಪ್ರಯೋಗಶೀಲ ಪ್ರಯತ್ನಗಳಿಗೆ, ನಿರಂತರ ಹೊಸತನಕ್ಕೆ ಆದ್ಯತೆ ನೀಡುತ್ತಾ ಬಂದಿದ್ದಾರೆ. ಅವರು ರಚಿಸಿರುವ ಕಲಾಕೃತಿಗಳನ್ನು ಗಮನಿಸುತ್ತಾ ಬಂದಲ್ಲಿ ತಿಳಿಯುತ್ತದೆ. ಒಂದೇ ಬಗೆಯ ಕಲಾಕೃತಿಗಳಿಗೆ ಸೀಮಿತವಾಗದೆ ಹಲವಾರು ಪ್ರಯೋಗಾತ್ಮಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ವಿಶಿಷ್ಟ ಬಗೆಯ ಕಾಗದ ಭಿತ್ತಿಶಿಲ್ಪಗಳು, ಏಕರೇಖಾಚಿತ್ರಗಳು ಪ್ರಯೋಗಾತ್ಮಕ ಅಮೂರ್ತ ಛಾಯಾಚಿತ್ರಗಳು ಮತ್ತು ಸಾಂಝಿಜನಪದ ಕಾಗದಕತ್ತರಿಕಲೆ ಕಲಾಕೃತಿಗಳು ಇವರಕಲಾಪ್ರತಿಭೆಗೆ ಸಾಕ್ಷಿಯಾಗಿವೆ. ಸಿಡಿಯನ್ನು ಬಳಸಿ ತೆಗೆದಿರುವ ಅಮೂರ್ತಛಾಯಾಚಿತ್ರಗಳು ಸುಮಾರು ಐದುಸಾವಿರಕ್ಕೂ ಹೆಚ್ಚು. ಇದು ಅವರ ಸೃಜನಶೀಲತೆ ಮತ್ತು ಕಲಾತ್ಮಕ ಪ್ರಯೋಗಗಳಿಗೆ ಒಂದುಉದಾಹರಣೆ.

READ ALSO

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

S.F.HUSENI,MYSOREHUSENI--KAGADA GANAPA.....   (7)
ಹುಸೇನಿ ಚಿತ್ರಕಲೆಯನ್ನು ಮೈಸೂರು, ಬೆಂಗಳೂರು, ಧಾರವಾಡ, ಗುಲ್ಬರ್ಗ, ಉಡುಪಿ ಹೀಗೆ ಅನೇಕ ಕಡೆಗಳಲ್ಲಿ 9 ಏಕವ್ಯಕ್ತಿ ಚಿತ್ರಕಲಾಪ್ರದರ್ಶನಗಳು, ಸುಮಾರು 70ಕ್ಕೂ ಹೆಚ್ಚು ಸಮೂಹಕಲಾಪ್ರದರ್ಶನ ಕಾರ್ಯಗಾರಗಳಲ್ಲಿ ಭಾಗವಹಿಸಿ ಕರ್ನಾಟಕ ಮಾತ್ರವಲ್ಲದೆ ಹೊರರಾಜ್ಯಗಳಾದ ಮುಂಬೈ, ದೆಹಲಿ, ಚೆನ್ನೈ ನಗರಗಳಲ್ಲಿ ಚಿತ್ರಕಲಾ ಪ್ರದರ್ಶನಗಳನ್ನು ನೀಡಿದ್ದಾರೆ. ಹುಸೇನಿಯವರ ವಿಶೇಷತೆ ಎಂದರೆ ಗ್ರಾಮೀಣ ಭಾಗದ ಜನರಿಗೆ ಕಲೆ ತಲುಪುವ ಉದ್ದೇಶದಿಂದ ತಮ್ಮದೇ “ಸಾಂಝಿ ಕಲಾಲೋಕ” ಸಂಸ್ಥೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಹತ್ತುವರ್ಷಗಳಿಂದ ಚಿತ್ರಕಲಾಪ್ರದರ್ಶನ, ಕಾರ್ಯಗಾರಗಳನ್ನು ನಡೆಸುತ್ತಾ ಬಂದಿದ್ದಾರೆ. ಇವರ ಅನೇಕ ಕಲಾಕೃತಿಗಳು ದೇಶ ಮತ್ತು ವಿದೇಶಗಳ (ಆಸ್ಟ್ರೇಲಿಯ, ಫಿನ್‍ಲ್ಯಾಂಡ್, ಜರ್ಮನ್, ಸೌತ್ ಆಫ್ರಿಕ, ದೋಹ) ಖಾಸಗಿ ಸಂಗ್ರಹಕಾರರಲ್ಲಿ ಸಂಗ್ರಹಗೊಂಡಿವೆ.
ಎಸ್.ಎಫ್.ಹುಸೇನಿಯವರ ಕಲಾಪ್ರತಿಭೆಗೆ ಅನೇಕ ಪ್ರಶಸ್ತಿ ಸನ್ಮಾನÀಗಳು ಸಂದಿವೆ ಅವುಗಳಲ್ಲಿ ಮುಖ್ಯವಾಗಿ 1999 ರಲ್ಲಿ ಮೈಸೂರು ದಸರಕಲಾಪ್ರದರ್ಶನಪ್ರಶಸ್ತಿ, 2001-ರಲ್ಲಿ ಮೈಸೂರಿನ ಕನ್ನಡಸಂಸ್ಕøತಿ ಇಲಾಖೆಯಿಂದ “ಯುವಸಂಭ್ರಮ” ಪ್ರಶಸ್ತಿ, ಧಮಸ್ಥಳದ ಶಾಂತಿವನಟ್ರಸ್ಟ್ ವತಿಯಿಂದ ನಡೆಯುವ ರಾಜ್ಯ ಮಟ್ಟದ ಅಂಚೆಕುಂಚ ಸ್ಪರ್ಧೆಯಲ್ಲಿ 2001ರಿಂದ ಸತತ ನಾಲ್ಕು ಹಾಗು 2007ರಲ್ಲಿ ಪ್ರಶಸ್ತಿ ಒಟ್ಟು ಐದು ಬಾರಿ ಪ್ರಶಸ್ತಿ, ಬೆಂಗಳೂರಿನಲ್ಲಿ ನಡೆಯುವ ಅಂತರಾಷ್ಟ್ರೀಯ ಜಪಾನ್‍ಹಬ್ಬದಲ್ಲಿ 2009 ರಿಂದ ನಾಲ್ಕು ಬಾರಿ, ಕಿರಿಗಾಮಿ ಪೇಪರ್ ಕಟ್ಟಿಂಗ್ಸ್ ಕಾಗದ ಕಲೆಯ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ, 1999ರಲ್ಲಿ ಮೈಸೂರಿನ ರಾಮನ್ಸ್ ಕಂಪ್ಯೂಟರ್ಸ್‍ರವರ “ರಾಕೊಫೇಸ್ಟ್” ಪ್ರಶಸ್ತಿ, ಕರ್ನಾಟಕಲಲಿತ ಕಲಾ ಅಕಾಡೆಮಿಯಿಂದ ಎರಡು ಬಾರಿ ಸ್ಕಾಲರ್‍ಶಿಪ್ 1999 ಮತ್ತು 2000. ವೈಜಯಂತಿಚಿತ್ರಕಲಾಶಾಲೆಯಿಂದ ಬೆಸ್ಟ್ ಮ್ಯೂರಲ್ ಪ್ರಶಸ್ತಿ, 2001-ರಲ್ಲಿ ಮೈಸೂರಿನ ಮಾನಸಗಂಗ್ರೋತಿಯ ಮಹಿಳಾಅಧ್ಯಯನಕೇಂದ್ರದಿಂದ ಪೋಸ್ಟರ್‍ರಚನಗೆಪ್ರಶಸ್ತಿ, ಇವುಗಳ ಜೊತೆಗೆ ಅನೇಕ ಸಂಘಸಂಸ್ಥೆಗಳಿಂದ ಸನ್ಮಾನಗಳು ಸಾಂಝಿಕಲಾಸಾಮ್ರಾಟ್, ಚಿತ್ರರತ್ನ ಹೀಗೆ ಹಲವಾರು ಪ್ರಶಸ್ತಿಗಳು ಸಂದಿವೆ. ಇವರ ಕಲಾಯಾತ್ರೆ ಹೀಗೆ ನಿರಂತರವಾಗಿ ಸಾಗಲಿ ಎಂದು ಹಾರೈಸೋಣ.
“ಒತ್ತಡವೇ ತುಂಬಿರುವ ಈ ಜಗತ್ತಿನಲ್ಲಿ ಕಲೆಯೇ ಒತ್ತಡವನ್ನು ಕಳೆಯುವ ಸಾಧನ” ಎಂದೇ ನಂಬಿರುವ ಹುಸೇನಿಯವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯ ಬೇಕಾಗಿದ್ದಲ್ಲಿ 9845153277ಕ್ಕೆ ಕರೆ ಮಾಡಬಹುದು ಇಲ್ಲವೆ ಇವರ ಬ್ಲಾಗ್: mysorehuseni.blogspot.in  ನಲ್ಲಿ ಸಾಂಝಿ ಕಾಗದ ಕಲೆಯ ಚಿತ್ರಗಳನ್ನು ನೋಡಬಹುದಾಗಿದೆ.

PAPER ART - GANESHA
PAPER ART – GANESHA

 

  • email
  • facebook
  • twitter
  • google+
  • WhatsApp

Related Posts

News Digest

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

May 20, 2022
News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
News Digest

Sanskrit most requested language on Google Translate

May 13, 2022
News Digest

Kerala Fire cop arrested in connection with murder of RSS activist shrinivasan

May 11, 2022
News Digest

ಶ್ರದ್ಧೆ, ಸಮರ್ಪಣಾ ಭಾವದಿಂದ ಸಾಧನೆ ಮಾಡಿದರೆ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ – ಮಂಗೇಶ್ ಭೇಂಡೆ

May 9, 2022
Next Post
RSS Samanvaya Baitak in Delhi, Official Clarification  says it is not on 'Modi-For-PM' issue

RSS Samanvaya Baitak in Delhi, Official Clarification says it is not on 'Modi-For-PM' issue

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

Independence day celebrations at Keshava Kripa – Bengaluru’s RSS Karyalaya #IndependenceDay

Independence day celebrations at Keshava Kripa – Bengaluru’s RSS Karyalaya #IndependenceDay

August 15, 2020
ಮಾದರಿ ಶಿಕ್ಷಕಿ : ಮಕ್ಕಳನ್ನು ಸರ್ಕಾರೀ ಶಾಲೆಗಳತ್ತ ಕರೆತರಲು ವಿನೂತನ ಪ್ರಯತ್ನ ಮಾಡಿದ ರೇಖಾ ಪ್ರಭಾಕರ್

ಮಾದರಿ ಶಿಕ್ಷಕಿ : ಮಕ್ಕಳನ್ನು ಸರ್ಕಾರೀ ಶಾಲೆಗಳತ್ತ ಕರೆತರಲು ವಿನೂತನ ಪ್ರಯತ್ನ ಮಾಡಿದ ರೇಖಾ ಪ್ರಭಾಕರ್

March 27, 2021
Day-74: Bharat Parikrama Yatra reached Kuttar Padavu

Day-74: Bharat Parikrama Yatra reached Kuttar Padavu

October 21, 2012
50 Photos of Indian Army Rescue Operation at Kedarnath, Uttarakhand; RSS also Joins the process

50 Photos of Indian Army Rescue Operation at Kedarnath, Uttarakhand; RSS also Joins the process

June 26, 2013

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In