Categories

ಹಿಟ್ಲರ್ ಮಾದರಿಯ ಆಡಳಿತದಿಂದ ಹಿಂದುಗಳನ್ನು ತುಳಿಯುತ್ತಿರುವ ಕಾಂಗ್ರೆಸ್ | ಚಕ್ರವರ್ತಿ ಸೂಲಿಬೆಲೆ

ಹಿಟ್ಲರ್ ಮಾದರಿಯ ಆಡಳಿತದಿಂದ ಹಿಂದುಗಳನ್ನು ತುಳಿಯುತ್ತಿರುವ ಕಾಂಗ್ರೆಸ್ | ಚಕ್ರವರ್ತಿ ಸೂಲಿಬೆಲೆ

ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ  ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಿಂದಾಗಿ ಕರ್ನಾಟಕ ತನ್ನ ಘನತೆಯನ್ನು ಕಳೆದುಕೊಳ್ಳುತ್ತಿದೆ. ಗ್ರೌಂಡ್ ಲೆವೆಲ್ ನಲ್ಲಿ ಕೆಲಸ ಮಾಡಬೇಕಿದ್ದ ಸರ್ಕಾರ ಕೇವಲ ಫೇಸ್ ಬುಕ್ ನಲ್ಲಿ ತನ್ನ ವಿರುದ್ಧ ಮಾತನಾಡುವವರನ್ನ ಹತ್ತಿಕ್ಕಲು ತನ್ನ ಅಧಿಕಾರವನ್ನ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಅಧಿಕಾರಕ್ಕೆ ಬಂದು  ಮೂರು ತಿಂಗಳು ಕಳೆಯುವಷ್ಟರಲ್ಲಿಯೇ ಹಿಂದೂ ಕಾರ್ಯಕರ್ತರ ಮೇಲೆ ಎಫ್ ಐ ಆರ್ ದಾಖಲಿಸುವ ಕೆಲಸಗಳು ನಡೆಯುತ್ತಿವೆ. ಅದರಲ್ಲೂ ಒಂದು ಹೆಜ್ಜೆ ಮುಂದೆ ಹೋಗಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನವನ್ನೇ ಮಾಡಿದ್ದಾರೆ.  ಈ ಕುರಿತು ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಸರ್ಕಾರವನ್ನು ತರಾಟೆಗೆ  ತೆಗೆದುಕೊಂಡಿದ್ದಾರೆ ಚಿಂತಕರಾದ ಚಕ್ರವರ್ತಿ ಸೂಲಿಬೆಲೆ ಅವರು.