• Samvada
Monday, May 23, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Articles

ಕಿಶ್ತ್ವಾರ್ ನಲ್ಲಿ ಭಯೋತ್ಪಾದಕರ ದಾಳಿಗೆ ತುತ್ತಾದ ಜಮ್ಮುವಿನ ಪ್ರಾಂತ ಸಹ ಸೇವಾ ಪ್ರಮುಖ್

Vishwa Samvada Kendra by Vishwa Samvada Kendra
April 9, 2019
in Articles
250
0
ಕಿಶ್ತ್ವಾರ್ ನಲ್ಲಿ  ಭಯೋತ್ಪಾದಕರ ದಾಳಿಗೆ ತುತ್ತಾದ ಜಮ್ಮುವಿನ  ಪ್ರಾಂತ ಸಹ ಸೇವಾ ಪ್ರಮುಖ್
491
SHARES
1.4k
VIEWS
Share on FacebookShare on Twitter

ದೆಹಲಿ, 8 ಏಪ್ರಿಲ್ 2019: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಮಂಗಳವಾರ ಆರೆಸ್ಸೆಸ್ ಕಾರ್ಯಕರ್ತರಾದ ಚಂದ್ರಕಾಂತ್ ಮತ್ತು ಅವರ ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್ಓ) ಮೃತಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಮರುಸ್ಥಾಪನೆ ಮತ್ತು ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ನಿಲುವಿನ ಬಗೆಗಿನ ಭಯೋತ್ಪಾದಕ ಗುಂಪುಗಳ ಹತಾಶೆ ಇಲ್ಲಿ ಎದ್ದು ತೋರುತ್ತಿದೆ.

 

READ ALSO

ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅನ್ಯಮತೀಯರ ಆರ್ಥಿಕ ಬಹಿಷ್ಕಾರ : ಒಂದು ಚರ್ಚೆ

ಡಿವಿಜಿಯವರ ವ್ಯಾಸಂಗ ಗೋಷ್ಠಿ

ಸಂಘದ ನಿಷ್ಠಾವಂತ ಕಾರ್ಯಾಕರ್ತ ಚಂದ್ರಕಾಂತ ಶರ್ಮಾ (ವಯಸ್ಸು 50 ವರ್ಷ) ಜಿಲ್ಲೆ, ವಿಭಾಗದ ಅನ್ಯಾನ್ಯ ಜವಾಬ್ದಾರಿಗಳನ್ನು ನಿರ್ವಹಿಸಿ ಪ್ರಸ್ತುತ ಆರೆಸ್ಸೆಸ್ ನ ಪ್ರಾಂತ ಸಹ ಸೇವಾ ಪ್ರಮುಖರಾಗಿದ್ದ ಕಿಶ್ತ್ವಾರ್ ಆಸ್ಪತ್ರೆಯಲ್ಲಿ ವೈದ್ಯಕೀಯ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಿಶ್ತ್ವಾರ್ ನಲ್ಲಿ ಭಯೋತ್ಪಾದಕರು ಆಸ್ಪತ್ರೆಯ ಆವರಣ ಪ್ರವೇಶಿಸಿ, ಚಂದ್ರಕಾಂತ್ ಶರ್ಮಾರನ್ನು ಹಲ್ಲೆ ಮಾಡಿ ತೀವ್ರವಾಗಿ ಗಾಯಗೊಳಿಸಿದರು. ಗಂಭೀರ ಸ್ಥಿಯಿಯಲ್ಲಿದ್ದ ಶರ್ಮರನ್ನು ತಕ್ಷಣ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಈ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳ ಪೈಕಿ ಒಬ್ಬರಾದ ರಾಜೇಂದ್ರ ಕುಮಾರ್ ಅವರೂ ದೇಹ ತ್ಯಾಗ ಮಾಡಿದರು ಮತ್ತು ಇನ್ನೊಬ್ಬರು ಆಸ್ಪತ್ರೆಯಲ್ಲಿ ತೀವ್ರತರವಾದ ಸ್ಥಿತಿಯಲ್ಲಿ ದಾಖಲಾಗಿದ್ದಾರೆ. ಚಂದ್ರಕಾಂತ್ ಶರ್ಮಾ ಅವರು ಗಂಭೀರ ಸ್ಥಿತಿಯಲ್ಲಿದ್ದರಾದ್ದರಿಂದ ಅವರನ್ನು ಜಮ್ಮು ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅವರನ್ನು ಉಳಿಸಿಕೊಳ್ಳಲಾಗಲಿಲ್ಲ.

ಈ ದುರ್ಘಟನೆಯ ನಂತರ ಭಯೋತ್ಪಾದಕರನ್ನು ಹುಡುಕಲು ಕಿಶ್ತ್ವಾರಿನಲ್ಲಿ ಹುಡುಕಾಟ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಗಡಿಯ ಪ್ರವೇಶ ಮತ್ತು ನಿರ್ಗಮನದ ಜಾಗಗಳನ್ನು ಬಂದೋಬಸ್ತ್ ಮಾಡಲಾಗಿದೆ. ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಒಂದುಗೂಡಿದ್ದಾರೆ. ಈ ಘಟನೆಯ ಸೂಕ್ಷ್ಮತೆಯಿಂದಾಗಿ, ಮೊಬೈಲ್ ಅಂತರ್ಜಾಲವನ್ನು ಕಿಶ್ತ್ವಾರಿನಲ್ಲಿ ನಿಷೇಧಿಸಲಾಗಿದೆ.

 

ಇದು ಕಿಶ್ತ್ವಾರ್ನಲ್ಲಿ ನಡೆಯುತ್ತಿರುವ ಮೊದಲ ದಾಳಿ ಅಲ್ಲ. ನವೆಂಬರ್ 2018 ರಲ್ಲಿ ಬಿಜೆಪಿ ನಾಯಕ ಅನಿಲ್ ಪರಿಹಾರ್ ಮತ್ತು ಅವರ ಸಹೋದರನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದರು. ಆ ಕೊಲೆ ನಡೆಸಿದ ಕೊಲೆಗಾರರು ಈತನಕ ಸಿಕ್ಕಿಲ್ಲ. ಅನಿಲ್ ಪರಿಹಾರ್ ಹತ್ಯೆಯ ನಂತರ ಹಿಂದುಗಳನ್ನು ಸಂಘಟಿಸುವ ಕೆಲಸದಲ್ಲಿ, ವಂಚಿತ, ಶೋಷಿತರ ಕ್ಷೇಮಕ್ಕಾಗಿ, ಸೇನೆಯಲ್ಲಿರುವವರಿಗೆ ಸಹಯೋಗ ನೀಡುವ ಕೆಲಸದಲ್ಲಿ ನಿರತರಾಗಿದ್ದ ಚಂದ್ರಕಾಂತರ ಮೇಲೂ ಭಯೋತ್ಪಾದಕ ದಾಳಿ ನಡೆಯಬಹುದೆಂದು ಶಂಕಿಸಲಾಗಿತ್ತು ಹಾಗೂ ಅದಕ್ಕಾಗಿಯೇ ಅವರಿಗೆ ಭದ್ರತೆಯನ್ನು ಒದಗಿಸಲಾಗಿತ್ತು. ಪ್ರಾಂತದಲ್ಲಿ ಭಯೋತ್ಪಾದನೆಯ ವಿರುದ್ಧವಾಗಿ ಅಲ್ಪಸಂಖ್ಯಾತರನ್ನು ರಕ್ಷಿಸಲು ಚಂದ್ರಕಾಂತ್ ಅವರು ಬಹಳಷ್ಟು ಕೆಲಸ ಮಾಡಿದ್ದರು, ಹಾಗೂ ಇದು ಅವರ ಮೇಲೆ ನಡೆದ ಮೂರನೇ ದಾಳಿಯಾಗಿದೆ.

ಅವರು ಹಾಗೂ ಅವರ ಕುಟುಂಬದವರು ಧಾರ್ಮಿಕ ಚಟುವಟಿಕೆಗಳಲ್ಲಿ, ಸಮಾಜ ಸೇವಾ ಕಾರ್ಯದಲ್ಲಿ ಆಸ್ಥೆವಹಿಸಿದವರಾಗಿದ್ದರು.
ಪತ್ನಿ ಹಾಗೂ ಹತ್ತನೆಯ ತರಗತಿಯಲ್ಲಿ, ಏಳನೆಯ ತರಗತಿಯಲ್ಲಿ ಓದುತ್ತಿದ್ದ ಮಕ್ಕಳನ್ನು ಚಂದ್ರಕಾಂತ ಶರ್ಮ ಅಗಲಿದ್ದಾರೆ.

  • email
  • facebook
  • twitter
  • google+
  • WhatsApp
Tags: Kishtwar terror attack kills RSS karyakartaRSS worker killed in jammu

Related Posts

Articles

ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅನ್ಯಮತೀಯರ ಆರ್ಥಿಕ ಬಹಿಷ್ಕಾರ : ಒಂದು ಚರ್ಚೆ

March 25, 2022
Articles

ಡಿವಿಜಿಯವರ ವ್ಯಾಸಂಗ ಗೋಷ್ಠಿ

March 17, 2022
Articles

ಗ್ರಾಹಕರ ಹಿತ ರಕ್ಷಣೆಯ ಜಾಗೃತಿ – ಇಂದಿನ ಅಗತ್ಯ

March 15, 2022
Articles

ಗಾನ ಸಾಮ್ರಾಜ್ಞಿ : ಶ್ರೀಮತಿ ಗಂಗೂಬಾಯಿ ಹಾನಗಲ್

March 5, 2022
Articles

Russia,Ukraine war – All we need to know

Articles

ಬನ್ನಿ, ಆಲೂರು ವೆಂಕಟರಾಯರನ್ನು ಓದೋಣ.‌‌‌…

Next Post
Bharat of Future: An RSS Perspective. Lecture series of Sarsanghachalak Dr. Mohan Bhagwat : Lecture 1.

ಚುನಾವಣೆಯಲ್ಲಿ ನೊಟಾ ಇದ್ದಾಗ್ಯೂ, ಅದನ್ನು ಬಳಸದೇ ಲಭ್ಯವಿರುವ ಉತ್ತಮರಾದವರನ್ನು ಬೆಂಬಲಿಸಿ ಆಯ್ಕೆಮಾಡಬೇಕು : ಸರಸಂಘಚಾಲಕ ಡಾ. ಮೋಹನ್ ಭಾಗವತ್

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

ಜಾತ್ಯತೀತತೆಯ ಮುಸುಕಿನಲ್ಲಿ ಕ್ರೈಸ್ತಮತ ಪ್ರಚಾರದ ಕುಟಿಲ ತಂತ್ರಗಳು

ಜಾತ್ಯತೀತತೆಯ ಮುಸುಕಿನಲ್ಲಿ ಕ್ರೈಸ್ತಮತ ಪ್ರಚಾರದ ಕುಟಿಲ ತಂತ್ರಗಳು

February 22, 2021
Assam Violence because of Bangladeshi Infiltrators & Vote-Greedy Politicians: Dr Togadia

Assam Violence because of Bangladeshi Infiltrators & Vote-Greedy Politicians: Dr Togadia

July 26, 2012
RSS Swayamsevaks observed #MahaShivaratri with Ghosh Path Sanchalan at Night at Kasaragod

RSS Swayamsevaks observed #MahaShivaratri with Ghosh Path Sanchalan at Night at Kasaragod

March 8, 2016

NEWS IN BRIEF – NOV 10, 2011

November 10, 2011

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In