• Samvada
Tuesday, May 24, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Articles

ಸಫಾಯಿ ಕರ್ಮಚಾರಿಗಳ ಸ್ಥಿತಿಗತಿ ಹಾಗು ಸಾಮಾಜಿಕ ಸಾಮರಸ್ಯಕ್ಕೆ ಮುನ್ನುಡಿ!

Vishwa Samvada Kendra by Vishwa Samvada Kendra
January 25, 2022
in Articles, News Digest
250
0
491
SHARES
1.4k
VIEWS
Share on FacebookShare on Twitter

ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅವಧಿಯನ್ನು ಇನ್ನು ಮೂರು ವರ್ಷಕ್ಕೆ ವಿಸ್ತರಿಸಿರುವುದಕ್ಕಾಗಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಾಮಾಜಿಕ ಸಮರಸತಾ ಮಂಚ್ ವತಿಯಿಂದ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.

ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ ಈ ನಿರ್ಣಯ ಐತಿಹಾಸಿಕವಾಗಿದೆ. ಇದರಿಂದ ಸಫಾಯಿ ಕರ್ಮಚಾರಿಗಳ ಹಿತವನ್ನು ಕಾಪಾಡಲು ಬಹಳ ಅನುಕೂಲವಾಗಿದೆ. ಹಿಂದಿನ ಸರ್ಕಾರಗಳು ಆಯೋಗದ ಅವಧಿಯನ್ನು ಕೇವಲ ಒಂದು ವರ್ಷಕ್ಕೆ ಸೀಮಿತಗೊಳಿಸುತ್ತಿದ್ದುದರಿಂದ ಆಯೋಗವು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ.
ಭಾರತದಲ್ಲಿ ಒಟ್ಟು 43,797 ಸಫಾಯಿ ಕೆಲಸಗಾರರಿದ್ದು ಅವರಲ್ಲಿ 42,500 ಕ್ಕಿಂತ ಹೆಚ್ಚಿನವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದಾರೆ ಎಂದು ಕೇಂದ್ರ ಸಾಮಾಜಿಕ ಮತ್ತು ಸಶಕ್ತೀಕರಣ ಮಂತ್ರಿಗಳು ಲೋಕಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಈ ಸಫಾಯಿ ಕಾರ್ಮಿಕರನ್ನು ಅಸ್ಪೃಶ್ಯರಲ್ಲಿಯೇ ಅಸ್ಪೃಶ್ಯರಂತೆ ನೋಡಲಾಗುತ್ತಿದ್ದು, ಅವರನ್ನು ಬೇರೆ ಸಮುದಾಯದವರು ಅಮಾನವೀಯವಾಗಿ ನಡೆಸಿಕೊಳ್ಳುತ್ತಾರೆ.

READ ALSO

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

1993 ರಲ್ಲಿ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗ ರಚನೆಯಾಗಿದ್ದರೂ ಅವರ ಹಲವಾರು ಸಮಸ್ಯೆಗಳು ಪರಿಹಾರವಾಗದೆ ಹಾಗೆಯೇ ಉಳಿದಿವೆ. ಮಲ/ಕಸ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಎಷ್ಟೋ ಜನರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. 2021 ರ ಡಿಸೆಂಬರ್ ಕೊನೆಯವರೆಗೆ ಮಹಾರಾಷ್ಟ್ರದ ಸೋಲಾಪುರದಲ್ಲಿ ನಾಲ್ಕು ಜನ, ಗುಜರಾತನ ಅಹ್ಮದಾಬಾದನಲ್ಲಿ ಮೂರು ಜನ, ಮಧ್ಯ ಪ್ರದೇಶದ ಶಿಂಗೌಲಿಯಲ್ಲಿ ಮೂರು ಜನ, ತಮಿಳುನಾಡಿನ ಚೆನ್ನೈನಲ್ಲಿ ಒಬ್ಬರು ಮತ್ತು ಕಾಂಚಿಪುರದಲ್ಲಿ ಇಬ್ಬರು ಹೀಗೆ ಹಲವಾರು ಸಫಾಯಿ ಕಾರ್ಮಿಕರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಗೌರವಾನ್ವಿತ ಸುಪ್ರೀಂ ಕೋರ್ಟಿನ ಆದೇಶದನುಸಾರ, ಆಯೋಗವು 671 ಸಫಾಯಿ ಕಾರ್ಮಿಕರ ಕುಟುಂಬಗಳಿಗೆ ರೂ. 10 ಲಕ್ಷದಷ್ಟು ಪರಿಹಾರ ಹಂಚಿದೆ. ಈ ಪರಿಹಾರವನ್ನು ಕೆಲಸ ಮಾಡುವಾಗ ಪ್ರಾಣ ಕಳೆದುಕೊಂಡ ಸಫಾಯಿ ಕಾರ್ಮಿಕರ ಕುಟುಂಬಗಳಿಗೆ ನೀಡಲಾಗಿದೆ.

ಹಲವಾರು ರಾಜ್ಯ ಸರ್ಕಾರಗಳು ಸ್ವಚ್ಛತಾ ಕಾರ್ಯವನ್ನು ಖಾಸಗಿ ಗುತ್ತಿಗೆದಾರರಿಗೆ ನೀಡಿವೆ. ಈ ಖಾಸಗಿ ಗುತ್ತಿಗೆದಾರರು ಸುರಕ್ಷತಾ ಕ್ರಮಗಳನ್ನು ಅಳವಡಿಸದ ಕಾರಣ, ಸಫಾಯಿ ಕಾರ್ಮಿಕರು ದುರ್ಮರಣಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಕಾನೂನುಗಳಲ್ಲಿರುವ ಕೆಲವೊಂದು ಲೋಪಗಳನ್ನು ಖಾಸಗಿ ಗುತ್ತಿಗೆದಾರರು ದುರುಪಯೋಗಪಡಿಸಿಕೊಳ್ಳುತ್ತಿರುವುದರಿಂದ ಸಫಾಯಿ ಕಾರ್ಮಿಕರ ಬವಣೆ ಮತ್ತು ಶೋಷಣೆ ನಿಲ್ಲುತ್ತಿಲ್ಲ. ಈ ನಿಟ್ಟಿನಲ್ಲಿ ಸಫಾಯಿ ಕರ್ಮಚಾರಿಗಳ ಆಯೋಗವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ಸಮನ್ವಯ ಸಾಧಿಸುವುದರ ಮುಖಾಂತರ ಶೋಷಣೆ ಮತ್ತು ದುರ್ಮರಣಗಳನ್ನು ತಡೆಯಬಹುದು. ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಗಂಭೀರವಾಗಿ ತೆಗೆದುಕೊಳ್ಳದಿರುವುದರಿಂದ ಕೋವಿಡ್-19 ರ ಮಹಾಮಾರಿ ಸಂದರ್ಭದಲ್ಲಿ ಸಫಾಯಿ ಕಾರ್ಮಿಕರು ಅನುಭವಿಸಿದ ಶೋಚನೀಯ ಸ್ಥಿತಿ ಇದಕ್ಕೆ ಸಾಕ್ಷಿಯಾಗಿದೆ.

ಹೀಗಾಗಿ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗಕ್ಕೆ ಸಂವಿಧಾನಾತ್ಮಕವಾಗಿ ಹೆಚ್ಚಿನ ಅಧಿಕಾರವನ್ನು ನೀಡಿ ಸಫಾಯಿ ಕಾರ್ಮಿಕರನ್ನು ರಕ್ಷಿಸುವಲ್ಲಿ ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಸಹಾಯಕವಾಗುವಂತೆ ಮಾಡಬೇಕಿದೆ. ಸಫಾಯಿ ಕಾರ್ಮಿಕರಿಗೆ ಸಾಮಾಜಿಕ ಗೌರವ, ಘನತೆ ಮತ್ತು ಸಮಾನತೆ ದೊರಕಿಸುವ ನಿಟ್ಟಿನಲ್ಲಿ ಸಾಮಾಜಿಕ ಸಮರಸತಾ ಮಂಚ್ ತನ್ನ ಪ್ರಯತ್ನ ಮತ್ತು ಹೋರಾಟವನ್ನು ಮುಂದುವರೆಸಲಿದೆ ಎಂದು  ಸಾಮಾಜಿಕ ಸಮರಸತಾ ಮಂಚ್‌ನ ಅಖಿಲ ಭಾರತೀಯ ಸಂಯೋಜಕರಾದ ಶ್ಯಾಮಪ್ರಸಾದ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

  • email
  • facebook
  • twitter
  • google+
  • WhatsApp
Tags: Labour lawsLabour welfareNarendra Modisafayi karmachari

Related Posts

News Digest

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

May 22, 2022
News Digest

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

May 20, 2022
News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
News Digest

Sanskrit most requested language on Google Translate

May 13, 2022
News Digest

Kerala Fire cop arrested in connection with murder of RSS activist shrinivasan

May 11, 2022
Next Post

ನೈಲ್ ನದಿ ಕಣಿವೆಯೂ ಹೇಮಾವತಿ ನದಿಯ ನೀರೂ....

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

ಸಂಘದ ಶಾಖೆಗಳಲ್ಲಿ ಯುವಕರ ಸಂಖ್ಯೆ ಹೆಚ್ಚಾಗಿದೆ – ಶ್ರೀ ಮನಮೋಹನ್ ವೈದ್ಯ

ಸಂಘದ ಶಾಖೆಗಳಲ್ಲಿ ಯುವಕರ ಸಂಖ್ಯೆ ಹೆಚ್ಚಾಗಿದೆ – ಶ್ರೀ ಮನಮೋಹನ್ ವೈದ್ಯ

January 7, 2022
Over 60,000 Swayamsevaks attends Devgiri Prant Mahasangam, RSS Sarasanghachalak Bhagwat addressed

Over 60,000 Swayamsevaks attends Devgiri Prant Mahasangam, RSS Sarasanghachalak Bhagwat addressed

January 13, 2015
Day-96: Bharat Parikrama Yatra at Theranamakki

Day-96: Bharat Parikrama Yatra at Theranamakki

November 14, 2012
Pejawar Swamiji visits Dalit colony- call for to stop Dalit religious conversion at Mysore

Pejawar Swamiji visits Dalit colony- call for to stop Dalit religious conversion at Mysore

August 28, 2010

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In