• Samvada
  • Videos
  • Categories
  • Events
  • About Us
  • Contact Us
Sunday, January 29, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home News Digest

‘ಸಕ್ಷಮ’ ಸಂಸ್ಥೆಯಿಂದ ಜಿಲ್ಲಾ ಸಮನ್ವಯ ಶಿಕ್ಷಣ ತರಬೇತಿ ಕಾರ್ಯಾಗಾರ

Vishwa Samvada Kendra by Vishwa Samvada Kendra
November 24, 2020
in News Digest
251
0
‘ಸಕ್ಷಮ’ ಸಂಸ್ಥೆಯಿಂದ ಜಿಲ್ಲಾ ಸಮನ್ವಯ ಶಿಕ್ಷಣ ತರಬೇತಿ ಕಾರ್ಯಾಗಾರ
492
SHARES
1.4k
VIEWS
Share on FacebookShare on Twitter

ಸಕ್ಷಮ ಸಂಸ್ಥೆಯಿಂದ ಜಿಲ್ಲಾ ಸಮನ್ವಯ ಶಿಕ್ಷಣ ತರಬೇತಿ ಕಾರ್ಯಾಗಾರ

ಸಕ್ಷಮ (ಸಮದೃಷ್ಟಿ ಕ್ಷಮತ ವಿಕಾಸ ಮತ್ತು ಅನುಸಂಧಾನ ಮಂಡಲ) ಕರ್ನಾಟಕ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ ಜಿಲ್ಲಾ ಉಪನಿರ್ದೇಶಕರು (ಆಡಳಿತ ) ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು,ಚಿಕ್ಕಬಳ್ಳಾಪುರ ಇವರ ಸಹಯೋಗದೊಂದಿಗೆ ದಿನಾಂಕ 21 -11 -2020 ರ ಶನಿವಾರದಂದು ಜಿಲ್ಲಾ ಸಮನ್ವಯ ಶಿಕ್ಷಣ ತರಬೇತಿ ಕಾರ್ಯಾಗಾರವನ್ನು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಿಗಾಗಿ (ಬಿ .ಐ .ಇ .ಆರ್. ಟಿ ) ಸಮಗ್ರ ಶಿಕ್ಷಣ ಸಭಾಂಗಣ ಉಪನಿರ್ದೇಶಕರ ಕಚೇರಿ ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾಗಿತ್ತು. ಜಿಲ್ಲಾ ಉಪನಿರ್ದೇಶಕರಾದ ಶ್ರೀಯುತ ಎಸ್.ಜಿ.ನಾಗೇಶ್ ರವರ ಘನ ಅಧ್ಯಕ್ಷತೆಯಲ್ಲಿ, ಮುಖ್ಯ ಅತಿಥಿಗಳಾಗಿ ಸಕ್ಷಮ ಚಿಕ್ಕಬಳ್ಳಾಪುರ ಘಟಕದ ಪೋಷಕರು ಹಾಗೂ S. J. C ತಾಂತ್ರಿಕ ಮಹಾವಿದ್ಯಾಲಯ ಚಿಕ್ಕಬಳ್ಳಾಪುರದ ಪ್ರಾಂಶುಪಾಲರಾದ ಡಾ. ಕೆ. ಎಂ. ರವಿಕುಮಾರ್ ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳಾದ ಶ್ರೀಮತಿ ಸುಕನ್ಯಾರವರ ಉಪಸ್ಥಿತಿಯಲ್ಲಿ ಬೆಳಗಿನ ಅವಧಿಯ ಕಾರ್ಯಗಾರವು ಪ್ರಾರಂಭವಾಯಿತು.

READ ALSO

RSS Sarkaryawah Shri Dattareya Hosabale hoisted the National Flag at Chennai

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

DYPC ಶ್ರೀಮತಿ ಸುಕನ್ಯಾ ರವರು ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ಮಾತನಾಡುತ್ತಾ ವಿಶೇಷ ಚೇತನ ಮಕ್ಕಳ ಶೈಕ್ಷಣಿಕ ಹಾಗೂ ಸರ್ವತೋಮುಖ ಅಭಿವೃದ್ಧಿಯಲ್ಲಿ ಬಿ. ಐ. ಇ. ಆರ್.ಟಿ ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ .ಆದಕಾರಣ ಪ್ರಮುಖವಾಗಿ ಫಿಜಿಯೋಥೆರಪಿ ಬಗ್ಗೆ ಪ್ರಾಯೋಗಿಕ ತರಬೇತಿ ನೀಡುವ ಸಲುವಾಗಿ ಹಾಗೂ ವಿವಿಧ ನ್ಯೂನ್ಯತೆಗಳ ಬಗ್ಗೆ (ಬುದ್ದಿ ನ್ಯೂನತೆ, ವಾಕ್ ಶ್ರವಣ ನ್ಯೂನತೆ) ಸಂಪನ್ಮೂಲ ವ್ಯಕ್ತಿಗಳಿಂದ ಹೆಚ್ಚಿನ ಮಾಹಿತಿಯನ್ನು ಒದಗಿಸುವ ಉದ್ದೇಶದಿಂದ ವಿಶೇಷ ಚೇತನ ವ್ಯಕ್ತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸೇವೆಸಲ್ಲಿಸುತ್ತಿರುವ ರಾಷ್ಟ್ರೀಯ ಸಂಘಟನೆಯಾದ ಸಕ್ಷಮ ಕರ್ನಾಟಕದ ಸಹಯೋಗದೊಂದಿಗೆ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಹಾಗೆಯೇ ಸಕ್ಷಮ ಕರ್ನಾಟಕದ ಕಾರ್ಯದರ್ಶಿಗಳಾದ ಶ್ರೀಯುತ ಡಾ. ಹರಿಕೃಷ್ಣ ರೈ ರವರು ವೆಬಿನಾರ್ ಮೂಲಕ ಸಕ್ಷಮದ ಕಿರುಪರಿಚಯ ಹಾಗೂ ಸಕ್ಷಮ ನಡೆಸುತ್ತಿರುವ ‌ವಿವಿದ ಸೇವಾ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುತ್ತ ಕಳೆದ 10 ವರ್ಷಗಳಿಂದ ಕರ್ನಾಟಕ ರಾಜ್ಯಾದ್ಯಂತ ವಿಶೇಷ ಚೇತನ ವ್ಯಕ್ತಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಸಕ್ಷಮ ಹಲವಾರು ಸಾಮಾಜಿಕ ಸೇವಾಕಾರ್ಯಗಳನ್ನು ಮಾಡುತ್ತಿದೆ, ವಿಶೇಷ ಚೇತನರಿಗೆ ಅವಕಾಶ ಹಾಗೂ ಪ್ರೋತ್ಸಾಹ ನೀಡಿದಾಗ ಅವರು ಸ್ವಾವಲಂಬಿಗಳಾಗಿ ಬದುಕಲು ಸಾಧ್ಯವಾಗುತ್ತದೆ ,ಈ ನಿಟ್ಟಿನಲ್ಲಿ ಸಕ್ಷಮ‌‌ ದಿವ್ಯಾಂಗರ ಶೈಕ್ಷಣಿಕ, ಸಾಂಸ್ಕೃತಿಕ, ಆರೋಗ್ಯ‌ ಹಾಗು ಆರ್ಥಿಕ ಸ್ವಾವಲಂಬನೆಗಾಗಿ ಅನೇಕ ಸೇವಾಕಾರ್ಯಗಳನ್ನು ಮಾಡುತ್ತಿದೆ ಎಂದು ತಿಳಿಸಿದರು

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ S. J. C ತಾಂತ್ರಿಕ ಮಹಾವಿದ್ಯಾಲಯದ ಚಿಕ್ಕಬಳ್ಳಾಪುರದ ಪ್ರಾಂಶುಪಾಲರು ಹಾಗೂ ಸಕ್ಷಮ ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಪೋಷಕರಾದ ಡಾಕ್ಟರ್ ಕೆ. ಎಂ. ರವಿಕುಮಾರ್ ರವರು ಕಾರ್ಯಾಗಾರವನ್ನು ಜ್ಯೋತಿ ಬೆಳಗಿಸಿ ಉದ್ಘಾಟನೆ ಮಾಡಿ,ಸಕ್ಷಮ ದ ಸೇವಾ ಚಟುವಟಿಕೆಗಳ ಬಗ್ಗೆ ಮಾತನಾಡುತ್ತಾ ಸ್ವಸ್ಥ ಸಮಾಜ ನಿರ್ಮಾಣ ಹಾಗೂ ರಾಷ್ಟ್ರದ ಏಳಿಗೆಯಲ್ಲಿ ವಿಶೇಷ ಚೇತನ ವ್ಯಕ್ತಿಗಳ ಪಾತ್ರವು ಸಹ ಅತ್ಯಂತ ಮಹತ್ವದ್ದಾಗಿರುತ್ತದೆ. ಸಕ್ಷಮವು 21 ವಿಧದ ನ್ಯೂನ್ಯತೆಗಳ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವ ಸೇವಾಕಾರ್ಯವನ್ನು ಮಾಡುತ್ತಿದೆ ಎಂದು ತಿಳಿಸಿದರು .ಹಾಗೆಯೇ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಮನ್ವಯ ಶಿಕ್ಷಣಕ್ಕೆ ಮಹತ್ವವಾದ ಸ್ಥಾನವನ್ನು ನೀಡಲಾಗಿದೆ. N. E. P ಯಲ್ಲಿನ ಸಮನ್ವಯ ಶಿಕ್ಷಣದ ಆಶೋತ್ತರಗಳನ್ನು ಸಾಕಾರಗೊಳಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಿಳಿಸಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಉಪನಿರ್ದೇಶಕರಾದ ಶ್ರೀಯುತ ಎಸ್. ಜಿ. ನಾಗೇಶ್ ರವರು ಮಾತನಾಡುತ್ತಾ ವಿಶೇಷ ಚೇತನ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರವು ಬಿ. ಐ. ಇ. ಆರ್. ಟಿ. ಗಳ ನೇಮಕಾತಿ ಮಾಡಿರುವ ಹಿನ್ನೆಲೆಯ ಸದುದ್ದೇಶದ ಬಗ್ಗೆ ಮನವರಿಕೆ ಮಾಡಿಕೊಟ್ಟರು ವಿಶೇಷಚೇತನ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಶಿಕ್ಷಣ ಇಲಾಖೆ ಹಮ್ಮಿಕೊಳ್ಳುತ್ತಿರುವ ಹಲವಾರು ಯೋಜನೆಗಳನ್ನು ಯಶಸ್ವಿಗೊಳಿಸುವಲ್ಲಿ ಬಿ.ಐ.ಇ.ಆರ್ .ಟಿ ಗಳ ಪಾತ್ರ ಅತ್ಯಂತ ಮಹತ್ವದ್ದಾಗಿರುತ್ತದೆ .ವೃತ್ತಿಯೊಂದಿಗೆ ಸೇವೆಯನ್ನು ಮಾಡುವ ವಿಶೇಷವಾದ ಅವಕಾಶ ಹಾಗೂ ಸೌಭಾಗ್ಯ
ಬಿ ಇ ಆರ್ ಟಿ ಗಳಿಗೆ ಲಭಿಸಿದೆ ಆದಕಾರಣ ಸಮನ್ವಯ ಶಿಕ್ಷಣದ ಬಗ್ಗೆ ಬಿ ಐ ಇ ಆರ್ ಟಿ ಗಳು ಹೆಚ್ಚಿನ ಪ್ರಾಯೋಗಿಕ ಜ್ಞಾನವನ್ನು ಪಡೆಯುವ ಸಲುವಾಗಿ ಆಯೋಜಿಸಲಾಗಿರುವ ಸಕ್ಷಮದ ಕಾರ್ಯಾಗಾರದ ಸದುದ್ದೇಶ ವನ್ನು ಫಲಪ್ರದ ಗೊಳಿಸು ನಿಟ್ಟಿನಲ್ಲಿ ಜ್ಞಾನವನ್ನು ಪಡೆದು ಅದನ್ನು ಕಾರ್ಯರೂಪದಲ್ಲಿ ತರುವಲ್ಲಿ ಪ್ರತಿಯೊಬ್ಬರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಸಲಹೆ ಮತ್ತು ಮಾರ್ಗದರ್ಶನ ನೀಡಿದರು .

ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಫಿಜಿಯೋಥೆರಪಿಸ್ಟ್ ಡಾ. ಕಿರಣ್ ಎಸ್ ಮೂರ್ತಿಯವರು, ಇಲಾಖೆಯ ವಿಷಯ ಪರಿವೀಕ್ಷಕರು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮದ ಪ್ರಾರ್ಥನೆಯನ್ನು ಬಿ.ಐ.ಇ.ಆರ್ .ಟಿ ರಾಜಪ್ಪ ರವರು ಮಾಡಿದರು ,

ಫಿಜಿಯೋ ಥೆರಪಿಸ್ಟ್ ಹಾಗೂ ಸಕ್ಷಮ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷರೂ ಆದ ಡಾ. ಕಿರಣ್ ಎಸ್ ಮೂರ್ತಿಯವರು ವಿಶೇಷ ಚೇತನ ಮಕ್ಕಳಿಗೆ ಫಿಜಿಯೋಥೆರಪಿ ಚಿಕಿತ್ಸೆಯನ್ನು ಹೇಗೆ ನೀಡಬೇಕು ಎಂಬುದರ ಪ್ರಾಯೋಗಿಕ ತರಬೇತಿ ಬೆಳಗ್ಗಿನ ಅವದಿಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ನೀಡಿದರು. A. P. C. O ಶ್ರೀಯುತ ಸುಭಾಷ್ ಚಂದ್ರಬೋಸ್ ರವರು ಕಾರ್ಯಾಗಾರಕ್ಕೆ ಎಲ್ಲರನ್ನು ಸ್ವಾಗತಿಸಿದರು ,ಬಿ.ಐ.ಇ.ಆರ್ .ಟಿ. ಕೃಷ್ಣಪ್ಪರವರು ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

ಮಧ್ಯಾಹ್ನದ ನಂತರದ ಅವಧಿಯ ಕಾರ್ಯಗಾರವನ್ನು ವೆಬಿನಾರ್ ಮೂಲಕ ಸಕ್ಷಮ‌ ಕರ್ನಾಟಕದ ಕಾರ್ಯದರ್ಶಿಗಳಾದ ಡಾ .ಹರಿಕೃಷ್ಣ ರೈ ಯವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು . ಕಾರ್ಯಕಾರಣಿ ಸದಸ್ಯೆ ಹಾಗೂ ಸೇವ ಇನ್ ಅಕ್ಷನ್ ಸಂಸ್ಥೆಯ ಉಪ ನಿರ್ದೇಶಕರು ಆದ ಶ್ರೀಮತಿ ವರದ ಹೆಗಡೆಯವರು ಬುದ್ಧಿ ನ್ಯೂನತೆಗೆ ಸಂಬಂಧಿಸಿದಂತೆ ಯಶೋಗಾಥೆಯ ಬುದ್ದಿನ್ಯೂನತೆ ಮಗುವನ್ನು ಉದಾಹರಿಸಿ ಹೇಗೆ ಹಂತಹಂತವಾಗಿ ಮಗುವನ್ನು ಸಮಾಜದ ಮುಖ್ಯವಾಹಿನಿಗೆ ತರಲಾಯಿತು ಎಂಬುದನ್ನು ವಿವರಿಸಿದರು .ಈ ಮಕ್ಕಳಿಗೆ ದೈನಂದಿನ ಜೀವನದ ಕೌಶಲ್ಯಗಳ ಕಲಿಕೆಯನ್ನುಕಲಿಸಿ ಸ್ವಾವಲಂಬಿಯಾಗಿ ಬದುಕಲು ಹೇಗೆ ಕಲಿಸಬೇಕು ಎಂಬುದನ್ನುಉದಾಹರಣೆ ಯೊಂದಿಗೆ ವಿವರಿಸಿದರು.

ತದನಂತರ ಹೆಲನ್ ಕೆಲರ್ ವಿದ್ಯಾ ಸಂಸ್ಥೆಯ ಸಂಸ್ಥಾಪಕರು ಹಾಗೂ ಸಕ್ಷಮದ ಕಾರ್ಯಕಾರಣಿ ಸದಸ್ಯೆಯಾದ ಶ್ರೀಮತಿ ಗಾಯತ್ರಿ ಯವರು ವಾಕ್ ಶ್ರವಣ ನ್ಯೂನತೆ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡುತ್ತಾ ವೈಯಕ್ತಿಕವಾಗಿ ತಮ್ಮ ಮಗನನ್ನು ಉದಾಹರಿಸಿ ಹೇಗೆ ವಾಕ್ ಶ್ರವಣ ಸಮಸ್ಯೆ ಇರುವ ತಮ್ಮ ಮಗುವಿಗೆ ಹೇಗೆ ಶಿಕ್ಷಣ ಮತ್ತು ಚಿಕಿತ್ಸೆಯನ್ನು ನೀಡಿ ಇಂದು ಇಂಜಿನಿಯರಿಂಗ್ ಪದವಿ ಪಡೆದು ಸಾಮಾನ್ಯ ವಿದ್ಯಾರ್ಥಿಗಳಿಗೆ ಬೋಧಿಸುವ ಸಾಮರ್ಥ್ಯ ಗಳಿಸಿದ್ದಾನೆ ಎಂಬ ಯಶೋಗಾಥೆಯನ್ನು ವಿವರಿಸುತ್ತ ವಾಕ್-ಶ್ರವಣ ವಿಕಲತೆಯ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳಿಗೆ ಹಲವು ಪರಿಹಾರ ಮಾರ್ಗೋಪಾಯಗಳನ್ನು ಸರಳವಾಗಿ ಹಾಗೂ ಮನಮುಟ್ಟುವಂತೆ ತಿಳಿಸಿದರು.

ಅಂತಿಮವಾಗಿ ಸಂವಾದ ಕಾರ್ಯಕ್ರಮದಲ್ಲಿ ಶ್ರೀಮತಿ ವರದ ಹೆಗಡೆ ಮತ್ತು ಶ್ರೀಮತಿ ಗಾಯತ್ರಿ ರವೀಶ್ ಅವರ ಜೊತೆಗೆ ಸಕ್ಷಮ ದ ಕಾರ್ಯಕಾರಿಣಿ ಸದಸ್ಯರಾದ ಶ್ರೀಯುತ ಸುಧೀಂದ್ರ ರವರು ಅವರು ದೃಷ್ಟಿ ನ್ಯೂನತೆವುಳ್ಳ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಹಾಗೂ ಸಂದೇಶ್ ಅವರು ದೈಹಿಕ ವಿಕಲತೆಯ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಬಿ.ಐ.ಇ.ಆರ್ .ಟಿ. ರವರು ಕೇಳಿದ ಎಲ್ಲಾ ಸಮಸ್ಯೆಗಳು ಹಾಗೂ ಪ್ರಶ್ನೆಗಳಿಗೆ ಸೂಕ್ತವಾದ ಪರಿಹಾರ ಮಾರ್ಗವನ್ನು ಹಾಗೂ ಸೂಕ್ತ ಮಾರ್ಗದರ್ಶನಗಳನ್ನು ನೀಡಿ ಸಂವಾದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು.

ಕಾರ್ಯಕ್ರಮದ ಸಮರೋಪದ ಅವದಿಯಲ್ಲಿ, ಸಕ್ಷಮ‌ ಕರ್ನಾಟಕದ ಕಾರ್ಯದರ್ಶಿಗಳಾದ ಡಾ .ಹರಿಕೃಷ್ಣ ರೈ ಯವರು ಸಕ್ಷಮದ ರಾಷ್ಟ್ರೀಯ ಯೋಜನೆಯಾದ ಕಾರ್ನಿಯಾ ಅಂಧತ್ವ ಮುಕ್ತ ಭಾರತ ಅಭಿಯಾನ ( ಕಾಂಬಾ)ದ ಬಗ್ಗೆ ಮಾಹಿತಿ ನೀಡಿ, ಸರಳ ನೇತ್ರದಾನ ಜಾಗೃತಿ ಕಾರ್ಯಕ್ರಮ ನಡೆಸಿ ಕೊಟ್ಟರು. DYPC ಶ್ರೀಮತಿ ಸುಕನ್ಯಾ ರವರು ಸಕ್ಷಮ ಕಾರ್ಯಗಾರದ ವಿಸ್ತೃತ ಅನುಭವಗಳನ್ನು ಹಂಚಿಕೊಂಡು ವಂದನಾರ್ಪಣೆಯೊಂದಿಗೆ ಕಾರ್ಯಗಾರ ಕೊನೆಗೊಳಿಸಿದರು.

  • email
  • facebook
  • twitter
  • google+
  • WhatsApp
Tags: SAKSHAMA

Related Posts

RSS Sarkaryawah Shri Dattareya Hosabale hoisted the National Flag at Chennai
News Digest

RSS Sarkaryawah Shri Dattareya Hosabale hoisted the National Flag at Chennai

August 15, 2022
News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
News Digest

ಹಿರಿಯ ಸ್ವಯಂಸೇವಕ ಡಾ.ರಾಮಮನೋಹರ ರಾವ್ ವಿಧಿವಶ – ನಾ.ತಿಪ್ಪೇಸ್ವಾಮಿ ಸಂತಾಪ

July 25, 2022
Next Post
Sri M.P. Kumar is the new President of Rashtrotthana Parishat, Sri Dwarakanath is the Vice President.

ರಾಷ್ಟ್ರೋತ್ಥಾನ ಪರಿಷತ್ ನ ತಪಸ್ / ಸಾಧನಾ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

Lets keep alive the hope of Akhand Bharat; says Togadia at BANGALORE

Lets keep alive the hope of Akhand Bharat; says Togadia at BANGALORE

August 14, 2011

Gulbarga district

November 10, 2010
Bala Sangama – Congregation of children from Seva Basatis (slums) to showcase their talent

Bala Sangama – Congregation of children from Seva Basatis (slums) to showcase their talent

January 31, 2018

RSS welcomes Kasab Execution, demands early decision on Afzal Guru

August 25, 2019

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In