• Samvada
  • Videos
  • Categories
  • Events
  • About Us
  • Contact Us
Sunday, April 2, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home News Digest

ಸೇವೆ ಮತ್ತು ಸಂಸ್ಕಾರದ ಮೂಲಕ ನಾವು ಸಮಾಜವನ್ನು ಕಟ್ಟಿಬೆಳೆಸಬೇಕಿದೆ – ಚಿತ್ರದುರ್ಗದಲ್ಲಿ ಡಾ.ಮೋಹನ್ ಭಾಗವತ್ ಅಭಿಮತ

Vishwa Samvada Kendra by Vishwa Samvada Kendra
July 12, 2022
in News Digest
301
0
ಸೇವೆ ಮತ್ತು ಸಂಸ್ಕಾರದ ಮೂಲಕ ನಾವು ಸಮಾಜವನ್ನು ಕಟ್ಟಿಬೆಳೆಸಬೇಕಿದೆ – ಚಿತ್ರದುರ್ಗದಲ್ಲಿ ಡಾ.ಮೋಹನ್ ಭಾಗವತ್ ಅಭಿಮತ
592
SHARES
1.7k
VIEWS
Share on FacebookShare on Twitter

ಇಂದು ಚಿತ್ರದುರ್ಗದ ಶ್ರೀ ಶಿವಶರಣ ಮಾದಾರಚನ್ನಯ್ಯ ಗುರುಪೀಠದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಡಾ.ಮೋಹನ್‌ ಭಾಗವತ್‌ ಅವರು ದಲಿತ, ಹಿಂದುಳಿದ ವರ್ಗಗಳ ೨೧ ಮಠಾಧೀಶರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾತನಾಡಿದರು. ಮತ್ತು ನಂತರ ನಡೆದ ಸಂವಾದದಲ್ಲಿ ಅನೇಕ ಸ್ವಾಮೀಜಿಯವರು ಕೇಳಿದ ಹಲವಾರು ಪ್ರಶ್ನೆಗಳಿಗೆ ಉತ್ತರ ಕೊಟ್ಟರು.

ಕಾರ್ಯಕ್ರಮದಲ್ಲಿ ಜಗದ್ಗುರು ಡಾ. ಶ್ರೀ ಶಾಂತವೀರ ಮಹಾಸ್ವಾಮೀಜಿ, ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ, ಜಗದ್ಗುರು ಶ್ರೀ ಡಾ.ಪುರುಷೋತ್ತಮಾನಂದ ಸ್ವಾಮೀಜಿ, ಜಗದ್ಗುರು ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಜಗದ್ಗುರು ಶ್ರೀ ಬಸವ ಮಾಚಿದೇವ ಮಹಾಸ್ವಾಮೀಜಿ, ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಶ್ರೀ ಬಸವಕುಂಬಾರ ಗುಂಡಯ್ಯ ಸ್ವಾಮೀಜಿ, ಜಗದ್ಗುರು ಶ್ರೀ ರೇಣುಕಾನಂದ ಮಹಾಸ್ವಾಮೀಜಿ, ಜಗದ್ಗುರು ಶ್ರೀ ವೇಮನಾನಂದ ಮಹಾಸ್ವಾಮೀಜಿ, ಜಗದ್ಗುರು ಶ್ರೀ ಶಾಂತಭೀಷ್ಮ ಅಂಬಿಗರ ಚೌಡಯ್ಯ ಮಹಾಸ್ವಾಮೀಜಿ, ಜಗದ್ಗುರು ಶ್ರೀ ಬಸವ ಭೃಂಗೀಶ್ವರ ಮಹಾಸ್ವಾಮೀಜಿ, ಜಗದ್ಗುರು ಡಾ. ಶ್ರೀ ಬಸವಕುಮಾರ ಮಹಾಸ್ವಾಮೀಜಿ, ಜಗದ್ಗುರು ಶ್ರೀ ದಯಾನಂದಪುರಿ ಮಹಾಸ್ವಾಮೀಜಿ, ಜಗದ್ಗುರು ಶ್ರೀ ಇಮ್ಮಡಿ ಕೇತೇಶ್ವರ ಮಹಾಸ್ವಾಮೀಜಿ, ಜಗದ್ಗುರು ಶ್ರೀ ಬಸವ ನಾಗೀದೇವ ಮಹಾಸ್ವಾಮೀಜಿ, ಪರಮಪೂಜ್ಯ ಶ್ರೀ ಜ್ಞಾನಾನಂದ ಪುರಿ ಮಹಾಸ್ವಾಮೀಜಿ, ಪರಮ ಪೂಜ್ಯ ಶ್ರೀ ಮಾತಾ ಬಿಸ್ಠದೇವಿಯವರು, ಪರಮಪೂಜ್ಯ ಬಸವ ಅರಳಯ್ಯ ಸ್ವಾಮೀಜಿ, ಪರಮಪೂಜ್ಯ ಶ್ರೀ ಪೂರ್ಣಾನಂದ ಭಾರತೀ ಸ್ವಾಮೀಜಿ, ಪರಮಪೂಜ್ಯ ಶ್ರೀ ಶ್ರೀಧರಾನಂದ ಸ್ವಾಮೀಜಿ ಆದಿಯಾಗಿ ದಲಿತ, ಹಿಂದುಳಿದ ವರ್ಗಗಳ ೨೧ ವಿವಿಧ ಮಠಾಧೀಶರು, ಪೂಜ್ಯರು ಭಾಗವಹಿಸಿದ್ದರು. ಇದರ ನೇತೃತ್ವ ವಹಿಸಿದ್ದ ಪೂಜ್ಯ ಶ್ರೀ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರು ಎಲ್ಲರನ್ನೂ ಸ್ವಾಗತಿಸಿದರು.

READ ALSO

RSS Sarkaryawah Shri Dattareya Hosabale hoisted the National Flag at Chennai

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

ನಂತರ ಸಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋಹನ್‌ ಭಾಗವತ್‌ ಅವರು “ಸಂಘಕ್ಕೆ ಹೆಚ್ಚು ಹೊಂದುವುದು ರಾಜಕೀಯ ಅಲ್ಲ. ಧಾರ್ಮಿಕತೆ ಮತ್ತು ಆಧ್ಯಾತ್ಮಿಕತೆ. ಹಾಗಾಗಿ ನಮಗೆ ಸಂಘಕ್ಕೆ ರಾಜಕೀಯದವರಿಗಿಂತ ಸ್ವಾಮೀಜಿಗಳೇ ಹೆಚ್ಚು ಹತ್ತಿರವಾಗುತ್ತಾರೆ.ನಮ್ಮ ಸಮಾಜದಲ್ಲಿ ಕೆಲವು ಭಾಗ ಹಿಂದುಳಿಯಿತು. ಏಕೆಂದರೆ ಸಂಪರ್ಕ ಮುರಿದು ಹೋಯಿತು. ಹಿಂದು ಸಮಾಜದ ಎಲ್ಲಾ ಅಂಗಗಳನ್ನು ಸುಸ್ಥಿತಿಯಲ್ಲಿಡುವುದು ಕರ್ತವ್ಯ. ಮತ್ತೆ ಮತ್ತೆ ಸೇರುವುದರಿಂದ ಇದು ಸರಿ ಆಗುತ್ತದೆ. ಇದನ್ನೇ ಸಮರಸತೆ ಎನ್ನುವರು. ಸಂಘ ಇದೇ ಪ್ರಯತ್ನ ಮಾಡುತ್ತಿದೆ. ಸಮಾಜದ ಎಲ್ಲಾ ಅಂಗಗಳ ಬಗ್ಗೆ ಸಂವೇದನೆ ಇರಬೇಕು. ಪರಸ್ಪರ ಆಗಾಗ ಸೇರುವುದರಿಂದ ನಮಗೆ ಪರಸ್ಪರರ ಬಗ್ಗೆ ಅರಿವು ಹೆಚ್ಚಾಗುತ್ತದೆ. ಅರಿವು ಹೆಚ್ಚಾದಾಗ ಸಂಶಯಗಳು, ಅಪನಂಬಿಕೆಗಳು ದೂರ ಆಗುತ್ತವೆ. ಆಗ ಮನಸ್ಸುಗಳು ಒಂದಾಗುತ್ತವೆ. ರಾ.ಸ್ವ.ಸಂಘ ಮತ್ತು ಮಠಗಳು ಹಾಗೂ ಸ್ವಾಮೀಜಿಗಳೂ ಪರಸ್ಪರ ಮತ್ತೆ ಮತ್ತೆ ಭೇಟಿ ಮಾಡುತ್ತಿರಬೇಕು.”ಎಂದರು.

ಅವರು ಮುಂದುವರೆದು ಮಾತನಾಡುತ್ತಾ, “ಹಿಂದೂ ಸಮಾಜದ ಪ್ರಮುಖ ಸಮಸ್ಯೆಗಳಾದ ಅಸ್ಪೃಶ್ಯತೆ, ವಿಷಮತೆ, ಅಸಮಾನತೆ ಇವುಗಳು ಮುಖ್ಯವಾಗಿ ಇರುವುದು ನಮ್ಮ ಮನಸ್ಸಿನಲ್ಲಿ. ಶಾಸ್ತ್ರಗಳಲ್ಲಿ ಸಮಸ್ಯೆ ಇಲ್ಲ. ಮತ್ತು ಈ ಸಮಸ್ಯೆಗಳು ಹಲವಾರು ಶತಮಾನಗಳಿಂದ ನಮ್ಮ ಮನಸ್ಸಿನಲ್ಲಿ ಉಳಿದಿವೆ. ಹಾಗಾಗಿ ಇದರ ಪರಿಹಾರಕ್ಕೂ ಸಮಯ ತಗುಲುವುದು. ನಿಧಾನವಾಗಿ ಇದನ್ನು ಮನಸ್ಸಿನಿಂದ ತೆಗೆಯುವ ಕೆಲಸವಾಗಬೇಕಿದೆ. ಅಲ್ಲಿಯವರೆಗೂ ಸಹನೆ ಮತ್ತು ಧೈರ್ಯವನ್ನು ನಾವು ಹೊಂದಬೇಕು. ಅದು ಆಗೇ ಆಗುತ್ತದೆ. ಮತ್ತು ಆ ಕಾರ್ಯದಲ್ಲಿ ನಾವು ನಿರತರಾಗಿದ್ದೇವೆ.ಭಾರತ ಭಾರತವಾಗಿ ಉಳಿಯಬೇಕಾದರೆ, ನಾವು ನಾವಾಗಿ ಉಳಿಯಬೇಕು. ಇಲ್ಲದಿದ್ದರೆ ಭಾರತ ಭಾರತವಾಗಿ ಉಳಿಯುವುದಿಲ್ಲ. ಹಾಗಾಗಿ ಧರ್ಮವು ಎಲ್ಲಕಡೆ ಓತಪ್ರೋತವಾಗಿ ಇರುವಂತೆ ಆಗಬೇಕು. ಮತಾಂತರ ಆಗುವುದರಿಂದ ನಮ್ಮಲ್ಲಿ ಪ್ರತ್ಯೇಕತೆಯನ್ನು ತರುತ್ತದೆ. ಮೂಲದಿಂದ ಬೇರಿನಿಂದ ಮತಾಂತರ ಆದವರು ದೂರ ಉಳಿಯುವಂತೆ ಮಾಡುತ್ತದೆ. ಹಾಗಾಗಿ ನಾವು ಮತಾಂತರವನ್ನು ತಡೆಯುವ ಪ್ರಯತ್ನ ಮಾಡಬೇಕು” ಎಂದರು.

“ಸಂಸ್ಕಾರದ ಬಗ್ಗೆಯೂ ಗಮನಹರಿಸಬೇಕಿದೆ. ದೊಡ್ಡವರಿಗೆ ಗೌರವಕೊಡುವುದು, ನಮ್ಮ ಮಾತೆಯರು ಸೋದರಿಯಲ್ಲಿ ಹೇಗೆ ನಡೆದುಕೊಳ್ಳಬೇಕು? ಇವುಗಳನ್ನು ನಮ್ಮ ಸಮಾಜದ ನವ ಪೀಳಿಗೆಗಳಿಗೆ ಹೇಳಿಕೊಡಬೇಕಿದೆ. ಆಧುನಿಕ ವಿದ್ಯಾಭ್ಯಾಸದೊಂದಿಗೆ ಶಿಕ್ಷಣ ಸಿಗುತ್ತಿದೆ, ಆದರೆ ಸಂಸ್ಕಾರ ಸ್ವಲ್ಪ ದೂರ ಆಗುತ್ತಿದೆ. ಸಂಸ್ಕಾರ, ನಿಷ್ಠೆ ದೃಢವಾಗಬೇಕು ಎಂದರೆ ಏನಾದರೂ ಒಂದು ರೀತಿಯ ಉಪಾಸನೆಯನ್ನು ಜೋಡಿಸಿಕೊಳ್ಳಬೇಕು. ನೀವು, ಸ್ವಾಮೀಜಿಗಳು. ಸಾಧನೆ, ನಿಯಮಿತ ತಪಸ್ಸನ್ನು ನೀವು ಮಾಡುವವರು. ನಿಮ್ಮ ಜೀವನದ ಕಾರಣಕ್ಕಾಗಿ ನೀವು ಇದನ್ನು ಕೊಡಲು ಅಧಿಕಾರಿಗಳು. ನೀವು ಸಮಾಜವನ್ನು ಸಂಸ್ಕಾರವಂತ ಸಮಾಜವನ್ನಾಗಿ ಎಬ್ಬಿಸಿ ನಿಲ್ಲಿಸಬೇಕು. ಎಲ್ಲರೂ ಒಟ್ಟಾಗಿ ಮುನ್ನಡೆಯಬಹುದು. ಮುನ್ನಡೆಯಬೇಕು. ಸೇವೆ ಮತ್ತು ಸಂಸ್ಕಾರದ ಮೂಲಕ ನಾವು ಸಮಾಜವನ್ನು ಕಟ್ಟಿಬೆಳೆಸಬೇಕಿದೆ. ಸತ್ಯದ ಸಾಧನೆ ಮಾಡುತ್ತಾ ಸರ್ವರ ಸೇವೆ ಮಾಡಬೇಕಿದೆ. ಆತ್ಮನೋ ಮೋಕ್ಷಾರ್ಥಂ ಜಗದ್ಧಿತಾಯ ಚ ಎಂದು ಹೇಳುತ್ತೇವೆ. ಆ ರೀತಿ ಮಾಡಬೇಕಿದೆ.ಇಂದು ನೀವೆಲ್ಲಾ ಮಠಾಧೀಶರು ಮಾಡುತ್ತಿರುವ ಪ್ರಯತ್ನ ಬೀಜರೂಪದಲ್ಲಿದೆ. ಇದು ಖಂಡಿತವಾಗಿ ಹೆಮ್ಮರವಾಗಿ ಬೆಳೆಯುತ್ತದೆ. ಫಲವನ್ನೂ ನೆರಳನ್ನೂ ನೀಡುತ್ತದೆ. ಮಾತ್ರವಲ್ಲ ಸಾವಿರಾರು ಬೀಜಗಳನ್ನು ಸೃಷ್ಟಿಸಿ ಅವೂ ಭೂಮಿಗೆ ತಾಗಿ ಸಸಿಗಳಾಗಿ ಬೆಳೆದು ಹೆಮ್ಮರವಾಗಿ ನಿಂತು ಫಲಗಳನ್ನೂ ನೀಡುವಂತೆ ಖಂಡಿತವಾಗಿ ಬೆಳೆದೇ ಬೆಳೆಯುತ್ತವೆ.”

ಸರಸಂಘಚಾಲಕರು ಮಾತನಾಡುತ್ತಾ “ರಾಷ್ಟ್ರೀಯ ಸ್ವಯಂಸೇವಕ ಸಂಘ ನಿಮ್ಮ ಜೊತೆ ಇದೆ. ಏನೇಬರಲಿ, ಸಂಘ ನಿಮ್ಮ ಜೊತೆ ಇದೆ. ನಮ್ಮದೇ ಒಂದು ಶೈಲಿ ಇದೆ. ಆ ಶೈಲಿಯಲ್ಲೇ ನಾವು ಮಾಡುತ್ತೇವೆ. ಸಂಘದ ರೀತಿ ಅತ್ಯಂತ ಪ್ರಾಕೃತಿಕವಾಗಿದ್ದು. ಸಂಘದ ಗತಿ ನಿಧಾನ ಗತಿ. ನಿಧಾನವಾಗಿ ಹೋದರೆ ದೂರಸಾಗಬಹುದು. ನಿಮ್ಮ ಜೊತೆ ಇದ್ದೇವೆ. ನಿಮ್ಮ ಜೊತೆ ಇರುತ್ತೇವೆ. ನಾವು ದೊಡ್ಡವರು ಎಂಬ ಕಾರಣಕ್ಕಾಗಿ ಅಲ್ಲ. ಬದಲಾಗಿ ಇದು ನಮ್ಮ ಕರ್ತವ್ಯ, ಹಾಗಾಗಿ. ನೀವು ಸಂಘವನ್ನು ತಿಳಿದುಕೊಳ್ಳುವ ಪ್ರಯತ್ನವನ್ನು ಮಾಡಿ. ನಾವೆಲ್ಲರೂ ಹಿಂದು ಸಮಾಜದ ಅವಿಭಾಜ್ಯ ಅಂಗ” ಎಂದರು.

ಶ್ರೀ ರವಿ ಮಲ್ಲಾಪುರ ಅವರು ಎಲ್ಲರಿಗೂ ವಂದಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾ. ತಿಪ್ಪೇಸ್ವಾಮಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ಆರೆಸ್ಸೆಸ್‌ನ ಸಹಸರಕಾರ್ಯವಾಹರಾದ ಮುಕುಂದ, ಕ್ಷೇತ್ರೀಯ ಪ್ರಚಾರಕರಾದ ಸುಧೀರ, ಕ್ಷೇತ್ರೀಯ ಕಾರ್ಯವಾಹರಾದ ನಾ.ತಿಪ್ಪೇಸ್ವಾಮಿ, ಪಟ್ಟಾಭಿರಾಮ, ಗುರುಪ್ರಸಾದ, ನಂದೀಶ, ಸಾಮರಸ್ಯ ವೇದಿಕೆಯ ವಾದಿರಾಜ, ವಿಶ್ವ ಹಿಂದೂ ಪರಿಷತ್‌ನ ಬಸವರಾಜ ಅವರು ಸಂವಾದ ಸಭೆಯಲ್ಲಿದ್ದರು.

  • email
  • facebook
  • twitter
  • google+
  • WhatsApp
Tags: Chitradurgamadara swamijiSant samaveshaSarsanghachalakSarsanghachalak Dr Mohan Bhagwatsarsanghachalak in karnatakaSarsanghachalak Mohan Bhagwat

Related Posts

RSS Sarkaryawah Shri Dattareya Hosabale hoisted the National Flag at Chennai
News Digest

RSS Sarkaryawah Shri Dattareya Hosabale hoisted the National Flag at Chennai

August 15, 2022
News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
News Digest

ಹಿರಿಯ ಸ್ವಯಂಸೇವಕ ಡಾ.ರಾಮಮನೋಹರ ರಾವ್ ವಿಧಿವಶ – ನಾ.ತಿಪ್ಪೇಸ್ವಾಮಿ ಸಂತಾಪ

July 25, 2022
Next Post

ವ್ಯಾಸಪೂರ್ಣಿಮವೂ… ಪೂರ್ಣತಮ ಬದುಕೂ..

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
Remembering RSS Founder Dr KB Hedgewar on his 123th Birthday on Yugadi

Remembering RSS Founder Dr KB Hedgewar on his 123th Birthday on Yugadi

December 9, 2013
Shri Guruji Golwalkar – Biography By H. V. Sheshadri

Shri Guruji Golwalkar – Biography By H. V. Sheshadri

April 18, 2011

EDITOR'S PICK

Watch Sri Dattatreya Hosabale on Swami Vivekananda’s Vision at Belagavi

Watch Sri Dattatreya Hosabale on Swami Vivekananda’s Vision at Belagavi

January 19, 2018
ಬೆಂಗಳೂರು: ABVPಯಿಂದ ‘ನಶಾಮುಕ್ತ ಭಾರತ ಅಭಿಯಾನ ರ‍್ಯಾಲಿ ಹಾಗೂ ಪ್ರತಿಜ್ಞಾವಿಧಿ’ ಕಾರ್ಯಕ್ರಮ

ಬೆಂಗಳೂರು: ABVPಯಿಂದ ‘ನಶಾಮುಕ್ತ ಭಾರತ ಅಭಿಯಾನ ರ‍್ಯಾಲಿ ಹಾಗೂ ಪ್ರತಿಜ್ಞಾವಿಧಿ’ ಕಾರ್ಯಕ್ರಮ

January 21, 2015
RSS says Ayodhya reconciliation should be within legal framework

RSS says Ayodhya reconciliation should be within legal framework

October 5, 2010
Bharat of Future: An RSS Perspective. Lecture series of Sarsanghachalak Dr. Mohan Bhagwat : Lecture 1.

ಪಾಸಿಟಿವಿಟಿ ಅನ್ಲಿಮಿಟೆಡ್ ಉಪನ್ಯಾಸ ಮಾಲಿಕೆ ದಿನ ೫: ಮನಸ್ಸನ್ನು ಪಾಸಿಟಿವ್‌ ಆಗಿಟ್ಟು ಶರೀರವನ್ನು ಕೊರೊನಾದಿಂದ ನೆಗೆಟಿವ್‌ ಆಗಿರಿಸೋಣ – ಡಾ. ಮೋಹನ್‌ ಭಾಗವತ್‌ #PositivityUnlimited

May 15, 2021

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In