• Samvada
  • Videos
  • Categories
  • Events
  • About Us
  • Contact Us
Monday, February 6, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Articles

ಹಿರಿಯ ಆರೆಸ್ಸೆಸ್ ಪ್ರಚಾರಕರಾದ ನ ಕೃಷ್ಣಪ್ಪನವರ ಕುರಿತು ಕಿರುತೆರೆ ನಿರ್ದೇಶಕ ಟಿ .ಎನ್ ಸೀತಾರಾಂ ಲೇಖನ

Vishwa Samvada Kendra by Vishwa Samvada Kendra
November 26, 2013
in Articles, News Digest
250
3
ಹಿರಿಯ ಆರೆಸ್ಸೆಸ್ ಪ್ರಚಾರಕರಾದ ನ ಕೃಷ್ಣಪ್ಪನವರ ಕುರಿತು ಕಿರುತೆರೆ ನಿರ್ದೇಶಕ ಟಿ .ಎನ್  ಸೀತಾರಾಂ ಲೇಖನ

Na Krishnappa, Senior RSS Pracharak, (A noted Cancer Survivor in Karnataka)

491
SHARES
1.4k
VIEWS
Share on FacebookShare on Twitter

An article by noted artist- Director TN Sitaram on Senior RSS Pracharak Na Krishnappa, in ‘Mrutyu Mitra’ a book in Kannada on Cancer Survivors. 

Na Krishnappa, Senior RSS Pracharak, (A noted Cancer Survivor in Karnataka)
ಕ್ಯಾನ್ಸರ್ ಎಂಬ ಭಯಾನಕ ವ್ಯಾಧಿಯನ್ನು ಯಶಸ್ವಿಯಾಗಿ ಎದುರಿಸಿ ಅರೋಗ್ಯ ಪೂರ್ಣ ಜೀವನ ಸಾಗಿಸುತ್ತಿರುವ ಸಾಧಕರ ಜೀವನ-ಸಾಧನೆಯ ಕುರಿತು ಬೆಳಕು ಚೆಲ್ಲುವ ಪುಸ್ತಕವೇ ಮೃತ್ಯು ಮಿತ್ರ . ಬೆಂಗಳೂರಿನ ಜಿ ಎಸ ಭಟ್ ಬರೆದಿರುವ ಈ ಪುಸ್ತಕವನ್ನು ಪ್ರಕಟಿಸಿದವರು ಗೋವರ್ಧನ್ ಅಂಕೋಲೆಕರ್. ಕ್ರಿಕೆಟಿಗ ಯುವರಾಜ್ ಸಿಂಗ್, ಕಲಾವಿದ ಎನ್ ಮುರಳೀಧರ್ ಕಷಿಕರ್, ಅಲೆಕ್ಸಾಂಡರ್, ರಮಿ  ಸೇಥ್, ಬ್ಯಾಂಕ್ ಮ್ಯಾನೇಜರ್ ಶ್ರೀಕಾಂತ್ , ಮಾಯಾ ತಿವಾರಿ ಸೇರಿದಂತೆ ಅನೇಕರ ಜೀವನಗಾಥೆಯನ್ನು ಓದುಗರಿಗೆ ಪರಿಚಯಿಸುತ್ತದೆ ಮೃತ್ಯು ಮಿತ್ರ .  ಕ್ಯಾನ್ಸರ್ ನ್ನು ತಮ್ಮ ಶಿಸ್ತು ಬದ್ಧ ಜೀವನ ಶೈಲಿಯ ಮೂಲಕ ಬಹು ವರ್ಷದ ಹಿಂದೆಯೇ ಗೆದ್ದು ಸಂತೃಪ್ತಿಯ ಜೀವನ ನಡೆಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್)ದ ಹಿರಿಯ ಪ್ರಚಾರಕರಾದ ನ ಕೃಷ್ಣಪ್ಪನವರ ಬದುಕನ್ನೂ ಓದುಗರಿಗೆ ತೆರೆದಿಡುತ್ತದೆ ಈ ಪುಸ್ತಕ. ಕೃಷ್ಣಪ್ಪನವರ ಕುರಿತು ಕಿರುತೆರೆ ನಿರ್ದೇಶಕ, ಕಲಾವಿದ ಟಿ .ಎನ್  ಸೀತಾರಾಂ ಬರೆದಿರುವ ಲೇಖನವನ್ನು ಇಲ್ಲಿ ನೀಡಲಾಗಿದೆ.- ಸಂ 
TN Seetharam, Noted TV Serial Director, Actor

(ಮೃತ್ಯು ಮಿತ್ರ ಪುಸ್ತಕಕ್ಕೆ ಬರೆದ ಮುನ್ನಡಿಯಿಂದ)

ನೆಚ್ಚಿನ ಕೃಷ್ಣಪ್ಪನವರಿಗೆ ಪ್ರಣಾಮಗಳು.

READ ALSO

RSS Sarkaryawah Shri Dattareya Hosabale hoisted the National Flag at Chennai

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

ನೆನಪಿದೆಯಾ? ಕೃಷ್ಣಪ್ಪನವರೆ ಹೀಗೆ ಪತ್ರ ಶುರು ಮಾಡುವುದನ್ನು ನೀವೇ ನನಗೆ ಕಲಿಸಿಕೊಟ್ಟಿದ್ದು. 1932ರಲ್ಲಿ ನಾನಿನ್ನೂಚಿಕ್ಕ ಹುಡುಗ.ಮಿಡ್ಲ್‌ಸ್ಕೂಲ್‌ನಲ್ಲಿಓದುತ್ತಿದ್ದೆನೆಂದು ನೆನಪು.ಯಾವುದೋಅನಾರೋಗ್ಯಕ್ಕೆ ನನ್ನನ್ನು ಚಿಕ್ಕಬಳ್ಳಾಪುರದ ಮಿಷನ್ ಆಸ್ಪತ್ರೆಗೆ ಸೇರಿಸಿದ್ದರು.ಅಲ್ಲಿ ನನ್ನ ವಿಳಾಸಕ್ಕೆ ನೀವು ನೆಚ್ಚಿನರಾಜ, ಅಕ್ಕರೆಯ ನೆನಪುಗಳು ಎಂದು ರುಜು ಮಾಡಿ 9 ಪುಟಗಳ ಒಂದು ಪತ್ರ ಬರೆದಿದ್ದಿರಿ (ಮನೆಯಲ್ಲಿ ನನ್ನನ್ನುರಾಜಎಂದುಕರೆಯುತ್ತಿದ್ದರು). ನನ್ನನ್ನುಅದಕ್ಕೆ ಮುಂಚೆ ನೀವು 5-6 ಬಾರಿ ನಮ್ಮ ಮನೆಯ ಹತ್ತಿರವಿದ್ದ ಮೈದಾನದಲ್ಲಿ ನೋಡಿದ್ದೀರಿ ಅಷ್ಟೆ. ಆದರೆ ನಾನು ಯಾತನೆಯಿಂದ ಮನಸ್ಸೆಲ್ಲ ಮಂಕಾಗಿ ಮಲಗಿದ್ದಾಗ – ಒಬ್ಬ 10 ವರ್ಷದ ಚಿಕ್ಕ ಹುಡುಗನಿಗೆಅಂತಃಕರಣ, ವಿಶ್ವಾಸ ಮತ್ತು ಭರವಸೆತುಂಬಿದ ೯ ಪುಟದ ಪತ್ರ ಬರೆದಿದ್ದಿರಿ. ಖಾಯಿಲೆ ಬಿದ್ದಿರುವಚಿಕ್ಕಅಪರಿಚಿತ ಹುಡುಗನ ಮೇಲೆ ಯಾರುತೋರಿಸುತ್ತಾರೆಅಂಥ ವಿಶ್ವಾಸ ಈ ಕಾಲದಲ್ಲಿ? ಆ ಪತ್ರ ಬಂದಾಗ ಖಾಯಿಲೆಯಿಂದ ಮಲಗಿದ್ದ ನಾನು ಅಪರೂಪದ ಸಂಭ್ರಮ ಪಟ್ಟಿದ್ದೆ. ನನಗೆ ಮೊದಲ ಪತ್ರವಿರಬೇಕು. ಪತ್ರದ ತುಂಬಾ ಅಂತಃಕರಣ, ಸುಂದರ ಅಕ್ಷರಗಳು, ಸ್ವಚ್ಛ ಭಾಷೆ. ಅಂಥ ಪತ್ರವನ್ನು ನಾನು ಮುಂಚೆ ನೋಡಿಯೂ ಇರಲಿಲ್ಲ. ಆಮೇಲೆ ನಮ್ಮ ಮನೆಯಲ್ಲಿ ಎಷ್ಟೋ ವರ್ಷ ನಿಮ್ಮ ಪತ್ರದ್ದೇ ಮಾತು. ಪತ್ರಬರೆದರೆಕೃಷ್ಣಪ್ಪನವರಥರ ಬರೆಯಬೇಕು ಎಂದು ಎಲ್ಲರೂ ಅಂದುಕೊಳ್ಳುವಷ್ಟು ಸುಂದರವಾಗಿತ್ತು ನಿಮ್ಮ ಪತ್ರ.ಪಾಯಶಃ ನಿಮ್ಮ ಪತ್ರದ ಭಾಷೆ ಮತ್ತು ಅಂತರ್ಗತ ಭಾವ ಕೋಶತೆ ನನ್ನನ್ನು ಸಾಹಿತ್ಯ ಮತ್ತು ಕಲೆಯಕಡೆ ಸೆಳೆದವು ಎಂದು ನನ್ನ ಭಾವನೆ.

ನಿಮಗೇ ಗೊತ್ತು ನಮ್ಮತಂದೆಕಾಂಗ್ರೆಸ್‌ನವರು.ತುಂಬಾ ಶಿಸ್ತಿನ ಮನುಷ್ಯರು. ಹಳೆಯ ಕಾಂಗ್ರೆಸ್‌ನವರಿಗೆ ಸಂಘದವರನ್ನು ಕಂಡರೆ ಕೋಪವಿರುತ್ತಿದ್ದ ದಿನಗಳು. ಅಂಥಾ ನಮ್ಮ ಮನೆಯಲ್ಲಿಕೂಡ ನಿಮ್ಮನ್ನುಕಂಡೆ ನಮ್ಮ ಮನೆಯಎಲ್ಲರಿಗೂ ಎಷ್ಟು ಪ್ರೀತಿ ವಿಶ್ವಾಸ. ನೆನಪಿದೆಯಾ?ಅಷ್ಟು ವಿಶ್ವಾಸ, ಅಂತಃಕರಣತಮ್ಮಲ್ಲಿಕಾಣುತ್ತಿದ್ದೆವು ನಾವು.

ನಾನು ಹೈಸ್ಕೂಲ್‌ನಲ್ಲಿ ಓದುತ್ತಿದ್ದಾಗ ಕರ್ಮಠ ವಾತಾವರಣದಲ್ಲಿ ಬೆಳೆದ ಹುಡುಗ.ಮತ ಮತ್ತು ಧರ್ಮಗಳು ಒಂದೇಎಂದು ನಂಬಿದ ವಾತಾವರಣ ಅದು. ಬೇರೆ ಜಾತಿಯವರ ಮನೆಯಲ್ಲಿ ನೀರು ಕುಡಿಯಲೂ ಕೂಡ ಬೇಡವೆನ್ನುತ್ತಿದ್ದ ಸಂಪ್ರದಾಯ. ನೀವು ಕಾರ್ಯಾಲಯದಲ್ಲಿ ವಾಸಮಾಡುತ್ತಿದ್ದಿರಿ. ಊಟಕ್ಕೆ ಯಾರದಾದರೂ ಮನೆಗೆ ಹೋಗುತ್ತಿದ್ದಿರಿ. ನೀವು ಜಾತಿ ಆಧಾರದ ವಿಂಗಡಣೆಯನ್ನುಎತ್ತಿ ಹಿಡಿಯುವ ಸಂಘಟನೆಗೆ ಸೇರಿದವರೆಂದು ನಮ್ಮ ಬೀದಿಯಲ್ಲಿಎಲ್ಲರೂ ಮಾತನಾಡಿಕೊಳ್ಳುತ್ತಿದ್ದರು. ಆದರೆ ಅತ್ಯಂತ ಕೆಳಜಾತಿಗೆ ಸೇರಿದ ಹುಡುಗನೊಬ್ಬನ ಗುಡಿಸಲಿಗೆ ಆಗಾಗ ನೀವು ಊಟಕ್ಕೆ ಹೋಗುತ್ತಿದ್ದುದನ್ನು ನಾನು ನೋಡಿ ಗಾಬರಿಗೊಳ್ಳುತ್ತಿದ್ದೆ. ಮಂಕಾಗುತ್ತಿದ್ದ ನನಗೆ ಜಾತಿಯ ತಾರತಮ್ಯ ಎಷ್ಟು ಅರ್ಥಹೀನ ಎಂಬುದನ್ನು ನನ್ನಚಿಕ್ಕ ವಯಸ್ಸಿನ ಬುದ್ಧಿಗೆ ಅರ್ಥವಾಗುವ ರೀತಿಯಲ್ಲಿ ಹೇಳುತ್ತಿದ್ದಿರಿ. ನೋಡು ರಾಜ, ನಮ್ಮ ಮನೆಯಲ್ಲೂ ಬಾವಿಯಿಂದ ನೀರು ತರುತ್ತಾರೆ,  ಅವರ ಮನೆಯಲ್ಲಿಯೂ ಬಾವಿಯಿಂದ ನೀರು ತರುತ್ತಾರೆ. ಅಲ್ಲಿಗೆ ನೀರು ಒಂದೇ….. ಭೂಮಿಯಲ್ಲಿ ಬೆಳೆದ ಭತ್ತದಿಂದ ಅಕ್ಕಿಯಾಗುತ್ತಷ್ಟೆ. ಅಕ್ಕಿಗೆ ಅಕ್ಕಿ ಒಂದೇ. ಬೆಂಕಿಗೆ ಮೈಲಿಗೆ ಇಲ್ಲ. ಅಲ್ಲಿಗೆ ಅವರ ಮನೆಯಲ್ಲಿ ಮಾಡುವ ಅನ್ನಕ್ಕೂ ನಮ್ಮರೀತಿಯಲ್ಲಿ ಮಾಡುವ ಅನ್ನಕ್ಕೂ ಏನು ವ್ಯತ್ಯಾಸ?ಎರಡೂ ಒಂದೇ ಅಲ್ಲವೆ ಎಂದು ನಗುತ್ತಾ ನನ್ನನ್ನು ಸಮಾಧಾನ ಮಾಡುತ್ತಿದ್ದಿರಿ. ನಾನು ನಂತರ ಎಷ್ಟೋ ವರ್ಷ ಕಾಲೇಜಿನ ಬಾಳುಗಳಲ್ಲಿ ಜಾತಿಯ ಒಂದು ಮಾತು ಬಂದರೆ ಅದೇ ಉದಾಹರಣೆಕೊಟ್ಟು ಎಲ್ಲರನ್ನು ಬೆರಗುಗೊಳಿಸುತ್ತಿದ್ದೆ. ನಿಜವಾಗಿಯೂ ನಿರ್ಮಲ ಮನಸ್ಸಿನ ಜಾತ್ಯಾತೀತ ವ್ಯಕ್ತಿ ನೀವು.

ನೀವು ನಂಬಿದ ಸಂಘಟನೆಯ ಸೈದ್ಧಾಂತಿಕ ತತ್ವಗಳಿಗೆ ನಾನು ಬಹುದೂರ ಹೋಗಿ ಸಮಾಜವಾದಿ ಪಕ್ಷಕ್ಕೆ ಸೇರಿದಾಗಲೂ ನಿಮ್ಮ ಬಗೆಗಿನ ವೈಯಕ್ತಿಕಗೌರವ ನನಗೆ ಕಿಂಚಿತ್ತೂ ಕಡಿಮೆಯಾಗಲಿಲ್ಲ. ಅಂಥದೊಡ್ಡ ವ್ಯಕ್ತಿ ನೀವು. ಆಗ ನಿಮಗೆ 28-30 ವಯಸ್ಸು ಅನಿಸುತ್ತೆ.ದೇಹದ ಮತ್ತು ಬದುಕಿನಆಕರ್ಷಣೆಯ ವಿರುದ್ಧ ಹೋರಾಟ ಮಾಡುವುದು ಸುಲಭದ ಮಾತಲ್ಲ. ಆದರೆ ಆ ವಯಸ್ಸಿನಲ್ಲಿ ನೀವು ಎಂಥ ನಿಸ್ಪೃಹ ಬದುಕು ಬದುಕುತ್ತಿದ್ದಿರಿಎಂದು ಅನೇಕ ವರ್ಷಗಳ ನಂತರ ನನಗೆ ಅರಿವಾಗತೊಡಗಿತು. ಈ ಸಮಾಜಕ್ಕೆ ನನ್ನ ಬದುಕುಅರ್ಪಣೆ ಎಂದುಆತ್ಮವಿಶ್ವಾಸದ ನಗೆ ಬೀರುತ್ತಾ ಹೇಳುತ್ತಿದ್ದಿರಿ. ನಿಮ್ಮಔಷಧಿಗಾಗಿ ಕೊಂಡುಕೊಂಡ ಒಂದು ಆಗಿನ ಮೂರು ಪೈಸೆಯ ನಿಂಬೆಹಣ್ಣಿನ ಲೆಕ್ಕ ಕೂಡ ಬರೆದುಕೊಳ್ಳುತ್ತಿದ್ದಿರಿ. ಅದನ್ನು ನಿಮ್ಮಕೇಂದ್ರ ಶಾಖೆಗೆ ಕಳುಹಿಸುತ್ತಿದ್ದರೋ ಏನೋ ಗೊತ್ತಿಲ್ಲ. ಅಷ್ಟು ನಿಸ್ಪೃಹ ಮನುಷ್ಯರು ನೀವು. ನಾನು ಮೆಚ್ಚುವ ಗಾಂಧಿಯಂತಅತ್ಯಂತ ಸರಳ ಬದುಕನ್ನು ಬದುಕಿದ ಮನುಷ್ಯ ನೀವು.ಕೃಷ್ಣಪ್ಪನವರೆ ನಿಮ್ಮ ಬುದ್ಧಿಶಕ್ತಿಗೆ, ನಿಮ್ಮ ವಿದ್ಯಾಭ್ಯಾಸಕ್ಕೆ ನಿಮ್ಮ ಚಮಕಿಗೆ ನೀವು ಸುಲಭವಾಗಿಐಎಎಸ್ ಮಾಡಿದೊಡ್ಡಅಧಿಕಾರಿಯಾಗಬಹುದಿತ್ತು.ಏನು ಬೇಕಾದರೂ ಆಗಬಹುದಿತ್ತು.ಆದರೆ ನೀವು ಅದೆಲ್ಲವನ್ನು ಧಿಕ್ಕರಿಸಿ ಸಂಘಟನೆಗೆ ನಿಮ್ಮನ್ನು ಸಮರ್ಪಿಸಿಕೊಂಡಿರಿ.

ನಿಮ್ಮ ಸಂಘಟನೆಯ ಬಗ್ಗೆ ನನ್ನದೇಆದ ವಿರೋಧವಿದೆ.ಭಾರತವನ್ನುಅಮೆರಿಕಾದ ಮಡಿಲಲ್ಲಿ ಇಡಲುಕಾರಣವಾದ ಸಂಘಟನೆ ಎಂಬ ಆಳದ ಸಿಟ್ಟು ಇದೆ.ಆರ್ಥಿಕ ಸಮಾನತೆಯ ಬಗ್ಗೆ ಚಕಾರವೆತ್ತದೆ ಧರ್ಮದ ವಿಚಾರದಲ್ಲಿ ಮಾತ್ರಉದ್ವಿಗ್ನರಾಗುವವರು ಎಂಬ ಆಕ್ಷೇಪಣೆ ನನ್ನದು. ನಾನು ಸೈದ್ಧಾಂತಿಕವಾಗಿ ಬೇರೆದಾರಿ ಹಿಡಿದರೂಕೂಡ ಇಂದಿಗೂ ನನ್ನ ಮನಸ್ಸಿನಲ್ಲಿ ಮತ್ತು ಹೃದಯಲ್ಲಿಅತ್ಯಂತಆತ್ಮೀಯಗುರುವಿನಂತೆ ನಿಂತವರಲ್ಲಿ ನೀವು ಮೊದಲಿಗರು.ನಾನು ದೂರ ಹೋದೆನೆಂದುಕೋಪಗೊಂಡವರು ನೀವಲ್ಲ. ಬದಲಿಗೆ ಎಷ್ಟೋ ವರ್ಷಗಳ ನಂತರ ಮಾಯಾಮೃಗತೆಗೆದದ್ದು ನಾನೇ ಎಂದುಗೊತ್ತಾದಾಗ ನನ್ನನ್ನು ಹುಡುಕಿಕೊಂಡು ಬಂದುಆತ್ಮೀಯವಾಗಿಅಪ್ಪಿಕೊಂಡು ಹೆಮ್ಮೆಪಟ್ಟ ಬಂಧು ನೀವು.

ನಾನು  ಜೀವನದಲ್ಲಿ ಮೊದಲು ಓದಿದಕಾದಂಬರಿ ಭೈರಪ್ಪನವರ ’ಧರ್ಮಶ್ರೀ’ಯನ್ನು ನಾನು ಹೈಸ್ಕೂಲಿನಲ್ಲಿದ್ದಾಗ ಓದಿಸಿದವರು ನೀವು. ಶಿವರಾಮ ಕಾರಂತರಕಾದಂಬರಿ ಓದಿಸಿದವರು ನೀವು.ಜೆ.ಪಿ.ಯವರ ಪುಸ್ತಕ ’ಕಮ್ಯುನಿಸಂ ನಿಂದ ಸೋಷಿಲಿಸಂವರೆಗೆ’ ಎಂಬ ಪುಸ್ತಕ ಓದಿಸಿ ರಾಜಕೀಯ ಚಿಂತನೆಯನ್ನು ನನ್ನಲ್ಲಿ ಶುರು ಮಾಡಿದವರು ನೀವು.ನಿಮ್ಮ ಬಗ್ಗೆ ನನಗೆ ತೀರಿಸಲಾಗದಋಣವಿದೆ.

ಅಂತಹ ನೀವು ಕ್ಯಾನ್ಸರ್‌ ರೋಗಕ್ಕೆತುತ್ತಾಗಿರುವಿರೆಂದು ಗೊತ್ತಾದಾಗ ನಾನು ತುಂಬಾ ನೋವು ಅನುಭವಿಸಿದ್ದೆ. ಆದರೆ ಆ ಕ್ಯಾನ್ಸರನ್ನು ನಿಮ್ಮದೇ ಇಚ್ಛಾ ಶಕ್ತಿಯಿಂದ ನಗುನಗುತ್ತಾಗೆದ್ದವರು ನೀವು. ನೀವು ಕ್ಯಾನ್ಸರನ್ನುಗೆದ್ದ ಬಗ್ಗೆ ಓದುತ್ತಿದ್ದಾಗ ಬದುಕಿನಲ್ಲಿ ಹೊಸ ಭರವಸೆ ಮೂಡಿಸುತ್ತಿದ್ದೀರಿ. ಸಣ್ಣಪುಟ್ಟ ಕಷ್ಟಗಳಿಗೆ ಹೆದರಿ ಹಿಂಜರಿಯುವ ನಮ್ಮಂಥವರಿಗೆ ನೀವು ದಾರಿ ದೀಪವಾಗಿ ನಿಂತಿದ್ದೀರಿ. ನೀವು ಬರಿಯ ನಿಮ್ಮ ಖಾಯಿಲೆ ವಾಸಿ ಮಾಡಿಕೊಳ್ಳುತ್ತಾ ಆತ್ಮಕೇಂದ್ರಿತವಾಗಿ ಕಾಲವನ್ನು ಕಳೆಯಲಿಲ್ಲ. ಬದಲಿಗೆ ಹೀಗೆ ಕ್ಯಾನ್ಸರ್‌ನಿಂದ ಸೋತಿರುವ ಸಾವಿರಾರು ಮಾದರಿಯಜನರನ್ನು ಭೇಟಿ ಮಾಡುತ್ತಾಅವರಿಗೆ ಬದುಕಿನಲ್ಲಿ ಭರವಸೆ ಮತ್ತುಜೀವೋತ್ಸಾಹವನ್ನುತುಂಬಿದ್ದೀರಿ.ಇದಕ್ಕಿಂತ ಸಾರ್ಥಕವಾದದ್ದುಇನ್ನೇನಿದೆ?

ನನ್ನಅಮ್ಮ ಸಾವಿನ ಅಂತ್ಯದಲ್ಲಿ ನರಳುತ್ತಾ ಮಲಗಿದ್ದಾಗ ನೀವು ಅವರನ್ನು ಭೇಟಿ ಮಾಡಿ ಮನೆಯವರಿಗೆಧೈರ್ಯಕೊಟ್ಟಿದ್ದೀರಿ.

ಇಡೀ ಬದುಕಿನಲ್ಲಿಇಷ್ಟೊಂದು ಮಾನವೀಯತೆಯನ್ನು, ಆತ್ಮೀಯತೆಯನ್ನುಇಟ್ಟುಕೊಂಡ ಮನುಷ್ಯರನ್ನು ನಾನು ನೋಡಿದ್ದುಕಡಿಮೆ.ನೀವು, ನಿಮ್ಮ ಬದುಕು ಸಹೃದಯರಿಗೆಒಂದು ಪಠ್ಯ ಪುಸ್ತಕ.

ನಿಮ್ಮ ಈಗಿನ ಪುಸ್ತಕ ಓದುತ್ತಾ ಹೋದಂತೆ ನನ್ನಲ್ಲಿ ಈ ನೆನಪುಗಳೆಲ್ಲಾ ಬಂದವು. ಅಂಥಎಲ್ಲ ಸಂತೋಷಕರ ನೆನಪುಗಳಿಗಾಗಿ ನಿಮಗೆ ನನ್ನ ಅನಂತಾನಂತ ಕೃತಜ್ಞತೆಗಳು.

ಟಿ.ಎನ್. ಸೀತಾರಾಮ್

ಕಿರುತೆರೆ ಕಲಾವಿದರು ಮತ್ತು ನಿರ್ದೇಶಕರು

(ಮೃತ್ಯು ಮಿತ್ರ ಪುಸ್ತಕಕ್ಕೆ ಬರೆದ ಮುನ್ನಡಿಯಿಂದ)

 

  • email
  • facebook
  • twitter
  • google+
  • WhatsApp

Related Posts

RSS Sarkaryawah Shri Dattareya Hosabale hoisted the National Flag at Chennai
News Digest

RSS Sarkaryawah Shri Dattareya Hosabale hoisted the National Flag at Chennai

August 15, 2022
News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
Articles

ಮಾತಿನ ಕಠಿಣ ಕ್ರಮ, ಇನ್ನೆಷ್ಟು ದಿನ?

July 28, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
Next Post
ಗಡಿಯ ಗುಡಿಯ ಮುಟ್ಟಿದ ಅನುಭವ; ’ಸರಹದ್ ಕೋ ಪ್ರಣಾಮ್’:- ಪ್ರದೀಪ ಕುಮಾರ್ ಶೆಟ್ಟಿ. ಕೆ.

ಗಡಿಯ ಗುಡಿಯ ಮುಟ್ಟಿದ ಅನುಭವ; ’ಸರಹದ್ ಕೋ ಪ್ರಣಾಮ್’:- ಪ್ರದೀಪ ಕುಮಾರ್ ಶೆಟ್ಟಿ. ಕೆ.

Comments 3

  1. ಜಗದೀಶ ಬಿ. ಆರ್. says:
    10 years ago

    ಈ ಲೇಖನ ಓದುತ್ತಾ ಅಳು ಬಂತು. ಮೆಲುಧ್ವನಿಯ ಮಾತಿನಿಂದ ಅಂತರಂಗದಾಳ ತಲುಪಿ ಬಾಂಧವ್ಯ ಬೆಳೆಸುವ ಹೃದಯ ಶ್ರೀಮಂತರು ಮಾನ್ಯ ಕೃಷ್ಣಪ್ಪನವರು. ಅವರ ಬಗೆಗೆ ಮಮತೆ ತೋರಿ ಬರೆದ ಸೀತಾರಾಮ್‍ ಅವರಿಗೆ ವಂದನೆಗಳು.

  2. ಬೇಳೂರು ಸುದರ್ಶನ says:
    10 years ago

    ಮಾನ್ಯ ನ.ಕೃಷ್ಣಪ್ಪನವರನ್ನು ನನ್ನ ಹದಿಹರೆಯದಿಂದಲೇ ನೋಡುತ್ತ ಬಂದಿದ್ದೇನೆ. ಅವರ ಜೊತೆ ಮಾತನಾಡುವುದೇ ಒಂದು ಸೊಗಸು. ಅವರಂಥ ಲಿಬರಲ್‌ ಮನಸ್ಸು ತುಂಬ ಅಪರೂಪ. ನದೀ ಜೋಡಣೆಯ ಯೋಜನೆಯ ಬಗ್ಗೆ ಅವರು ಹಲವು ವರ್ಷಗಳ ಹಿಂದೆ ಆಡಿದ ಮಾತು, ನೀಡಿದ ಅಭಿಮತ – ಇವತ್ತಿಗೂ ನನ್ನನ್ನು ಕೊರೆಯುತ್ತಿದೆ. ಅವರ ಲೇಖನಗಳ ಹಸ್ತಪ್ರತಿಗಳನ್ನು ನೋಡಿದ ಅದೃಷ್ಟವಂತರಲ್ಲಿ ನಾನೂ ಒಬ್ಬ! ಅವರನ್ನೊಮ್ಮೆ ನೋಡಿದರೂ ಸಾಕು, ಬದುಕಿನಲ್ಲಿ ಉತ್ಸಾಹ ಚಿಮ್ಮುತ್ತದೆ.
    ಮತ್ತೇನು ಹೇಳಲೂ ತೋಚುತ್ತಿಲ್ಲ.

  3. W.L.prasad says:
    10 years ago

    snmaneyare,
    maanya na. krishnappaji yavara bagge taavu bareda munnudi nimma vektitavvakke hidida kannadi yaagide. naanu saha sri. na. krishnappaji yavarannu hattiradinnda kandidenne. nijakakku avaradu vishala hurudaya. naavu aidu jana sahodararu. ji yavarige namella sahodara bagge veshesha kalagi. nijakk naanu obba adrustashali. Inti tammava.
    W.L.Prasad;

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

ಕಾಶ್ಮೀರದಲ್ಲಿ 2 ಸಿಖ್ ಹುಡುಗಿಯರ ಅಪಹರಿಸಿ ಬಲವಂತವಾಗಿ ಮತಾಂತರ. ‘ಮತಾಂತರ ತಡೆ’ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ಸ್ಥಳೀಯರ ಪ್ರತಿಭಟನೆ.

ಕಾಶ್ಮೀರದಲ್ಲಿ 2 ಸಿಖ್ ಹುಡುಗಿಯರ ಅಪಹರಿಸಿ ಬಲವಂತವಾಗಿ ಮತಾಂತರ. ‘ಮತಾಂತರ ತಡೆ’ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ಸ್ಥಳೀಯರ ಪ್ರತಿಭಟನೆ.

June 28, 2021
Ramdev began his indefinite fast-unto-death at  Delhi, gets nationwide support

Ramdev began his indefinite fast-unto-death at Delhi, gets nationwide support

June 4, 2011

Pungava-Special Issue-Kannanda on Hindu Shakti Sangama-2012

March 12, 2012
1178 ಟ್ವಿಟ್ಟರ್ ಖಾತೆಗಳನ್ನು ತೆಗೆದುಹಾಕುವಂತೆ ಟ್ವಿಟ್ಟರ್ ಗೆ ಕೇಂದ್ರ ಸರಕಾರ ಸೂಚನೆ

1178 ಟ್ವಿಟ್ಟರ್ ಖಾತೆಗಳನ್ನು ತೆಗೆದುಹಾಕುವಂತೆ ಟ್ವಿಟ್ಟರ್ ಗೆ ಕೇಂದ್ರ ಸರಕಾರ ಸೂಚನೆ

February 8, 2021

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In