• Samvada
Tuesday, May 24, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Articles

ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸದ ಕನ್ನಡಾನುವಾದ

Vishwa Samvada Kendra by Vishwa Samvada Kendra
September 11, 2012
in Articles, News Digest
251
0
ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸದ  ಕನ್ನಡಾನುವಾದ
494
SHARES
1.4k
VIEWS
Share on FacebookShare on Twitter

READ ALSO

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

1893, September 11, ಸ್ವಾಮಿ ವಿವೇಕಾನಂದರ ಸರ್ವಧರ್ಮ ಸಮ್ಮೇಳನದ ‘ಚಿಕಾಗೋ ಉಪನ್ಯಾಸ’ ಎಂದೇ ಖ್ಯಾತವಾದ ಭಾಷಣದ ಕನ್ನಡಾನುವಾದವಿದು. ಇದನ್ನು ಪರಮ ಪೂಜ್ಯ ಸ್ವಾಮಿ ಪುರುಷೋತ್ತಮಾನಂದರ ‘ವಿಶ್ವ ವಿಜೇತ ವಿವೇಕಾನಂದ’ ಪುಸ್ತಕದಿಂದ ಸಂಗ್ರಹಿಸಲಾಗಿದೆ.

 “ಅಮೆರಿಕದ ಸೋದರಿಯರೇ ಮತ್ತು ಸೋದರರೇ!
ನೀವು ನಮಗೆ ನೀಡಿದ ಉತ್ಸಾಹಯುತ ಆದರದ ಸ್ವಾಗತಕ್ಕೆ ಪ್ರತಿಕ್ರಿಯಿಸಲು ಹೊರಟಾಗ ಅನಿರ್ವಚನೀಯ ಆನಂದವೊಂದು ನನ್ನ ಹೃದಯವನ್ನು ತುಂಬುತ್ತದೆ. ಪ್ರಪಂಚದ ಅತ್ಯಂತ ಪ್ರಾಚೀನವಾದ ಸಂನ್ಯಾಸಿಗಳ ಸಂಘದ ಪರವಾಗಿ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಬೌದ್ಧ ಧರ್ಮ, ಜೈನ ಧರ್ಮಗಳೆರಡೂ ಯಾವುದರ ಶಾಖೆಗಳು ಮಾತ್ರವೋ ಅಂತಹ ಸಕಲ ಧರ್ಮಗಳ ಮಾತೆಯಾದ ಹಿಂದೂ ಧರ್ಮದ ಪರವಾಗಿ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಮತ್ತು ವಿವಿಧ ಜಾತಿ ಮತಗಳಿಗೆ ಸೇರಿದ ಕೋತ್ಯಂತರ ಹಿಂದುಗಳ ಪರವಾಗಿ ನಾನು ನಿಮಗೆ ಖ್ರುತಜ್ಞತೆಯನ್ನು ಸಲ್ಲಿಸುತ್ತೇನೆ. ಅಲ್ಲದೆ, ‘ಇಲ್ಲಿ ಕಂಡುಬರುತ್ತಿರುವ ಸಹಿಷ್ಣುತಾಭಾವವನ್ನು ದೂರದೂರದ ದೇಶಗಳಿಂದ ಬಂದಿರುವ ಈ ಪ್ರತಿನಿಧಿಗಳು ತಮ್ಮೊಂದಿಗೆ ಒಯ್ದು ಪ್ರಸಾರ ಮಾಡುತ್ತಾರೆ’ ಎಂದು ಸಾರಿದ ಈ ವೇದಿಕೆಯ ಮೇಲಿನ ಕೆಲವು ಭಾಷಣಕಾರರಿಗೂ ನನ್ನ ಕೃತಜ್ಞತೆಗಳು ಸಲ್ಲುತ್ತವೆ.

ಜಗತ್ತಿಗೆ ಸಹಿಷ್ಣುತೆಯನ್ನೂ ಸರ್ವಧರ್ಮ ಸ್ವೀಕರ ಮನೋಭಾವವನ್ನೂ ಬೋಧಿಸಿದ ಧರ್ಮಕ್ಕೆ ಸೇರಿದವನು ನಾನೆಂಬ ಹೆಮ್ಮೆ ನನ್ನದು. ನಾವು ಸರ್ವ ಮತ ಸಹಿಷ್ಣುತೆಯನ್ನು ಒಪ್ಪುತ್ತೇವಷ್ಟೇ ಅಲ್ಲದೆ, ಸಕಲ ಧರ್ಮಗಳೂ ಸತ್ಯವೆಂದು ನಂಬುತ್ತೇವೆ. ಯಾವ ಧರ್ಮದ ಪವಿತ್ರ ಭಾಷೆಗೆ ‘ಎಕ್ಸ್ಕ್ಲೂಶನ್’ ಎಂಬ ಪದವನ್ನು ಅನುವಾದಿಸಿಕೊಳ್ಳುವುದುಸಾಧ್ಯವೇ ಇಲ್ಲವೋ ಅಂತಹ ಧರ್ಮಕ್ಕೆ ಸೇರಿದ ಹೆಮ್ಮೆ ನನ್ನದು.

ಪ್ರಪಂಚದ ಎಲ್ಲ ಧರ್ಮಗಳ ಎಲ್ಲ ರಾಷ್ಟ್ರಗಳ ಸಂಕಟಪೀಡಿತ ನಿರಾಶ್ರಿತರಿಗೆ ಆಶ್ರಯವಿತ್ತ ರಾಷ್ಟ್ರಕ್ಕೆ ಸೇರಿದವನೆಂಬ ಹೆಮ್ಮೆ ನನ್ನದು. ರೋಮನ್ನರ ದಬ್ಬಾಳಿಕೆಗೆ ಗುರಿಯಾಗಿ ತಮ್ಮ ಪವಿತ್ರ ದೇವಾಲಯವು ನುಚ್ಚುನೂರಾದಾಗ ದಕ್ಷಿಣಭಾರತಕ್ಕೆ ವಲಸೆ ಬಂದ ಇಸ್ರೇಲೀಯರ ಒಂದು ಗುಂಪನ್ನು ನಾವು ಆಶ್ರಯಕೊಟ್ಟು ಮಡಿಲಲ್ಲಿಟ್ಟುಕೊಂಡಿದ್ದೇವೆ ಎಂದು ಹೇಳಲು ನನಗೆ ಹೆಮ್ಮೆ. ಘನ ಜರತೃಷ್ಟ್ರ ಜನಾಂಗದ ಅವಶೇಷಕ್ಕೆ ಆಶ್ರಯವಿತ್ತ ಹಾಗೂ ಅವರನ್ನು ಈಗಲೂ ಪೋಷಿಸುತ್ತಿರುವ ಧರ್ಮಕ್ಕೆ ನಾನು ಸೇರಿದವನೆಂಬುದು ನನ್ನ ಹೆಮ್ಮೆ.

ಸೋದರರೇ, ನಾನು ಬಾಲ್ಯದಿಂದಲೂ ಪಟಿಸುತ್ತಿದ್ದ, ಮತ್ತು ಈಗಲೂ ಲಕ್ಷಾಂತರ ಹಿಂದೂಗಳು ಪಠಿಸುವ ಶ್ಲೋಕವೊಂದರಿಂದ ಕೆಲ ಸಾಲುಗಳನ್ನು ಉದ್ಧರಿಸಿ ನಿಮಗೆ ಹೇಳುತ್ತೇನೆ;
ತ್ರಯೀ ಸಾಂಖ್ಯಂ ಯೋಗಃ ಪಶುಪತಿಮತಂ ವೈಷ್ಣಮತಿ|
ಪ್ರಭಿನ್ನೇ ಪ್ರಸ್ಥಾನೇ ಪರಮಿದಮದಃ ಪಥ್ಯಮಿತಿ ಚ||
ರುಚೀನಾಂ ವೈಚಿತ್ರ್ಯಾತ್ ಋಜ್ ಕುಟಿಲ ನಾನಾ ಪಥ ಜುಷಾಂ|
ನೃಣಾಮೇಕೋ ಗಮ್ಯಃ ತ್ವಮಸಿ ಪಯಸಾಂ ಅರ್ಣವ ಇವ||

ಎಂದರೆ, “ಹೇ ಭಗವಂತ! ಭಿನ್ನ ಭಿನ್ನ ಸ್ಥಾನಗಳಿಂದ ಉದಿಸಿದ ನದಿಗಳೆಲ್ಲವೂ ಹರಿದು ಕೊನೆಯಲ್ಲಿ ಸಾಗರವನ್ನು ಸೇರುವಂತೆ, ಮಾನವರು ತಮ್ಮತಮ್ಮ ವಿಭಿನ್ನ ಅಭಿರುಚಿಗಳಿಂದಾಗಿ ಅನುಸರಿಸುವ ಅಂಕುಡೊಂಕಿನ ಬೇರೆಬೇರೆ ದಾರಿಗಳೆಲ್ಲವೂ ಕೊನೆಗೆ ಬಂದು ನಿನ್ನನ್ನೇ ಸೇರುತ್ತವೆ”

ಜಗತ್ತಿನಲ್ಲಿ ಇಲ್ಲಿಯವರೆಗೆ ನಡೆಸಲ್ಪಟ್ಟ ಮಹಾದ್ಭುತ ಸಮ್ಮೇಳನಗಳಲ್ಲಿ ಒಂದಾದ ಇಂದಿನ ಈ ಸಭೆಯು, ಭಗವದ್ಗೀತೆಯು ಬೋಧಿಸಿರುವ ಈ ಅದ್ಭುತ ತತ್ತ್ವಕ್ಕೆ ಸಾಕ್ಷಿಯಾಗಿದೆ, ಮತ್ತು ಅದನ್ನೇ ಸಾರುತ್ತದೆ;
ಯೇ ಯಥಾಂ ಮಾಂ ಪ್ರಪದ್ಯಂತೇ ತಾಂಸ್ತಥೈವ ಭಜಾಮ್ಯಹಂ|
ಮಮ ವರ್ತ್ಯಾನುವರ್ತಂತೇ ಮನುಷ್ಯಾಃ ಪಾರ್ಥಃ ಸರ್ವಶಃ||

ಅರ್ಥ- ‘ಯಾರು ಯಾರು ನನ್ನಲ್ಲಿಗೆ ಯವ ಯವ ಮಾರ್ಗದಿಂದ ಬರುತ್ತಾರೋ ಅವರವರನ್ನು ನಾನು ಅದದೇ ಮಾರ್ಗದಿಂದ ತಲುಪುತ್ತೇನೆ. ಮಾನವರು ಅನುಸರಿಸುವ ಮಾರ್ಗಗಳೆಲ್ಲ ಕೊನೆಗೆ ಬಂದು ಸೇರುವುದು ನನ್ನನ್ನೇ’

ಗುಂಪುಗಾರಿಕೆ, ತಮ್ಮ ಮತದ ಬಗ್ಗೆ ದುರಭಿಮಾನ ಹಾಗೂ ಅದರ ಘೋರ ಪರಿಣಾಮವಾದ ಧರ್ಮಾಂಧತೆಗಳು ಬಹುಕಾಲದಿಂದ ಈ ಸುಂದರ ಭೂಮಿಯನ್ನು ಆಕ್ರಮಿಸಿಕೊಂಡಿವೆ. ಅವು ವಿಶ್ವವನ್ನು ಹಿಂಸೆಯಿಂದ ತುಂಬಿ, ಮತ್ತೆಮತ್ತೆ ಮಾನವನ ರಕ್ತದಿಂದ ತೋಯಿಸಿವೆ; ಅದೆಷ್ಟೋ ನಾಗರಿಕತೆಗಳನ್ನು ನಾಶ ಮಾಡಿವೆ. ದೇಶದೇಶಗಳನ್ನೇ ನಿರಾಶೆಯ ಕೂಪಕ್ಕೆ ತಳ್ಳಿವೆ. ಆ ಘೋರ ರಾಕ್ಷಸತನವಿಲ್ಲದಿದ್ದಲ್ಲಿ ಮಾನವ ಸಮಾಜವು ಈಗಿರುವುದಕ್ಕಿಂತಲೂ ಎಷ್ಟೋ ಹೆಚ್ಚು ಮುಂದುವರೆದಿರುತ್ತಿತ್ತು. ಆದರೆ ಈಗ ಆ ರಾಕ್ಷಸತನದ ಅಂತ್ಯಕಾಲ ಸಮೀಪಿಸಿದೆ. ಈ ಸಮ್ಮೇಳನದ ಪ್ರತಿನಿಧಿಗಳ ಗೌರವಾರ್ಥವಾಗಿ ಇಂದು ಬೆಳಿಗ್ಗೆ ಮೊಳಗಿದ ಘಂಟಾನಾದವು ಎಲ್ಲ ಬಗೆಯ ಮತಾಂಧತೆಗೆ ಮೃತ್ಯುಘಾತವನ್ನೀಯುವುದೆಂದು ಆಶಿಸುತ್ತೇನೆ. ಮತ್ತು ಅದು ಖಡ್ಗ- ಲೇಖನಿಗಳ ಮೂಲಕ ಸಂಭವಿಸುತ್ತಿರುವ ಹಿಂಸಾದ್ವೇಷಗಳಿಗೆ, ಹಾಗೂ ಒಂದೇ ಹುರಿಯೆಡೆಗೆ ಸಾಗುತ್ತಿರುವ ಪಥಿಕರೊಳಗಿನ ಅಸಹನೆ- ಮನಸ್ತಾಪಗಳಿಗೆ ಮೃತ್ಯುಘಾತವನ್ನೀಯುವುದೆಂದು ಹೃತ್ಪೂರ್ವಕವಾಗಿ ಆಶಿಸುತ್ತೇನೆ”

ಈ ಭಾಷಣ ಅಂದಿನ ಅತ್ಯಂತ ಪ್ರಭಾವೀ ಭಾಷಣವೆಂದು ಪರಿಗಣಿಸಲ್ಪಟ್ಟಿತ್ತು. ಎಲ್ಲ ದೇಶ-ಧರ್ಮಗಳ ಸಭಿಕರು- ಶ್ರೋತೃಗಳು ಸ್ವಾಮೀಜಿಯವರ ತೇಜಸ್ಸಿಗೆ, ವಾಗ್ವೈಖರಿಗೆ, ಪಂಡಿತ್ಯಕ್ಕೆ, ಹಿಂದೂ ಧರ್ಮದ ಶ್ರೇಷ್ಠತೆಗೆ ಮಾರುಹೋದರು. ಎಲ್ಲಕ್ಕಿಂತ ಹೆಚ್ಚಾಗಿ ಭಾಷಣದ ಆರಂಭದಲ್ಲಿನ ಅವರ ಸಂಬೋಧನೆ ಅವರೆಲ್ಲರನ್ನೂ ಭಾವೋನ್ನತಿಗೆ ಏರಿಸಿಬಿಟ್ಟಿತ್ತು.

ಈ ಭಾಷಣವನ್ನು ಸ್ವಾಮೀಜಿ ಮಾಡಿದ್ದು ಸಾವಿರಾರು ಶ್ರೋತೃಗಳ ಎದುರಿಗೆ. ಗುಲಾಮಗಿರಿಯಿಂದ ನರಳುತ್ತಿದ್ದ ದೇಶವೊಂದರಿಂದ ಬಂದ ಬಡ ಸಂನ್ಯಾಸಿಯಾಗಿದ್ದರು ಅವರು. ಈ ಹಿನ್ನೆಲೆಯನ್ನೂ, ಭಾಷಣಾನಂತರದ ಪರಿಣಾಮಗಳನ್ನೂ ತಾಳೆ ಹಾಕಿದಾಗ ಸ್ವಾಮಿ ವಿವೇಕಾನಂದರ ಪ್ರಭಾವ ಎಷ್ಟಿತ್ತು ಎನ್ನುವುದು ಅರ್ಥವಾಗುತ್ತದೆ.

Source: http://yuvashakti.wordpress.com

  • email
  • facebook
  • twitter
  • google+
  • WhatsApp

Related Posts

News Digest

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

May 22, 2022
News Digest

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

May 20, 2022
News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
News Digest

Sanskrit most requested language on Google Translate

May 13, 2022
News Digest

Kerala Fire cop arrested in connection with murder of RSS activist shrinivasan

May 11, 2022
Next Post
Swami Vivekananda’s speech in World Parliament of Religions, Chicago September 11, 1893

Swami Vivekananda’s speech in World Parliament of Religions, Chicago September 11, 1893

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

NEWS IN BRIEF – NOV 9, 2011

November 10, 2011
Indian economy to flourish, throw out this corrupt regime: Organiser Editorial

Indian economy to flourish, throw out this corrupt regime: Organiser Editorial

June 25, 2012
ಏ. 21 ರಿಂದ ಪ್ರಾರಂಭಗೊಳ್ಳಲಿದೆ ಸಂಸ್ಕೃತ ಭಾರತಿಯ ‘ಗೇಹೇ ಗೇಹೇ ರಾಮಾಯಣಮ್’ ಎಂಬ ರಾಮಾಯಣ ಪಾರಾಯಣ ಅಭಿಯಾನ.

ಶ್ರೀರಾಮ ವಿಶ್ವವಂದಿತ; ಭಾರತದ ಅಸ್ಮಿತೆಯ ಪ್ರತೀಕ

April 21, 2021
ನೇರನೋಟ: ಸ್ವದೇಶಿ ಕ್ರಯೋಜೆನಿಕ್ ರೂವಾರಿಯ ಕಥೆ – ವ್ಯಥೆ

ನೇರನೋಟ: ಸ್ವದೇಶಿ ಕ್ರಯೋಜೆನಿಕ್ ರೂವಾರಿಯ ಕಥೆ – ವ್ಯಥೆ

January 20, 2014

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In