• Samvada
Tuesday, May 17, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home News Digest

www.samvadaworld.com ಎಂಬ ನೂತನ ವೆಬ್ ಪೋರ್ಟಲ್ ಲೋಕಾರ್ಪಣೆ

Vishwa Samvada Kendra by Vishwa Samvada Kendra
November 16, 2020
in News Digest, Others
245
0
Launch of new web portal www.samvadaworld.com
491
SHARES
1.4k
VIEWS
Share on FacebookShare on Twitter

ವಿಶ್ವ ಸಂವಾದ ಕೇಂದ್ರ, ಕರ್ನಾಟಕದ ನೂತನ ಜಾಲತಾಣ ಸಂವಾದವರ್ಲ್ಡ್.ಕಾಮ್ (www.samvadaworld.com) ಇಂದು ಲೋಕಾರ್ಪಣೆಗೊಂಡಿದೆ. ಆರೆಸ್ಸೆಸ್ ನ ದಕ್ಷಿಣ ಮಧ್ಯ ಕ್ಷೇತ್ರದ ಸಂಘಚಾಲಕರಾದ ಶ್ರೀ ವಿ ನಾಗರಾಜ್ ಅವರು ಜಾಲತಾಣದ ಲೋಕಾರ್ಪಣೆಯನ್ನು ಇಂದು ನೆರವೇರಿಸಿದರು. SamvadaWorld, VSKKarnatakaMedia ನ ಫೇಸ್ಬುಕ್ ಪೇಜ್ ಗಳಿಂದ ಈ ಕಾರ್ಯಕ್ರಮ ನೇರ ಪ್ರಸಾರಗೊಂಡಿತು.

ಜಾಲತಾಣದ ಲೋಕಾರ್ಪಣೆ ಶ್ರೀ ವಿ ನಾಗರಾಜ್ ಅವರಿಂದ. ಸಂಪಾದಕರಾದ ಪ್ರಶಾಂತ್ ವೈದ್ಯರಾಜ್, ಶ್ರೀ ನ ತಿಪ್ಪೇಸ್ವಾಮಿ, ಕ್ಷಮ ನರಗುಂದ ಉಪಸ್ಥಿತರಿದ್ದರು.

ಜಾಗತೀಕರಣದಿಂದ ನಾವು ಸೋತಿದ್ದೇವೆ. ನಾವು ನಮ್ಮ ಸುತ್ತಲಿನ ಜಗತ್ತನ್ನು ನೋಡುತ್ತಾ, ಅಲ್ಲಿನ ಆಗುಹೋಗುಗಳನ್ನು ಗಮನಿಸಿ ಸುಮ್ಮನಿದ್ದುಬಿಡಲು ಯಾವುದೇ ಅವಕಾಶವಿಲ್ಲ ಎಂದು ಶ್ರೀ ವಿ ನಾಗರಾಜ್ ಸಂವಾದವರ್ಲ್ಡ್ ಜಾಲತಾಣವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸ್ವಾಮಿ ವಿವೇಕಾನಂದರು ಈ ವಿಷಯವಾಗಿ ಹಿಂದೆ ಮಾತನಾಡಿ ಭಾರತ ಜಗತ್ತಿನ ಸಂಪರ್ಕದಲ್ಲಿ ಸದಾ ಇರಬೇಕು ಎಂದು ಎಚ್ಚರಿಸಿದ್ದರು ಎಂದು ಶ್ರೀ ನಾಗರಾಜ್ ತಿಳಿಸಿದರು.

READ ALSO

भारतस्य प्रतिष्ठे द्वे संस्कृतं संस्कृतिश्च

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

ದೇಶದ ಸಾಮಾನ್ಯ ಪ್ರಜೆಯೂ ಸಹಿತ ಪ್ರಜಾಪ್ರಭುತ್ವದಲ್ಲಿ ಭಾಗಿಯಾಗಲೇಬೇಕು ಹಾಗೂ ಜಗತ್ತಿನ ಆಗುಹೋಗುಗಳಿಗೆ ಸರ್ಕಾರ, ರಾಜಕೀಯ ನಾಯಕರಷ್ಟೇ ಹೊಣೆ ಎಂದು ಹೇಳಿ ತಪ್ಪಿಸಿಕೊಳ್ಳುವ ಯಾವುದೇ ಆಸ್ಪದ ಇಂದಿನ ದಿವಸದಲ್ಲಿ ಯಾರಿಗೂ ಉಳಿದಿಲ್ಲ ಎಂದು ಅವರು ನುಡಿದರು.

ಶ್ರೀ ನಾಗರಾಜ್ ವಿ, ಶ್ರೀ ನ ತಿಪ್ಪೇಸ್ವಾಮಿ, ಶ್ರೀ ಪ್ರಶಾಂತ್ ವೈದ್ಯರಾಜ್

ಸಂವಾದ ವರ್ಲ್ಡ್ ಕೈಗೊಂಡಿರುವ ಸಾಹಸವನ್ನು ಶ್ಲಾಘಿಸುತ್ತಾ ಮುಂದಿನ ದಿನಗಳಲ್ಲಿ ಕೇವಲ ಸುದ್ದಿಯನ್ನು ಬಿತ್ತರಿಸುವ, ಮಾಹಿತಿ ತಲುಪಿಸುವ ಕೆಲ್ಸವನ್ನಷ್ಟೇ ಮಾಡದೇ ವಿಚಾರ ವೇದಿಕೆಯ ಮಾಧ್ಯಮವಾಗಿ ಕಾರ್ಯ ನಿರ್ವಹಿಸಿ ಜನಸಾಮಾನ್ಯರಿಗೆ ದೇಶದ ಬಗ್ಗೆ, ವಿಶ್ವದ ಬಗ್ಗೆ ಮಂಥನ ನಡೆಸುವ ಲೇಖನಗಳು ಜಾಲತಾಣದಲ್ಲಿ ಮೂಡಿ ಬರಲಿ ಎಂದು ಆಶಿಸಿದರು.

ವಿಶ್ವ ಸಂವಾದ ಕೇಂದ್ರ, (ವಿ ಎಸ್ ಕೆ ) ಕರ್ನಾಟಕ ಎಂಬ ಮಾಧ್ಯಮ ಕೇಂದ್ರವು ಕಳೆದ ಹಲವು ವರ್ಷಗಳಿಂದ ಮುದ್ರಣ ಮತ್ತು ವಿದ್ಯುನ್ಮಾನ  ಸಂಬಂಧಿತ ಬಹುವಿಧ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ವಿಶ್ವ ಸಂವಾದ ಕೇಂದ್ರ, ಕರ್ನಾಟಕ ಆಧುನಿಕ ಲೋಕದಲ್ಲಿ ಜಗತ್ತಿನ ಆದ್ಯ ಪತ್ರಕರ್ತರೆಂದು ಕರೆಯಲ್ಪಡುವ ನಾರದ ಮಹರ್ಷಿಯ ಜಯಂತಿಯಂದು ಸಮಾಜದ ಓರೇ ಕೋರೆಗಳನ್ನು ತಮ್ಮ ಲೇಖನ, ವರದಿಯ ಮುಖಾಂತರ ತಿದ್ದುವ ಪತ್ರಕರ್ತರನ್ನು ಸನ್ಮಾನಿಸುತ್ತಿದೆ. ಸಾಮಾಜಿಕ ಮಹತ್ತ್ವದ ವಿಷಯಗಳ ಕುರಿತು ವಿಚಾರಗೋಷ್ಠಿಗಳು, ಸಾಮಯಿಕ ಘಟನೆಗಳ ಬಗ್ಗೆ ವಿಶ್ಲೇಷಣೆ, ಪ್ರಮುಖ ನಾಯಕರ ಮತ್ತು ಚಿಂತಕರ ಸಂದರ್ಶನ, ಸಾಂದರ್ಭಿಕ ವಿದ್ಯಮಾನಗಳಿಗೆ ಸಂಬಂಧಿಸಿ ಅಧ್ಯಯನಪೂರ್ಣ ಲೇಖನಗಳ ಪ್ರಕಾಶನ, ಉದಯೋನ್ಮುಖ ಪತ್ರಕರ್ತರ ಅಭ್ಯಾಸ ವರ್ಗ, ಆಸಕ್ತ ಕಿರಿಯರಿಗೆ ’ಸಂಪಾದಕರಿಗೆ ಪತ್ರಲೇಖನ’ ಕಲೆಯ ಪ್ರಶಿಕ್ಷಣ ಮುಂತಾದ ಕೆಲಸಗಳನ್ನು ಮಾಡುತ್ತಲಿದೆ.

samvada.org ಎಂಬ ಜಾಲತಾಣದ ಮೂಲಕ, @VSKKarnataka ಎಂಬ ಟ್ವಿಟರ್ ಖಾತೆಯ ಮೂಲಕ ಸುದ್ದಿ ಸಮಾಚಾರಗಳನ್ನು, ಲೇಖನಗಳನ್ನು ಪ್ರಕಟಿಸುತ್ತಿದ್ದ ವಿಎಸ್ ಕೆ ಸಂಸ್ಥೆ, ಕಳೆದವರ್ಷ ತನ್ನ ಸಂವಾದ (samvada, samvadk) ಎಂಬ ಯುಟ್ಯೂಬ್/ಫೇಸ್ಬುಕ್ ವಾಹಿನಿಯ ಮೂಲಕ ನಾನಾ ತರಹದ ಸಮಾಜಮುಖಿ ವಿಡಿಯೋಗಳನ್ನು ಪ್ರಕಟಿಸುತ್ತಿದೆ. ಇತ್ತೀಚೆಗಷ್ಟೇ, ವಿಜಯದಶಮಿಯಂದು ವಿ ಎಸ್ ಕೆ ಯ ಹೊಸ ಟ್ವಿಟರ್ ಖಾತೆ ಆರಂಭವಾಯಿತು. @vsksamskritam ಟ್ವಿಟರ್ ಖಾತೆಯಿಂದ ಸಂಸ್ಕೃತ ಭಾಷೆಯಲ್ಲಿ ಸಮಾಚಾರವನ್ನು ಪ್ರಕಟಿಸುವ ಕೆಲಸದಲ್ಲಿ ಸಂಸ್ಕೃತ ಭಾರತೀಯ ಜೊತೆ ಕೈಜೋಡಿಸಿದೆ. ಇದೀಗ ಜಾಗತಿಕ ಮಟ್ಟದ ಸುದ್ದಿಗಳು, ಅವುಗಳ ವಿಶ್ಲೇಷಣೆ, ವಿಜ್ಞಾನ ತಂತ್ರಜ್ಞಾನ, ಭದ್ರತೆ ಮತ್ತು ರಕ್ಷಣೆ ಈ ವಿಷಯಗಳಲ್ಲಿ ಸಮಾಚಾರವನ್ನು ಓದಲು samvadaworld.com ರಚಿತವಾಗಿದೆ.

ಶ್ರೀ ಪ್ರಶಾಂತ್ ವೈದ್ಯರಾಜ್ ಹೊಸ ಜಾಲತಾಣದ ಸಂಪಾದಕರಾಗಿರುತ್ತಾರೆ. ಹಿಂದೆ ಅಸೀಮ (ಆಂಗ್ಲ) ಮಾಸಿಕ ಪತ್ರಿಕೆಯ ಸಂಪಾದಕರಾಗಿ, ಆರ್ಗನೈಸರ್ ಸಾಪ್ತಾಹಿಕದ ದಕ್ಷಿಣ ಭಾರತದ ಬ್ಯುರೋ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿರುವ ಅನುಭವ ಪ್ರಶಾಂತ್ ವೈದ್ಯರಾಜ್ ಅವರಿಗಿದೆ.

ಆರೆಸ್ಸೆಸ್ ದಕ್ಷಿಣ ಮಧ್ಯಕ್ಷೇತ್ರದ ಕಾರ್ಯವಾಹರಾದ ನ ತಿಪ್ಪೇಸ್ವಾಮಿಯವರು, ವಿಶ್ವ ಸಂವಾದ ಕೇಂದ್ರದ ವಿಶ್ವಸ್ತರು, ಸಂಯೋಜಕರು ಹಾಗೂ ಜಾಲತಾಣದ ಲೋಕಾರ್ಪಣೆಯನ್ನು ನೇರವಾಗಿ ನೋಡಲು ವಿ ಎಸ ಕೆ ಅಭಿಮಾನಿಗಳು ಇಂದು ರಾಷ್ಟ್ರೋತ್ಥಾನ ಪರಿಷತ್ತಿನ ಕೇಶವ ಶಿಲ್ಪದಲ್ಲಿ ನೆರೆದಿದ್ದರು.

  • email
  • facebook
  • twitter
  • google+
  • WhatsApp
Tags: Samvadaworldsamvadaworld.com

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
News Digest

Sanskrit most requested language on Google Translate

May 13, 2022
News Digest

Kerala Fire cop arrested in connection with murder of RSS activist shrinivasan

May 11, 2022
News Digest

ಶ್ರದ್ಧೆ, ಸಮರ್ಪಣಾ ಭಾವದಿಂದ ಸಾಧನೆ ಮಾಡಿದರೆ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ – ಮಂಗೇಶ್ ಭೇಂಡೆ

May 9, 2022
Next Post
ಕನ್ನಡ ಸಾಹಿತ್ಯಗಳ ವಿಡಿಯೋ ಪರಿಚಯ ಮಾಡುತ್ತಿರುವ ‘ಸುಕೃತಿ’

ಕನ್ನಡ ಸಾಹಿತ್ಯಗಳ ವಿಡಿಯೋ ಪರಿಚಯ ಮಾಡುತ್ತಿರುವ ‘ಸುಕೃತಿ’

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

ಉಮೇದುವಾರರಿಗೆ ಕೇಳಲೇಬೇಕಾದ ಕೆಲವು ಪ್ರಶ್ನೆಗಳು: ದು.ಗು.ಲಕ್ಷ್ಮಣ

August 25, 2019
‘Eminent Historians’  are out to defend Rahul Gandhi and to defame RSS: Statement by Dr Manmohan Vaidya

‘Eminent Historians’  are out to defend Rahul Gandhi and to defame RSS: Statement by Dr Manmohan Vaidya

July 27, 2016
ಹುಬ್ಬಳ್ಳಿಯಲ್ಲಿ ‘ಸಮುತ್ಕರ್ಷ’ ಕಚೇರಿ ಮತ್ತು ಅಧ್ಯಯನ ಕೇಂದ್ರ ಉದ್ಘಾಟನೆ

ಹುಬ್ಬಳ್ಳಿಯಲ್ಲಿ ‘ಸಮುತ್ಕರ್ಷ’ ಕಚೇರಿ ಮತ್ತು ಅಧ್ಯಯನ ಕೇಂದ್ರ ಉದ್ಘಾಟನೆ

November 9, 2017
First of its kind for Anekal Zone, mammoth RSS Sanghik held, Dr Prabhakar Bhat addressed

First of its kind for Anekal Zone, mammoth RSS Sanghik held, Dr Prabhakar Bhat addressed

January 13, 2014

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ
  • ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In