• Samvada
  • Videos
  • Categories
  • Events
  • About Us
  • Contact Us
Monday, February 6, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others

ಆರೆಸ್ಸೆಸ್ ಜೊತೆ ಕೆಲಸ ಮಾಡಲು ಯುವಜನತೆ ಮುಂದೆ ಬರುತ್ತಿದೆ – ಡಾ. ಮನಮೋಹನ್ ವೈದ್ಯ

Vishwa Samvada Kendra by Vishwa Samvada Kendra
March 19, 2021
in Others, RSS ABPS 2021
250
0
ಆರೆಸ್ಸೆಸ್ ಜೊತೆ ಕೆಲಸ ಮಾಡಲು ಯುವಜನತೆ ಮುಂದೆ ಬರುತ್ತಿದೆ  – ಡಾ. ಮನಮೋಹನ್ ವೈದ್ಯ
491
SHARES
1.4k
VIEWS
Share on FacebookShare on Twitter
ಆರೆಸ್ಸೆಸ್ ಸಹ ಸರಕಾರ್ಯವಾಹರಾದ ಡಾ. ಮನಮೋಹನ್ ವೈದ್ಯ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಆರೆಸ್ಸೆಸ್ ಜೊತೆ ಕೆಲಸ ಮಾಡಲು ಯುವಜನತೆ ಮುಂದೆ ಬರುತ್ತಿದೆ – ಡಾ. ಮನಮೋಹನ್ ವೈದ್ಯ

ಬೆಂಗಳೂರಿನ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಸಭೆ ಎಬಿಪಿಎಸ್ (ಅಖಿಲ ಭಾರತೀಯ ಪ್ರತಿನಿಧಿ ಸಭಾ) ಇಂದು ಉದ್ಘಾಟನೆಯಾಯಿತು. ಉದ್ಘಾಟನೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರೆಸ್ಸೆಸ್ ನ ಸಹ ಸರಕಾರ್ಯವಾಹ ಡಾ. ಮನಮೋಹನ ವೈದ್ಯ ಅವರು ಸಂಘದ ಚಟುವಟಿಕೆಗಳ ವರದಿ ಮಾಡಿದರು. ಕೊರೊನಾ ಲಾಕ್ ಡೌನ್ ನ ಸಂದರ್ಭದಲ್ಲಿ ಮಾರ್ಚ್ ನಿಂದ ಜೂನ್ ವರೆಗೆ ಆರೆಸ್ಸೆಸ್ ನ ಶಾಖೆಗಳು ಸಂಪೂರ್ಣ ಬಂದ್ ಆಗಿತ್ತು. ಆದರೆ, ಲಾಕ್ ಡೌನ್ ಪ್ರಾರಂಭವಾದ ದಿನದಿಂದಲೇ ಸಂಘದ ಸ್ವಯಂಸೇವಕರು ಸೇವಾಕಾರ್ಯವನ್ನು ಪ್ರಾರಂಭಿಸಿದ್ದರು. ಪಶ್ಚಿಮದ ದೇಶಗಳಲ್ಲಿ ವೆಲ್ ಫೇರ್ ಸ್ಟೇಟ್ ಕಲ್ಪನೆಯಿದೆ. ಅಲ್ಲಿ ಸಮಾಜದ ಅಗತ್ಯಗಳನ್ನು ಸರ್ಕಾರವೇ ಪೂರೈಸುತ್ತದೆ. ಆದರೆ, ನಮ್ಮದು ರಾಷ್ಟ್ರದ ಕಲ್ಪನೆ. ಅಂದರೆ, ಸರ್ಕಾರ ಯಾವುದೇ ಇದ್ದರೂ ಸಮಾಜದಲ್ಲಿ ಏಕತೆಯಿದೆ. ಸಮಾಜ ತನ್ನ ಜವಾಬ್ದಾರಿಯನ್ನು ತಾನೇ ತೆಗೆದುಕೊಳ್ಳುತ್ತದೆ. ಎಲ್ಲದಕ್ಕೂ ಸರ್ಕಾರದ ಮೇಲೆ ಅವಲಂಬನೆಯಿಲ್ಲ. ಕೊರೊನಾ ಸಂದರ್ಭದಲ್ಲಿ ಇದು ಅತ್ಯಂತ ಸ್ಪಷ್ಟವಾಗಿ ಎಲ್ಲರ ಗಮನಕ್ಕೆ ಬಂದಿದೆ. ಸರ್ಕಾರದ ಜೊತೆಗೆ ಸಮಾಜದ ಬೇರೆ ಬೇರೆ ಸಂಘ ಸಂಸ್ಥೆಗಳು ಸೇರಿ ಸೇವಾಕಾರ್ಯ ಮಾಡಿದವು. ಸಂಘದ ಸ್ವಯಂಸೇವಕರು, ಸ್ವತಃ ತಮಗೆ ಕೊರೊನಾ ಹರಡುವ ಅಪಾಯ ಇದ್ದರೂ ಕೂಡ ಸೇವಾ ಕಾರ್ಯದಲ್ಲಿ ತೊಡಗಿದರು.

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

92,656 ಸ್ಥಾನಗಳಲ್ಲಿ ಸುಮಾರು 5,07,000 ಕಾರ್ಯಕರ್ತರು ಲಾಕ್ ಡೌನ್ ಸಂದರ್ಭದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಿದರು. 73 ಲಕ್ಷ ರೇಷನ್ ಕಿಟ್, 4.5 ಕೋಟಿ ಫುಡ್ ಪ್ಯಾಕೆಟ್, 90 ಲಕ್ಷ ಮಾಸ್ಕ್ ವಿತರಿಸಿದರು. 60,000 ಯೂನಿಟ್ ರಕ್ತದಾನ ನಡೆಯಿತು. 30 ಲಕ್ಷ ವಲಸೆ ಕಾರ್ಮಿಕರಿಗೆ ಸಹಾಯ ಮಾಡಲಾಯಿತು. ಸಂಘದ ಜತೆಗೆ ನೂರಾರು ಮಠಮಂದಿರಗಳು, ಅನೇಕ ಸಂಘ ಸಂಸ್ಥೆಗಳು ಕೊರೊನಾದಿಂದ ತೊಂದರೆಗೊಳಗಾದವರ ಸೇವೆ ಮಾಡಿವೆ.

ಕಳೆದ ವರ್ಷಕ್ಕೆ ಹೋಲಿಸಿದರೆ 89% ನಷ್ಟು ಶಾಖೆಗಳು ಕೊರೊನಾ ಬಳಿಕ ಪುನರಾರಂಭಗೊಂಡಿವೆ. ದೇಶದ 6,495 ತಾಲೂಕುಗಳಲ್ಲಿ 85% ತಾಲೂಕುಗಳಲ್ಲಿ ಸಂಘದ ಶಾಖೆಗಳು ನಡೆಯುತ್ತಿವೆ. 58,500 ಮಂಡಲಗಳಲ್ಲಿ 60% ಮಂಡಲಗಳಲ್ಲಿ ಶಾಖೆ ಅಥವಾ ವಿವಿಧ ರೀತಿಯ ಸಂಘದ ಚಟುವಟಿಕೆಗಳಿವೆ. ಮುಂದಿನ ಮೂರು ವರ್ಷಗಳಲ್ಲಿ ಎಲ್ಲ ಮಂಡಲಗಳಲ್ಲಿ ಶಾಖೆಗಳನ್ನು ಪ್ರಾರಂಭಿಸುವ ಯೋಜನೆಯಿದೆ ಎಂದು ಡಾ. ವೈದ್ಯ ಅವರು ವಿವರಿಸಿದರು.

ದೇಶದಲ್ಲಿ ನಡೆಯುತ್ತಿರುವ ಒಟ್ಟು ಶಾಖೆಗಳಲ್ಲಿ 89% ಶಾಖೆಗಳಲ್ಲಿ ಯುವಕರು ಮತ್ತು ಬಾಲಕರು ಭಾಗವಹಿಸುವ ಶಾಖೆಗಳಿವೆ. 11% ನಷ್ಟು ಶಾಖೆಗಳು 40 ವರ್ಷಕ್ಕಿಂತ ಮೇಲ್ಪಟ್ಟ ಉದ್ಯೋಗಿಗಳು ಹಾಜರಿರುವ ಶಾಖೆಗಳಿವೆ ಎಂದು ಅವರು ತಿಳಿಸಿದರು.

ಎಬಿಪಿಎಸ್ ನಲ್ಲಿ ಕೈಗೊಳ್ಳಲಿರುವ ನಿರ್ಣಯ:

ಕೊರೊನಾ ಸಂದರ್ಭದಲ್ಲಿ ಸಂಪೂರ್ಣ ಸಮಾಜ ಜೊತೆಗೂಡಿ ಸೇವೆಯಲ್ಲಿ ತೊಡಗಿತ್ತು. ಸಮಾಜ ತೋರಿಸಿದ ಈ ಏಕತೆ ಮತ್ತು ಸೇವಾಭಾವ ಅಭಿನಂದನೀಯವಾದದ್ದು. ಇದರ ಬಗ್ಗೆ ಚರ್ಚೆ ನಡೆದು ಸಭೆ ನಿರ್ಣಯ ಕೈಗೊಳ್ಳಲಿದೆ.

ಹಾಗೆಯೇ, ಇತ್ತೀಚೆಗೆ ದೇಶಾದ್ಯಂತ ಶ್ರೀರಾಮ ಜನ್ಮಭೂಮಿ ನಿಧಿ ಸಮರ್ಪಣಾ ಅಭಿಯಾನ ಯಶಸ್ವಿಯಾಗಿ ನಡೆದಿದೆ. ಈ ಅಭಿಯಾನದಲ್ಲಿ 5,45,737 ಗ್ರಾಮನಗರಗಳನ್ನು 20 ಲಕ್ಷ ಕಾರ್ಯಕರ್ತರು ತಲುಪಿದ್ದಾರೆ. ಈ ವಿಷಯದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದು ನಿರ್ಣಯ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.

ಇಂದು ಸಮಾಜದಲ್ಲಿ ಸಂಘದ ಬಗ್ಗೆ ಹೆಚ್ಚು ತಿಳಿದುಕೊಳ್ಳುವ ಉತ್ಸಾಹವಿದೆ. ಸಂಘದೊಂದಿಗೆ ಸೇರಿ ಕೆಲಸ ಮಾಡುವ ಯುವಸಮೂಹದ ಸಂಖ್ಯೆಯೂ ಕೂಡಾ ಹೆಚ್ಚಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಶಾಖೆಗಳ ಸಂಖ್ಯೆ, ಗುಣಮಟ್ಟ ಹೆಚ್ಚಿಸುವ ಬಗ್ಗೆ, ಯುವಕರನ್ನು ಜೋಡಿಸುವ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.

450 ಪ್ರತಿನಿಧಿಗಳು ಇಲ್ಲಿನ ಸಭೆಯಲ್ಲಿ ಭಾಗವಹಿಸುತ್ತಿದ್ದು, ಉಳಿದ 1,000 ದಷ್ಟು ಪ್ರತಿನಿಧಿಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಆನ್ ಲೈನ್ ನಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಡಾ. ಮನಮೋಹನ್ ವೈದ್ಯ ಅವರು ತಿಳಿಸಿದರು.

ಆರೆಸ್ಸೆಸ್ ನ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಅರುಣ್ ಕುಮಾರ್, ಸಹ ಪ್ರಚಾರ ಪ್ರಮುಖ್ ನರೇಂದ್ರ ಠಾಕೂರ್ ಮತ್ತು ಸುನಿಲ್ ಅಂಬೇಕರ್ ಹಾಗೂ ಕರ್ನಾಟಕ ದಕ್ಷಿಣ ಪ್ರಾಂತ ಪ್ರಚಾರ ಪ್ರಮುಖ್ ಇ. ಎಸ್. ಪ್ರದೀಪ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

  • email
  • facebook
  • twitter
  • google+
  • WhatsApp
Tags: RSSABPSRSSABPS2021

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
ಆರೆಸ್ಸೆಸ್ ಜೊತೆ ಕೆಲಸ ಮಾಡಲು ಯುವಜನತೆ ಮುಂದೆ ಬರುತ್ತಿದೆ  – ಡಾ. ಮನಮೋಹನ್ ವೈದ್ಯ

Service during Corona and Ram Mandir Abhiyan showcased the resilience and cultural unity of the Bharatiya society: Dr. Manmohan Vaidya, Sah Sarkaryavah, RSS

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

Ram Madhav attacks congress on terrorism

Ram Madhav attacks congress on terrorism

November 10, 2010
Goa CM Manohar Parikkar, Actress Ponnamma attends BALAGOKULAM Conference at Ernakulam

Goa CM Manohar Parikkar, Actress Ponnamma attends BALAGOKULAM Conference at Ernakulam

July 14, 2013
‘Imbalance in the population growth rate is a cause of concern’: RSS functionary V Nagaraj

‘Imbalance in the population growth rate is a cause of concern’: RSS functionary V Nagaraj

November 6, 2015
RSS Sarasanghachalak Mohan Bhagwat meets Sri Sri Ravishankar Guruji at Bangalore

RSS Sarasanghachalak Mohan Bhagwat meets Sri Sri Ravishankar Guruji at Bangalore

August 22, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In